ಧಾರವಾಡದಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ
ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್ ಕಾರ್ಯದರ್ಶಿ ಫೈರೋಜ್ ಪಠಾಣ್ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.