ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ
ವೀರಶೈವ ಸಮುದಾಯದ ಪಂಚಪೀಠಗಳಾದ ವೀರಶೈವ ಸಮಾಜದ ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶೈಲ ಮತ್ತು ಶ್ರೀ ಕಾಶಿ ಪಂಚ ಪೀಠಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಒಂದಾಗಲಿವೆ. ಶೃಂಗ ಸಮ್ಮೇಳನದಲ್ಲಿ ಜಾತಿ ಜನಗಣತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.