ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರವಾಡ
Manufacturing Sector: ಉತ್ಪಾದನಾ ವಲಯದಲ್ಲಿ 3ನೇ ಅತಿದೊಡ್ಡ ರಾಷ್ಟ್ರವಾಗುವತ್ತ ಭಾರತ ಹೆಜ್ಜೆ: ಪ್ರಲ್ಹಾದ್ ಜೋಶಿ

ಉತ್ಪಾದನಾ ವಲಯದಲ್ಲಿ 3ನೇ ಅತಿದೊಡ್ಡ ರಾಷ್ಟ್ರವಾಗುವತ್ತ ಭಾರತ ಹೆಜ್ಜೆ: ಜೋಶಿ

Manufacturing Sector: ಭಾರತದ ಇಂದು ಕೈಗಾರಿಕೆ, ಔದ್ಯೋಗಿಕ, ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಸಾರಿಗೆ, ವಿದ್ಯುತ್‌ ಹೀಗೆ ಪ್ರತಿಯೊಂದರಲ್ಲೂ ಆತ್ಮನಿರ್ಭರವಾಗಿದೆ. 2014ರಲ್ಲಿ ಇದ್ದಂತಹ ಆಮದು ಪರಿಸ್ಥಿತಿ ಇಂದಿಲ್ಲ. ಜಗತ್ತಿನಲ್ಲೇ ಅತಿದೊಡ್ಡ ರಫ್ತು ರಾಷ್ಟ್ರವಾಗಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Basavaraj Bommai: ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಪುಸ್ತಕ ಪ್ರಶಸ್ತಿ ಪ್ರಕಟ

Basavaraj Bommai: ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ 2023-24ನೇ ಸಾಲಿನಲ್ಲಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಪ್ರಕಟವಾದ ಅತ್ಯುತ್ತಮ ಪುಸ್ತಕಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

MB Patil: 600 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ನೈಡೆಕ್ ನೂತನ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

600 ಕೋಟಿ ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ

MB Patil: ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿ ಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸೋಮವಾರ ಉದ್ಘಾಟಿಸಿದ್ದಾರೆ. ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಕಾಂಗ್ರೆಸ್‌ ಸರ್ಕಾರದ ಅಧಿಕಾರ ದುರುಪಯೋಗಕ್ಕೆ ತಕ್ಕ ಶಾಸ್ತಿ: ಪ್ರಲ್ಹಾದ್‌ ಜೋಶಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ತಕ್ಕ ಶಾಸ್ತಿ: ಜೋಶಿ

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Arvind Bellad: ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮಸೀದಿಗಳಲ್ಲಿ ಅಪರಿಚಿತರ ಓಡಾಟ; ಪಾಕಿಸ್ತಾನಿಗಳಿರಬಹುದು ಎಂದು ಸಂಸದರ ದೂರು

ಮೇ 17ರಂದು ಪೊಲೀಸ್ ಆಯುಕ್ತರಿಗೆ ಅರವಿಂದ್ ಬೆಲ್ಲದ (Arvind Bellad) ಪತ್ರ ಬರೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವಿದೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ ಅಂತ ವಿವರಿಸಿದ್ದಾರೆ.

Ramakant Joshi: ಮನೋಹರ ಗ್ರಂಥಮಾಲಾ ಪ್ರಕಾಶಕ, ಲೇಖಕ ಡಾ. ರಮಾಕಾಂತ ಜೋಶಿ ನಿಧನ

ಮನೋಹರ ಗ್ರಂಥಮಾಲಾ ಪ್ರಕಾಶಕ ಡಾ. ರಮಾಕಾಂತ ಜಿ. ಜೋಶಿ ನಿಧನ

Ramakant Joshi: ರಮಾಕಾಂತ್ ಜೋಶಿ ಅವರು ಪುಸ್ತಕ ಪ್ರಕಾಶನದ ಜೊತೆಗೆ ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ತಂದೆ ಖ್ಯಾತ ಸಾಹಿತಿ ಮತ್ತು ರಂಗಕರ್ಮಿ, ಪದ್ಮಶ್ರೀ ಪುರಸ್ಕೃತ ಜಿ.ಬಿ. ಜೋಶಿಯವರು ಆರಂಭಿಸಿದ ಮನೋಹರ ಗ್ರಂಥಮಾಲೆ ಪ್ರಕಾಶನವನ್ನು ಇವರು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದರು.

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Karnataka Rain: ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ಕೊಪ್ಪಳದಲ್ಲೇ ಸಿಡಿಲಿನ ಹೊಡೆತಕ್ಕೆ ಇಬ್ಬರು, ಬಳ್ಳಾರಿಯಲ್ಲಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಒಬ್ಬರು, ವಿಜಯಪುರದಲ್ಲೂ ಸಹ ಓರ್ವ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗದಲ್ಲಿ ಮಳೆ ನೀರಿಗೆ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಮತ್ತೊಂದಡೆ ಗೋಕಾಕ್​ನಲ್ಲಿ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Hubli stabbing case: ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!

Hubli stabbing case: ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಐದಾರು ಸ್ನೇಹಿತರು ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರ ನಡುವೆ ಜಗಳವಾಗಿದೆ. ಈ ವೇಳೆ ಒಬ್ಬ ಬಾಲಕ ಮನೆಗೆ ಹೋಗಿ ಚಾಕು ತಂದು, ಸ್ನೇಹಿತನನ್ನೇ ಕೊಲೆ ಮಾಡಿ ಮಾಡಿದ್ದಾನೆ.

Pralhad Joshi: ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡಲ್ಲ: ಪ್ರಲ್ಹಾದ್‌ ಜೋಶಿ

ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಬಿಡಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಅತಿ ಹೆಚ್ಚು ಬಾರಿ ಸಂವಿಧಾನ ಬದಲಾಯಿಸಿ ದೇಶಕ್ಕೆ ಅನ್ಯಾಯ ಎಸಗಿದವರೇ ಇಂದು ಸಂವಿಧಾನ ಬದಲಾವಣೆ ಕೂಗೆಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಮೀಸಲಾತಿ ತೆಗೆಯುವುದಲ್ಲ, ಅದನ್ನು ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Operation sindoor: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ: ಪ್ರಲ್ಹಾದ್‌ ಜೋಶಿ

ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ: ಜೋಶಿ

Operation sindoor: ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತಿಕಾರದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pralhad Joshi: ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ್‌ ಜೋಶಿ ಮಾಹಿತಿ

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

Pralhad Joshi: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Road Accident: ಕಾರಿಗೆ ಲಾರಿ ಡಿಕ್ಕಿಯಾಗಿ ಸಾಗರದ ಐವರು ಸ್ಥಳದಲ್ಲೇ ದುರ್ಮರಣ

ಕಾರಿಗೆ ಲಾರಿ ಡಿಕ್ಕಿಯಾಗಿ ಸಾಗರದ ಐವರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ (hubballi news) ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾದ (Road accident) ಕಾರು ಅಪ್ಪಚ್ಚಿಯಾಗಿದೆ. ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಸಾಗರದವರು ಎಂದು ತಿಳಿದುಬಂದಿದೆ.

Karnataka High Court: ನಾಳೆಯಿಂದ ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ನಾಳೆಯಿಂದ ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಕೆಲವು ದಿನಗಳಂದು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು.

Pralhad Joshi: ಮೋದಿ ಆಡಳಿತದಲ್ಲಿ ಹಣದುಬ್ಬರ ಕನಿಷ್ಠ ಮಟ್ಟಕ್ಕೆ ಇಳಿದಿದೆ: ಪ್ರಲ್ಹಾದ್‌ ಜೋಶಿ

ಮೋದಿ ಆಡಳಿತದಲ್ಲಿ ಹಣದುಬ್ಬರ ಕನಿಷ್ಠ ಮಟ್ಟಕ್ಕೆ ಇಳಿದಿದೆ: ಪ್ರಲ್ಹಾದ್‌ ಜೋಶಿ

Pralhad Joshi: 2025ರ ಮಾರ್ಚ್‌ನಲ್ಲಿ ಭಾರತದ ಹಣದುಬ್ಬರ ಐದು ವರ್ಷಗಳಲ್ಲೇ ಶೇ.3.34ರಷ್ಟು ಕನಿಷ್ಠ ಮಟ್ಟಕ್ಕೆ ಇಳಿದಿದೆ. ರಷ್ಯಾ-ಉಕ್ರೇನ್ ಯುದ್ಧದಂತಹ ಜಾಗತಿಕ ಅಡಚಣೆಗಳು ಆಹಾರ ಧಾನ್ಯಗಳ ಮೇಲೆ ಒತ್ತಡ ಹೇರುತ್ತಿದ್ದರೂ ಸಹ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸರಾಸರಿ ಶೇ.5.1ರಷ್ಟಿರುವುದು ಗಮನಾರ್ಹವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pralhad Joshi: ರಾಜ್ಯದಿಂದ ಅದೆಷ್ಟು ಜನರನ್ನು ಪಾಕ್‌ಗೆ ವಾಪಸ್‌ ಕಳಿಸಿದ್ದೀರಿ ಉತ್ತರ ಕೊಡಿ: ಪ್ರಲ್ಹಾದ್‌ ಜೋಶಿ

ಎಷ್ಟು ಜನರನ್ನು ಪಾಕ್‌ಗೆ ವಾಪಸ್‌ ಕಳಿಸಿದ್ದೀರಿ ಉತ್ತರ ಕೊಡಿ: ಜೋಶಿ

Pralhad Joshi: ಪಹಲ್ಗಾಮ್‌ ಭಯೋತ್ಪಾದನಾ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದಲ್ಲಿರುವ ಪಾಕ್‌ ಪ್ರಜೆಗಳನ್ನು ವಾಪಸ್‌ ಕಳಿಸಲು ಆದೇಶಿಸಿತು. ಎಲ್ಲಾ ರಾಜ್ಯಗಳು ವಾಪಸ್‌ ಕಳಿಸುತ್ತಿವೆ. ಕರ್ನಾಟಕದಿಂದ ಎಷ್ಟು ಜನರನ್ನು ಮರಳಿ ಕಳಿಸಿದ್ದೀರಿ? ಉತ್ತರ ಕೊಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

Namaz in bus: ಬಸ್‌ ನಿಲ್ಲಿಸಿ ನಮಾಜ್‌: ನೌಕರನ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ಬಸ್‌ ನಿಲ್ಲಿಸಿ ನಮಾಜ್‌: ನೌಕರನ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂಬುದಾಗಿ ತಿಳಿಸಿದ್ದಾರೆ.

Pralhad Joshi: ಸಿಎಂ ದರ್ಪ, ಡಿಸಿಎಂ ಧಮ್ಕಿ ಎಲ್ಲೆ ಮೀರಿದೆ: ಪ್ರಲ್ಹಾದ್‌ ಜೋಶಿ ಆಕ್ರೋಶ

ಸಿಎಂ ದರ್ಪ, ಡಿಸಿಎಂ ಧಮ್ಕಿ ಎಲ್ಲೆ ಮೀರಿದೆ: ಪ್ರಲ್ಹಾದ್‌ ಜೋಶಿ ಆಕ್ರೋಶ

Pralhad Joshi: ಅಧಿಕಾರದ ಮದದಲ್ಲಿ ಮುಖ್ಯಮಂತ್ರಿಗೆ, ಒಬ್ಬ ಕರ್ತವ್ಯ ನಿರತ ಅಧಿಕಾರಿಯ ಮೇಲೆ ಕೈ ಎತ್ತುವಷ್ಟು ದರ್ಪ ಬಂದಿದೆ. ಇನ್ನು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ನಾಗರಿಕರಿಗೂ ಇದ್ದು, ಅದನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಡಿಸಿಎಂ ಡಿಕೆ ಶಿವಕುಮಾರ್. ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವ ಎಂದೆಲ್ಲಾ ನಾಟಕೀಯ ನಡೆ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Basanagouda Patil Yatnal: ಈ ಬಾರಿ ಪಾಕಿಸ್ತಾನ ಸರ್ವನಾಶ ಆಗ್ಬೇಕು: ಯತ್ನಾಳ್‌ ಕಿಡಿ

ಈ ಬಾರಿ ಪಾಕಿಸ್ತಾನ ಸರ್ವನಾಶ ಆಗ್ಬೇಕು: ಯತ್ನಾಳ್‌ ಕಿಡಿ

Basanagouda Patil Yatnal: ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ, ಅದು ಹುಟ್ಟಿದ್ದೇ ಮುಸ್ಲಿಮರಿಗಾಗಿ. ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಇದ್ದ ಹಾಗೆ. ಅವರು ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲಿ. ಅವರು ಟೋಪಿಯನ್ನು ಖುಷಿಯಿಂದ ಹಾಕಿಕೊಳ್ಳುತ್ತಾರೆ. ಆದರೆ, ಕುಂಕುಮ-ಭಂಡಾರ ಹಚ್ಚಿಕೊಳ್ಳಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್‌ ಟೀಕಿಸಿದ್ದಾರೆ.

ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣ; ಸರ್ಕಾರಕ್ಕೆ ತನಿಖಾ ವರದಿ ಶೀಘ್ರ ಸಲ್ಲಿಕೆ ಎಂದ ಡಾ‌. ಶ್ಯಾಮ್ ಭಟ್

ಹುಬ್ಬಳ್ಳಿ ಎನ್‌ಕೌಂಟರ್; ಸರ್ಕಾರಕ್ಕೆ ತನಿಖಾ ವರದಿ ಶೀಘ್ರ

ಹುಬ್ಬಳ್ಳಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ ಹಾಗೂ ಆರೋಪಿ ಎನ್‌ಕೌಂಟರ್‌ ಬಗ್ಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ.ಶ್ಯಾಮ್ ಭಟ್ ಪ್ರತಿಕ್ರಿಯಿಸಿದ್ದಾರೆ. ನ್ಯಾಷನಲ್ ಹ್ಯೂಮನ್ ರೈಟ್ಸ್ ಕೇಸ್ ದಾಖಲು ಮಾಡದೇ ಇರುವ ಹಿನ್ನೆಲೆಯಲ್ಲಿ ನಾವು ತೆಗೆದುಕೊಂಡಿದ್ದೇವೆ ಎಂದು ಡಾ. ಟಿ. ಶ್ಯಾಮ್ ಭಟ್ ತಿಳಿಸಿದ್ದಾರೆ.

Hubballi Encounter: ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್‌ 13ರಂದು ರಿತೇಶ್‌ನನ್ನು ಕೊಲ್ಲಲಾಗಿತ್ತು.

Assault Case: ಸಿಗರೇಟ್‌ ಸೇದಬೇಡಿ ಎಂದ ಆರ್‌ಎಸ್‌ಎಸ್‌ ಮುಖಂಡನ ಮನೆಗೇ ನುಗ್ಗಿ ಥಳಿಸಿದ ಪುಂಡರು!

ಸಿಗರೇಟ್‌ ಸೇದಬೇಡಿ ಎಂದ ಆರ್‌ಎಸ್‌ಎಸ್‌ ಮುಖಂಡನ ಮನೆಗೇ ನುಗ್ಗಿ ಪುಂಡರ ಹಲ್ಲೆ

ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ರೊಚ್ಚಿಗೆದ್ದ ಮುಸ್ಲಿಂ ಪುಂಡರು,ಆರ್‌ಎಸ್‌ಎಸ್‌ ಮುಖಂಡ ಶಿರೀಶ್ ಬಳ್ಳಾರಿ ಮನೆಗೇ ಹುಡುಕಿಕೊಂಡು ಬಂದು ಒಳನುಗ್ಗಿ ಹಲ್ಲೆ ಎಸಗಿದ್ದಾರೆ. ತಡೆಯಲು ಬಂದ ಕುಟುಂಬಸ್ಥರ ಮೇಲೂ ಹಲ್ಲೆ ನಡೆಸಲಾಗಿದೆ. ಹಲ್ಲೆ ಮಾಡಿದ ಬಳಿಕ ನಾಲ್ವರು ನಾಪತ್ತೆಯಾಗಿದ್ದಾರೆ.

Hubballi girl Murder Case: ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್‌ ಸಹ ಸಿಐಡಿ ತನಿಖೆಗೆ

ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್‌ ಸಹ ಸಿಐಡಿ ತನಿಖೆಗೆ

ಹುಬ್ಬಳ್ಳಿಯ 5 ವರ್ಷದ ಬಾಲಕಿ ಅತ್ಯಾಚಾರ- ಹತ್ಯೆಯಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ವಲಸಿಗ ಕಾರ್ಮಿಕರಿಂದ ರಾಜ್ಯದಲ್ಲಿ ಅಪರಾಧಗಳು ಹೆಚ್ಚುತ್ತಿವೆ ಎಂಂಬ ಅಂಶದತ್ತ ಗಮನ ಸೆಳೆದಿತ್ತು. ಈ ಪ್ರಕರಣದ ಆರೋಪಿ ಬಿಹಾರ ಮೂಲದ ರಿತೇಶ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.

Pralhad Joshi: ಅಪಘಾತಕ್ಕೀಡಾದ ಬೈಕ್ ಸವಾರರನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ ಜೋಶಿ

ಗಾಯಾಳುಗಳನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ ಜೋಶಿ

Pralhad Joshi: ಇತ್ತೀಚೆಗೆ ಬೆಳಗಾವಿಗೆ ತೆರಳುವಾಗ ಸಹ ಒಂದು ಘಟನೆಯಲ್ಲಿ ಗಾಯಾಳುಗಳ ನೆರವಿಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಧಾವಿಸಿದ್ದರು. ಇದೀಗ ಹುಬ್ಬಳ್ಳಿಯಲ್ಲಿ ಸವಾರರು ಆಕಸ್ಮಿಕ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಚಿವರು ನೆರವಾಗಿದ್ದಾರೆ.