ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ; ಅನುಮಾನ ಹುಟ್ಟಿಸಿದೆ ಆ ಒಂದು ಪೋಸ್ಟ್‌!

ಪತ್ರಕರ್ತೆಯೊಬ್ಬರು ಆತ್ಮಹತ್ಯೆ (self harming) ಮಾಡಿಕೊಂಡಿರುವ ಘಟನೆ ಹೈದರಾಬಾದ್ (hyderabad) ನಲ್ಲಿ ನಡೆದಿದೆ. ತೆಲುಗು ಸುದ್ದಿ ವಾಹಿನಿಯ ನಿರೂಪಕಿಯಾಗಿದ್ದ (News anchor) ಸ್ವೇಚ್ಛ ವೋಟಾರ್ಕರ್ (35) ( Senior journalist Swetcha Votarka) ಆತ್ಮಹತ್ಯೆ ಮಾಡಿಕೊಂಡವರು. ತಾಯಿ ಮತ್ತು ಮಗಳೊಂದಿಗೆ ವಾಸಿಸುತ್ತಿದ್ದ ಇವರು ತಮ್ಮ ಮನೆಯಲ್ಲೇ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೆಲುಗಿನ ಖ್ಯಾತ ಸುದ್ದಿ ನಿರೂಪಕಿ ಆತ್ಮಹತ್ಯೆ

ಹೈದರಾಬಾದ್: ಪತ್ರಕರ್ತೆಯೊಬ್ಬರು ಆತ್ಮಹತ್ಯೆ (self harming) ಮಾಡಿಕೊಂಡಿರುವ ಘಟನೆ ಹೈದರಾಬಾದ್ (hyderabad) ನಲ್ಲಿ ನಡೆದಿದೆ. ತೆಲುಗು ಸುದ್ದಿ ವಾಹಿನಿಯ ನಿರೂಪಕಿಯಾಗಿದ್ದ (News anchor) ಸ್ವೇಚ್ಛ ವೋಟಾರ್ಕರ್ (35) ( Senior journalist Swetcha Votarka) ಆತ್ಮಹತ್ಯೆ ಮಾಡಿಕೊಂಡವರು. ತಾಯಿ ಮತ್ತು ಮಗಳೊಂದಿಗೆ ವಾಸಿಸುತ್ತಿದ್ದ ಇವರು ತಮ್ಮ ಮನೆಯಲ್ಲೇ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಲೆಯಿಂದ ಮಗಳು ಹಿಂದಿರುಗಿ ಬಂದ ಮೇಲೆ ಸ್ವೇಚ್ಛ ಅವರ ಕೋಣೆಯ ಬಾಗಿಲು ತಟ್ಟಿದ್ದಾಳೆ. ಎಷ್ಟೇ ಹೊತ್ತಾದರೂ ತಾಯಿ ಬಾಗಿಲು ತೆರೆಯದೇ ಇದ್ದಾಗ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಸುಮಾರು 18 ವರ್ಷಗಳಿಂದ ತೆಲುಗು ಮಾಧ್ಯಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವೇಚ್ಛ ವೋಟಾರ್ಕರ್ ಹೈದರಾಬಾದ್‌ನ ಚಿಕ್ಕಡಪಲ್ಲಿಯ ಆರ್‌ಟಿ ಕ್ರಾಸ್‌ ರಸ್ತೆಯ ಜವಹರ್‌ನಗರದಲ್ಲಿನ ನಿವಾಸದಲ್ಲಿ ವಾಸವಾಗಿದ್ದರು. ಇಲ್ಲೇ ಇವರುಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪ್ರಸ್ತುತ ಟಿ ನ್ಯೂಸ್ ನಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. ಸ್ವೇಚ್ಛ ಶುಕ್ರವಾರ ಸಂಜೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಹಿತಿ ಸಿಕ್ಕ ಬಳಿಕ ಸ್ಥಳಕ್ಕೆ ಧಾವಿಸಿದ ಚಿಕ್ಕಡಪಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: Shefali Jariwala: ಶೆಫಾಲಿ ಜರಿವಾಲಾ ಸಾವಿನ ಬಗ್ಗೆ ಶಂಕೆ- ನಟಿಯ ಮನೆಯಲ್ಲಿ ಪೊಲೀಸರಿಂದ ತನಿಖೆ

ಸ್ವೇಚ್ಛ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್​​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಬುದ್ಧನ ಉಲ್ಲೇಖವನ್ನು ಮಾಡಿದ್ದರು. ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ ಎಂದು ಅವರು ಬರೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಸ್ವೇಚ್ಛ ಎಂದರೆ ತೆಲುಗು ಭಾಷೆಯಲ್ಲಿ 'ಸ್ವಾತಂತ್ರ್ಯ' ಎಂದರ್ಥ. ಅವರ ತಂದೆ ಕಟ್ಟಾ ಕಮ್ಯುನಿಸ್ಟ್ ಆಗಿದ್ದ ಹೀಗಾಗಿ ಅವರಿಗೆ ಈ ಹೆಸರಿಟ್ಟಿದ್ದರು. ತಂದೆಯಿಂದ ಸ್ಫೂರ್ತಿ ಪಡೆದಿದ್ದ ಸ್ವೇಚ್ಛ ತುಂಬಾ ಧೈರ್ಯಶಾಲಿ ಎನ್ನುತ್ತಾರೆ ಅವರ ಸ್ನೇಹಿತರು.

ಐದು ವರ್ಷಗಳ ಹಿಂದೆ ಸ್ವೇಚ್ಛ ಅವರು ಪತಿಯಿಂದ ವಿಚ್ಛೇದನ ಪಡೆದು ತಮ್ಮ ಸ್ನೇಹಿತನ ಜೊತೆ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಸಾವಿನ ಹಿಂದೆ ಕೌಟುಂಬಿಕ ಸಮಸ್ಯೆಗಳಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಇದನ್ನು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.