ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

ಎಂಎಲ್‌ಸಿ ಡಾ.ಬಿ.ಜಿ.ಪಾಟೀಲ್‌ಗೆ ಮಾತೃ ವಿಯೋಗ

Veeramma Dr Galangalappa Patil: ಖ್ಯಾತ ಉದ್ಯಮಿ ದಿ. ಡಾ.ಗಳಂಗಳಪ್ಪ ಪಾಟೀಲ್ ಅವರ ಪತ್ನಿ ವೀರಮ್ಮನವರು ಪತಿಯ ಹಿಂದಿನ ಶಕ್ತಿಯಾಗಿ ನಿಂತು, ಉದ್ಯಮ ಸಾಮ್ರಾಜ್ಯ ನಿರ್ಮಾಣ ಮಾಡಲು ಬೆನ್ನೆಲುಬಾಗಿ ಕೈಜೋಡಿಸಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

4 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ; ಸಮಯ ನೋಡಿಕೊಂಡು ಕ್ರಮ ಎಂದ ಎಚ್.ಡಿ.ಕುಮಾರಸ್ವಾಮಿ

ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಕ್ರಮ: ಎಚ್‌ಡಿಕೆ

HD Kumaraswamy: ನನಗೆ ಎಲ್ಲವೂ ಗೊತ್ತಿದ್ದೇ ನಾನು ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾರ ಯಾರ ಆತ್ಮಸಾಕ್ಷಿ ಹೇಗೆಲ್ಲ ವರ್ತನೆ ಮಾಡುತ್ತದೆ ಎಂಬುದನ್ನು ಪರೀಕ್ಷೆ ಮಾಡಲು ಪಕ್ಷದ ಅಭ್ಯರ್ಥಿಯನ್ನು ನಾನು ಕಣಕ್ಕೆ ಇಳಿಸಬೇಕಾಯಿತು. ಎಲ್ಲವೂ ನಾನು ಅಂದುಕೊಂಡಂತೆ ಆಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಕಟ್ಟಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Tumkur News: ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

ಪರಿಶ್ರಮದಿಂದ ಯಶಸ್ಸು ಸಾಧ್ಯ: ಡಾ. ನಾಗಲಕ್ಷ್ಮಿ ಚೌಧರಿ

Tumkur News: ತುಮಕೂರಿನ ಸದಾಶಿವ ನಗರದ ರಸ್ತೆಯಲ್ಲಿರುವ ಶ್ರೀ ಮಾರುತಿ ಮಹಾರಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭಾಗಿಯಾಗಿ, ಮಾತನಾಡಿದ್ದಾರೆ.

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಿ; ಸಂಸದ ಈ. ತುಕಾರಾಂಗೆ ಮನವಿ

ಹೊಸಪೇಟೆಯಲ್ಲಿ ನೂತನ ಇಎಸ್ಐ ಆಸ್ಪತ್ರೆ ಸ್ಥಾಪಿಸಲು ಮನವಿ

Vijayanagara News: ಹೊಸಪೇಟೆಗೆ ನೂತನ ಇಎಸ್ಐ (ESI) ಆಸ್ಪತ್ರೆ ಸ್ಥಾಪಿಸಲು ಸಂಸದ ಈ. ತುಕಾರಾಂ ಅವರಿಗೆ ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kalaburagi News: ಹಲ್ಲಿ ಬಿದ್ದ ನೀರು ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಲ್ಲಿ ಬಿದ್ದ ನೀರು ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

Kalaburagi News: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಹಲ್ಲಿ ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

Veeraloka pustaka santhe: ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ; ಲೋಗೋ ಬಿಡುಗಡೆ ಮಾಡಿದ ಡಿಸಿ ಶುಭ ಕಲ್ಯಾಣ್

ತುಮಕೂರಿನಲ್ಲಿ ಜೂ.26ರಿಂದ 3 ದಿನ ʼವೀರಲೋಕ ಪುಸ್ತಕ ಸಂತೆʼ

Tumkur News: ತುಮಕೂರು ನಗರದ ಗಾಜಿನ ಮನೆಯಲ್ಲಿ ಇದೇ ಜೂನ್‌ 26, 27 ಮತ್ತು 28 ರಂದು ವೀರಲೋಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಹಮ್ಮಿಕೊಂಡಿರುವ 5ನೇ ಆವೃತ್ತಿಯ ಬೃಹತ್ ‘ವೀರಲೋಕ ಪುಸ್ತಕ ಸಂತೆ' ಸಾಂಸ್ಕೃತಿಕ ಹಬ್ಬದ ಲೋಗೋವನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಬಿಡುಗಡೆ ಮಾಡಿದರು.

10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ: ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

ಪಾವಗಡ ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

Pavagada MLA Venkatesh: ಸರ್ಕಾರಿ ನಿಯಮ ಉಲ್ಲಂಘಿಸಿ 10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ತಿಪ್ಪಯ್ಯನದುರ್ಗದಲ್ಲಿರುವ ಪಾವಗಡ ಕಾಂಗ್ರೆಸ್ ಶಾಸಕ ವೆಂಕಟೇಶ್, ಪತ್ನಿ ಶಶಿಕಲಾ ಒಡೆತನದ ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಆದೇಶಿಸಿದೆ.

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳ್ಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಗ್ರಾಮಗಳಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

Laxmi Hebbalkar: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜತೆಗೆ ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು, ಗುರುತಿನ ಚೀಟಿ ಕಡ್ಡಾಯ: ಚಿಕ್ಕನಾಯಕನಹಳ್ಳಿ ತಾಪಂನೂತನ ಇಒ ಶಿವರಾಜಯ್ಯ ಖಡಕ್ ಸೂಚನೆ

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು: ಇಒ ಶಿವರಾಜಯ್ಯ ಸೂಚನೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದ ಅವಧಿಯಲ್ಲಿ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಾಲೂಕು ಪಂಚಾಯಿತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

Haveri News: ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

ಹಾವೇರಿಯಲ್ಲಿ ಹದಗೆಟ್ಟ ಹಳ್ಳಿ ರಸ್ತೆಗಳು; ದುರಸ್ತಿಗೆ ಸಾರ್ವಜನಿಕರ ಆಗ್ರಹ

Haveri News: ಹಾವೇರಿ ತಾಲೂಕಿನ ಅನೇಕ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ತೀರಾ ಹದಗೆಟ್ಟು ಹೋಗಿವೆ. ಕಳೆದ ಬಾರಿಯ ಮಳೆಯಿಂದಾಗಿ ರಸ್ತೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Haveri Rains: ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ, ಮನೆಗಳಿಗೆ ನೀರು ನುಗ್ಗಿ ಹಾನಿ

ಹಾವೇರಿಯಲ್ಲಿ ಮುಂಗಾರು ಮಳೆ ಅಬ್ಬರ; ಹಲವಡೆ ಸಂಚಾರಕ್ಕೆ ಅಡ್ಡಿ

Haveri News: ಹಾವೇರಿ ಜಿಲ್ಲೆಯ ಹಲವೆಡೆ ಶನಿವಾರ ಭಾರಿ ಮಳೆಯಾಗಿದೆ. ಅಗಡಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಡ್ಡಲಾಗಿ ಹರಿಯುವ ಹಳ್ಳವು ಭಾರೀ ಮಳೆಗೆ ತುಂಬಿ ಹರಿದ ಹಿನ್ನೆಲೆ ವಾಹನ ಸಂಚಾರಕ್ಕೆ ಸ್ಥಗಿತಗೊಂಡಿತ್ತು. ಇನ್ನು ಗ್ರಾಮದಲ್ಲಿ ಮನೆಗಳಿಗೆ‌ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜ ವಿತರಣೆಗೆ ರೈತರ ಆಗ್ರಹ Video

ಹಾವೇರಿಯಲ್ಲಿ ಉಚಿತ ಸೋಯಾಬಿನ್‌ ಡೆಮೋ ಬೀಜ ವಿತರಣೆಗೆ ಆಗ್ರಹ

Haveri News: ಕೇಂದ್ರ ಸರ್ಕಾರ ನೀಡುವ ಉಚಿತ ಸೋಯಾಬಿನ್‌ ಡೆಮೋ ಬಿತ್ತನೆ ಬೀಜವನ್ನು ರೈತರು ಉತ್ಪಾದನೆ ಮಾಡಿಕೊಳ್ಳಲಿ. ಇದರಿಂದ ಬೀಜದ ಕೊರತೆ ನೀಗಿಸಲು ಸಾಧ್ಯ ಎಂಬ ಮಹತ್ತರ ಯೋಜನೆ ಘೋಷಿಸಲಾಗಿದೆ. ಆದರೆ ಹಾವೇರಿ ಜಿಲ್ಲಾಡಳಿತ ಸರಿಯಾಗಿ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ರೈತರಿಗೆ ನಾಮಕಾವವಸ್ಥೆ ಬೀಜ ವಿತರಣೆ ಮಾಡಿ, ಬಳಿಕ ಬೀಜ ಖಾಲಿಯಾಗಿದೆ ಎಂದು ಹೇಳಿಕೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ರೈತರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಧನೆಗೆ ವಯಸ್ಸು ಅಡ್ಡಿಯಲ್ಲ; 76ನೇ ವರ್ಷದಲ್ಲಿ LLMನಲ್ಲಿ 4ನೇ ರ‍್ಯಾಂಕ್ ಪಡೆದ ನಿವೃತ್ತ ಅಧಿಕಾರಿ ವಿ. ತಿಪ್ಪೇಸ್ವಾಮಿ

76ನೇ ವಯಸ್ಸಿನಲ್ಲಿ 4ನೇ ರ‍್ಯಾಂಕ್ ಪಡೆದ ವಿ. ತಿಪ್ಪೇಸ್ವಾಮಿ

Tumkur News: ನಿವೃತ್ತ ಅಧಿಕಾರಿ ವಿ. ತಿಪ್ಪೇಸ್ವಾಮಿ 76ನೇ ವಯಸ್ಸಿನಲ್ಲಿ ಕಾನೂನು ವಿಭಾಗದ ಎಲ್‌ಎಲ್‌ಎಂ ಕೋರ್ಸ್‌ನಲ್ಲಿ ನಾಲ್ಕನೇ ರ‍್ಯಾಂಕ್ ಪಡೆಯುವ ಮೂಲಕ ಯುವ ಪೀಳಿಗೆಗೆ ಪ್ರೇರಣೆಯಾಗಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವದಲ್ಲಿ ಅವರು ಪ್ರಮಾಣ ಪತ್ರ ಸ್ವೀಕರಿಸಿದರು.

Tumkur News: ಬ್ಯಾಕ್‌ಬೆಂಚ್ ಗುಡ್‌ಬೈ; ಶ್ರೀ ಸತ್ಯಸಾಯಿ ಗುರುಕುಲಮ್‌ನಲ್ಲಿ U ಆಕಾರದ ಆಸನ ವ್ಯವಸ್ಥೆ: ಗಮನ ಸೆಳೆದ ಪ್ರಯೋಗ

ಶ್ರೀ ಸತ್ಯಸಾಯಿ ಗುರುಕುಲಮ್‌ನಲ್ಲಿ ಯು ಆಕಾರದ ಆಸನ ವ್ಯವಸ್ಥೆ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಾಣದಹುಣಸೆ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಕಾರುಣ್ಯ ನಿಕೇತನಂ ಶಾಲೆಯಲ್ಲಿ ಬ್ಯಾಕ್‌ಬೆಂಚ್ ವ್ಯವಸ್ಥೆಗೆ ವಿದಾಯ ಹೇಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಲೋಕಸೇವಾ ಗುರುಕುಲಮ್‌ ಸಂಸ್ಥೆಯ ಅಧೀನದಲ್ಲಿರುವ ಉಚಿತ ವಸತಿ ಸಹಿತ ಶಿಕ್ಷಣ ನೀಡುತ್ತಿರುವ ಈ ಶಾಲೆಯಲ್ಲಿ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ 8ನೇ ತರಗತಿಯಲ್ಲಿ ವಿನೂತನ ಪ್ರಯೋಗ ಆರಂಭಿಸಲಾಗಿದೆ. ವಿದ್ಯಾರ್ಥಿಗಳನ್ನು ಯು ಆಕಾರದಲ್ಲಿ ಕೂರಿಸಲಾಗುತ್ತಿದೆ.

ಡಿಕೆಶಿ ಸಂಪುಟದಲ್ಲಿ ಪುಟ್ಟರಂಗಶೆಟ್ಟಿಗೆ ಮಂತ್ರಿಗಿರಿ ನೀಡಿ: ರಾಜ್ಯ ಉಪ್ಪಾರ ಸಂಘ ಒತ್ತಾಯ

ಸಿ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಉಪ್ಪಾರ ಸಂಘ ಒತ್ತಾಯ

Chikkanayakanahalli News: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಡಿ.ಕೆ. ಶಿವಕುಮಾರ್‌ ಅವರ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಉಪ್ಪಾರ ಸಂಘದ ಉಪಾಧ್ಯಕ್ಷ ಕಲ್ಲೇಶ್ ಒತ್ತಾಯಿಸಿದ್ದಾರೆ.

Tiptur Rain: ಕೊಬ್ಬರಿ ನಾಡಿನಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ, ಶೆಡ್‌ ಶೀಟ್‌ ಬಿದ್ದು ಬಾಲಕನಿಗೆ ಗಂಭೀರ ಗಾಯ

ಕೊಬ್ಬರಿ ನಾಡಿನಲ್ಲಿ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ

Tiptur News: ತಿಪಟೂರಿನಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಮೇತ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ತೆಂಗಿನಕಾಯಿ ಫ್ಯಾಕ್ಟರಿ ಕಾರ್ಮಿಕರಿಗೆಂದು ನಿರ್ಮಿಸಿದ್ದ ಶೆಡ್ಡುಗಳ ಮೇಲ್ಚಾವಣಿ ಹಾರಿ ಹೋಗಿವೆ. ಹುಳಿಯಾರು ಮುಖ್ಯ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಬಿರುಗಾಳಿಯ ಅರ್ಭಟಕ್ಕೆ 500ಕ್ಕೂ ಹೆಚ್ಚು ತೆಂಗಿನ ಮರಗಳು ಬಿದ್ದು ಹೋಗಿವೆ, 3000ಕ್ಕೂ ಹೆಚ್ಚು ಬಾಳೆ ಗಿಡಗಳು ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು ನೆಲಕಚ್ಚಿವೆ.

ರುದ್ರಪ್ಪ ಲಮಾಣಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಶ್ರೀ ಸೇವಾಲಾಲ್ ಲಂಬಾಣಿ ಸಂಘ ಒತ್ತಾಯ

ರುದ್ರಪ್ಪ ಲಮಾಣಿಗೆ ಡಿಸಿಎಂ ಸ್ಥಾನ ನೀಡಿ; ಬಿ.ಟಿ. ಕುಮಾರ್ ಒತ್ತಾಯ

ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮಾಜದ ಪಕ್ಷದ ಮುಖಂಡರುಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘ ಮನವಿ ಮಾಡಿದೆ.

Tiptur News: ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ತಿಪಟೂರಿನ ಪ್ರಣವ್ ಲೋಕೇಶ್ ಆಯ್ಕೆ

ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ಪ್ರಣವ್ ಲೋಕೇಶ್

Tiptur News: ತಿಪಟೂರು ನಗರದ ಜೈ ಮಾರುತಿ ಟೇಕ್ವಾಂಡೋ ತರಬೇತಿ ಕೇಂದ್ರದ ವಿದ್ಯಾರ್ಥಿ ಪ್ರಣವ್ ಲೋಕೇಶ್ ಥೈಲ್ಯಾಂಡ್‌ನಲ್ಲಿ ಮೇ 30ರಂದು ಶನಿವಾರ ಹಾಗೂ ಮೇ 31ರಂದು ಭಾನುವಾರ ನಡೆಯಲಿರುವ ಅಂತಾರಾಷ್ಟಿಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ.

BJP Karnataka: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026: ಸೊರಬದಲ್ಲಿ ಬಿ.ವೈ. ರಾಘವೇಂದ್ರ ಚಾಲನೆ

ಸೊರಬದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ

ʼಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026ʼರ ಸೊರಬ ಮಂಡಲ ಪ್ರಶಿಕ್ಷಣ ವರ್ಗದ ತರಬೇತಿ ಶಿಬಿರವು ಸೊರಬದ ಗಿರಿಜಾ ಶಂಕರ ಸಭಾಭವನದಲ್ಲಿ ಗುರುವಾರ ಜರುಗಿತು. ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.

Kolar News: ಬೇಸಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಸಹೋದರರು ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರರು ಸಾವು

ಬೇಸಗೆ ರಜೆಗೆಂದು ತಾತನ ಮನೆಗೆ ಬಂದಿದ್ದ ಇಬ್ಬರು ಪುಟ್ಟ ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ಜರುಗಿದೆ. ದೇವಕಿರಣ್ (12) ಹಾಗೂ ವಿನುತ್ (9) ಎಂದು ಮೃತ ಸಹೋದರರು.

Congress Sadhana Samavesha: 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಕೆಶಿ

DK Shivakumar: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ. ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 600 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಪತ್ರ ವಿತರಣೆ: ಹೆಬ್ಬಾಳ್ಕರ್

ತುಮಕೂರಿನಲ್ಲಿ ಒಂದೇ ದಿನ 600 ಅಂಗನವಾಡಿ ನೌಕರರ ನೇಮಕಾತಿ

Laxmi Hebbalkar: ತುಮಕೂರು ಜಿಲ್ಲೆ ಒಂದರಲ್ಲೇ 600 ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಒಂದೇ ದಿನ ನೇಮಕಾತಿ ಪತ್ರವನ್ನು ಕೊಡಲಾಗಿದ್ದು, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಟ್ಟಿಗೆ ದಾಖಲೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Loading...