ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿಕ್ಷಣ
SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್; ಅಧಿಸೂಚನೆ ಪ್ರಕಟ

ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

Passing Marks in SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ. 33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ.

MP Fund: ಶಿಕ್ಷಣಕ್ಕೆ ಡಿಜಿಟಲ್ ಸ್ಪರ್ಶ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ 100 ಶಾಲೆಗಳ ಸ್ಮಾರ್ಟ್ ಕ್ಲಾಸ್ ಯೋಜನೆಗೆ 1.46 ಕೋಟಿ ರೂ. ಅನುದಾನ

ಡಾ. ಹೆಗ್ಗಡೆಯವರಿಂದ 100 ಶಾಲೆಗಳಿಗೆ 1.46 ಕೋಟಿ ರೂ. ಅನುದಾನ

ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷ ರೂ.ಯಂತೆ ಒಟ್ಟು 1.46 ಕೋಟಿ ರೂ. ಮೊತ್ತದ ಅನುದಾನವನ್ನು ಮಂಜೂರು ಮಾಡಿದ್ದಾರೆ.

SSLC Exam 3 Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿದೆ ಲಿಂಕ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

SSLC Exam 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ – 3 ಅನ್ನು ಜುಲೈ 5ರಿಂದ 12ರವರೆಗೆ ರಾಜ್ಯದ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಫಲಿತಾಂಶ ಬಿಡುಗಡೆಯಾಗಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಫಲಿತಾಂಶ ಮಾಹಿತಿ ನೀಡಿದೆ.

NEET UG 2025: ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

NEET UG 2025: ಕರ್ನಾಟಕದ ವಿವಿಧ ವೈದ್ಯಕೀಯ, ದಂತ, ಆಯುರ್ವೇದ, ಯುನಾನಿ, ಹೋಮಿಯೋಪಥಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ನೋಂದಣಿ ಮಾಡಿಸಿ, ದಾಖಲೆಗಳ ಪರಿಶೀಲನೆ ಮಾಡಿಸಬೇಕಾಗುತ್ತದೆ ಎಂದು ಕೆಇಎ ತಿಳಿಸಿದೆ.

Pralhad Joshi: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನೆ, ನಾವೀನ್ಯತೆ; 1.27 ಲಕ್ಷ ಕೋಟಿ ಯೋಜನೆಗೆ ಕೇಂದ್ರ ಅಸ್ತು

ನವೀಕರಿಸಬಹುದಾದ ಇಂಧನ ವಲಯಕ್ಕೆ 1.27 ಲಕ್ಷ ಕೋಟಿ ರೂ. ಯೋಜನೆ

Pralhad Joshi: ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಗಾಗಿ ₹1.27 ಲಕ್ಷ ಕೋಟಿ ಬಜೆಟ್‌ನ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

SSLC Exam: ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ; ಶೇ.33 ಅಂಕ ಪಡೆದರೂ ಪಾಸ್‌

ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಪರೀಕ್ಷೆ

SSLC Exam: ಕನ್ನಡ ಸೇರಿ ಎಸ್‌ಎಸ್ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ, ಮುಂದಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 100 ಅಂಕ ಇರುತ್ತದೆ.

2nd PUC Exam-3 result: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

2nd PUC Exam-3: ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಉತ್ತೀರ್ಣರಾಗದ 82,683 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹಾಜರಾಗಿದ್ದರು. ಜೂನ್ 9 ರಿಂದ ಜೂನ್ 20, 2025ರವರೆಗೆ ಒಟ್ಟು 262 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಅಳವಡಿಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲಾಯಿತು.

2nd PUC Exam 3 result 2025: ನಾಳೆ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಬಿಡುಗಡೆ

ನಾಳೆ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಬಿಡುಗಡೆ

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ಜೂನ್ 9ರಿಂದ 20ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ-3 ಹಾಗೂ ಕ್ರೋಡೀಕೃತ ಫಲಿತಾಂಶವನ್ನು ಜುಲೈ 1ರಂದು ಬಿಡುಗಡೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ

Tips for fast writing: ಪರೀಕ್ಷೆಯಲ್ಲಿ ಅಕ್ಷರ ಸುಂದರವಾಗಿದ್ದರೆ ಸಾಲದು ವೇಗವಾಗಿಯೂ ಬರೆಯಬೇಕು; ಅದಕ್ಕಾಗಿ ಇಲ್ಲಿದೆ ಟಿಪ್ಸ್‌

ವೇಗವಾಗಿ ಬರೆಯಲು ಇಲ್ಲಿದೆ ಟಿಪ್ಸ್

ಅಕ್ಷರ ಸುಂದರವಾಗಿರಬೇಕು ನಿಜ ಆದರೆ ಸಮಯ ಸಂದರ್ಭಕ್ಕೆ ಅನುಗುಣವಾಗಿ ವೇಗವಾಗಿರುವುದು ಕೂಡ ಮುಖ್ಯವಾಗುತ್ತದೆ. ಎಷ್ಟೋ ಸಂದರ್ಭದಲ್ಲಿ ಮಕ್ಕಳು ಉತ್ತರ ಗೊತ್ತಿದ್ದರೂ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಪೂರ್ತಿಯಾಗಿ ಉತ್ತರಿಸುವಲ್ಲಿ ಸೋಲುತ್ತಾರೆ. ಇದಕ್ಕೆ ಮುಖ್ಯ ಕಾರಣ ಬರೆಯುವ ವೇಗದಲ್ಲಿ (Tips for fast writing) ಅವರು ಸೋತಿರುತ್ತಾರೆ. ಮೂರು ಗಂಟೆಗಳ ಅವಧಿಯ ಪರೀಕ್ಷೆಯಲ್ಲಿ ಬರೆಯುವ ವೇಗವನ್ನು ಹೆಚ್ಚಿಸಲು ಕೆಲವು ಟಿಪ್ಸ್ ಇಲ್ಲಿದೆ.

Improve Kids Handwriting: ಮಕ್ಕಳು ದುಂಡಗೆ, ಮುತ್ತು ಪೋಣಿಸಿದಂತೆ ಬರೆಯಬೇಕೆ? ಈ ಟಿಪ್ಸ್ ಫಾಲೋ ಮಾಡಿ

ಮಕ್ಕಳ ಕೈಬರಹ ಸುಧಾರಣೆಗೆ ಇಲ್ಲಿದೆ ಟಿಪ್ಸ್

ಈಗ ತಾನೇ ಸ್ಕೂಲ್ ಮೆಟ್ಟಿಲು ಹತ್ತಿರುವ ಪುಟ್ಟಪುಟ್ಟ ಕಂದಮ್ಮಗಳ ಪುಸ್ತಕ ತೆರೆದು ನೋಡಿದಾಗ ಪೋಷಕರಿಗೆ ಒಮ್ಮೆ ತಲೆ ತಿರುಗುವುದು ಗ್ಯಾರಂಟಿ. ಯಾಕೆಂದರೆ ಶಾಲೆಯಲ್ಲಿ ಟೀಚರ್ ಏನು ಹೇಳಿಕೊಟ್ಟಿದ್ದಾರೆ, ಅವರು ಏನು ಬರೆದಿದ್ದಾರೆ ಎನ್ನುವುದು ಕೊಂಚವು ಅರ್ಥವಾಗುವುದಿಲ್ಲ. ಇದಕ್ಕಾಗಿ ಕೆಲವೊಮ್ಮೆ ಬೈದು, ಹೊಡೆದು ಎಲ್ಲ ಪ್ರಯತ್ನಗಳನ್ನೂ ಮಾಡಿದರೂ ಪ್ರಯೋಜನವಾಗುವುದಿಲ್ಲ. ಹೀಗಾಗಿ ಎಷ್ಟೋ ಪೋಷಕರು ಮಕ್ಕಳ ಬರವಣಿಗೆಯನ್ನು ಸುಧಾರಿಸಲು ಪ್ರಯತ್ನಿಸಿ ಕೊನೆಗೆ ಸೋಲೊಪ್ಪಿಕೊಳ್ಳುವುದು ಇದೆ. ಆದರೆ ಈ ಬಗ್ಗೆ ನಿರಾಸೆ ಹೊಂದಬೇಕಾಗಿಲ್ಲ. ಮಕ್ಕಳ ಕೈಬರಹವನ್ನು ಉತ್ತಮಗೊಳಿಸಲು ಕೆಲವೊಂದು ಸರಳ ಉಪಾಯಗಳಿವೆ.

CBSE: 2 ಬಾರಿ 10ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆಸಲು ಸಿಬಿಎಸ್‌ಇ ಅನುಮೋದನೆ; ಮುಂದಿನ ವರ್ಷದಿಂದಲೇ ಹೊಸ ನಿಯಮ ಜಾರಿ

ಮುಂದಿನ ವರ್ಷದಿಂದ 2 ಬಾರಿ ಸಿಬಿಎಸ್‌ಇ 10ನೇ ತರಗತಿ ಬೋರ್ಡ್‌ ಪರೀಕ್ಷೆ

CBSE Double Board Exams: ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡಲು ಸಿಬಿಎಸ್‌ಇ ಮುಂದಾಗಿದ್ದು, ಇನ್ನುಮುಂದೆ ವರ್ಷಕ್ಕೆ 2 ಬಾರಿ 10ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಯಲಿದೆ. ಮುಂದಿನ ವರ್ಷವೇ ಇದು ಜಾರಿಗೆ ಬರಲಿದೆ. ಅದಾಗ್ಯೂ 2ನೇ ಹಂತದ ಪರೀಕ್ಷೆ ಐಚ್ಛಕ.

e-attendance: ಸರ್ಕಾರಿ ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ಹಾಜರಾತಿ ವ್ಯವಸ್ಥೆ ಅನುಷ್ಠಾನಕ್ಕೆ ಸರ್ಕಾರ ಆದೇಶ

ಸರ್ಕಾರಿ ಶಾಲೆಗಳಲ್ಲಿ ಇ-ಹಾಜರಾತಿ ವ್ಯವಸ್ಥೆ ಅನುಷ್ಠಾನಕ್ಕೆ ಸರ್ಕಾರ ಆದೇಶ

Face recognition attendance system: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಿಂದಲೇ 'ನಿರಂತರ' ಕಾರ್ಯಕ್ರಮದಡಿ ಮುಖ ಗುರುತಿಸುವಿಕೆ ತಂತ್ರಾಂಶ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

SSLC Exam Fees 2025: ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;‌ SSLC ಪರೀಕ್ಷೆ-2 ಮತ್ತು 3ಕ್ಕೆ ಶುಲ್ಕ ವಿನಾಯಿತಿ ನೀಡಿದ ಸರ್ಕಾರ

SSLC ಪರೀಕ್ಷೆ-2 ಮತ್ತು 3ಕ್ಕೆ ಶುಲ್ಕ ವಿನಾಯಿತಿ ನೀಡಿದ ಸರ್ಕಾರ

SSLC Exam Fees 2025: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಈಗಾಗಲೇ ಶುಲ್ಕ ವಿನಾಯಿತಿ ಇದ್ದು, ಸದರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 2025ರ ಎಸ್ಎಸ್ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿಗೆ ಮಾತ್ರ ಸೀಮಿತಗೊಳಿಸಿ ಶುಲ್ಕ ವಿನಾಯಿತಿ ನೀಡಲು ಸರ್ಕಾರ ಸಹಮತಿ ನೀಡಿದೆ.

ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಚೆಲ್ಲಾಟವಾಡಿದ ಖಾಸಗಿ ಶಾಲೆ; ಅನುಮತಿ ಪಡೆಯದೆ ಬೇರೊಂದು ಶಾಲೆಗೆ ನೋಂದಣಿ: ಇಂಟರ್ನಲ್‌ ಮಾರ್ಕ್ಸ್‌ ದೊರೆಯದೆ 10 ವಿದ್ಯಾರ್ಥಿನಿಯರು ಫೇಲ್‌

ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಕಳ್ಳಾಟವಾಡಿದ ಖಾಸಗಿ ಶಾಲೆ

Bengaluru News: ಶೇ. 100ರಷ್ಟು ಫಲಿತಾಂಶ ಬರಬೇಕೆಂಬ ಧಾವಂತಕ್ಕೆ ಬಿದ್ದ ಬೆಂಗಳೂರಿನ ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್​​ 10 ವಿದ್ಯಾರ್ಥಿನಿಯರನ್ನು ಅವರ ಪೋಷಕರ ಗಮನಕ್ಕೆ ತಾರದೆ ಅನಾಥ ಮಕ್ಕಳು ಎಂದು ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್​ ಮಾಡಿಸಿದೆ. ಸದ್ಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Madhu Bangarappa: ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

NEET Results 2025: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ

ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ

NEET UG: ಬಹುನಿರೀಕ್ಷಿತ ಈ ಸಾಲಿನ ನೀಟ್‌ ಪರೀಕ್ಷೆಯ ಪಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿರುವ ಈ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ ಫಲಿತಾಂಶವನ್ನು ಜೂ. 14ರಂದು ಪ್ರಕಟಿಸಲಾಗಿದೆ. ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಇಲ್ಲಿದೆ.

Tumkur University: ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

Tumkur News: ತುಮಕೂರಿನ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ ಪರಿಚಯ ಮಾಡಿಕೊಡುವ ಉದ್ದೇಶದಿಂದ ನಗರ ಕ್ಯಾಂಪಸ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಜ್ಞಾನಸಿರಿ ಕ್ಯಾಂಪಸ್‌ಗೆ ಭೇಟಿ ನೀಡುವ ಅವಕಾಶವನ್ನು ಕಲ್ಪಿಸಲಾಗಿತ್ತು. ಪ್ರಶಾಂತ ಪರಿಸರದಲ್ಲಿ ನೆಲೆಸಿರುವ ಈ ಕ್ಯಾಂಪಸ್‌ನಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇದೆ.

SSLC Exam- 2 Result: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

SSLC Exam- 2 Result: 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​

Media Fest: ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

Tumkur News: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಜೂ.26 ಹಾಗೂ 27ರಂದು ‘ಇಂಪ್ರೆಶನ್-2025’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ತುಮಕೂರು ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

2nd PUC Exam-3: ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ- 3 ಪರೀಕ್ಷೆ, ಈ ಸೂಚನೆಗಳನ್ನು ಪಾಲಿಸಿ

ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ- 3 ಪರೀಕ್ಷೆ, ಈ ಸೂಚನೆ ಪಾಲಿಸಿ

2nd PUC Exam-3: ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.

The Preamble: ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ಶಾಲಾ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವಿಕೆ ಕಡ್ಡಾಯ

ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿದಿನ ಪ್ರಾರ್ಥನೆ ವೇಳೆ ಸಂವಿಧಾನದ ಪೀಠಿಕೆ (The Preamble) ಓದುವುದು ಕಡ್ಡಾಯ. ಶಾಲಾ ಕಚೇರಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಪ್ರದರ್ಶಿಸಬೇಕು ಹಾಗೂ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸಲು ತಿಳಿಸಲಾಗಿದೆ.

Anganwadi Menu: ಅಂಗನವಾಡಿ ಮಕ್ಕಳಿಗೆ ಸಿಗಲಿದೆ ಬಿರಿಯಾನಿ, ಪಲಾವ್, ಸೋಯಾ ಡ್ರೈ ಕರಿ.. ಇನ್ನು  ಹಲವು ವಿಶೇಷ ಖಾದ್ಯಗಳು

ಅಂಗನವಾಡಿ ಮಕ್ಕಳಿಗೆ ಇನ್ಮುಂದೆ ಸಿಗಲಿದೆ ಬಿರಿಯಾನಿ!

ಮೂರು ತಿಂಗಳ ಹಿಂದೆ ತಮ್ಮ ಹಳ್ಳಿಯ ಅಂಗನವಾಡಿಯಲ್ಲಿ ಪುಟಾಣಿ ಶಂಕು ಎಂಬ ಬಾಲಕ "ಉಪ್ಮಾ" ಬದಲಿಗೆ ಬಿರಿಯಾನಿ ಕೇಳಿದ್ದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ (kerala Health Minister Veena George) ಅವರ ಗಮನವನ್ನೂ ಸೆಳೆದಿದೆ. ಇದರ ಪರಿಣಾಮ ಈಗ ಕೇರಳದಾದ್ಯಂತದ ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಆಹಾರ ಮೆನುವನ್ನು ಪರಿಷ್ಕರಿಸಲಾಗಿದೆ. ಮಕ್ಕಳಿಗೆ ವಿವಿಧ ರೀತಿಯ ರುಚಿಕರ ಮತ್ತು ಪೌಷ್ಟಿಕ ಆಹಾರ ನೀಡಲು ಪ್ರಾರಂಭಿಸಿದೆ.

Pralhad Joshi: ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ- ಪ್ರಲ್ಹಾದ್‌ ಜೋಶಿ

ಶೈಕ್ಷಣಿಕ-ಆರೋಗ್ಯ ಸೇವೆಯಲ್ಲಿ ಕೆಎಲ್‌ಇ ಅಮೋಘ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೆರ) ಗುಣಮಟ್ಟದ ಶಿಕ್ಷಣದ ಜತೆಗೆ ಆರೋಗ್ಯ ಸೇವೆ ಸಹ ಒದಗಿಸುತ್ತ ಸಮಾಜಕ್ಕೆ ಸಮರ್ಪಿಸಿಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

NEET PG 2025: ಜೂ. 15ರಂದು ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಜೂ. 15ರಂದು ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಜೂ. 15ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ 2025 ಪರೀಕ್ಷೆಯನ್ನು ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ ಮುಂದೂಡಿದೆ. ಪಾರದರ್ಶಕತೆ ಮತ್ತು ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Loading...