ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರವಾಡ
Hubballi Encounter: ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್‌ 13ರಂದು ರಿತೇಶ್‌ನನ್ನು ಕೊಲ್ಲಲಾಗಿತ್ತು.

Assault Case: ಸಿಗರೇಟ್‌ ಸೇದಬೇಡಿ ಎಂದ ಆರ್‌ಎಸ್‌ಎಸ್‌ ಮುಖಂಡನ ಮನೆಗೇ ನುಗ್ಗಿ ಥಳಿಸಿದ ಪುಂಡರು!

ಸಿಗರೇಟ್‌ ಸೇದಬೇಡಿ ಎಂದ ಆರ್‌ಎಸ್‌ಎಸ್‌ ಮುಖಂಡನ ಮನೆಗೇ ನುಗ್ಗಿ ಪುಂಡರ ಹಲ್ಲೆ

ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ರೊಚ್ಚಿಗೆದ್ದ ಮುಸ್ಲಿಂ ಪುಂಡರು,ಆರ್‌ಎಸ್‌ಎಸ್‌ ಮುಖಂಡ ಶಿರೀಶ್ ಬಳ್ಳಾರಿ ಮನೆಗೇ ಹುಡುಕಿಕೊಂಡು ಬಂದು ಒಳನುಗ್ಗಿ ಹಲ್ಲೆ ಎಸಗಿದ್ದಾರೆ. ತಡೆಯಲು ಬಂದ ಕುಟುಂಬಸ್ಥರ ಮೇಲೂ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ಬಳಿಕ ನಾಲ್ವರು ನಾಪತ್ತೆಯಾಗಿದ್ದಾರೆ.

Hubballi girl Murder Case: ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್‌ ಸಹ ಸಿಐಡಿ ತನಿಖೆಗೆ

ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್‌ ಸಹ ಸಿಐಡಿ ತನಿಖೆಗೆ

ಹುಬ್ಬಳ್ಳಿಯ 5 ವರ್ಷದ ಬಾಲಕಿ ಅತ್ಯಾಚಾರ- ಹತ್ಯೆಯಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ವಲಸಿಗ ಕಾರ್ಮಿಕರಿಂದ ರಾಜ್ಯದಲ್ಲಿ ಅಪರಾಧಗಳು ಹೆಚ್ಚುತ್ತಿವೆ ಎಂಂಬ ಅಂಶದತ್ತ ಗಮನ ಸೆಳೆದಿತ್ತು. ಈ ಪ್ರಕರಣದ ಆರೋಪಿ ಬಿಹಾರ ಮೂಲದ ರಿತೇಶ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.

Pralhad Joshi: ಅಪಘಾತಕ್ಕೀಡಾದ ಬೈಕ್ ಸವಾರರನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ ಜೋಶಿ

ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ ಜೋಶಿ

Pralhad Joshi: ಇತ್ತೀಚೆಗೆ ಬೆಳಗಾವಿಗೆ ತೆರಳುವಾಗ ಸಹ ಒಂದು ಘಟನೆಯಲ್ಲಿ ಗಾಯಾಳುಗಳ ನೆರವಿಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಧಾವಿಸಿದ್ದರು. ಇದೀಗ ಹುಬ್ಬಳ್ಳಿಯಲ್ಲಿ ಸವಾರರು ಆಕಸ್ಮಿಕ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಚಿವರು ನೆರವಾಗಿದ್ದಾರೆ.

CET 2025:  ಬೀದರ್, ಶಿವಮೊಗ್ಗ ಆಯ್ತು, ಇದೀಗ ಧಾರವಾಡದಲ್ಲಿಯೂ ಬೆಳಕಿಗೆ ಬಂತು ಜನಿವಾರಕ್ಕೆ ಕತ್ತರಿ ಪ್ರಕರಣ

ಧಾರವಾಡದಲ್ಲೂ ವಿದ್ಯಾರ್ಥಿಯ ಜನಿವಾರಕ್ಕೆ ಕತ್ತರಿ!

ರಾಜ್ಯದಲ್ಲಿ ಜನಿವಾರ ಜಟಾಪಟಿ ನಡೆಯುತ್ತಲೇ ಇದೆ. ಬೀದರ್, ಶಿವಮೊಗ್ಗ ಬಳಿಕ ಇದೀಗ ಧಾರವಾಡಲ್ಲೂ ಇಂತಹದೇ ಘಟನೆ ನಡೆದಿದೆ. ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಸಿಬ್ಬಂದಿ ಕತ್ತರಿಸಿದ್ದಾರೆ. ವಿದ್ಯಾರ್ಥಿ ಎಷ್ಟೇ ಬೇಡಿಕೊಂಡರೂ ಸಿಬ್ಬಂದಿ ಕತ್ತರಿಯಿಂದ ಜನಿವಾರವನ್ನು ಕತ್ತರಿಸಿದ್ದಾರೆ.

ನೇಹಾ ಹಿರೇಮಠ ಹತ್ಯೆಯಾಗಿ 1 ವರ್ಷ:  ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ

ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ

ನೇಹಾ ಹಿರೇಮಠ ಹತ್ಯೆಗೆ ಏಪ್ರಿಲ್ 18ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ, ಶ್ರೀರಾಮ ಸೇನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಲಾಯಿತು.

NWKRTC Bus: ಡಕೋಟ ಬಸ್‌ ಭಾಗ್ಯ; ಹುಬ್ಬಳ್ಳಿ- ಬಾಗಲಕೋಟೆ ಮಾರ್ಗದ ಪ್ರಯಾಣಿಕರ ಪರದಾಟ

ಡಕೋಟ ಬಸ್; ಹುಬ್ಬಳ್ಳಿ- ಬಾಗಲಕೋಟೆ ಮಾರ್ಗದ ಪ್ರಯಾಣಿಕರ ಪರದಾಟ

NWKRTC Bus: ಹಲವು ವರ್ಷಗಳ ಹಳೆಯ ಬಸ್‌ಗಳನ್ನು ರಸ್ತೆಗಿಳಿಸುವುದಲ್ಲದೇ, ಅಗತ್ಯ ರಿಪೇರಿ ಕಿಟ್‌ಗಳು ಇಲ್ಲದ ಕಾರಣ ಬಸ್‌ ಸಿಬ್ಬಂದಿ ಮಾತ್ರವಲ್ಲದೇ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

Girl Death: ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಔಷಧಿ ಕೊರತೆಯಿಂದ ಬಾಲಕಿ ಸಾವು: ಆರೋಪ

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಔಷಧಿ ಕೊರತೆಯಿಂದ ಬಾಲಕಿ ಸಾವು: ಆರೋಪ

ಫಿಟ್ಸ್ ಹಿನ್ನೆಲೆಯಲ್ಲಿ ಕಳೆದ 16 ದಿನಗಳಿಂದ ಕಿಮ್ಸ್​ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನ ವೆಂಟಿಲೇಟರ್​ನಲ್ಲಿಟ್ಟು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಕುಟುಂಬಸ್ಥರು ಔಷಧಿಗಾಗಿ ಪರದಾಟ ನಡೆಸುತ್ತಿದ್ದರಂತೆ. ಹೈ ಡೋಸ್​ನಿಂದ ಮಗು ಕೋಮಾಗೆ ಹೋಗಿತ್ತು ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Hubballi murder case: ಮೃತ ಬಾಲಕಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು: ಜಗದೀಶ್ ಶೆಟ್ಟರ್ ಆಗ್ರಹ

ಮೃತ ಬಾಲಕಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು: ಜಗದೀಶ್ ಶೆಟ್ಟರ್

Hubballi murder case: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಹತ್ಯೆ ಹಿನ್ನೆಲೆಯಲ್ಲಿ ಮೃತ ಬಾಲಕಿ ಮನೆಗೆ ಸಂಸದ ಹಾಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಂಗಳವಾರ ಭೇಟಿ ನೀಡಿ, ಬಾಲಕಿ ತಂದೆ-ತಾಯಿಗೆ ಸಾಂತ್ವನ ಹೇಳಿ ಮಾತನಾಡಿದ್ದಾರೆ.

Hubballi news: ʼಇನ್ನಷ್ಟು ಸಿಸಿಟಿವಿ ಅಳವಡಿಸಿʼ: ಹುಬ್ಬಳ್ಳಿಯ ಮೃತ ಬಾಲಕಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭೇಟಿ

ಹುಬ್ಬಳ್ಳಿಯ ಮೃತ ಬಾಲಕಿ ಮನೆಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭೇಟಿ

ಈಗಷ್ಟೇ ಹುಟ್ಟಿದ ಮಕ್ಕಳನ್ನು ಸಹ ಕಾಮುಕರು ಬಿಡುತ್ತಿಲ್ಲ. ನಮ್ಮ ಮಕ್ಕಳನ್ನು ನಾವು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಳ್ಳಬೇಕು. ಅದು ನಮ್ಮ ಜವಾಬ್ದಾರಿ ಕೂಡ ಹೌದು ಎಂದರು. ನಂತರ ಕೆಎಂಸಿಆರ್‌ಐಗೆ ಭೇಟಿ ನೀಡಿ ವೈದ್ಯರ ಜತೆ ಚರ್ಚಿಸಿದರು. ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದರು.

PSI Annapoorna: ಲೇಡಿ ಸಿಂಗಂಗೆ ಮೆಚ್ಚುಗೆಯ ಮಹಾಪೂರ

ಲೇಡಿ ಸಿಂಗಂಗೆ ಮೆಚ್ಚುಗೆಯ ಮಹಾಪೂರ

ಹುಬ್ಬಳ್ಳಿಯ ಅಶೋಕ ನಗರದಲ್ಲಿ ಐದು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಾಲಕಿಯನ್ನು ಕೊಲೆ ಮಾಡಿದ್ದ ಆರೋಪಿ ಬಿಹಾರ ಮೂಲದ ರಿತೇಶ್‌ನನ್ನು ಪ್ರಕರಣ ನಡೆದ ದಿನವೇ ಎನ್‌ಕೌಂಟರ್ ಮಾಡಲಾಗಿದೆ. ಆ ಮೂಲಕ ಶೀಘ್ರವೇ ನ್ಯಾಯ ಕೊಡಿಸಿದ್ದಾರೆ ಎಂದು ಜನರು ಅವರಿಗೆ ಲೇಡಿ ಸಿಂಗಂ ಎಂದು ಬಿರುದು ನೀಡಿದ್ದಾರೆ.

Pralhad Joshi: ವಾಜಪೇಯಿ, ನರೇಂದ್ರ ಮೋದಿ ಕಾಲಘಟ್ಟದಲ್ಲಿ ಡಾ.ಅಂಬೇಡ್ಕರ್‌ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ: ಜೋಶಿ

ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರಿಗೆ ಎನ್‌ಡಿಎ ಸರ್ಕಾರದಿಂದಲೇ ಗೌರವ: ಜೋಶಿ

Pralhad Joshi: ಸ್ವಾತಂತ್ರ್ಯ ಪೂರ್ವದಿಂದಲೂ ಡಾ.ಅಂಬೇಡ್ಕರ್ ಅವರು ಅಧಿಕಾರಸ್ಥರಿಂದ ಅವಮಾನಕ್ಕೆ ಒಳಗಾಗುತ್ತಲೇ ಬಂದರು. ವಾಜಪೇಯಿ ಮತ್ತು ನರೇಂದ್ರ ಮೋದಿ ಅವರ ಕಾಲಘಟ್ಟದಲ್ಲಿ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Hubli Girl Murder: ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ; ಎನ್‌ಕೌಂಟರ್‌ನಲ್ಲಿ ಬಿಹಾರದ ಆರೋಪಿ ಹತ್ಯೆ!

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ; ಎನ್‌ಕೌಂಟರ್‌ನಲ್ಲಿ ಬಿಹಾರದ ಆರೋಪಿ ಹತ್ಯೆ!

Hubli Girl Murder: ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಈ ವೇಳೆ ಆರೋಪಿ ಮೃತಪಟ್ಟಿದ್ದಾನೆ.

Murder Case: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

Murder Case: ಹುಬ್ಬಳ್ಳಿ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಪೈಶಾಚಿಕ ಘಟನೆ ನಡೆದಿದೆ. ಬಿಹಾರ ಮೂಲದ ಯುವಕನಿಂದ ಕೃತ್ಯ ನಡೆದಿದೆ. ಬಾಲಕಿ ಪೋಷಕರು ಪೊಲೀಸ್‌ ಠಾಣೆಗೆ ತೆರಳಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದರಿಂದ ಪೊಲೀಸ್ ಠಾಣೆ ಬಳಿ‌ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.

Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ

ಹು-ಧಾ ನಡುವೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ ಆರಂಭಿಸಲು ಒಪ್ಪಂದ

Electric Rapid Transit: ಹುಬ್ಬಳ್ಳಿ - ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಕುರಿತ ವಿವರ ಇಲ್ಲಿದೆ.

Gramin Banks merger: ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ ವಿಲೀನ; ಯಾವುದು, ಯಾವಾಗ?

ಧಾರವಾಡದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ಪ್ರಸ್ತುತ 629 ಶಾಖೆಗಳ ಜಾಲವನ್ನು ಹೊಂದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಭಾರತದ ಎರಡನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿದೆ. ವಿಲೀನವು ಮೇ 1ರಿಂದ ಜಾರಿಗೆ ಬರಲಿದೆ.

Police Firing: ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಸೆರೆಹಿಡಿದ ಪೊಲೀಸರು

ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಸೆರೆಹಿಡಿದ ಪೊಲೀಸರು

ನಿನ್ನೆ ಹಣಕಾಸಿನ ವಿಚಾರವಾಗಿ ಕೆಲವರ ನಡುವೆ ಗಲಾಟೆ ಆಗಿತ್ತು. ಇದರ ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್, ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

Hubli Accident: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಮಹಿಳೆಯರ ದುರ್ಮರಣ

Hubli Accident: ಹುಬ್ಬಳ್ಳಿ ನಗರದ ಹೊರವಲಯದ ನೂಲ್ವಿ ಕ್ರಾಸ್‌ನಲ್ಲಿ ದುರ್ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.

Basanagouda Patil Yatnal: ಬಿಎಸ್‌ವೈ ಕುಟುಂಬದಿಂದ ಬಿಜೆಪಿ ಮುಕ್ತವಾದರೆ ಮತ್ತೆ ಪಕ್ಷ ಸೇರುವೆ: ಶಾಸಕ ಯತ್ನಾಳ್

ಬಿಎಸ್‌ವೈ ಕುಟುಂಬದಿಂದ ಬಿಜೆಪಿ ಮುಕ್ತವಾದ್ರೆ ಮತ್ತೆ ಪಕ್ಷ ಸೇರುವೆ: ಯತ್ನಾಳ್

Basanagouda Patil Yatnal: ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರಗೆ ದಮ್ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆರಿಸಿ ಬರಲಿ. ನಾನೂ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲು ಸಿದ್ಧ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು ಹಾಕಿದ್ದಾರೆ.

Sara Ali Khan: ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಸಾರಾ ಅಲಿಖಾನ್‌ ಭೇಟಿ

ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಸಾರಾ ಅಲಿಖಾನ್‌ ಭೇಟಿ

ನಟಿ ಸಾರಾ‌ ಅಲಿ ಖಾನ್‌ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನದ ಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವ ಹಾಗೂ ಮುಖ್ಯದ್ವಾರದ ಬಳಿಯ ಕಟ್ಟೆ – ಶಿಲ್ಪಕಲೆಯ ಎದುರು ನಿಂತಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್‌ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

Pramod Mutalik: 1000 ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ: ಪ್ರಮೋದ್‌ ಮುತಾಲಿಕ್

1000 ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ: ಪ್ರಮೋದ್‌ ಮುತಾಲಿಕ್

ಅತ್ಯಾಚಾರಿಗಳು ಮತ್ತು ಮಹಿಳೆಯರಿಗೆ ಹಾನಿ ಮಾಡಲು ಅಥವಾ ಶೋಷಿಸಲು ಪ್ರಯತ್ನಿಸುವವರ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು, ಮಹಿಳೆಯರು ಧೈರ್ಯವನ್ನು ಬೆಳೆಸಿಕೊಳ್ಳಬೇಕು. ತ್ರಿಶೂಲ ದೀಕ್ಷೆಯು ಧೈರ್ಯ, ಶೌರ್ಯ ಮತ್ತು ಜೀವನದಲ್ಲಿ ಪ್ರತಿಕೂಲಗಳ ವಿರುದ್ಧ ಹೋರಾಡುವ ಮನೋಭಾವವನ್ನು ತುಂಬುತ್ತದೆ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿ ನಗರದಲ್ಲಿ 1,000 ಮಹಿಳೆಯರಿಗಾಗಿ ನಡೆಸಲಾಗುವುದು ಎಂದು ಮುತಾಲಿಕ್‌ ಘೋಷಿಸಿದರು.

Ugadi Bombe Bhavishya: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯುಗಾದಿಯಂದು ಬೊಂಬೆಗಳಿಂದ ಸ್ಫೋಟಕ ಭವಿಷ್ಯ!

ಸಿಎಂ ಬದಲಾಗ್ತಾರಾ? ಯುಗಾದಿಯಂದು ಬೊಂಬೆಗಳಿಂದ ಸ್ಫೋಟಕ ಭವಿಷ್ಯ!

Ugadi Bombe Bhavishya: ಧಾರವಾಡ ತಾಲೂಕಿನ ಹನುಮನಕೊಪ್ಪದ ಯುಗಾದಿ ಬೊಂಬೆ ಭವಿಷ್ಯ ಭಾನುವಾರ ಹೊರಬಿದ್ದಿದೆ. ರಾಜ್ಯ ರಾಜಕಾರಣ, ಪ್ರಾಕೃತಿಕ ವಿಕೋಪಗಳು ಸೇರಿ ಒಂದು ವರ್ಷದಲ್ಲಿ ನಡೆಯಲಿರುವ ಮಹತ್ವದ ಘಟನೆಗಳ ಬಗ್ಗೆ ಬೊಂಬೆಗಳು ಭವಿಷ್ಯ ನುಡಿದಿವೆ.

ಯತ್ನಾಳ್ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ; ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಯತ್ನಾಳ್ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ ಎಚ್ಚರಿಕೆ

ಯತ್ನಾಳ್‌ ಉಚ್ಚಾಟನೆ ಹಿಂದೆ ದುಷ್ಟ ಶಕ್ತಿಗಳ ಕೈವಾಡ ಇದೆ. ವೀರೇಂದ್ರ ಪಾಟೀಲ, ಜೆ.ಎಚ್‌.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದ್ದು, ಇದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Vishwamitra Hegde: ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ನಿಧನ

Vishwamitra Hegde: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭತ್ತಗುತ್ತಿಗೆಯವರಾದ ಹಿರಿಯ ವಿಶ್ವಾಮಿತ್ರ ಹೆಗಡೆ ಅವರು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ದೂರದರ್ಶನ, ವಿಶ್ವವಾಣಿ, ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ.