ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದಾವಣಗೆರೆ

Road Accident: ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

Body Found: ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ಮಾಜಿ ಕಾರ್ಪೊರೇಟರ್ ಶವ ಕಾರಿನೊಳಗೆ ಸುಟ್ಟು ಕರಕಲಾಗಿ ಪತ್ತೆ, ಶಂಕೆಗಳ ಸುಳಿ

ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ ಸಿಕ್ಕಿದೆ. ಕಾರಿನಲ್ಲಿ ಕುಳಿತು ಮಾಜಿ ಕಾರ್ಪೊರೇಟರ್​ ಸಂಕೋಳ್ ಚಂದ್ರಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಅವರ ಮಗನಾದ ಮಗ ಹಾಗೂ ಮಗಳು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣದ ನ್ಯಾಯಾಂಗ ತನಿಖೆಗೆ ಆರ್‌. ಅಶೋಕ್‌ ಒತ್ತಾಯ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣದ ನ್ಯಾಯಾಂಗ ತನಿಖೆಯಾಗಲಿ: ಅಶೋಕ್‌

R Ashok: ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪರ ವಾದ ಮಾಡಬೇಕಾದ ರಾಜ್ಯ ಮಹಿಳಾ ಆಯೋಗದವರು ಏನೂ ಆಗಿಲ್ಲವೆಂದು ಬೆಂಗಳೂರಿನಲ್ಲೇ ಹೇಳಿಕೆ ಕೊಟ್ಟಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಕೊಟ್ಟಿದೆ. ತನಿಖೆ ಮಾಡದೇ ನೀವು ಕ್ಲೀನ್ ಚಿಟ್ ಕೊಟ್ಟಿದ್ದು ಹೇಗೆ ಎಂದು ಸರ್ಕಾರ, ಪೊಲೀಸ್ ಇಲಾಖೆಯು ಉತ್ತರಿಸಲಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

Siddaramaiah Record: ಸಿದ್ದುಗೆ ಬಲ ತಂದ ಬೆಣ್ಣೆನಗರಿ

Siddaramaiah Record: ಸಿದ್ದುಗೆ ಬಲ ತಂದ ಬೆಣ್ಣೆನಗರಿ

ದಿ.ದೇವರಾಜು ಅರಸು ನಂತರ ಸುದೀರ್ಘ ಅವಧಿಗೆ ಸಿಎಂ ಆಗಿ ದಾಖಲೆ ಮಾಡಲಿರುವ ಸಿಎಂ ಸಿದ್ದರಾಮಯ್ಯ ಅವರಿಗೂ ರಾಜಕೀಯ ಮರುಹುಟ್ಟು ಕೊಟ್ಟಿದ್ದು, ತಮ್ಮ ರಾಜಕೀಯ ಬಲ ಪ್ರದರ್ಶನಕ್ಕೆ ಅವರು ವೇದಿಕೆಯನ್ನಾಗಿಸಿಕೊಂಡಿದ್ದು ಇದೇ ಮಧ್ಯ ಕರ್ನಾಟಕ ದಾವಣಗೆರೆ ಯನ್ನು.

ಶಾಮನೂರು ಶಿವಶಂಕರಪ್ಪ ಹೆಸರು ಚಿರಸ್ಥಾಯಿ ಆಗಿಸಲು ಸಿಎಂ ಕ್ರಮವಹಿಸಲಿ: ಬಿ.ವೈ. ವಿಜಯೇಂದ್ರ

ಶಾಮನೂರು ಶಿವಶಂಕರಪ್ಪ ಹೆಸರು ಚಿರಸ್ಥಾಯಿ ಆಗಿಸಲು ಸಿಎಂ ಕ್ರಮವಹಿಸಲಿ: ಬಿವೈವಿ

Shamanur Shivashankarappa: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಬಂದಾಗಲೂ ಪಕ್ಷವನ್ನು ಮರೆತು ಸಮಾಜ ಒಗ್ಗೂಡಿಸುವ ಕೆಲಸ ಅವರ ನೇತೃತ್ವದಲ್ಲಿ ಆಗಿತ್ತು. ಅವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರ

ದಾವಣಗೆರೆಯಲ್ಲಿ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯ ಸಂಸ್ಕಾರ

Shamanur shivashankarappa: ದಾವಣಗೆರೆ ನಿವಾಸದಿಂದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನಕ್ಕೆ ತೆಗೆದುಕೊಂಡು ಹೋಗಲಾಯಿತು. ಸಾರ್ವಜನಿಕರು ದರ್ಶನ ಪಡೆದ ಬಳಿಕ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸೋಮವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

Karnataka Weather: ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ; ಮುಂದಿನ ಎರಡು ದಿನ ಹೇಗಿರಲಿದೆ ಹವಾಮಾನ?

ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 14 ಡಿಗ್ರಿ ಸೆ. ಇರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಾವಣಗೆರೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ

ದಾವಣಗೆರೆಯ ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ: ಸದನದಲ್ಲಿ ಸಿಎಂ

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಕೇಂದ್ರದ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾಗಿಸಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಾಮನೂರರು (Shamanuru Shivashankarappa) ತಂದುಕೊಟ್ಟರು ಎಂದು ಸಿಎಂ ನೆನೆದುಕೊಂಡಿದ್ದಾರೆ.

Shamanuru Shivashankarappa: ಪತ್ನಿಯ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜುಗಳಿಗೆ ರಜೆ

ಪತ್ನಿ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜಿಗೆ ರಜೆ

ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು, ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರ ಪತ್ನಿಯ ಸಮಾಧಿ ಪಕ್ಕವೇ ಶಾಮನೂರು ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

Shamanur Shivashankarappa: ಇಂದು ಸಂಜೆಯವರೆಗೆ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ, ದಾವಣಗೆರೆಯಲ್ಲೇ ಅಂತ್ಯಕ್ರಿಯೆ,

ಇಂದು ಸಂಜೆಯವರೆಗೆ ಶಾಮನೂರು ಅಂತಿಮ ದರ್ಶನ, ದಾವಣಗೆರೆಯಲ್ಲೇ ಅಂತ್ಯಕ್ರಿಯೆ

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಶಾಮನೂರು ಪುತ್ರ ಎಸ್‌.ಎಸ್‌ ಮಲ್ಲಿಕಾರ್ಜುನ ಅವರ ಮನೆಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭಾ (Veerashaiva Mahasabha) ಕಟ್ಟಿದ್ದ ಶಿವಶಂಕರಪ್ಪನವರಿಗೆ ಮಹಾಸಭಾದಿಂದ ಅಂತಿಮ ನಮನ ಸಲ್ಲಿಸಲಾಗಿದೆ.

5 ದಶಕಗಳ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಶಾಮನೂರು ಶಿವಶಂಕರಪ್ಪ!

5 ದಶಕಗಳ ರಾಜಕೀಯದಲ್ಲಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಶಾಮನೂರು!

Shamanur Shivashankarappa: ಶಾಮನೂರು ಶಿವಶಂಕರಪ್ಪ ಅವರು ತಮ್ಮ 64ನೇ ವಯಸ್ಸಿಯನಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ಚುನಾವಣೆಯಲ್ಲಿ ಗೆಲುವು ಪಡೆದಿದ್ದರು. ದಾವಣಗೆರೆಯ ಬಾಪೂಜಿ ಎಜುಕೇಷನಲ್‌ ಅಸೋಸಿಯೇಷನ್ ಮೂಲಕ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

92ನೇ ಇಳಿ ವಯಸ್ಸಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಶಾಮನೂರು ಶಿವಶಂಕರಪ್ಪ

92ನೇ ವಯಸ್ಸಿನಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಮನೂರು ಶಿವಶಂಕರಪ್ಪ

Shamanur Shivashankarappa: 94 ವರ್ಷದ ಹಿರಿಯ ರಾಜಕಾರಣಿ, ಕಾಂಗ್ರೆಸ್‌ನ ಅತ್ಯಂತ ಪ್ರಭಾವಿ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ದೇಶದ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2023ರಲ್ಲಿ ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದಾಗ 92 ವರ್ಷ ವಯಸ್ಸಾಗಿತ್ತು.

ದಾವಣಗೆರೆ ಗಡಿ ಗ್ರಾಮದಲ್ಲಿ ನಿಗೂಢ ಶಬ್ದ; ಕಂಪಿಸಿದ ಭೂಮಿ, ಬೆಚ್ಚಿ ಬಿದ್ದ ಗ್ರಾಮಸ್ಥರು

ದಾವಣಗೆರೆ ಗಡಿ ಗ್ರಾಮದಲ್ಲಿ ನಿಗೂಢ ಶಬ್ದ; ಕಂಪಿಸಿದ ಭೂಮಿ

Davanagere News: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರರೆ. ಕೆಲ ಕಡೆ ಭೂಮಿ ಕಂಪಿಸಿದ ಅನುಭವವೂ ಆಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

Gold Robbery Case: ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

Davanagere Robbery Case: A1 ಆರೋಪಿ ಪಿಎಸ್ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

Davanagere Crime News: ಕೊಲೆ ಯತ್ನ ಆರೋಪಿಗೆ ಆಶ್ರಯ ನೀಡಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಬಂಧನ

ಕೊಲೆ ಯತ್ನ ಆರೋಪಿಯ ಅಡಗಿಸಿದ್ದ ಕಾಂಗ್ರೆಸ್‌ ನಾಯಕಿ ಸವಿತಾ ನಾಯ್ಕ್ ಸೆರೆ

Murder Attempt: ಕೊಲೆ ಯತ್ನ ನಡೆಸಿ ತಲೆಮರೆಸಿಕೊಂಡಿದ್ದ‌ ಖಾಲೀದ್ ಫೈಲ್ವಾನ್‌ಗಾಗಿ ಆಜಾದ್ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈವೇಳೆ ಕೊಲೆ ಅರೋಪಿಗೆ ಆಶ್ರಯ ಹಾಗೂ ಹಣದ ಸಹಾಯ ಮಾಡಿದ್ದಲ್ಲದೆ, ಕಳೆದ ಒಂದು ವಾರದಿಂದ ಬೆಂಗಳೂರು, ಗೋವಾ ಹಾಗೂ ದೆಹಲಿ ಸೇರಿದಂತೆ ಹಲವೆಡೆ ಆರೋಪಿ ಖಾಲೀದ್ ಹಾಗೂ ಸವಿತಾಬಾಯಿ ಸುತ್ತಾಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ  ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೈದಿಗಳಿಗೆ ಐಷಾರಾಮಿ ಸವಲತ್ತು: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ

CM Siddaramaiah: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಐಸಿಸ್‌ ಭಯೋತ್ಪಾದಕ ಶಕೀಲ್‌ ಸೇರಿದಂತೆ ಹಲವರಿಗೆ ರಾಜಾತಿಥ್ಯ ದೊರೆಯುತ್ತಿರುವ ವಿಚಾರ ಇತ್ತೀಚೆಗೆ ಬೆಳಕಿಗೆ ಬಂತು ಭಾರಿ ಕೋಲಾಹಲಕ್ಕೆ ಕಾರಣವಾಗಿತ್ತು.

Road Accident: ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು

ಚನ್ನಗಿರಿ ಬಳಿ ಭದ್ರಾ ಕಾಲುವೆಗೆ ಕಾರು ಉರುಳಿ ಇಬ್ಬರು ಸಾವು

Davanagere news: ದಾವಣಗೆರೆ ಮೂಲದ 6 ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಚಾಲಕ ನಿದ್ರೆ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.

ಸಭೆಗೆ ಬರಲು ಮಾತ್ರ ಪ್ರೆಗ್ನೆಂಟ್ ನೆಪ, ಸಂಬಳ ತಗೊಳ್ಳುವಾಗ ಇಲ್ಲ: ಗರ್ಭಿಣಿ ಅಧಿಕಾರಿ ವಿರುದ್ಧ ನಾಲಗೆ ಹರಿಬಿಟ್ಟ ಚೆನ್ನಗಿರಿ ಕಾಂಗ್ರೆಸ್‌ ಶಾಸಕ

ಗರ್ಭಿಣಿ ಅಧಿಕಾರಿ ವಿರುದ್ಧ ನಾಲಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ

Davanagere News: ʼʼಸಂಬಳದ ಜತೆ ಗಿಂಬಳ ತೆಗೆದುಕೊಳ್ಳುವಾಗ ಗರ್ಭಿಣಿಯಾಗಿರಲ್ಲ. ಆದರೆ ಸಭೆಗೆ ಬರಬೇಕೆಂದಾಗ ಮಾತ್ರ ಪ್ರೆಗ್ನೆಂಟ್ ಎನ್ನುತ್ತಾರೆ. ಪ್ರತಿ ಬಾರಿ ಚೆಕಪ್​​ಗೆ ಹೋಗಿದ್ದೇನೆ, ಅಲ್ಲಿ ಇದ್ದೇನೆ ಇಲ್ಲಿ ಇದ್ದೇನೆ ಎನ್ನುತ್ತಾರೆʼʼ-ಕೆಡಿಪಿ ಸಭೆಗೆ ಗೈರಾದ ಗರ್ಭಿಣಿ ಅಧಿಕಾರಿ ವಿರುದ್ಧ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಕಿಡಿಕಾರಿದ ಪರಿ ಇದು.

Davanagere news: ರಾಜ್ಯಕ್ಕೂ ಕಾಲಿಟ್ಟ ʼಐ ಲವ್ ಮೊಹಮ್ಮದ್ʼ ಗಲಾಟೆ, ದಾವಣಗೆರೆ ಉದ್ವಿಗ್ನ

ರಾಜ್ಯಕ್ಕೂ ಕಾಲಿಟ್ಟ ʼಐ ಲವ್ ಮೊಹಮ್ಮದ್ʼ ಗಲಾಟೆ, ದಾವಣಗೆರೆ ಉದ್ವಿಗ್ನ

I Love Muhammad: ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯೊಂದರ ಮುಂದೆ ʼಐ ಲವ್‌ ಮೊಹಮ್ಮದ್‌ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ.

Stabbing Case: ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ!

ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ!

Davanagere News: ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದೆ. ಶೀಲ ಶಂಕಿಸಿದ್ದ ಕಾರಣ ಕೆಲ ದಿನಗಳ ಹಿಂದೆ ಪತ್ನಿ, ಗಂಡನನ್ನು ತೊರೆದು ಹೋಗಿದ್ದಳು. ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಆಗಮಿಸಿದ್ದಾಗ, ಪತ್ನಿಗೆ ಗಂಡ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ.

Shivaji Flex: ಶಿವಾಜಿ ಫ್ಲೆಕ್ಸ್‌ ತೆರವಿಗೆ ಪೊಲೀಸರ ಪಟ್ಟು, ದಾವಣಗೆರೆ ಗಣೇಶೋತ್ಸವದಲ್ಲಿ ಉದ್ವಿಗ್ನತೆ

ಗಣೇಶೋತ್ಸವದ ಶಿವಾಜಿ ಫ್ಲೆಕ್ಸ್‌ ತೆರವಿಗೆ ಒತ್ತಾಯ, ದಾವಣಗೆರೆ ಉದ್ವಿಗ್ನ

Davanagere: ಫ್ಲೆಕ್ಸ್‌ ಯಾವುದೇ ಕಾರಣಕ್ಕೂ ತೆರವು ಮಾಡುವುದಿಲ್ಲ. ಯುವಕರಿಗೆ ಇತಿಹಾಸ ತಿಳಿಸುವ ಕೆಲಸ ಪ್ರತಿ ವರ್ಷ ಮಾಡುತ್ತೇವೆ ವಿನಃ ಯಾವುದೇ ಕೋಮು ಪ್ರಚೋದನೆ ಆಗುವುದಿಲ್ಲ ಎಂದು ಹಿಂದೂ ಯುವಕರು ಪಟ್ಟು ಹಿಡಿದಿದ್ದು, ಆಗ ಪೊಲೀಸರ ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.

Viral News: ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ; ದಾವಣಗೆರೆಯಲ್ಲಿ ನಡೆಯಿತು ವಿಚಿತ್ರ ಘಟನೆ

ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ

ಪ್ರಕೃತಿಯಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಸಂಭವಿಸುತ್ತಿರುತ್ತವೆ. ಅದೇ ರೀತಿ ದಾವಣಗೆರೆಯಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಸಾಮಾನ್ಯವಾಗಿ ಕೋಳಿಗಳು ಬಿಳಿ ಬಣ್ಣದ ಮೊಟ್ಟೆ ಇಡುತ್ತವೆ. ಆದರೆ ಇಲ್ಲಿ ನಾಟಿ ಕೋಳಿಯೊಂದು ನೀಲಿ ಬಣ್ಣದ ಮೊಟ್ಟೆಯಿಟ್ಟಿದ್ದು ಅಚ್ಚರಿ ಮೂಡಿಸಿದೆ.

Loading...