ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರವಾಡ

Vinay kulkarni: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ; ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ

Yogesh Gowda murder case: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೂಚನೆ

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಜೋಶಿ ಸೂಚನೆ

Pralhad Joshi: ‌ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಈ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.

Dharwad News: ಗಾಂಜಾ ಸೇವಿಸದಿದ್ರೂ ಕೇಸ್‌; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಗಾಂಜಾ ಕೇಸ್‌; ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಧಾರವಾಡದಲ್ಲಿ ಪೊಲೀಸರು ಸುಮಾರು 40ಕ್ಕೂ ಹೆಚ್ಚು ಯವಕರನ್ನು ವಶಕ್ಕೆ ಪಡೆದಿದ್ದರು. ಡ್ರಗ್‌ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದರೂ ವಿದ್ಯಾರ್ಥಿಯಿಂದ ಪೊಲೀಸರು 2 ಸಾವಿರ ರೂಪಾಯಿ ಪಡೆದಿದ್ದರು. ಹಣ ನೀಡದಿದ್ದರೆ ಬೇರೆ ಕೇಸ್‌ನಲ್ಲಿ ಸಿಲುಕಿಸುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಹೇಳಿದ್ದಾರೆ.

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಜೋಶಿ

ಜವಾಹರಲಾಲ್ ನೆಹರು ಎಸ್ಸಿ, ಎಸ್ಟಿ ಮೀಸಲಾತಿ, ರಾಜೀವ ಗಾಂಧಿ ಒಬಿಸಿ ಮೀಸಲಾತಿ ವಿರೋಧಿಸಿದ್ದರೆ, ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹದ್‌ ಜೋಶಿ ಆರೋಪಿಸಿದ್ದಾರೆ.

Vinay Kulakarni: ಶಾಸಕ ಸ್ಥಾನ ಉಳಿಸಿಕೊಳ್ಳಲು ಮುಂದಾದ ವಿನಯ್‌ ಕುಲಕರ್ಣಿ, ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ

ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್‌ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ.

ಮೊದಲ ಸ್ಟುಡಿಯೋದೊಂದಿಗೆ ಧಾರವಾಡಕ್ಕೆ ಪ್ರವೇಶಿಸಿ ಉದಯೋನ್ಮುಖ ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವ ವಿಸ್ತರಿಸುತ್ತಿರುವ ಹೋಮ್‌ಲೇನ್

ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವ ವಿಸ್ತರಿಸುತ್ತಿರುವ ಹೋಮ್‌ಲೇನ್

1,300 ಚದರ ಅಡಿ ವಿಸ್ತೀರ್ಣದಲ್ಲಿ ಹರಡಿರುವ ಈ ಸ್ಟುಡಿಯೋವನ್ನು ಒಂದು 'ತನ್ಮಯಗೊಳಿಸುವ ಅನುಭವ ಕೇಂದ್ರ'ವಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಗ್ರಾಹಕರು ಮಾಡ್ಯುಲರ್ ಕಿಚನ್‌ಗಳು, ವಾರ್ಡ್‌ ರೋಬ್‌ಗಳು ಮತ್ತು ಸಂಪೂರ್ಣ ಮನೆಯ ವಿನ್ಯಾಸಗಳನ್ನು ವೀಕ್ಷಿಸಿ ಆರಿಸಿಕೊಳ್ಳಬಹುದು. ವಿನ್ಯಾಸ ಮತ್ತು ಅನುಷ್ಠಾನಕ್ಕೆ ಒಂದೇ ಸೂರಿನಡಿ ಪರಿಹಾರ ನೀಡುವ ಹೋಮ್‌ಲೇನ್, ಮನೆಮಾಲೀಕರಿಗೆ ಯೋಜನೆಯಿಂದ ವಿತರಣೆಯವರೆಗೆ ಸುಗಮವಾಗಿ ಸಾಗಲು ಸಹಾಯ ಮಾಡುತ್ತದೆ.

Dharwad Akashvani: 'ಧಾರವಾಡ ಆಕಾಶವಾಣಿ ಕೇಂದ್ರ' ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ: ಜೋಶಿ ಮನವಿಗೆ ಸ್ಪಂದನೆ

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.

Yogesh Gowda murder case: ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು; ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಕೋರ್ಟ್‌ ತೀರ್ಪಿನ ಬಳಿಕ ಯೋಗೇಶ್‌ ಗೌಡ ನೆನೆದು ಅಕ್ಕ ಕಣ್ಣೀರು

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಯೋಗೇಶ್‌ ಗೌಡ ಸಹೋದರಿ ಅಕ್ಕಮಹಾದೇವಿ ಅವರು, ನಮಗೆ ಕಾನೂನಿನ ಮೇಲೆ ಭರವಸೆ ಇತ್ತು. ಕೋರ್ಟ್‌ ತೀರ್ಪಿನಿಂದ ನಮಗೆ ಖುಷಿಯಾಗಿದೆ, ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಪೊಲೀಸ್‌ ಅಧಿಕಾರಿ ಚನ್ನಕೇಶವ ಟಿಂಕರಿಕರ್‌ಗೂ ಜೀವಾವಧಿ ಶಿಕ್ಷೆಯಾಗಬೇಕಿತ್ತು ಎಂದು ಹೇಳಿದ್ದಾರೆ.

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಕಳೆದ 10 ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ಸೇರಿ 17 ಮಂದಿ ಅಪರಾಧಿಗಳು ಎಂದು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು. ಸದ್ಯ ವಿನಯ್‌ ಕುಲಕರ್ಣಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.

ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ದೋಷಿ

Yogesh Gowda Murder Case: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಗುರುವಾರ (ಏಪ್ರಿಲ್‌ 16) ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶಿಸಿದೆ.

Dharwad Murder Case: ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡ ಯುವ ಕಾಂಗ್ರೆಸ್ ನಾಯಕ ಹತ್ಯೆ ಕೇಸ್‌; 8 ಆರೋಪಿಗಳ ಬಂಧನ

ಧಾರವಾಡದ ಹಾಸ್ಮಿ ನಗರದ ನಿವಾಸದಲ್ಲಿ ಕಾಂಗ್ರೆಸ್‌ ಯುವ ಮುಖಂಡ ಫೈರೋಜ್ ಮೇಲೆ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ಮುಂದುವರಿದಿದೆ.

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Yogesh Gowda murder: ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ಏಪ್ರಿಲ್‌ 15ರಂದು

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು.

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Dharwad News: ಬೇಕಂತಲೇ ಯುವತಿಯರ ಮೈ ಕೈ ಮುಟ್ಟಿ ಅನುಚಿತ ವರ್ತನೆ; ಧಾರವಾಡದಲ್ಲಿ‌ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

ಯುವತಿಯರಿಗೆ ಬ್ಯಾಡ್‌ ಟಚ್‌ ಮಾಡುತ್ತಿದ್ದ ಮುಸ್ಲಿಂ ಜಿಮ್ ಟ್ರೈನರ್‌ ಅರೆಸ್ಟ್

Dharwad gym trainer Arrest: ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಸಾಬಿರ್, ಜಿಮ್‌ನಲ್ಲಿ ಮಹಿಳೆಯರ ಶೌಚಾಲಯಕ್ಕೆ ಹೋಗಿ ಬರುವುದು, ಟ್ರೈನಿಂಗ್ ವೇಳೆ ಬೇಕಂತಲೇ ಮೈ ಕೈ ಮುಟ್ಟಿ ಅನುಚಿತ ವರ್ತನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Love Jihad: ಹುಬ್ಬಳ್ಳಿ ಜಿಮ್‌ ಲವ್‌ ಜಿಹಾದ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿ ಲವ್‌ ಜಿಹಾದ್‌ನಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಆರೋಪಿ ನನ್ನ ಖಾಸಗಿ ಕ್ಷಣಗಳ ವಿಡಿಯೋವನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಿದ್ದಾರೆ.

ವಿಡಿಯೊ ಇರುವುದು ನಿಜ, ಆದ್ರೆ ಆಕೆಯೇ ರೆಕಾರ್ಡ್‌ ಮಾಡಿದ್ದು; ಯುವತಿ ಮೊಬೈಲ್‌ ಚೆಕ್‌ ಮಾಡಿ ಎಂದ ಸಮೀರ್‌

ವಿಡಿಯೊ ಇರುವುದು ನಿಜ, ಆದ್ರೆ ಆಕೆಯೇ ರೆಕಾರ್ಡ್‌ ಮಾಡಿದ್ದು: ಸಮೀರ್‌

ಸಂತ್ರಸ್ತೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಹೇಳಿರುವ ಸಮೀರ್, ವಿಡಿಯೊ ರೆಕಾರ್ಡ್ ಆಗಿರುವುದು ನಿಜ. ಆದರೆ ಅದು ಯಾರ ಮೊಬೈಲ್‌ನಲ್ಲಿ ತೆಗೆಯಲಾಗಿದೆ ಎಂಬುವುದು ನಿಮಗೆ ತಿಳಿಯಬೇಕು. ನನ್ನ ಫೋನ್‌ನಲ್ಲಿ ಯಾವುದೇ ವಿಡಿಯೊ, ಫೋಟೊಗಳು ಇಲ್ಲ ಎಂದು ಸಮೀರ್ ಸ್ಪಷ್ಟಪಡಿಸಿದ್ದಾನೆ.

Love Jihad: ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು

ಹುಬ್ಬಳ್ಳಿ ಲವ್ ಜಿಹಾದ್: ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು

ಯುವತಿಯ ದೂರಿನ ಆಧಾರದ ಮೇಲೆ ಜಿಮ್‌ ಟ್ರೈನರ್‌, ಪ್ರಮುಖ ಆರೋಪಿ ಸಮೀರ್ ವಿರುದ್ಧ ಬಿಎನ್‌ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಐವರನ್ನೂ ಹೆಸರಿಸಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಮೀರ್ ಮುಲ್ಲಾ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಚಿತ್ರಗಳು; ಗರ್ಭನಿರೋಧಕ ಮಾತ್ರೆ, ಸ್ಕ್ಯಾನಿಂಗ್‌ ರಿಪೋರ್ಟ್‌ ಫೋಟೊಸ್‌!

ಸಮೀರ್ ಮೊಬೈಲ್‌ನಲ್ಲಿ ಗರ್ಭನಿರೋಧಕ ಮಾತ್ರೆ, ಸ್ಕ್ಯಾನಿಂಗ್‌ ಫೋಟೊಸ್‌

Hubballi love jihad Case: ಹುಬ್ಬಳ್ಳಿಯ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ಸಮೀರ್‌ ಮುಲ್ಲಾ ಬಗ್ಗೆ ಹಲವು ಸ್ಫೋಟಕ ಸಂಗತಿಗಳ ಬಯಲಾಗುತ್ತಿವೆ. ಈತ ಹಲವು ಹಡುಗಿಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಫೋನ್‌ನಲ್ಲಿ ಹಲವು ಯುವತಿಯರ ಫೋಟೊಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ಮಾಡಿದ್ದಾನೆ: ಸಮೀರ್‌ ಮುಲ್ಲಾ ವಿರುದ್ಧ ಸಂತ್ರಸ್ತ ಯುವತಿ ಆರೋಪ!

ನನ್ನ ಮೇಲೆ ಸಮೀರ್‌ ಮುಲ್ಲಾ ಅತ್ಯಾಚಾರ ಮಾಡಿದ್ದಾನೆ: ಸಂತ್ರಸ್ತ ಯುವತಿ

Hubballi love jihad Case: ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿರುವ ಸಂತ್ರಸ್ತ ಯುವತಿ, ಸಮೀರ್‌ ತನಗೆ ಮತ್ತು ಬರಿಸುವ ಪಾನೀಯ ಕೊಟ್ಟು ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ವಿಡಿಯೊ ಕೂಡ ಮಾಡಿಕೊಂಡಿದ್ದಾನೆ. ಇನ್ನೂ ಹಲವು ಯುವತಿಯರನ್ನು ಆತ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಹೇಳಿದ್ದಾಳೆ.

Hubballi news: ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಸಮೀರ್ ಪೊಲೀಸ್​ ವಶಕ್ಕೆ‌, ಯುವತಿ ಮನೆಗೆ ನುಗ್ಗಿ ಯುವಕನ ಕುಟುಂಬಸ್ಥರಿಂದ ಗಲಾಟೆ

ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಆರೋಪ, ಎರಡೂ ಕಡೆಯವರಿಂದ ಗಲಾಟೆ

ಯುವತಿ ಮತ್ತು ಸಮೀರ್ ನಡುವೆ ಜಿಮ್‌ನಲ್ಲಿ ಪರಿಚಯವಾಗಿತ್ತು. ಹಿಂದೂ ಕಾರ್ಯಕರ್ತರು ಯುವಕನನ್ನು ಹಿಡಿದು ಪೊಲೀಸರ ವಶಕ್ಕೊಪ್ಪಿಸಿದ್ದು, ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ.

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ fly91 ವಿಮಾನಯಾನ ಶುರುವಾಗಲಿದೆ. ಇದೇ ಏಪ್ರಿಲ್ ಎರಡನೇ ವಾರದಿಂದಲೇ fly91 ವಿಮಾನ ಸೇವೆ ಆರಂಭವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಅಂತೆಯೇ fly91 ಸಂಸ್ಥೆ ಈಗಾಗಲೇ ವಿಮಾನಯಾನ ಸೇವೆಯ ಅಗತ್ಯ ಕಾರ್ಯ ಚಟುವಟಿಕೆ ಸಹ ಆರಂಭಿಸಿದೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು

Dharwad Murder Case: ಧಾರವಾಡ ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾಜಿ ಶಾಸಕನ ಪುತ್ರನನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Loading...