ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ದಕ್ಷಿಣ ಕನ್ನಡ
MP Fund: ಶಿಕ್ಷಣಕ್ಕೆ ಡಿಜಿಟಲ್ ಸ್ಪರ್ಶ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ 100 ಶಾಲೆಗಳ ಸ್ಮಾರ್ಟ್ ಕ್ಲಾಸ್ ಯೋಜನೆಗೆ 1.46 ಕೋಟಿ ರೂ. ಅನುದಾನ

ಡಾ. ಹೆಗ್ಗಡೆಯವರಿಂದ 100 ಶಾಲೆಗಳಿಗೆ 1.46 ಕೋಟಿ ರೂ. ಅನುದಾನ

ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷ ರೂ.ಯಂತೆ ಒಟ್ಟು 1.46 ಕೋಟಿ ರೂ. ಮೊತ್ತದ ಅನುದಾನವನ್ನು ಮಂಜೂರು ಮಾಡಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣ; ಬೆಂಗಳೂರು ಕೋರ್ಟ್ ಆದೇಶ ವಿರುದ್ಧ ಥರ್ಡ್ ಐ ಯುಟ್ಯೂಬ್ ಚಾನಲ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಥರ್ಡ್ ಐ ಯುಟ್ಯೂಬ್ ಚಾನಲ್‌ಗೆ ಕಾನೂನು ಪಾಠ ಮಾಡಿದ ಸುಪ್ರೀಂ

ಬೆಂಗಳೂರು ಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ, ಥರ್ಡ್ ಐ ಯೂಟ್ಯೂಬ್ ಚಾನಲ್ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಹಾಕಿದ ಅರ್ಜಿಯನ್ನು ಸ್ವೀಕರಿಸದೆ ಮೊದಲು ಹೈಕೋರ್ಟ್‌ಗೆ ಹೋಗಿ ಎಂದು ಕಟ್ಟುನಿಟ್ಟಿನ ಸಂದೇಶ ನೀಡಿದೆ. ಥರ್ಡ್ ಹೈ ಯುಟ್ಯೂಬ್ ಚಾನೆಲ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

Dharmasthala: ತಿಮರೋಡಿ, ಯೂಟ್ಯೂಬರ್ ಸಮೀರ್, ಮಟ್ಟೆಣ್ಣನವರ್ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ

ತಿಮರೋಡಿ, ಸಮೀರ್, ಮಟ್ಟೆಣ್ಣನವರ್ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ

Snehamayi Krishna: ಸಮಾಜದಲ್ಲಿ ಗೊಂದಲ, ಭಯದ ವಾತಾವರಣವನ್ನು ಮತ್ತು ಅಶಾಂತಿಯನ್ನು ಉಂಟು ಮಾಡುತ್ತಿರುವ ಎಂ.ಡಿ.ಸಮೀರ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ ಮತ್ತು ಧರ್ಮಸ್ಥಳದಲ್ಲಿ ನೂರಾರು ಹೆಣವನ್ನು ಹೂತಿದ್ದೇನೆ ಎಂಬಂತೆ ಹೇಳಿಕೆ ನೀಡಿರುವ ವ್ಯಕ್ತಿಯನ್ನು ಮತ್ತು ಇತರರನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

DHARMASTHALA CASE: ಧರ್ಮಸ್ಥಳದ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಗ್ಯಾಗ್ ಆರ್ಡರ್ ಆದೇಶ ಹೊರಡಿಸಿದ ಕೋರ್ಟ್‌!

ಧರ್ಮಸ್ಥಳ ವಿರುದ್ಧದ 8,842 ವಿಡಿಯೊ ಲಿಂಕ್‌ ಡಿಲೀಟ್‌ಗೆ ಆದೇಶ

ಧರ್ಮಸ್ಥಳದ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಗ್ಯಾಗ್ ಆರ್ಡರ್ ಆದೇಶ ಹೊರಡಿಸಿದೆ.

Dharamsthala: ಸತ್ಯವೇ ಸಮಾಜದ ನೈತಿಕತೆ-ಶ್ರದ್ಧೆಗೆ ಆಧಾರ: ಎಸ್ಐಟಿ ತನಿಖೆ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

ತನಿಖೆಗೆ ಎಸ್‌ಐಟಿ ರಚಿಸಿದಕ್ಕೆ ಧರ್ಮಸ್ಥಳ ನೀಡಿದ ಪ್ರತಿಕ್ರಿಯೆ ಇದು..!

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಮತ್ತು ಅತ್ಯಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ ರಚಿಸಿರುವುದನ್ನು ಧರ್ಮಸ್ಥಳ ಕ್ಷೇತ್ರ ಸ್ವಾಗತಿಸಿದೆ. ನಿಷ್ಪಕ್ಷ ತನಿಖೆಯಿಂದ ಸತ್ಯ ಬಯಲಾಗಬೇಕು ಎಂದು ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್ ಹೇಳಿದ್ದಾರೆ. “ಸತ್ಯವೇ ಸಮಾಜದ ನೈತಿಕತೆ ಮತ್ತು ಶ್ರದ್ಧೆಗೆ ಆಧಾರ. ಎಸ್‌ಐಟಿಯಿಂದ ಪ್ರಾಮಾಣಿಕ ತನಿಖೆಯಾಗಿ, ಊಹಾಪೋಹಗಳು ನಿವಾರಣೆಯಾಗಲಿ” ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Self Harming: ರಾಜ್ಯದಲ್ಲಿ ಮತ್ತೊಬ್ಬ ಪಿಎಸ್‌ಐ ಬಂಟ್ವಾಳದಲ್ಲಿ ನೇಣಿಗೆ ಶರಣು

ರಾಜ್ಯದಲ್ಲಿ ಮತ್ತೊಬ್ಬ ಪಿಎಸ್‌ಐ ಬಂಟ್ವಾಳದಲ್ಲಿ ನೇಣಿಗೆ ಶರಣು

Self Harming: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಿವಾಸಿಯಾಗಿದ್ದ 54 ವರ್ಷದ ಕೀರಪ್ಪ ಗಟಕಂಬಳಿ ಶಿರಸಿ ಪೊಲೀಸ್ ಠಾಣೆಯಿಂದ ಕಳೆದ 5 ತಿಂಗಳ ಹಿಂದಷ್ಟೇ ವರ್ಗಾವಣೆಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದರು. ಬಂಟ್ವಾಳದ ತನಿಖಾ ವಿಭಾಗದ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಎನ್‌ಎಂಡಿಸಿ ಸಿಎಸ್‌ಆರ್ ಹೆಜ್ಜೆ – ಬೆಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು

ಬೆಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು

ಕಡಿಮೆ ಹಾದಿ ಹಾಗೂ ಗುಡ್ಡಭೂಮಿ ಇರುವ ಗ್ರಾಮಗಳಲ್ಲಿ ಈ ಹೊಸ ಬೈಕ್‌ಗಳು ಈಗಾಗಲೇ ಉಲ್ಲೇಖ ನೀಯ ಬದಲಾವಣೆಯನ್ನು ತಂದಿವೆ. ಪೊಲೀಸರು ಈಗ ಶೀಘ್ರವಾಗಿ ತಲುಪಲಾಗದ ಪ್ರದೇಶಗಳಿಗೆ ನಿರಂತರವಾಗಿ ಪ್ಯಾಟ್ರೋಲಿಂಗ್ ನಡೆಸಬಹುದು ಹಾಗೂ ಮಹಿಳೆಯರು, ಮಕ್ಕಳ ಜೊತೆಗೆ ಹಿರಿಯ ನಾಗರಿಕರ ತುರ್ತು ಕರೆಗಳಿಗೆ ವೇಗವಾಗಿ ಪ್ರತಿಕ್ರಿಯಿಸಬಹುದು.

Dharmasthala case: ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Dharmasthala case: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಿದ್ದು, ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿ, ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆ ನಡೆಸಲಿದೆ.

Dharmasthala: ತಲೆಬುರುಡೆ ಪ್ರಕರಣ; ಧರ್ಮಸ್ಥಳ, ಧರ್ಮಾಧಿಕಾರಿ ವಿರುದ್ಧ ಮಾನಹಾನಿ, ಆಧಾರ ರಹಿತ ಆರೋಪ ಮಾಡದಂತೆ ಆದೇಶ

ಧರ್ಮಸ್ಥಳ ವಿರುದ್ಧ ಮಾನಹಾನಿ ಹೇಳಿಕೆಗಳಿಗೆ ಬ್ರೇಕ್‌

ರಾಜ್ಯಸಭಾ ಸದಸ್ಯರೂ ಅಗಿರುವ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಧರ್ಮಸ್ಥಳ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಸಿವಿಲ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಆಧಾರ ರಹಿತ ಹಾಗೂ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ನೀಡಿದೆ.

Fraud Case: ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

Fraud Case: ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ, ಜಿಲ್ಲೆ ಮತ್ತು ರಾಜ್ಯಾದ್ಯಂತ ಹಲವು ಜನರಿಗೆ ವಂಚಿಸಿದ್ದು, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪೊಲೀಸರು ಅವನ ಮನೆಯೊಳಗೆ ಹಲವಾರು ರಹಸ್ಯ ಕೋಣೆಗಳು ಇರುವುದನ್ನು ಪತ್ತೆಹಚ್ಚಿದ್ದಾರೆ.

Karkala News: ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ಗೆ ಪಿತೃವಿಯೋಗ

ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ಗೆ ಪಿತೃವಿಯೋಗ

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘ ಚಾಲಕರಾಗಿದ್ದರು. ವಾಸುದೇವ ಅವರಿಗೆ 87 ವರ್ಷ ವಯಸ್ಸಾಗಿತ್ತು. ಪ್ರಖರ ವಾಗ್ಮಿಯಾಗಿದ್ದ ವಾಸುದೇವ್, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Road Block: ಭಾರಿ ಮಳೆಗೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ಸಂಚಾರ ಬಂದ್‌

ಭಾರಿ ಮಳೆಗೆ ಗುಡ್ಡ ಕುಸಿತ, ಬೆಂಗಳೂರು- ಮಂಗಳೂರು ಸಂಚಾರ ಬಂದ್‌

Road Block: ಕಡಬ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದಿದೆ. ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್​ಗಳು ಬದಲಿ ಮಾರ್ಗ ಬಳಸಲು ಎಸ್​​ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

Mangaluru News: ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ; ಇಬ್ಬರು ಅರೆಸ್ಟ್‌

ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ!

Physical Abuse: ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲವೇ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದು, ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಪತ್ನಿ ಮೇಲೆ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸದ ಆರೋಪ ಕೇಳಿಬಂದಿದೆ.

Sneha School: ಕೇರಳವೇ ಮೊದಲಲ್ಲ, ಸುಳ್ಯದ ಸ್ನೇಹ ಶಾಲೆಯಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ ಕೊಠಡಿಗಳು!

ಕೇರಳವೇ ಮೊದಲಲ್ಲ, ಸುಳ್ಯದಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ!

Sneha School: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶಿಷ್ಟ ಮಾದರಿಯ ಕ್ಲಾಸ್‌ರೂಮ್‌ಗಳು ಮೂರು ದಶಕಗಳಿಂದಲೂ ಕಾರ್ಯಾಚರಿಸುತ್ತಿವೆ. ಇವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವೃತ್ತಾಕಾರದ ತರಗತಿ ಕೊಠಡಿಗಳಲ್ಲಿ ಮಕ್ಕಳಿಗೆ ಕಲಿಸುತ್ತಿದ್ದಾರೆ.

Heart Attack: ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ನಿಷ್ಕರುಣಿ ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

Heart Attack: ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದವಳನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

MD Sameer: ಎಐ ಬಳಸಿ ಸುಳ್ಳು ಮಾಹಿತಿಯ ವಿಡಿಯೋ ಪ್ರಸಾರ; ಯುಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಪ್ರಕರಣ

ಸುಳ್ಳು ಮಾಹಿತಿಯ ವಿಡಿಯೋ ಪ್ರಸಾರ; ಯುಟ್ಯೂಬರ್ ಸಮೀರ್ ವಿರುದ್ಧ ಕೇಸ್‌

MD Sameer: ಎಐ ಮೂಲಕ ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಪ್ರಚೋದನೆಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ. ಎಂಬ ಯೂಟ್ಯೂಬರ್‌ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

POCSO case: ಮಂಗಳೂರು ಮತ್ತು ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು ಮತ್ತು ಮಂಡ್ಯದಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

POCSO case: ಮಂಗಳೂರು ಹಾಗೂ ಮಂಡ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ, ಬಾಲಕಿಯರನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಮಂಗಳೂರಿನಲ್ಲಿ 68 ವರ್ಷದ ಉದ್ಯಮಿಯೊಬ್ಬ ಈ ಕೃತ್ಯ ಎಸಗಿದ್ದು, ಇಬ್ಬರೂ ಆರೋಪಿಗಳ ಮೇಲೆ ಪೋಕ್ಸೋ ಕೇಸ್‌ ದಾಖಲಿಸಿ ಬಂಧಿಸಲಾಗಿದೆ.

MRPL Tragedy: ಮಂಗಳೂರಿನ ಎಂಆರ್‌ಪಿಎಲ್‌ ತೈಲ ಶುದ್ಧೀಕರಣ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರ ಸಾವು

ಎಂಆರ್‌ಪಿಎಲ್‌ ತೈಲ ಶುದ್ಧೀಕರಣ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರ ಸಾವು

MRPL Tragedy: ಮಂಗಳೂರಿನ ಎಂಆರ್‌ಪಿಎಲ್‌ ತೈಲ ಶುದ್ಧೀಕರಣ ಘಟಕದ ಮೂವ್ಮೆಂಟ್ ವಿಭಾಗದಲ್ಲಿ ಈ ಅವಘಡ ನಡೆದಿದೆ. ಘಟನೆಯ ಬಗ್ಗೆ ತನಿಖೆಗೆ ಎಂಆರ್‌ಪಿಎಲ್ ಆಡಳಿತ ಮಂಡಳಿಯು ಸಮಿತಿ ರಚನೆ ಮಾಡಿದೆ. ಗ್ರೂಪ್ ಜನರಲ್ ಮ್ಯಾನೇಜರ್ ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದೆ.

KMC Hospital: ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ; ಜನ್ಮಜಾತ ಹೃದಯ ಸಮಸ್ಯೆ ನಿವಾರಿಸಿದ ವೈದ್ಯರು

ಮಂಗಳೂರು ಕೆಎಂಸಿಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ

ಹುಟ್ಟಿನಿಂದಲೇ ಹೃದಯ ಸಂಬಂಧಿ ತೊಂದರೆ ಅನುಭವಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿಯಾಗಿ ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. 35ರಿಂದ 40 ವರ್ಷ ವಯಸ್ಸಿನ ರೋಹಿತ್ ಎಂಬವರಿಗೆ ಅಪರೂಪ ಮತ್ತು ಸಂಕೀರ್ಣವಾದ ಹೃದಯ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಅವರು ಹುಟ್ಟಿನಿಂದಲೇ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದರು.

Heart Attack: ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

Heart Attack: ಸುರತ್ಕಲ್ ಕೃಷ್ಣಾಪುರದ ನಿವಾಸಿ ಅಫ್ತಾಬ್ (18) ಎಂಬ ವಿದ್ಯಾರ್ಥಿ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಇನ್ಸ್ಟಿಟ್ಯೂಟ್‌ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

Self Harming: ಕೊಲ್ಲಲು ಹೋದಾಗ ಮೂರ್ಛೆ ಹೋದ ಪ್ರೇಯಸಿ; ಸತ್ತಳೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಮೂರ್ಛೆ ಹೋದ ಪ್ರೇಯಸಿ; ಸತ್ತಳೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ!

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳಯಲ್ಲಿ ಘಟನೆ ನಡೆದಿದೆ. ಯುವತಿಯನ್ನು ಕಳೆದ 8 ವರ್ಷಗಳಿಂದ ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಕೆಲ ತಿಂಗಳ ಹಿಂದೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಆಕೆಯ ಹತ್ಯೆಗೆ ಯತ್ನಿಸಿ, ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Sharan Pumpwell: ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

Sharan Pumpwell: ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಅವರ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದಿವೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ. ಅಲ್ಲದೇ ಈ ಹಿಂದೆಯೂ ಇದೇ ರೀತಿಯ ಹೇಳಿಕೆಗಳಿಂದ ಶರಣ್ ಪಂಪ್‌ವೆಲ್ ವಿರುದ್ಧ ದೂರುಗಳು ದಾಖಲಾಗಿತ್ತು.

Mangaluru News: ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

Mangaluru News: ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಹಿಂದು ಮುಖಂಡನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

Physical Abuse: ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಅತ್ಯಾಚಾರ, ವಂಚನೆ ಪ್ರಕರಣ: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Physical Abuse: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಸಿಕ್ಕಿಬಿದ್ದಿದ್ದಾನೆ.

Loading...