ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಿಕ್ಷಣ

Kendriya Vidyalayas: ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

ದೇಶಾದ್ಯಂತ 57 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಕೇಂದ್ರ ಅಸ್ತು

Central government: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ, 2026-27 ರಿಂದ 9 ವರ್ಷಗಳ ಅವಧಿಯಲ್ಲಿ 5862.55 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಒಟ್ಟು 57 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಒಪ್ಪಿಗೆ ಸೂಚಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Jacqueline Fernandez: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಆಘಾತ: ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ನಟಿ ಜಾಕ್ವೆಲಿನ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಸ್ನೇಹಿತ ಸುಕೇಶ್‌ ಚಂದ್ರಶೇಖರ್‌ ಅವರೊಂದಿಗೆ ಸೇರಿ ಅಕ್ರಮ ಹಣ ವರ್ವಾವಣೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಜಾಕ್ವೆಲಿನ್ ಫರ್ನಾಂಡಿಸ್‌ ಸಲ್ಲಿಸಿದ್ದ 215 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ ECIR ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

SSLC-2nd PUC Exam 2026: ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, Second PUC Examination: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಪ್ರಕಟಿಸಿರುವ 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20 ರಿಂದ ಅ.9ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

Madhugiri News: ಯುವ ಸಂಸತ್ ಸ್ಪರ್ಧೆಯಲ್ಲಿ ಮಧುಗಿರಿ ವಿದ್ಯಾರ್ಥಿನಿ ನಳಿನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಯುವ ಸಂಸತ್; ಮಧುಗಿರಿ ವಿದ್ಯಾರ್ಥಿನಿ ನಳಿನಾ ರಾಜ್ಯ ಮಟ್ಟಕ್ಕೆ ಆಯ್ಕೆ

Madhugiri News: ತುಮಕೂರು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮಧುಗಿರಿ ತಾಲೂಕಿನ ಐ.ಡಿ. ಹಳ್ಳಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ನಳಿನಾ ಅವರು ಭಾಗವಹಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Kerala IAS Aspirant: ವೆಂಟಿಲೇಟರ್‌ ಜೊತೆಗೆ UPSC ಪರೀಕ್ಷೆ ಬರೆದ ಯುವತಿ; ಈಕೆ ಸ್ಥಿತಿ ನೋಡಿದ್ರೆ ಕಣ್ಣೀರು ಬರುತ್ತೆ!

ವೆಂಟಿಲೇಟರ್‌ ಜೊತೆಗೆ UPSC ಪರೀಕ್ಷೆ ಬರೆದ ಯುವತಿ!

ಸಾವಿರಾರು ಮೂಳೆ ಮುರಿದಿದೆ. ಆಮ್ಲಜನಕದ ಸಹಾಯವಿಲ್ಲದೆ ಓಡಾಡಲು ಸಾಧ್ಯವಿಲ್ಲ. ಹೀಗಿದ್ದರೂ ಕೇರಳದ ಲತೀಶ್ ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ಯುಪಿಎಸ್ ಸಿ ಪರೀಕ್ಷೆ ಬರೆದಿದ್ದರು. ಈ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಇವರ ಸ್ಫೂರ್ತಿದಾಯಕ ಜೀವನದ ಕಥೆ ಇಲ್ಲಿದೆ.

ನೀಟ್‌ ಪಾಸ್‌ ಆಗಿ ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು; ಗ್ರಾಮಸ್ಥರಲ್ಲಿ ಹರ್ಷ

ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು!

Haveri News: ಹಾವೇರಿ ತಾಲೂಕಿನ ಶಾಕಾರ ಗ್ರಾಮದ ವಿದ್ಯಾರ್ಥಿಗಳಾದ ಜಗದೀಶ ದೇವೇಂದ್ರಪ್ಪ ಬೆಂಡಿಗೇರಿ ಮತ್ತು ವರ್ಷಾ ರೇಣುಕಾ ಕಮ್ಮಾರ್ ಅವರು ಬಡತನವನ್ನು ಮೆಟ್ಟಿನಿಂತು, ಸತತ ಪರಿಶ್ರಮದಿಂದ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸರ್ಕಾರಿ ಎಂಬಿಬಿಎಸ್ ಸೀಟ್ ಪಡೆದುಕೊಂಡಿದ್ದಾರೆ.

Vishweshwar Bhat: ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

Vishweshwar Bhat: ಸಂಸದ ತೇಜಸ್ವಿ ಸೂರ್ಯ ಅವರ ನಮೋ ವಿದ್ಯಾನಿಧಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಮಾತನಾಡಿದ್ದಾರೆ. ನಾವೇನಾದರೂ ಸಾಧನೆ ಮಾಡದಿದ್ದರೆ ಅದಕ್ಕೆ ನಾವು ಕಾರಣವಾಗುತ್ತೇವೆ ಹೊರತು ಬೇರೆಯವರಲ್ಲ. ಮುಂದಿನ 10 ವರ್ಷದಲ್ಲಿ ನೀವೇನಾಗಬೇಕು ಎನ್ನುವುದನ್ನು ನೀವು ನಿರ್ಧರಿಸಿ, ಆ ನಿಟ್ಟಿನಲ್ಲಿ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತವಾಗಿ ಸಿಗಲಿದೆ ಎಂದು ಸಲಹೆ ನೀಡಿದ್ದಾರೆ.

DK Shivakumar: ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿ.ಕೆ.ಶಿವಕುಮಾರ್

ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿಕೆಶಿ

DK Shivakumar: ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ತಿಂಗಳ ಒಳಗಾಗಿ ಅರ್ಜಿ ಕರೆಯಲಾಗುವುದು. ನಂತರ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಜಿ.ಸಿ. ಚಂದ್ರಶೇಖರ್ ‌ಅವರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Design Up Futures Challenge 2025: ಡಿಸೈನ್‌ಅಪ್‌ನಿಂದ “ಫ್ಯೂಚರ್ಸ್ ಚಾಲೆಂಜ್ 2025” - ಆಸಕ್ತರಿಗೆ ಉಚಿತ ಪ್ರವೇಶ!

ಡಿಸೈನ್‌ಅಪ್‌ನಿಂದ “ ಫ್ಯೂಚರ್ಸ್ ಚಾಲೆಂಜ್ 2025 ಹೊಸ ಸ್ಪರ್ಧೆ ಆಯೋಜನೆ!

Design Up Futures Challenge: ಆಗ್ನೇಯ ಏಷ್ಯಾ ಭಾಗದ ಅತಿದೊಡ್ಡ ಸಮುದಾಯ ನೇತೃತ್ವದ ವಿನ್ಯಾಸ-ತಂತ್ರಜ್ಞಾನ ಸಂಸ್ಥೆ ಡಿಸೈನ್‌ಅಪ್,” ಫ್ಯೂಚರ್ಸ್ ಚಾಲೆಂಜ್ 2025” ಎಂಬ ಸ್ಪರ್ಧೆಯನ್ನು ಪ್ರಾರಂಭಿಸಿದೆ. ಇದೊಂದು ಅಂತರಾಷ್ಟ್ರೀಯ ಮಟ್ಟದ ಡಿಸೈನ್‌ ಸ್ಪರ್ಧೆಯಾಗಿದ್ದು ವಿದ್ಯಾರ್ಥಿಗಳು, ಪದವೀಧರರು, ಫ್ರೀಲಾನ್ಸ್‌ರ್‌ಗಳು 2050ರಲ್ಲಿ ಕರೆನ್ಸಿ ಹೇಗೆ ಕಾಣಲಿದೆ ಎಂಬುದನ್ನು ಕಲ್ಪಿಸಿಕೊಂಡು ವಿನ್ಯಾಸಗೊಳಿಸಬೇಕಿದೆ.

Reliance Foundation: ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; 5100 ವಿದ್ಯಾರ್ಥಿಗಳಿಗೆ ಅವಕಾಶ

ರಿಲಯನ್ಸ್ ಫೌಂಡೇಷನ್‌ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Reliance Foundation: ರಿಲಯನ್ಸ್ ಫೌಂಡೇಷನ್‌ನ ವಾರ್ಷಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಪ್ರಥಮ ವರ್ಷದ ಪೂರ್ಣಾವಧಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತ ವಿವರ ಇಲ್ಲಿದೆ.

State Education Policy: ಎಸ್‌ಇಪಿ ವರದಿ: ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ, ದ್ವಿಭಾಷಾ ನೀತಿ ಸೇರಿ ಹಲವು ಶಿಫಾರಸು

ಎಸ್‌ಇಪಿ ವರದಿ: ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ ಸೇರಿ ಹಲವು ಶಿಫಾರಸು

SEP Report: ಶಾಲಾ ಹಂತದಲ್ಲಿ 2+8+4 ರಚನೆಯನ್ನು ಅಳವಡಿಸಿಕೊಳ್ಳಲು ಆಯೋಗ ಶಿಫಾರಸು ಮಾಡಿದೆ. ಎನ್‌ಇಪಿಯ ತ್ರಿಭಾಷಾ ಸೂತ್ರಕ್ಕೆ ಬದಲಾಗಿ ದ್ವಿಭಾಷಾ ನೀತಿ ಅನುಷ್ಠಾನಗೊಳಿಸಲು (ಕನ್ನಡ/ಮಾತೃಭಾಷೆ, ಇಂಗ್ಲಿಷ್) ಎಸ್‌ಇಪಿ ಆಯೋಗ ಶಿಫಾರಸು ಮಾಡಿದೆ. ಹಂತ ಹಂತವಾಗಿ RTE ವ್ಯಾಪ್ತಿಯನ್ನು 4-18 ವಯಸ್ಸಿನವರಿಗೆ ವಿಸ್ತರಿಸುವುದು ಸೇರಿ ಹಲವು ಶಿಫಾರಸುಗಳನ್ನು ಮಾಡಲಾಗಿದೆ.

State Education Policy: ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿ ಸಿಎಂಗೆ ಸಲ್ಲಿಕೆ; ಪ್ರಮುಖ ಶಿಫಾರಸುಗಳು ಇಲ್ಲಿವೆ

ರಾಜ್ಯ ಶಿಕ್ಷಣ ನೀತಿ ಆಯೋಗದ ಅಂತಿಮ ವರದಿ ಸಿಎಂಗೆ ಸಲ್ಲಿಕೆ

State Education Policy: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಪರ್ಯಾಯವಾಗಿ ರಾಜ್ಯಕ್ಕೆ ಒಂದು ಶಿಕ್ಷಣ ನೀತಿಯನ್ನು ರೂಪಿಸಲು ರಾಜ್ಯ ಶಿಕ್ಷಣ ಆಯೋಗವನ್ನು 2023ರ ಅ.11ರಂದು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಪ್ರೊ. ಸುಖದೇವ್ ಥೋರಾಟ್ ಅವರ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ಆಯೋಗವು ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಶಿಕ್ಷಕರ ನೇಮಕಾತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಆಡಳಿತಾತ್ಮಕ ಕಾರಣಗಳಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಮೇ 26ರಂದು ಹೊರಡಿಸಲಾಗಿದ್ದ ಪರಿಷ್ಕೃತ ವೇಳಾಪಟ್ಟಿಯನ್ನು ಮರು ಪರಿಷ್ಕರಿಸಲಾಗಿದೆ.

CET, NEET coaching: ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸಿಇಟಿ, ನೀಟ್‌ ಉಚಿತ ತರಬೇತಿ; ಅನುದಾನ ಬಿಡುಗಡೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸಿಇಟಿ, ನೀಟ್‌ ಉಚಿತ ತರಬೇತಿ

CET, NEET coaching: ರಾಜ್ಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ‘ವಿದ್ಯಾ ವಿಜೇತ’ ಕಾರ್ಯಕ್ರಮ ಜಾರಿಗೆ ತರಲಾಗಿದೆ. 2025–26ನೇ ಸಾಲಿನಲ್ಲೂ ಈ ಯೋಜನೆ ಮುಂದುವರಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್; ಅಧಿಸೂಚನೆ ಪ್ರಕಟ

ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

Passing Marks in SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ. 33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ.

MP Fund: ಶಿಕ್ಷಣಕ್ಕೆ ಡಿಜಿಟಲ್ ಸ್ಪರ್ಶ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ 100 ಶಾಲೆಗಳ ಸ್ಮಾರ್ಟ್ ಕ್ಲಾಸ್ ಯೋಜನೆಗೆ 1.46 ಕೋಟಿ ರೂ. ಅನುದಾನ

ಡಾ. ಹೆಗ್ಗಡೆಯವರಿಂದ 100 ಶಾಲೆಗಳಿಗೆ 1.46 ಕೋಟಿ ರೂ. ಅನುದಾನ

ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷ ರೂ.ಯಂತೆ ಒಟ್ಟು 1.46 ಕೋಟಿ ರೂ. ಮೊತ್ತದ ಅನುದಾನವನ್ನು ಮಂಜೂರು ಮಾಡಿದ್ದಾರೆ.

SSLC Exam 3 Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿದೆ ಲಿಂಕ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಅನ್ನು ಜುಲೈ 5ರಿಂದ 12ರವರೆಗೆ ರಾಜ್ಯದ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಫಲಿತಾಂಶ ಮಾಹಿತಿ ನೀಡಿದೆ.

NEET UG 2025: ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

NEET UG 2025: ಕರ್ನಾಟಕದ ವಿವಿಧ ವೈದ್ಯಕೀಯ, ದಂತ, ಆಯುರ್ವೇದ, ಯುನಾನಿ, ಹೋಮಿಯೋಪಥಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ನೋಂದಣಿ ಮಾಡಿಸಿ, ದಾಖಲೆಗಳ ಪರಿಶೀಲನೆ ಮಾಡಿಸಬೇಕಾಗುತ್ತದೆ ಎಂದು ಕೆಇಎ ತಿಳಿಸಿದೆ.

Pralhad Joshi: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು

ನವೀಕರಿಸಬಹುದಾದ ಇಂಧನ ವಲಯಕ್ಕೆ 1.27 ಲಕ್ಷ ಕೋಟಿ ರೂ. ಯೋಜನೆ

Pralhad Joshi: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಗಾಗಿ ₹1.27 ಲಕ್ಷ ಕೋಟಿ ಬಜೆಟ್‌ನ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

SSLC Exam: ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ; ಶೇ.33 ಅಂಕ ಪಡೆದರೂ ಪಾಸ್‌

ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ

SSLC Exam: ಕನ್ನಡ ಸೇರಿ ಎಸ್‌ಎಸ್ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ, ಮುಂದಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 100 ಅಂಕ ಇರುತ್ತದೆ.

2nd PUC Exam-3 result: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

2nd PUC Exam-3: ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಉತ್ತೀರ್ಣರಾಗದ 82,683 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹಾಜರಾಗಿದ್ದರು. ಜೂನ್ 9 ರಿಂದ ಜೂನ್ 20, 2025ರವರೆಗೆ ಒಟ್ಟು 262 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಅಳವಡಿಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲಾಯಿತು.

2nd PUC Exam 3 result 2025: ನಾಳೆ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಬಿಡುಗಡೆ

ನಾಳೆ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಬಿಡುಗಡೆ

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ಜೂನ್ 9ರಿಂದ 20ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಡೀಕೃತ ಫಲಿತಾಂಶವನ್ನು ಜುಲೈ 1ರಂದು ಬಿಡುಗಡೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ

Tips for fast writing: ಪರೀಕ್ಷೆಯಲ್ಲಿ ಅಕ್ಷರ ಸುಂದರವಾಗಿದ್ದರೆ ಸಾಲದು ವೇಗವಾಗಿಯೂ ಬರೆಯಬೇಕು; ಅದಕ್ಕಾಗಿ ಇಲ್ಲಿದೆ ಟಿಪ್ಸ್‌

ವೇಗವಾಗಿ ಬರೆಯಲು ಇಲ್ಲಿದೆ ಟಿಪ್ಸ್

ಅಕ್ಷರ ಸುಂದರವಾಗಿರಬೇಕು ನಿಜ ಆದರೆ ಸಮಯ ಸಂದರ್ಭಕ್ಕೆ ಅನುಗುಣವಾಗಿ ವೇಗವಾಗಿರುವುದು ಕೂಡ ಮುಖ್ಯವಾಗುತ್ತದೆ. ಎಷ್ಟೋ ಸಂದರ್ಭದಲ್ಲಿ ಮಕ್ಕಳು ಉತ್ತರ ಗೊತ್ತಿದ್ದರೂ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಪೂರ್ತಿಯಾಗಿ ಉತ್ತರಿಸುವಲ್ಲಿ ಸೋಲುತ್ತಾರೆ. ಇದಕ್ಕೆ ಮುಖ್ಯ ಕಾರಣ ಬರೆಯುವ ವೇಗದಲ್ಲಿ (Tips for fast writing) ಅವರು ಸೋತಿರುತ್ತಾರೆ. ಮೂರು ಗಂಟೆಗಳ ಅವಧಿಯ ಪರೀಕ್ಷೆಯಲ್ಲಿ ಬರೆಯುವ ವೇಗವನ್ನು ಹೆಚ್ಚಿಸಲು ಕೆಲವು ಟಿಪ್ಸ್ ಇಲ್ಲಿದೆ.

Improve Kids Handwriting: ಮಕ್ಕಳು ದುಂಡಗೆ, ಮುತ್ತು ಪೋಣಿಸಿದಂತೆ ಬರೆಯಬೇಕೆ? ಈ ಟಿಪ್ಸ್ ಫಾಲೋ ಮಾಡಿ

ಮಕ್ಕಳ ಕೈಬರಹ ಸುಧಾರಣೆಗೆ ಇಲ್ಲಿದೆ ಟಿಪ್ಸ್

ಈಗ ತಾನೇ ಸ್ಕೂಲ್ ಮೆಟ್ಟಿಲು ಹತ್ತಿರುವ ಪುಟ್ಟಪುಟ್ಟ ಕಂದಮ್ಮಗಳ ಪುಸ್ತಕ ತೆರೆದು ನೋಡಿದಾಗ ಪೋಷಕರಿಗೆ ಒಮ್ಮೆ ತಲೆ ತಿರುಗುವುದು ಗ್ಯಾರಂಟಿ. ಯಾಕೆಂದರೆ ಶಾಲೆಯಲ್ಲಿ ಟೀಚರ್ ಏನು ಹೇಳಿಕೊಟ್ಟಿದ್ದಾರೆ, ಅವರು ಏನು ಬರೆದಿದ್ದಾರೆ ಎನ್ನುವುದು ಕೊಂಚವು ಅರ್ಥವಾಗುವುದಿಲ್ಲ. ಇದಕ್ಕಾಗಿ ಕೆಲವೊಮ್ಮೆ ಬೈದು, ಹೊಡೆದು ಎಲ್ಲ ಪ್ರಯತ್ನಗಳನ್ನೂ ಮಾಡಿದರೂ ಪ್ರಯೋಜನವಾಗುವುದಿಲ್ಲ. ಹೀಗಾಗಿ ಎಷ್ಟೋ ಪೋಷಕರು ಮಕ್ಕಳ ಬರವಣಿಗೆಯನ್ನು ಸುಧಾರಿಸಲು ಪ್ರಯತ್ನಿಸಿ ಕೊನೆಗೆ ಸೋಲೊಪ್ಪಿಕೊಳ್ಳುವುದು ಇದೆ. ಆದರೆ ಈ ಬಗ್ಗೆ ನಿರಾಸೆ ಹೊಂದಬೇಕಾಗಿಲ್ಲ. ಮಕ್ಕಳ ಕೈಬರಹವನ್ನು ಉತ್ತಮಗೊಳಿಸಲು ಕೆಲವೊಂದು ಸರಳ ಉಪಾಯಗಳಿವೆ.

Loading...