ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರವಾಡ
Police Firing: ಧಾರವಾಡದಲ್ಲಿ ಇಬ್ಬರು ಕಳ್ಳರಿಗೆ ಪೊಲೀಸ್‌ ಗುಂಡೇಟು, ಸೆರೆ

ಧಾರವಾಡದಲ್ಲಿ ಇಬ್ಬರು ಕಳ್ಳರಿಗೆ ಪೊಲೀಸ್‌ ಗುಂಡೇಟು, ಸೆರೆ

Dharawad: ಧಾರವಾಡ ನಗರದ ಮನೆಯೊಂದರಲ್ಲಿ ಈ ಕಳ್ಳರು ಕಳ್ಳತನ ಮಾಡಿದ್ದರು. ಬಳಿಕ ಪರಾರಿ ಆಗುವ ವೇಳೆ ಪೊಲೀಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಪಿಎಸ್ಐ ಮೇಲೆ ಹಲ್ಲಿ ನಡೆಸಿ ಕಳ್ಳರು ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಪಿಎಸ್ಐ ಮಲ್ಲಿಕಾರ್ಜುನ್ ಇಬ್ಬರ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ.

Narayana Bharamani: ಮುಖ್ಯಮಂತ್ರಿಯಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾದ ಎಎಸ್‌ಪಿ ನಾರಾಯಣ ಭರಮನಿಗೆ ಪದೋನ್ನತಿ

ಮುಖ್ಯಮಂತ್ರಿಯಿಂದ ಅವಮಾನಕ್ಕೊಳಗಾದ ಭರಮನಿಗೆ ಪದೋನ್ನತಿ

CM Siddaramaiah: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ಇದೀಗ ರಾಜ್ಯ ಸರ್ಕಾರ ಪದೋನ್ನತಿ ನೀಡಿದ್ದು, ಬೆಳಗಾವಿ ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್‌ ಆಯುಕ್ತ (ಡಿಸಿಪಿ)ರಾಗಿ ನೇಮಿಸಿದೆ.

Deer Rescued: ಕೆರೆಯಲ್ಲಿ ಮುಳುಗುತ್ತಿದ್ದ 4 ವರ್ಷದ ಗರ್ಭಿಣಿ ಜಿಂಕೆ ರಕ್ಷಣೆ

ಕೆರೆಯಲ್ಲಿ ಮುಳುಗುತ್ತಿದ್ದ 4 ವರ್ಷದ ಗರ್ಭಿಣಿ ಜಿಂಕೆ ರಕ್ಷಣೆ

Deer Rescued: ಧಾರವಾಡದ ಹೊರವಲಯದಲ್ಲಿರುವ ಸೋಮೇಶ್ವರ ದೇವಸ್ಥಾನದ ಹತ್ತಿರದ ಕೆರೆಯಲ್ಲಿ ನೀರು ಕುಡಿಯಲು ಹೋಗಿದ್ದ ಜಿಂಕೆ, ಬಳ್ಳಿಗೆ ಸಿಲುಕಿ ಪರದಾಡುತ್ತಿತ್ತು. ಈ ಬಗ್ಗೆ ಸ್ಥಳೀಯರಿಂ ಮಾಹಿತಿ ಪಡೆದ ಧಾರವಾಡದ ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.

Heart Attack: ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್‌ ವಿದ್ಯಾರ್ಥಿನಿ ಸಾವು, ದಾವಣಗೆರೆಯಲ್ಲಿ ಯುವಕ ಮೃತ್ಯು

ಹೃದಯಾಘಾತ ಸರಣಿ: ಕೆಎಎಸ್‌ ವಿದ್ಯಾರ್ಥಿನಿ‌, ಯುವಕ ಸಾವು

Heart Attack: ಧಾರವಾಡ (Dharawada) ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ (Davanagere) ಹೃದಯಸ್ತಂಭನದಿಂದ (Heart Failure) 22 ವರ್ಷದ ಯುವಕ ಮೃತಪಟ್ಟಿದ್ದಾನೆ.

Laxmi Hebbalkar:  ಸಿಎಂ, ಡಿಸಿಎಂ ದಿಲ್ಲಿ ಭೇಟಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ, ಡಿಸಿಎಂ ದೆಹಲಿ ಭೇಟಿ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಿಲ್ಲಿಗೆ ಭೇಟಿ ಕೊಡುವುದು‌ ಹೊಸದೇನಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Laxmi Hebbalkar: ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಹೆಬ್ಬಾಳ್ಕರ್

ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಹೆಬ್ಬಾಳ್ಕರ್

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

Pralhad Joshi: ಹುಬ್ಬಳ್ಳಿಯ ಕಿಮ್ಸ್‌ಗೆ 30 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ಯಂತ್ರ ವಿತರಿಸಿದ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ ಕಿಮ್ಸ್‌ಗೆ 30 ಲಕ್ಷ ವೆಚ್ಚದ ಅತ್ಯಾಧುನಿಕ ಯಂತ್ರ ವಿತರಿಸಿದ ಜೋಶಿ

Pralhad Joshi: ಚೆನ್ನೈನ ಸಾನುಮ್ ಸ್ಯಾಂಗಿನಿಯಾಸ್ ಸಲೂಶನ್ ಪ್ರೈ.ಲಿ. ಅವರ ಸಿಎಸ್ಆರ್ ಅನುದಾನದಡಿ ಒದಗಿಸಿದ DIGIPLA 90-THERAPEUTIC PLASMA EXCHANGE (TPE) ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ಸೋಮವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ವಿತರಿಸಿ, ಅದರ ಉದ್ಘಾಟನೆ ನೆರವೇರಿಸಿದರು.‌

Pralhad Joshi: ಕಾಂಗ್ರೆಸ್‌ನಲ್ಲಿ ಮನಮೋಹನ್‌ ಸಿಂಗ್‌, ಖರ್ಗೆ ಸ್ಥಿತಿ ಒಂದೇ: ಪ್ರಲ್ಹಾದ್‌ ಜೋಶಿ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಕೈಗೊಂಬೆ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೆಸರಿಗೆ ಮಾತ್ರ ಎಐಸಿಸಿ ಅಧ್ಯಕ್ಷ ಸ್ಥಾನದಂತಹ ಹುದ್ದೆ ನೀಡಿದೆ. ಆದರೆ, ಯಾವುದೇ ತೀರ್ಮಾನ ತೆಗೆದುಕೊಳ್ಳುವಂತಹ ಅಧಿಕಾರ ‌ನೀಡದೇ ಅವರನ್ನು ಕೈಗೊಂಬೆಯಂತೆ ನಡೆಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಅಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಇಂದು ಮಲ್ಲಿಕಾರ್ಜುನ ಖರ್ಗೆ ಇಬ್ಬರ ಸ್ಥಿತಿಯೂ ಒಂದೇ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಸ್ಫೋಟದ ಬೆದರಿಕೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಸ್ಫೋಟದ ಬೆದರಿಕೆ

bomb threat: ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್‌ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ‌ನಿಗಾ ವಹಿಸಿದ್ದಾರೆ.

Pralhad Joshi: ಬಾಹ್ಯಾಕಾಶಕ್ಕೆ ಪಸರಿಸಿತು ವಿದ್ಯಾಕಾಶಿ ವಿಜ್ಞಾನ ಸ್ಫೂರ್ತಿ: ಪ್ರಲ್ಹಾದ್‌ ಜೋಶಿ ಸಂತಸ

ಬಾಹ್ಯಾಕಾಶಕ್ಕೆ ಪಸರಿಸಿತು ವಿದ್ಯಾಕಾಶಿ ವಿಜ್ಞಾನ ಸ್ಫೂರ್ತಿ: ಜೋಶಿ

Pralhad Joshi: ಸುದೀರ್ಘ 41 ವರ್ಷಗಳ ಬಳಿಕ ಬಾಹ್ಯಾಕಾಶಕ್ಕೆ ಭಾರತೀಯ ಗಗನಯಾನಿ ತೆರಳುತ್ತಿರುವುದು ಭಾರತೀಯರೆಲ್ಲರಿಗೂ ಹೆಮ್ಮೆಯ ಸಂಗತಿ. ಅಂತೆಯೇ ಇದರಲ್ಲಿ ಐಐಟಿ ಧಾರವಾಡ ಮತ್ತು ಯುಎಎಸ್ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಸಹಯೋಗ ಇರುವುದು ಧಾರವಾಡಕ್ಕೆ ಹೆಮ್ಮೆಯ ಗರಿ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Hit And Run Case: ಧಾರವಾಡದಲ್ಲಿ ಹಿಟ್ ಆ್ಯಂಡ್ ರನ್​ ಕೇಸ್: ASI ಸ್ಥಳದಲ್ಲೇ ಸಾವು

ಹಿಟ್ ಆ್ಯಂಡ್ ರನ್​ ಕೇಸ್: ASI ಸ್ಥಳದಲ್ಲೇ ಸಾವು

ಧಾರವಾಡದಲ್ಲಿ ಹಿಟ್‌ ಆಂಡ್‌ ರನ್‌ ಕೇಸ್‌ ನಡೆದಿದ್ದು, ಪೊಲೀಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಮೃತರ ಅಧಿಕಾರಿಯನ್ನು ASI ಎಲ್ಲಪ್ಪ ಕುಂಬಾರ್‌ ಎಂದು ಗುರುತಿಸಲಾಗಿದೆ. ಮೃತ ASI ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬೈಕಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ.

Hubli News: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದಲೇ ಹೊತ್ತೊಯ್ದ ಪೋಷಕರು!

ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಹೊತ್ತೊಯ್ದ ಪೋಷಕರು!

Hubli News: ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಪತಿಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಪತಿ ಮನೆಗೆ ಯುವತಿ ಬಂದಿದ್ದಳು. ಈ ವೇಳೆ ಯುವತಿ ತಂದೆ, ಮಾವಂದಿರು ಧಮ್ಕಿ ಹಾಕಿ ಗಂಡನ ಮನೆಯಲ್ಲಿ ಕುಳಿತಿದ್ದ ಯುವತಿಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ.

MLA Vinay Kulkarni: ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ!

ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ

MLA Vinay Kulkarni: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿ, ಶರಣಾಗತಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ವಿಚಾರಣೆ ಬಳಿಕ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Manufacturing Sector: ಉತ್ಪಾದನಾ ವಲಯದಲ್ಲಿ 3ನೇ ಅತಿದೊಡ್ಡ ರಾಷ್ಟ್ರವಾಗುವತ್ತ ಭಾರತ ಹೆಜ್ಜೆ: ಪ್ರಲ್ಹಾದ್ ಜೋಶಿ

ಉತ್ಪಾದನಾ ವಲಯದಲ್ಲಿ 3ನೇ ಅತಿದೊಡ್ಡ ರಾಷ್ಟ್ರವಾಗುವತ್ತ ಭಾರತ ಹೆಜ್ಜೆ: ಜೋಶಿ

Manufacturing Sector: ಭಾರತದ ಇಂದು ಕೈಗಾರಿಕೆ, ಔದ್ಯೋಗಿಕ, ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಸಾರಿಗೆ, ವಿದ್ಯುತ್‌ ಹೀಗೆ ಪ್ರತಿಯೊಂದರಲ್ಲೂ ಆತ್ಮನಿರ್ಭರವಾಗಿದೆ. 2014ರಲ್ಲಿ ಇದ್ದಂತಹ ಆಮದು ಪರಿಸ್ಥಿತಿ ಇಂದಿಲ್ಲ. ಜಗತ್ತಿನಲ್ಲೇ ಅತಿದೊಡ್ಡ ರಫ್ತು ರಾಷ್ಟ್ರವಾಗಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Basavaraj Bommai: ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

Basavaraj Bommai: ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಅತ್ಯುತ್ತಮ ಪುಸ್ತಕಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

MB Patil: 600 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ನೈಡೆಕ್ ನೂತನ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

600 ಕೋಟಿ ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

MB Patil: ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿ ಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸೋಮವಾರ ಉದ್ಘಾಟಿಸಿದ್ದಾರೆ. ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಕಾಂಗ್ರೆಸ್‌ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ತಕ್ಕ ಶಾಸ್ತಿ: ಪ್ರಲ್ಹಾದ್‌ ಜೋಶಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ತಕ್ಕ ಶಾಸ್ತಿ: ಜೋಶಿ

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Arvind Bellad: ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮೇ 17ರಂದು ಪೊಲೀಸ್ ಆಯುಕ್ತರಿಗೆ ಅರವಿಂದ್ ಬೆಲ್ಲದ (Arvind Bellad) ಪತ್ರ ಬರೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವಿದೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ ಅಂತ ವಿವರಿಸಿದ್ದಾರೆ.

Ramakant Joshi: ಮನೋಹರ ಗ್ರಂಥಮಾಲಾ ಪ್ರಕಾಶಕ, ಲೇಖಕ ಡಾ. ರಮಾಕಾಂತ ಜೋಶಿ ನಿಧನ

ಮನೋಹರ ಗ್ರಂಥಮಾಲಾ ಪ್ರಕಾಶಕ ಡಾ. ರಮಾಕಾಂತ ಜಿ. ಜೋಶಿ ನಿಧನ

Ramakant Joshi: ರಮಾಕಾಂತ್ ಜೋಶಿ ಅವರು ಪುಸ್ತಕ ಪ್ರಕಾಶನದ ಜೊತೆಗೆ ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ತಂದೆ ಖ್ಯಾತ ಸಾಹಿತಿ ಮತ್ತು ರಂಗಕರ್ಮಿ, ಪದ್ಮಶ್ರೀ ಪುರಸ್ಕೃತ ಜಿ.ಬಿ. ಜೋಶಿಯವರು ಆರಂಭಿಸಿದ ಮನೋಹರ ಗ್ರಂಥಮಾಲೆ ಪ್ರಕಾಶನವನ್ನು ಇವರು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದರು.

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Rain: ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ಕೊಪ್ಪಳದಲ್ಲೇ ಸಿಡಿಲಿನ ಹೊಡೆತಕ್ಕೆ ಇಬ್ಬರು, ಬಳ್ಳಾರಿಯಲ್ಲಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಒಬ್ಬರು, ವಿಜಯಪುರದಲ್ಲೂ ಸಹ ಓರ್ವ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗದಲ್ಲಿ ಮಳೆ ನೀರಿಗೆ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಮತ್ತೊಂದಡೆ ಗೋಕಾಕ್​ನಲ್ಲಿ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Hubli stabbing case: ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

Hubli stabbing case: ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಐದಾರು ಸ್ನೇಹಿತರು ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರ ನಡುವೆ ಜಗಳವಾಗಿದೆ. ಈ ವೇಳೆ ಒಬ್ಬ ಬಾಲಕ ಮನೆಗೆ ಹೋಗಿ ಚಾಕು ತಂದು, ಸ್ನೇಹಿತನನ್ನೇ ಕೊಲೆ ಮಾಡಿ ಮಾಡಿದ್ದಾನೆ.

Pralhad Joshi: ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡಲ್ಲ: ಪ್ರಲ್ಹಾದ್‌ ಜೋಶಿ

ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಬಿಡಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಅತಿ ಹೆಚ್ಚು ಬಾರಿ ಸಂವಿಧಾನ ಬದಲಾಯಿಸಿ ದೇಶಕ್ಕೆ ಅನ್ಯಾಯ ಎಸಗಿದವರೇ ಇಂದು ಸಂವಿಧಾನ ಬದಲಾವಣೆ ಕೂಗೆಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಮೀಸಲಾತಿ ತೆಗೆಯುವುದಲ್ಲ, ಅದನ್ನು ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Operation sindoor: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ: ಪ್ರಲ್ಹಾದ್‌ ಜೋಶಿ

ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ: ಜೋಶಿ

Operation sindoor: ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತಿಕಾರದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Loading...