ಕಲ್ಲಿನಿಂದ ಜಜ್ಜಿ ಗಂಡನನ್ನೇ ಕೊಲೆಗೈದ ಪತ್ನಿ; ಶವ ಸಾಗಿಸಲು ಮಗ ಸಹಾಯ!
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಚಿಕ್ಕಬಿದರಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ ಪ್ರಕರಣ ನಡೆದಿತ್ತು. ಪೊಲೀಸರ ತನಿಖೆ ವೇಳೆ ಪತ್ನಿಯೇ ಕೊಲೆ ಮಾಡಿರುವ ವಿಚಾರ ಬಯಲಾಗಿದೆ. ಶವ ಸಾಗಿಸಲು ಆಕೆಗೆ ಮಗ ಸಹಾಯ ಮಾಡಿದ್ದು, ಸದ್ಯ ಇಬ್ಬರೂ ಪೊಲೀಸರ ಅತಿಥಿಗಳಾಗಿದ್ದಾರೆ.