ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೂಚನೆ

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನ್ಯಾಯಯುತ ತನಿಖೆಗೆ‌ ಜೋಶಿ ಸೂಚನೆ

Pralhad Joshi: ‌ಧಾರವಾಡಕ್ಕೆ ಓದಲು ಬಂದಿದ್ದ ಬಾಗಲಕೋಟೆ ಮೂಲದ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಅತ್ಯಂತ ನೋವಿನ ಸಂಗತಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಈ ಪ್ರಕರಣದ ಬಗ್ಗೆ ಶೀಘ್ರವೇ ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ.

Farmers Protest: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

Tiptur News: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸಿ ಹೋದ ಹಾಲ್ಕುರಿಕೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಹಾಲ್ಕುರಿಕೆ ಪವರ್ ಸ್ಟೇಷನ್‌ಗೆ ಮುತ್ತಿಗೆ ಹಾಕಿದ್ದು, ಕಳೆದ ಎರಡು ತಿಂಗಳಿನಿಂದ ಸಮರ್ಪಕ ವಿದ್ಯುತ್‌ ನೀಡದೆ ರೈತರ ಬೆಳೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Tiptur News: ಏಪ್ರಿಲ್‌ 29ರಂದು ತಿಪಟೂರಿನ ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

ಏ.29ರಂದು ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

Tiptur News: ʼಸಿಸ್ಕೋʼ (Cisco) ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಾಣವಾಗಿರುವ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಏಪ್ರಿಲ್ 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಖಜಾಂಚಿ ಶಿವಪ್ರಸಾದ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಬಸ್‌ ಪಲ್ಟಿ, 10 ಮಂದಿಗೆ ಗಂಭೀರ ಗಾಯ

ಚಿಂಚೋಳಿಯಲ್ಲಿ ಭೀಕರ ಸರಣಿ ಅಪಘಾತ; 10 ಜನರಿಗೆ ಗಾಯ

Chincholi Road Accident: ಚಿಂಚೋಳಿ ತಾಲೂಕಿನ ಬೀದರ್-ಮಹಬೂಬ್ ನಗರ ರಾಷ್ಟ್ರೀಯ ಹೆದ್ದಾರಿಯ ಪೋಲಕಪಳ್ಳಿ ತಾಂಡಾ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್, ಸಿಮೆಂಟ್ ಟ್ಯಾಂಕರ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

Karnataka SSLC Result: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತುಮಕೂರು ಜಿಲ್ಲೆಯಲ್ಲಿ ತಿಪಟೂರು ತಾಲೂಕು ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತಿಪಟೂರು ತಾಲೂಕು ಜಿಲ್ಲೆಗೆ ಪ್ರಥಮ

Karnataka SSLC Result: 2025-26ನೇ ಸಾಲಿನಲ್ಲಿ ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 2251 ಮಕ್ಕಳು ಪರೀಕ್ಷೆಯನ್ನು ಬರೆದಿದ್ದು 2190 ವಿದ್ಯಾರ್ಥಿಗಳು ಉತ್ತಿರ್ಣರಾಗಿರುತ್ತಾರೆ. 61 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಾರೆ. ತಾಲೂಕಿನ ಒಟ್ಟು ಫಲಿತಾಂಶ 97.29% ಬಂದಿದ್ದು ಈ ಬಾರಿ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಶಿರಸಿಯ ಅಂಧ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಎಂದು ಉಲ್ಲೇಖ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಆತಂಕದಲ್ಲಿ ಅಂಧ ವಿದ್ಯಾರ್ಥಿನಿ

Sirsi News: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ನಡೆದ ಎಡವಟ್ಟಿನಿಂದ ಅಂಧ ವಿದ್ಯಾರ್ಥಿನಿಯೊಬ್ಬಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಿರಸಿ ನಗರದ ಯೂನಿಯನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ಆರು ವಿಷಯಗಳನ್ನೂ ಬರೆದಿದ್ದರೂ, ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ನಮೂದಿಲಾಗಿದೆ.

Karnataka SSLC Result: 623 ಅಂಕ ಗಳಿಸಿದ ಗಣೇಶ್ ಬೋಸ್ಲೆ ಕಲಬುರಗಿಗೆ ಜಿಲ್ಲೆಗೆ ಟಾಪರ್

ಎಸ್‌ಎಸ್‌ಎಲ್‌ಸಿಐಲ್ಲಿ 623 ಅಂಕ ಗಳಿಸಿ ಗಣೇಶ್ ಬೋಸ್ಲೆ ಕಲಬುರಗಿಗೆ ಟಾಪರ್

Karnataka SSLC Exam Result: ಕಲಬುರಗಿ ನಗರದ ಅಜೀಮ್ ಪ್ರೇಮ್‌ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ 625ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Karnataka SSLC Result: 623 ಅಂಕ ಗಳಿಸಿ ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ನಿವೇದಿತಾ

ಎಸ್ಸೆಸ್ಸೆಲ್ಸಿಯಲ್ಲಿ 623 ಅಂಕ ಗಳಿಸಿದ ಹಾವೇರಿ ಜಿಲ್ಲೆಯ ನಿವೇದಿತಾ

Haveri News: ಎಸ್‌ಎಸ್‌ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಗೆ ವಿದ್ಯಾರ್ಥಿನಿ ನಿವೇದಿತಾ ಅಜ್ಜಮ್ಮನವರ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಸ್ಪಂದನ ಪ್ರೌಢಶಾಲೆಯ ವಿದ್ಯಾರ್ಥಿನಿ ನಿವೇದಿತಾ ಪರಶುರಾಮ ಅಜ್ಜಮ್ಮನವರ 625ರಲ್ಲಿ 623 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

Dharwad Akashvani: 'ಧಾರವಾಡ ಆಕಾಶವಾಣಿ ಕೇಂದ್ರ' ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ: ಜೋಶಿ ಮನವಿಗೆ ಸ್ಪಂದನೆ

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ ಆದೇಶ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.

Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ

CM Siddaramaiah: ಪ್ರಸ್ತುತ ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Bear Attack: ಕೊರಟಗೆರೆಯಲ್ಲಿ ಹುಚ್ಚು ಕರಡಿ ಆರ್ಭಟ; ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.

40th State Journalists' Conference: ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

CM Siddaramaiah: ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರಿಯುತ್ತದೆ.‌ ಅದು ಮುಂದುವರಿಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

ತುಮಕೂರಿನಲ್ಲಿ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

Tumkur News: ತುಮಕೂರು ನಗರದ ಗುಬ್ಬಿವೀರಣ್ಣ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಮಾರಿಯಮ್ಮ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧಗಂಗಾ ಘಟಕಕ್ಕೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

Gram Net Bharat 2030 Scheme: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಜನರು ಹಾಗೂ ಮಹಿಳೆಯರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ದುಡಿಮೆಗೆ ಅವಕಾಶ ಕಲ್ಪಿಸಲು ಗ್ರಾಮ ನೆಟ್ ಭಾರತ 2030 ರೂಪುಗೊಂಡಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಯೋಜನೆಗೆ ಮೇ ತಿಂಗಳ ಮೊದಲ ವಾರದಲ್ಲಿ ತುರುವೇಕೆರೆ ತಾಲೂಕಿನ ಸಂಪಿಗೆ ಗ್ರಾಮದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಲೋಕಸೇವಾ ಫೌಂಡೇಷನ್ ಅಧ್ಯಕ್ಷ ಸಂಪಿಗೆ ಜಗದೀಶ್ ತಿಳಿಸಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ತುಮಕೂರಿನ ವಿದ್ಯಾನಿಧಿ ಕಾಲೇಜು ಅತ್ಯುತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ವಿದ್ಯಾನಿಧಿ ಕಾಲೇಜು ಉತ್ತಮ ಸಾಧನೆ

Tumkur News: ವಿದ್ಯಾನಿಧಿ ಕಾಲೇಜಿನ ರೋಹನ್‌ ಮತ್ತು ಪೂರ್ವಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಗಳಿಸುವುದರೊಂದಿಗೆ 2025-26ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಗಿರಿಜಾ 593 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ದ್ವಿತೀಯ ಪಿಯುಸಿ ಫಲಿತಾಂಶ; ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬೆಳಗಾವಿ ಕುವರಿ

Karnataka 2nd PUC Results 2026: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಾ ವಿಭಾಗದಲ್ಲಿ ಕಲಬುರಗಿ ವಿದ್ಯಾರ್ಥಿನಿ ಸೃಷ್ಟಿ ರಾಜ್ಯಕ್ಕೆ ಪ್ರಥಮ

Kalaburagi News: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಬುರಗಿ ನಗರದ ಶ್ರೀಮತಿ ವೀರಮ್ಮ ಗಂಗಸಿರಿ (ವಿಜಿ) ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ ಒಟ್ಟು 600 ಅಂಕಗಳಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆಯುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದಾರೆ.

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಬಸನಗೌಡ ಪಾಟೀಲ ಯತ್ನಾಳ Video

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ: ಬಸನಗೌಡ ಪಾಟೀಲ ಯತ್ನಾಳ

Bagalkot Bypoll 2026: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್‌ ಅಪ್‌ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ, ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಮತ್ತು ಸಡಿಲ ಕ್ರಮಗಳಿಂದಾಗಿ ಲವ್ ಜಿಹಾದ್‌ನಂತಹ ಪ್ರಕರಣಗಳಿಗೆ ಇಂಬು ನೀಡುವಂತಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಇಡೀ ಸಮಾಜ ತಲೆ ತಗ್ಗಿಸುವಂಥದ್ದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಎಲ್ಲ ರಾಜ್ಯಗಳಲ್ಲೂ ಶೇಕಡಾವಾರು ಜನಸಂಖ್ಯೆ ಆಧಾರಿತ: ಪ್ರಲ್ಹಾದ್‌ ಜೋಶಿ

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಜನಸಂಖ್ಯೆ ಆಧಾರಿತ: ಜೋಶಿ

Pralhad Joshi: ದೇಶದಲ್ಲಿ ಚುನಾವಣೆಗಳಿದ್ದಾಗ ರಾಹುಲ್ ಗಾಂಧಿ ವಿದೇಶಕ್ಕೆ ಓಡಿ ಹೋಗುತ್ತಾರೆ. ಕ್ಷೇತ್ರಗಳಲ್ಲಿ ಓಡಾಡಿ ಜನರ ವಿಶ್ವಾಸ ಗಳಿಸಬೇಕು ಎಂಬುದಿಲ್ಲ. ಪರಿಣಾಮ ದೇಶಾದ್ಯಂತ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಆರೋಪಿಸಿದ್ದಾರೆ.

Davanagere South by-election: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

BY Vijayendra: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಬೃಹತ್ ಶೋಭಾ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಕೇವಲ ಬಿಜೆಪಿ ಅಲೆಯಲ್ಲ, ಒಂದು ರೀತಿಯ ಸುನಾಮಿಯಂಥ ಅಲೆಯ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Census 2027: ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಚಾಲನೆ

ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಚಾಲನೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ತೀನಂಶ್ರೀ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶಾಸಕ ಸಿ.ಬಿ. ಸುರೇಶ್ ಬಾಬು, ಸ್ವತಃ ತಮ್ಮ ಮೊಬೈಲ್ ಮೂಲಕ ವೈಯಕ್ತಿಕ ವಿವರಗಳನ್ನು ಪೋರ್ಟಲ್‌ನಲ್ಲಿ ದಾಖಲಿಸುವ ಮೂಲಕ ‘ಸ್ವಯಂ ಗಣತಿʼ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

Haveri University Convocation: ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕವು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದ ಸಂಗಮ: ರಾಜ್ಯಪಾಲ

Haveri News: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದ್ದಾರೆ. ಕರ್ನಾಟಕದ ಭೂಮಿ ಯಾವಾಗಲೂ ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯದಿಂದ ಸಮೃದ್ಧವಾಗಿದೆ. ಇದು ಅನೇಕ ಮಹಾನ್ ಸಂತರು, ವಿದ್ವಾಂಸರು ಮತ್ತು ಚಿಂತಕರು ಹುಟ್ಟಿ ಸಮಾಜವನ್ನು ರೂಪಿಸಿದ ಭೂಮಿ. ಹಾವೇರಿಯಂತಹ ಪ್ರದೇಶದಲ್ಲಿ ಈ ವಿಶ್ವವಿದ್ಯಾಲಯದ ಸ್ಥಾಪನೆಯು ಈ ಪ್ರದೇಶದಲ್ಲಿ ಶಿಕ್ಷಣವನ್ನು ವಿಸ್ತರಿಸುವುದಲ್ಲದೆ, ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಅಭಿವೃದ್ಧಿಗೆ ದಾರಿ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.

Loading...