ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅತ್ಯಾಚಾರ, ನಿರಂತರ ಬ್ಲ್ಯಾಕ್‌ಮೇಲ್; ಸಹೋದರಿಯರಿಬ್ಬರು ಆತ್ಮಹತ್ಯೆ

ರಾಜಸ್ಥಾನದಲ್ಲಿ ವರ್ಷಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಅಕ್ಕ ಆತ್ಮಹತ್ಯೆ ಮಾಡಿಕೊಂಡ ನಂತರ, ತಂಗಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾರ್ಚ್‌ನಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಜೋಧ್‌ಪುರದ ಗ್ರಾಮೀಣ ಪ್ರದೇಶದಲ್ಲಿ ಇಬ್ಬರು ಸಹೋದರಿಯರ ಸಾವು ಭಾರಿ ಉದ್ವಿಗ್ನತೆಯನ್ನು ಉಂಟು ಮಾಡಿದೆ.

ಅತ್ಯಾಚಾರ, ನಿರಂತರ ಬ್ಲ್ಯಾಕ್‌ಮೇಲ್; ಸಹೋದರಿಯರಿಬ್ಬರು ಆತ್ಮಹತ್ಯೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 17, 2026 4:28 PM

ಜೈಪುರ: ರಾಜಸ್ಥಾನದಲ್ಲಿ ವರ್ಷಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಅಕ್ಕ ಆತ್ಮಹತ್ಯೆ ಮಾಡಿಕೊಂಡ ನಂತರ, (Self Harming) ತಂಗಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾರ್ಚ್‌ನಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನೆಯಲ್ಲಿ ಪೊಲೀಸರಿಂದ ನ್ಯಾಯ ಸಿಗದ ಕಾರಣ ಆಕೆಯ ತಂಗಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂಗಿ ಹಲವು ಬಾರಿ ಪೊಲೀಸರನ್ನು ಸಂಪರ್ಕಿಸಿದರೂ ನ್ಯಾಯ ಪಡೆಯಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜೋಧ್‌ಪುರದ ಗ್ರಾಮೀಣ ಪ್ರದೇಶದಲ್ಲಿ ಇಬ್ಬರು ಸಹೋದರಿಯರ ಸಾವು ಭಾರಿ ಉದ್ವಿಗ್ನತೆಯನ್ನು ಉಂಟುಮಾಡಿದ್ದು, ಪೊಲೀಸರ ನಿರ್ಲಕ್ಷ್ಯ ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳೀಯ ಇ-ಮಿತ್ರ ಸೇವಾ ಕೇಂದ್ರದ ನಿರ್ವಾಹಕ ಮಹಿಪಾಲ್ ಎಂಬಾತ ಹಿರಿಯ ಸಹೋದರಿಯನ್ನು ಪ್ರೀತಿಸುವ ನಾಟಕವಾಡಿ ಆಕೆಯ ಅಶ್ಲೀಲ ಚಿತ್ರವನ್ನು ರೆಕಾರ್ಡ್‌ ಮಾಡಿದ್ದ.

ದೂರಿನಲ್ಲಿ ಶಿವರಾಜ್, ಗೋಪಾಲ್, ವಿಜರಾಮ್, ದಿನೇಶ್, ಮನೋಜ್ ಮತ್ತು ಪುಖ್ರಾಜ್ ಸೇರಿದಂತೆ ಒಟ್ಟು ಎಂಟು ವ್ಯಕ್ತಿಗಳನ್ನು ಹೆಸರಿಸಿ, ತಮ್ಮ ಸಹೋದರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಮಹಿಪಾಲ್ ಮತ್ತು ಅವನ ಸಹಚರರು ಸುಮಾರು ನಾಲ್ಕು ವರ್ಷಗಳ ಕಾಲ ತನ್ನನ್ನು ಶೋಷಿಸಿದ್ದರು ಎಂದು ಆರೋಪಿಸಿದ್ದಳು. ಶಿವರಾಜ್, ಗೋಪಾಲ್, ವಿಜರಾಮ್, ದಿನೇಶ್, ಮನೋಜ್ ಮತ್ತು ಪುಖ್ರಾಜ್ ಸೇರಿದಂತೆ ಒಟ್ಟು ಎಂಟು ಜನರನ್ನು ದೂರಿನಲ್ಲಿ ಹೆಸರಿಸಲಾಗಿದೆ. ಅವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Self Harming: ಯುವ ವೈದ್ಯೆ ಆತ್ಮಹತ್ಯೆ, ಅಂಗೈಯ ಡೆತ್‌ನೋಟ್‌ನಲ್ಲಿತ್ತು ಆತ್ಮಹತ್ಯೆಯ ರಹಸ್ಯ

ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಮ್ಮ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು. ಆಕೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿತ್ತು, ಆದರೆ ಒಂದು ತಿಂಗಳಾದರೂ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ. ಸಹೋದರಿಯ ಆತ್ಮಹತ್ಯೆಯ ನಂತರ, ಆರೋಪಿಗಳು ಆಕೆಯ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದರು. ಶುಕ್ರವಾರ, ತನ್ನ ಮಾತು ಕೇಳಲು, ಆಕೆಯ ತಂಗಿ ನೀರಿನ ಟ್ಯಾಂಕ್ ಮೇಲೆ ಹತ್ತಿ ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿದಳು. ನಂತರ ಅವಳು ವಿಷ ಸೇವಿಸಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಅವಳು ಸಾವನ್ನಪ್ಪಿದ್ದಾಳೆ.