ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ತವ್ಯಕ್ಕೆ ತೆರಳುತ್ತಿದ್ದ ASI ಮೇಲೆ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು

ಅಮೃತಸರ ಜಿಲ್ಲೆಯ ಹಮ್ಜಾ ಗ್ರಾಮದ ಬಳಿ ಭಾನುವಾರ ಇಬ್ಬರು ಅಪರಿಚಿತ ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಪಂಜಾಬ್ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಅವರ ದೇಹವು ನಂತರ ಫತೇಘರ್ ಚುರಿಯನ್-ಮಜಿಥಿಯಾ ರಸ್ತೆಯ ಬಳಿ ಪತ್ತೆಯಾಗಿದೆ.

ASI ಮೇಲೆ ಗುಂಡು ಹಾರಿಸಿ ಕೊಂದ ದುಷ್ಕರ್ಮಿಗಳು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 24, 2026 3:20 PM

ಚಂಡೀಗಢ: ಅಮೃತಸರ ಜಿಲ್ಲೆಯ ಹಮ್ಜಾ ಗ್ರಾಮದ ಬಳಿ ಭಾನುವಾರ ಇಬ್ಬರು ಅಪರಿಚಿತ ಮೋಟಾರ್ (Shootout Case) ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಪಂಜಾಬ್ ಪೊಲೀಸ್ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಯ ಮೇಲೆ ದುಷ್ಕರ್ಮಿಗಳು ನಾಲ್ಕು ಗುಂಡುಗಳನ್ನು ಹಾರಿಸಿದ್ದಾರೆ. ಮೃತ ಅಧಿಕಾರಿಯನ್ನು ಗಣಿಕೆ ಬಂಗರ್ ಗ್ರಾಮದ ನಿವಾಸಿ ಜೋಗಾ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಿಂಗ್ ಸ್ಕೂಟರ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ದಾಳಿಕೋರರು ಅವರನ್ನು ತಡೆದು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ ಅವರ ದೇಹವು ನಂತರ ಫತೇಘರ್ ಚುರಿಯನ್-ಮಜಿಥಿಯಾ ರಸ್ತೆಯ ಬಳಿ ಪತ್ತೆಯಾಗಿದೆ. ಘಟನೆ ನಡೆದ ತಕ್ಷಣ ಅಂಬಾಲಾ ಮತ್ತು ಪಂಜಾಬ್ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಪ್ರಮುಖ ಸಾಕ್ಷ್ಯಗಳನ್ನು ಕಲೆಹಾಕಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸದ್ಯಕ್ಕೆ ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಅಮೃತಸರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸುಹೇಲ್ ಮಿರ್ ಖಾಸಿಮ್ ಮಾತನಾಡಿ, ಭಾನುವಾರ ಮುಂಜಾನೆ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ನೇತೃತ್ವದ ತಂಡ ಸ್ಥಳಕ್ಕೆ ತಲುಪಿದೆ. ಅಪರಾಧದ ಸ್ಥಳವನ್ನು ಪರಿಶೀಲಿಸಲು ವಿಧಿವಿಜ್ಞಾನ ತಂಡವನ್ನು ಸಹ ಕರೆಸಲಾಗಿದೆ.

‌Viral Video: ವೆಡ್ಡಿಂಗ್‌ ಆನಿವರ್ಸರಿ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿ ಹಠಾಟ್‌ ಕುಸಿದು ಬಿದ್ದು ದಾರುಣ ಸಾವು-ವಿಡಿಯೊ ವೈರಲ್!

ಪೊಲೀಸರು ತನಿಖೆ ಆರಂಭಿಸಿದ್ದು, ದಾಳಿಕೋರರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಹತ್ತಿರದ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಮಾಹಿತಿ ನೀಡಿದರು. ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ಶಿರೋಮಣಿ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ, ಇದನ್ನು ಖಂಡಿಸಿದ್ದಾರೆ. ರಾಜ್ಯ ಆಡಳಿತವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, "ಈ ಅತ್ಯಂತ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಪೊಲೀಸ್ ರಾಜಕೀಯ ಸಂಬಂಧ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತವು ಪಂಜಾಬ್ ಅನ್ನು ಭಯ, ಸುಲಿಗೆ ಮತ್ತು ಗುರಿಯಾಗಿಟ್ಟುಕೊಂಡು ಹತ್ಯೆಗಳತ್ತ ತಳ್ಳಿದೆ" ಎಂದು ಆರೋಪಿಸಿದ್ದಾರೆ.