ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಕ್ಷಿಣ ಕನ್ನಡ

Murder Case: ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಉಮರ್ ಮತ್ತು ಜುಮೈಲ ಚಿಕ್ಕಪ್ಪ ಶೇಕುಂ ನಡುವೆ ಜಗಳ ಆಗುತ್ತಿದ್ದಾಗ ಜಗಳ ಬಿಡಿಸಲು ಉಮರ್ ಮಗಳು ಜುಮೈಲಾ ಬಂದಿದ್ದಳು. ಈ ವೇಳೆ ‌ಶೇಕುಂಗಾಗಿ ಬೀಸಿದ ಅಪ್ಪನ ಕತ್ತಿ ಏಟು ತಗುಲಿ ಜುಮೈಲ ಸಾವನ್ನಪ್ಪಿದ್ದಾಳೆ. ಆರೋಪಿ ಉಮರ್ ಫಾರೂಕ್‌ನನ್ನು ಮಂಜೇಶ್ವರ ಠಾಣೆ ಪೋಲೀಸರು ಆರೆಸ್ಟ್ ಮಾಡಿದ್ದಾರೆ.

Wildfire: ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಭಾರಿ ಪ್ರಮಾಣದ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

ಎದೆಯೊಳಗೆ ಹೊಕ್ಕ ಕಬ್ಬಿಣದ ರಾಡ್‌ - 11 ವರ್ಷದ ಬಾಲಕಿಯ ಪ್ರಾಣ ರಕ್ಷಿಸಿದ ಕೆಎಂಸಿ ಆಸ್ಪತ್ರೆ

ಎದೆಯೊಳಗೆ ಹೊಕ್ಕ ಕಬ್ಬಿಣದ ರಾಡ್‌ - 11 ವರ್ಷದ ಬಾಲಕಿಯ ಪ್ರಾಣ ರಕ್ಷಣೆ

ಬಾಲಕಿಗೆ ಥೊರಾಕೊಟೊಮಿ ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನ ನಡೆಸಲಾಗಿದ್ದು ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಸದಾಶಿವ್‌ ರಾವ್‌, ಅರವಳಿಕೆ ತಜ್ಞ ಡಾ.ಸುನೀಲ್‌ ಮತ್ತು ಡಾ.ಫ್ರೀಡಾ ಕುಟಿನ್ಹಾ ಅವರ ಜೊತೆ ಸೇರಿ ಬಾಲಕಿಯ ಎದೆಗೆ ಹೊಕ್ಕಿದ್ದ ಕಬ್ಬಿಣದ ರಾಡ್‌ನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಬಾಲಕಿಯನ್ನು ಪಿಡಿಯಾಟ್ರಿಕ್‌ ಇಂಟೆನ್ಸಿವ್‌ ಕೇರ್‍‌ ಗೆ ವರ್ಗಾಯಿಸಿ ತೀವ್ರ ನಿಗಾದಲ್ಲಿ ಇರಿಸಲಾಗಿತ್ತು

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಈ ಬಾರಿಯ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

ದೇಶದ ಅಭಿವೃದ್ಧಿ, ಸ್ವಾವಲಂಬನೆಗೆ ಬಜೆಟ್ ಪೂರಕ: ವೀರೇಂದ್ರ ಹೆಗ್ಗಡೆ

Dr. D Veerendra Heggade: ಕೇಂದ್ರ ಬಜೆಟ್‌ ವಿಶೇಷವಾಗಿ ಗ್ರಾಮೀಣ ಮತ್ತು ಉದಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ, ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜನವರಿ 31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ

ಜ. 31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್‌ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜನವರಿ 31ರಂದು ಬೆಳಗ್ಗೆ 10 ಗಂಟೆಗೆ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಕಾರ್ಯಕ್ರಮ ನೆರವೇರಲಿದೆ. ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹುತಾತ್ಮರ ಕನಸು ನನಸು ಮಾಡುವ ಕನಸು ನಿಮ್ಮದಾಗಲಿ: ಕೆ.ವಿ. ಪ್ರಭಾಕರ್‌ ಕರೆ

ಹುತಾತ್ಮರ ಕನಸು ನನಸು ಮಾಡುವ ಕನಸು ನಿಮ್ಮದಾಗಲಿ: ಕೆವಿಪಿ ಕರೆ

KV Prabhakar: ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿದ್ದಾರೆ. ಗಣರಾಜ್ಯಗಳ ಅಧಿಪತಿ ಭಾರತ ಎಂದು ನಾವು ಹೆಮ್ಮೆ ಪಡುವಾಗ ನಮಗೆ ಒಕ್ಕೂಟ ವ್ಯವಸ್ಥೆಯ ಬಗ್ಗೆಯೂ ಹೆಮ್ಮೆ ಇರಬೇಕು ಎಂದು ತಿಳಿಸಿದ್ದಾರೆ.

ಕಡಬದಲ್ಲಿ ಶಾಕಿಂಗ್‌ ಘಟನೆ; ತಂದೆಗೆ ಚಾಕು ಇರಿದ ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

ತಂದೆಗೆ ಚಾಕುವಿನಿಂದ ಇರಿದ ಬಳಿಕ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

Kadaba News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆಯಲ್ಲಿ ಘಟನೆ ನಡೆದಿದೆ. ಗಲಾಟೆ ವೇಳೆ ಕೋಪದಿಂದ ತಂದೆಗೆ ಚಾಕುವಿನಿಂದ ಇರಿದಿದ್ದ ಬಾಲಕ, ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧರ್ಮಸ್ಥಳ ಬುರುಡೆ ಪ್ರಕರಣ; ಇಂದು ಶ್ರೀ ಕ್ಷೇತ್ರದ ಪರ ಸಲ್ಲಿಸಿದ ಅರ್ಜಿ ವಿಚಾರಣೆ, ಬೆಳ್ತಂಗಡಿಗೆ ಹಿರಿಯ ನ್ಯಾಯವಾದಿ ರಾಜಶೇಖರ್ ಹಿಲಿಯಾರ್  ಭೇಟಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಿರಿಯ ನ್ಯಾಯವಾದಿ ರಾಜಶೇಖರ್ ಹಿಲಿಯಾರ್ ಭೇಟಿ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸಲ್ಲಿಸಲಾದ ಅರ್ಜಿ ವಿಚಾರಣೆಗಾಗಿ ಹಿರಿಯ ಹಾಗೂ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅವರು ವಕೀಲರ ತಂಡದ ಭಾಗವಾಗಿ ಹಾಜರಾಗುತ್ತಿದ್ದು, ಈ ಹಿಂದೆ ಸಿ.ವಿ. ನಾಗೇಶ್ ಅವರು ಕ್ಷೇತ್ರದ ಪರವಾಗಿ ವಕಾಲತ್ತು ವಹಿಸಿದರು.

ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್‌ಗಾಗಿ 5 ಲಕ್ಷಕ್ಕೂ ಅಧಿಕ ನಿಧಿ ಸಂಗ್ರಹಿಸಿದ ಹಸೀನಾ ಥೆಮಾಲಿ!

ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್‌ಗಾಗಿ 5 ಲಕ್ಷ ರು ನಿಧಿ ಸಂಗ್ರಹ!

ಓಟಗಾರ್ತಿ ಹಾಗೂ ಕೋಚ್ ಆಗಿರುವ ಹಸೀನಾ ಥೆಮಾಲಿ ಅವರು ಟಾಟಾ ಮುಂಬೈ ಮ್ಯಾರಥಾನ್ (TMM) 2026ರಲ್ಲಿ ಮೊದಲ ಬಾರಿಗೆ ನಿಧಿ ಸಂಗ್ರಾಹಕರಾಗಿ ಭಾಗವಹಿಸಿ ₹5,01,001 ಮೊತ್ತವನ್ನು ಸಂಗ್ರಹಿಸಿದ್ದಾರೆ. ಈ ನಿಧಿ ಸಂಗ್ರಹವು ಅಂತಿಮ ಹಂತದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಹಾಗೂ ಮಾನವೀಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

Murder case: ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಬಾಲಕನ ಕೊಲೆ, ಹತ್ಯೆಗೈದ ಮೂವರು ಅಪ್ರಾಪ್ತ ವಯಸ್ಕರು ಅರೆಸ್ಟ್

ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangaluru Lit Fest: ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಗೆ ಯಶಸ್ವಿ ಸಮಾರೋಪ: ಕಿಕ್ಕಿರಿದು ತುಂಬಿದ ಗೋಷ್ಠಿಗಳು, ಯುವಪೀಳಿಗೆ ಭಾಗಿ

ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಗೆ ಯಶಸ್ವಿ ಸಮಾರೋಪ: ಯುವಪೀಳಿಗೆ ಭಾಗಿ

ಎರಡು ದಿನಗಳಲ್ಲಿ ಸಾವಿರಾರು ಜನರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಾಹಿತ್ಯ ಆಸಕ್ತರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಯುವಕ ಯುವತಿಯರು ಎರಡು ದಿನಗಳು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ಬಾಗವಹಿಸಿ ಸಂಭ್ರಮಿಸಿದ್ದು ಯುವ ಜನತೆಗೆ ಇನ್ನೂ ಪುಸ್ತಕದ ಅಭಿರುಚಿ ಕಡಿಮೆಯಾಗಿಲ್ಲ ಎನ್ನುವುದಕ್ಕೆ ಸಾಕ್ಷಿಯಂತಿತ್ತು. ಹಲವು ಪುಸ್ತಕದ ಮಳಿಗಗೆಳು, ಲೇಖಕರ ಜೊತೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧ ಸಮಯಪಾಲನೆಯಿಂದ ಕಾರ್ಯಕ್ರಮ ನೆರವೇರಿತು.

CM Siddaramaiah: ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ವಿಧೇಯಕವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ, ಮರಳಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು 19 ವಿಧೇಯಕಗಳಿಗೆ ಅಂಕಿತ ಹಾಕಿದ್ದರು. ಆದರೆ ದ್ವೇಷ ಭಾಷಣ ವಿಧೇಯಕಕ್ಕೆ ಯಾವುದೇ ವಿವರಣೆ ನೀಡದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

Mangaluru Lit Fest: ಸಿನಿಮಾಗೆ ಕಥೆಯೇ ಚೌಕಟ್ಟು: ನಟಿ ರಂಜನಿ ರಾಘವನ್

ಸಿನಿಮಾಗೆ ಕಥೆಯೇ ಚೌಕಟ್ಟು: ನಟಿ ರಂಜನಿ ರಾಘವನ್

ನಮ್ಮತನ ಎನ್ನುವುದು ಬಹಳ ಸ್ವಾರ್ಥದ ಯೋಚನೆ ಆಗುತ್ತದೆ. ಮೌಲ್ಯಗಳು ಮಾತ್ರವಿದ್ದರೆ ಸಾಕು, ಇದು ನಂದು ಎನ್ನುವ ಭಾವನೆ ಬೇಡ. ಅದು ಬಿಟ್ಟು ಇನ್ನೇನೋ ಪ್ರಯತ್ನ ಮಾಡುತ್ತಿದ್ದಾಗ ಮಾತ್ರ ಬೆಳೆಯಲು ಸಾಧ್ಯ ಎಂದು ನಟಿ, ಬರಹಗಾರ್ತಿ ಹಾಗೂ ನಿರ್ದೇಶಕಿ ರಂಜನಿ ರಾಘವನ್ ತಿಳಿಸಿದ್ದಾರೆ.

ಎಸ್‌.ಎಲ್‌. ಭೈರಪ್ಪನವರನ್ನು ಗುರಿ ಮಾಡಿ ಕೆಲವರು ಸಾಕಷ್ಟು ತೊಂದರೆ ಕೊಟ್ಟರು: ಸಂದೀಪ್ ಬಾಲಕೃಷ್ಣ

ಎಸ್‌.ಎಲ್‌. ಭೈರಪ್ಪಗೆ ಕೆಲವರು ಸಾಕಷ್ಟು ತೊಂದರೆ ಕೊಟ್ಟರು

Mangaluru Lit Fest: ಭೈರಪ್ಪನವರು ಎಲ್ಲವನ್ನೂ ಓದುಗರ ಗ್ರಹಿಕೆಗೆ ಬಿಡುತ್ತಿದ್ದರು. ಭೈರಪ್ಪನವರು ಯಾವುದನ್ನೂ ನೇರವಾಗಿ ಹೇಳುತ್ತಿರಲಿಲ್ಲ. ಪಾತ್ರಗಳ ಮೂಲಕ ಒಂದಿಷ್ಟು ವಿಷಯಗಳನ್ನು ಹೇಳುತ್ತಿದ್ದರು. ಏನು ಅರ್ಥ ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ ಎಂದು ಓದುಗರಿಗೆ ಬಿಡುತ್ತಿದ್ದರು ಎಂದು ಸಂದೀಪ್ ಬಾಲಕೃಷ್ಣ ತಿಳಿಸಿದ್ದಾರೆ.

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇರಳ, ಗೋವಾದಂತೆ ಸಿಆರ್‌ಜಡ್ ಕಾನೂನು ಸರಳೀಕರಣ: ಡಿ.ಕೆ.ಶಿವಕುಮಾರ್‌

ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್‌ಜಡ್ ಕಾನೂನು ಸರಳೀಕರಣ: ಡಿಕೆಶಿ

ಮಂಗಳೂರಿನಲ್ಲಿ ನಡೆದ 'ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026' ರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ಕರಾವಳಿಯು ಆರೋಗ್ಯ ಕ್ಷೇತ್ರ, ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಉದ್ಯಮಿಗಳು ಸೇರಿ ಅನೇಕರ ಸಲಹೆ ಸೂಚನೆಗಳನ್ನು ‌ಸಹ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಲಕ್ಷ್ಮಿ ಹೆಬ್ಬಾಳ್ಕರ್

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರ: ಹೆಬ್ಬಾಳ್ಕರ್

Laxmi Hebbalkar: ಪ್ರವಾಸೋದ್ಯಮ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ಉತ್ತರ ಕರ್ನಾಟಕದ ಬಹುತೇಕ ಮಂದಿ ಕರಾವಳಿ ಕಡೆ ಬರುತ್ತಿದ್ದಾರೆ. ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿಆರ್‌ಝಡ್ ಕ್ಲಿಯರ್ ಮಾಡಲು ನಮ್ಮ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಪನಿಷತ್‌ನಲ್ಲಿಯೇ ಕಾಶಿ ಉಲ್ಲೇಖವಿದೆ, ದೇಗುಲದ ಗೋಡೆಗಳ ಮೇಲೆ ಇತಿಹಾಸವಿದೆ: ಡಾ.ಮೀನಾಕ್ಷಿ ಜೈನ್

ಉಪನಿಷತ್‌ನಲ್ಲಿಯೇ ಕಾಶಿ ಉಲ್ಲೇಖವಿದೆ: ಡಾ.ಮೀನಾಕ್ಷಿ ಜೈನ್

Mangaluru Lit Fest: ಕಾಶಿಯ ಇತಿಹಾಸವನ್ನು 12ನೇ ಶತಮಾನದಿಂದ ಉಲ್ಲೇಖಿಸಲಾಗುತ್ತದೆ. ಅದು ತಪ್ಪು. ಉಪನಿಷತ್‌ ಕಾಲದಿಂದಲೂ ಕಾಶಿಗೆ ಅಸ್ತಿತ್ವವಿದೆ. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅಲ್ಲಿಯ ಇತಿಹಾಸವನ್ನು ದೇವಸ್ಥಾನದ ಗೋಡೆಗಳ ಮೇಲೆಯೇ ಬರೆಯಲಾಗಿದೆ ಎಂದು ಖ್ಯಾತ ಇತಿಹಾಸಕಾರ್ತಿ ಪದ್ಮಶ್ರೀ ಡಾ. ಮೀನಾಕ್ಷಿ ಜೈನ್ ಹೇಳಿದ್ದಾರೆ.

Vikram Sood: ಪಾಕಿಸ್ತಾನದ ಜತೆ ರಾಜಿ, ಸಂಧಾನ, ಶಾಂತಿ ಅಸಾಧ್ಯ: RAW ಮಾಜಿ ಮುಖ್ಯಸ್ಥ ವಿಕ್ರಮ್‌ ಸೂದ್‌

ಪಾಕಿಸ್ತಾನದ ಜತೆ ರಾಜಿ, ಸಂಧಾನ, ಶಾಂತಿ ಅಸಾಧ್ಯ: ವಿಕ್ರಮ್‌ ಸೂದ್‌

Mangaluru Lit Fest: ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ಮಂಗಳೂರು ಲಿಟ್‌ ಫೆಸ್ಟ್‌ 8ನೇ ಆವೃತ್ತಿಯ ‘ಗ್ರೇಟ್‌ ಪವರ್‌ ಗೇಮ್ಸ್‌ʼ ಎಂಬ ಗೋಷ್ಠಿಯಲ್ಲಿ ಭಾರತದ ಗುಪ್ತಚರ ಸಂಸ್ಥೆ ‘ರಾʼ ದ ಮಾಜಿ ಮುಖ್ಯಸ್ಥ ವಿಕ್ರಮ್‌ ಸೂದ್‌ ಮಾತನಾಡಿದ್ದಾರೆ.

Tourism Policy: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಕರಾವಳಿ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mangaluru Lit Fest: ಭಾಷೆ ಕಡೆಗಣನೆಗೆ ವಿಶ್ವವಿದ್ಯಾನಿಲಯಗಳು, ಅಧ್ಯಾಪಕರು ಕಾರಣ: ಶತಾವಧಾನಿ ಆರ್. ಗಣೇಶ್

ಭಾಷೆ ಕಡೆಗಣನೆಗೆ ವಿವಿಗಳು, ಅಧ್ಯಾಪಕರು ಕಾರಣ: ಶತಾವಧಾನಿ ಆರ್. ಗಣೇಶ್

Mangaluru Lit Fest: ಮಂಗಳೂರು ಲಿಟ್ ಫೆಸ್ಟ್ 8ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶತಾವಧಾನಿ ಆರ್. ಗಣೇಶ್ ಅವರು, ಪಂಪ, ಡಿವಿಜಿ, ಕುವೆಂಪು ಕಾವ್ಯಗಳ ಸಾರಾಂಶ ಹೇಳಲಾಗುತ್ತದೆಯೇ ಹೊರತು, ಆಳವಾದ ಅಧ್ಯಯನ ಆಗುವುದಿಲ್ಲ. ನಮಗೆ ಮೌಲ್ಯಗಳು ತಿಳಿಯಬೇಕು. ಮೌಲ್ಯಗಳು ಎಂದರೆ ನಮ್ಮನ್ನು ನಾವು ತಿಳಿದುಕೊಳ್ಳುವುದು. ಫ್ಯಾಕ್ಟ್ಸ್‌ ಹೇಳಲು ಆಗದಿರುವುದನ್ನು ಮೌಲ್ಯಗಳು ಹೇಳುತ್ತವೆʼ ಎಂದು ತಿಳಿಸಿದ್ದಾರೆ.

ಸತ್ಯಕ್ಕೆ ಮತ್ತೊಂದು ಜಯ; ಧರ್ಮಸ್ಥಳ ಸಂಸ್ಥೆ ವಿರುದ್ಧದ ದೂರು ವಜಾ: ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಹೈಕೋರ್ಟ್ ಕ್ಲೀನ್ ಚಿಟ್

SKDRDP: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧದ ದೂರು ಅರ್ಜಿ ತಿರಸ್ಕೃತವಾಗಿದ್ದು, ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. 2016ರಲ್ಲಿ ರಂಜನ್ ರಾವ್ ಸಲ್ಲಿಸಿದ್ದ ಹಣಕಾಸು ವ್ಯವಹಾರ ನಿಯಮ ಉಲ್ಲಂಘನೆ ಹಾಗೂ ಅಕ್ರಮ ಬಡ್ಡಿ ಆಧಾರಿತ ಸಾಲ ಆರೋಪದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, SKDRDP ಸಂಸ್ಥೆ ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕಡಲೇಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು- ಕೆಎಂಸಿ ವೈದ್ಯರಿಂದ ರಕ್ಷಣೆ

ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು- ಕೆಎಂಸಿ ವೈದ್ಯರಿಂದ ರಕ್ಷಣೆ

ಮನೆಯಲ್ಲಿ ಉಳಿದ ಮಕ್ಕಳ ಜೊತೆ ಆಟವಾಡುವಾಗ ಮಗು ಕಡಲೇಬೀಜ ಸೇವಿಸಿದೆ, ಹಾಗೇ ಇದ್ದಕ್ಕಿದ್ದಂತೆ ಕೆಮ್ಮಲು ಆರಂಭಿಸಿದೆ. ಆದರೆ ಕೆಲ ಸಮಯದಲ್ಲಿ ಮಗು ಸಮಾಧಾನ ಗೊಂಡಿದ್ದು ನೋಡಿ ಪೋಷಕರು ಸುಮ್ಮನಾಗಿದ್ದಾರೆ . ಆದರೆ ದಿನ ಕಳೆಯುತ್ತಿದ್ದಂತೆ ಮಗು ಮತ್ತಷ್ಟು ನಿತ್ರಾಣಗೊಂಡಂತಾಗಿದ್ದು, ಉಸಿರಾಟದ ಸಮಸ್ಯೆ ಆರಂಭವಾಗಿದೆ.

ಮಲಯಾಳಂ ಭಾಷಾ ಮಸೂದೆ ತಿರಸ್ಕರಿಸುವಂತೆ ಕೇರಳ ರಾಜ್ಯಪಾಲರಿಗೆ ಕರ್ನಾಟಕ ಒತ್ತಾಯ

ಮಲಯಾಳಂ ಕಡ್ಡಾಯ; ರಾಜ್ಯ ನಿಯೋಗದಿಂದ ಕೇರಳ ರಾಜ್ಯಪಾಲರ ಭೇಟಿ!

Malayalam language Bill: ಕನ್ನಡ ಮಾಧ್ಯಮ ಶಾಲೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಮಲಯಾಳಂ ಅನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಮಲಯಾಳಂ ಭಾಷಾ ಮಸೂದೆ - 2025 ರ ಸೆಕ್ಷನ್ 2(6) ರ ಬಗ್ಗೆ ನಿಯೋಗವು ಗಂಭೀರ ಕಳವಳ ವ್ಯಕ್ತಪಡಿಸಿತು.

Body Found: ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದ ತಾಯಿ- ಮಗು ಕೆರೆಯಲ್ಲಿ ಶವವಾಗಿ ಪತ್ತೆ

ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ

Loading...