ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾಸನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಇನ್ನಿಲ್ಲ

Former PM HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (88) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

Prajwal revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ; ಮಾಜಿ ಸಂಸದನಿಗೆ ಆಪ್ತರಿಂದಲೇ ಖೆಡ್ಡಾ!

ಪ್ರಜ್ವಲ್‌ ರೇವಣ್ಣ ವಿಡಿಯೊ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿತ್ತು. ಅಶ್ಲೀಲ ವಿಡಿಯೊಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ.

Murder Case: ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

KA-01-ಎಂಎಫ್-2883 ನಂಬರ್‌ನ ಕಾರು ಓಡಿಸುತ್ತಿದ್ದ ವ್ಯಕ್ತಿಯೇ ಕೊಲೆಗಾರ. ಆತ ಅತಿ ವೇಗವಾಗಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

9.34 ರುಪಾಯಿ ಬಾಕಿ ಕೇಳಿದ ಬ್ಯಾಂಕ್‌ಗೆ ಪಾಠ ಕಲಿಸಿದ ರೈತ: 10 ರುಪಾಯಿ ಕಟ್ಟಿ 66 ಪೈಸೆ ವಾಪಸ್ ನೀಡುವಂತೆ ಪಟ್ಟು

66 ಪೈಸೆಗಾಗಿ ಕೆನರಾ ಬ್ಯಾಂಕ್‌ನಲ್ಲಿ ಪಟ್ಟು ಹಿಡಿದ ರೈತ

Viral News: ಹಾಸನದಲ್ಲಿ ರೈತ ಮತ್ತು ಬ್ಯಾಂಕ್‌ ನಡುವೆ ವಿಚಿತ್ರ ವಿವಾದ ಉಂಟಾದ ಘಟನೆಯೊಂದು ನಡೆದಿದೆ.‌ 9 ರುಪಾಯಿ 34 ಪೈಸೆ ಸಾಲ ಕಟ್ಟುವಂತೆ ಕೆನರಾ ಬ್ಯಾಂಕ್‌ನಿಂದ ರೈತರೊಬ್ಬರಿಗೆ ಕರೆ ಬಂದಿತ್ತು.‌ ಈ ಹಿನ್ನೆಲೆಯಲ್ಲಿ 10 ರುಪಾಯಿ ಸಾಲ ಕಟ್ಟಿದ ರೈತ ಉಳಿದ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರ ವೈರಲ್‌ ಆಗುತ್ತಿದ್ಧಂತೆ ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ.

ಹಾಸನದಲ್ಲಿ ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌; ಸಾಲದ ಹೆಸರಲ್ಲಿ ವಂಚನೆ!

ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌

Hassan Bank Fraud Case: ಬ್ಯಾಂಕ್​​ನಲ್ಲಿ ಎಫ್‌ಡಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಲೇಡಿ ಬ್ಯಾಂಕ್​ ಮ್ಯಾನೇಜರ್ ಒಡ್ಡಿದ್ದಳು. ಅವರ ಮಾತು ನಂಬಿ ಬ್ಯಾಂಕ್‌ನಲ್ಲಿ ಜನ ಹಣ ಇಟ್ಟಿದ್ದಾರೆ. ಆದರೆ, ಎಫ್​ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್​​ ನೀಡಿಲ್ಲ ಎನ್ನಲಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌ ಆಗಿದ್ದಾಳೆ.

road accident: ಹೆಲ್ಮೆಟ್‌ ಧರಿಸದೆ ಬುಲೆಟ್‌ ಚಾಲನೆ; ಹಂಪ್‌ನಲ್ಲಿ ಬೈಕ್‌ ಎಗರಿ ಯುವತಿ ಸಾವು, ಇನ್ನೊಬ್ಬಾಕೆ ಗಂಭೀರ

ಹಂಪ್‌ನಲ್ಲಿ ಬೈಕ್‌ ಎಗರಿ ಬಿದ್ದು ಯುವತಿ ಸಾವು, ಇನ್ನೊಬ್ಬಾಕೆ ಗಂಭೀರ

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರೂ ರಸ್ತೆಗೆ ಚಿಮ್ಮಿ ಬಿದ್ದಿದ್ದಾರೆ. ಹೆಲ್ಮೆಟ್‌ ಧರಿಸದ ಪರಿಣಾಮ ತಲೆಗೆ ಏಟು ಬಿದ್ದು ಪ್ರಿಯಾ ಮೃತಪಟ್ಟಿದ್ದಾಳೆ. ಸ್ವಾತಿ ಸ್ಥಿತಿ ಗಂಭೀರವಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.

ಎಟಿಎಂಗಳಿಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಎಟಿಎಂಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಇಬ್ಬರ ವಿರುದ್ಧ ಕೇಸ್‌

Hassan News: ಹಾಸನದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ಹಾಕದೇ 3,40,28,200 ರೂ. ದುರುಪಯೋಗ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆ ಕೇಸ್‌ ಸುಖಾಂತ್ಯ; ಪ್ರಿಯಕರನನ್ನು ಬಿಟ್ಟು ಗಂಡನ ಮನೆಗೆ ಹೋಗಲು ಒಪ್ಪಿದ ಪ್ರಿಯಾಂಕ

ಪ್ರಿಯಕರನನ್ನು ಬಿಟ್ಟು ಗಂಡನ ಜತೆ ಹೋಗಲು ಒಪ್ಪಿದ ಪ್ರಿಯಾಂಕ

ನಾಪತ್ತೆ ನಾಟಕವಾಡಿ ಪ್ರಿಯಕರ ಡೇವಿಡ್‌ ಜತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಪ್ರಿಯಾಂಕ ಕೊನೆಗೂ ಗಂಡನ ಮನೆ ಸೇರಲು ಒಪ್ಪಿದ್ದಾಳೆ. ಹಾಸನದ ಸಾಂತ್ವನ ಕೇಂದ್ರದಿಂದ ತವರು ಮನೆಗೆ ಹೋಗಿ, ಅಲ್ಲಿಂದ ಗಂಡ ರುದ್ರೇಶ್‌ ಮನೆಗೆ ಹೋಗಲು ಒಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Road Accident: ಚನ್ನರಾಯಪಟ್ಟಣದಲ್ಲಿ ಸ್ಕೂಟಿ- ಬೈಕ್‌ ಡಿಕ್ಕಿ, ಇಬ್ಬರು ಸವಾರರ ಸಾವು

ಚನ್ನರಾಯಪಟ್ಟಣದಲ್ಲಿ ಸ್ಕೂಟಿ- ಬೈಕ್‌ ಡಿಕ್ಕಿ, ಇಬ್ಬರು ಸವಾರರ ಸಾವು

ಮತ್ತಿಘಟ್ಟ ಗ್ರಾಮದ ರಮೇಶ್ ಹಾಗೂ ಕಿರಣ್ (22) ಸ್ಕೂಟಿಯಲ್ಲಿ ಬರುತ್ತಿದ್ದು ಅವರ ಎದುರಿನಿಂದ ಎಂ.ಹೊನ್ನೇನಹಳ್ಳಿ ಗ್ರಾಮದ ಪುರುಷೋತ್ತಮ್ ಬೈಕ್‌ನಲ್ಲಿ (Bike) ಬಂದು ಡಿಕ್ಕಿ ಹೊಡೆದಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Woman Missing case: ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಕ್ಕಾಗಿ ಕೊಲೆ ಶಂಕೆ

ರಾಷ್ಟ್ರೀಯ ಹೆದ್ದಾರಿ 373ರ ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ರೂ. ಮೌಲ್ಯದ ಒಡವೆ ಆಕೆಯ ಮೈಮೇಲೆ ಮೇಲೆ ಇತ್ತು. ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಹಾಸನ ಮೆಗಾ ಡೇರಿ ವಿಸ್ತರಣೆಗೆ 150 ಕೋಟಿ ಸಾಲ ನೀಡಲು ಕೇಂದ್ರ ಸಮ್ಮತಿ; ಎಚ್‌ಡಿಕೆ ಮನವಿಗೆ ಸ್ಪಂದಿಸಿದ ಹೈನುಗಾರಿಕೆ ಸಚಿವ

ಹಾಸನ ಮೆಗಾ ಡೇರಿ ವಿಸ್ತರಣೆಗೆ 150 ಕೋಟಿ ಸಾಲ ನೀಡಲು ಕೇಂದ್ರ ಸಮ್ಮತಿ

HD Kumaraswamy: ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (NDDB) ಮೂಲಕ 150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ಹೈನುಗಾರಿಕೆ ಸಚಿವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.

Murder case: ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ಮೊದಲ ಹೆಂಡತಿ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ.

ಶಬರಿಮಲೆಗೆ ಹೋಗಿ ಬಂದು ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿ; 2ನೇ ಮದುವೆ ಪ್ರಶ್ನಿಸಿದ್ದಕ್ಕೆ ಕೃತ್ಯ!

ಹಾಸನದಲ್ಲಿ ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿರಾಯ!

ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ಮದುವೆ ವಿಚಾರವಾಗಿ ಗಂಡ ಮತ್ತು ಹೆಂಡತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಪತ್ನಿಯ ಕಪಾಳಕ್ಕೆ ಗಂಡ ಹೊಡೆದಿದ್ದ‌. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮದುವೆಗೆ ನಿರಾಕರಣೆ; ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲೇ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಣೆ; ಬೆಂಗಳೂರಿನಲ್ಲಿ ಪ್ರಿಯಕರನ ಮನೆಯಲ್ಲೇ ಯುವತಿ ಆತ್ಮಹತ್ಯೆ

Nikhitha Suicide Case: ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಸ ವರ್ಷದ ಆಚರಣೆ ನಿಮಿತ್ತ ಜ.1ರಂದು ಅರಸೀಕೆರೆಯಿಂದ ಬೆಂಗಳೂರಿನ ಪ್ರಿಯಕರಣ ಮನೆಗೆ ಬಂದಿದ್ದ ಯುವತಿ, ನೇಣಿಗೆ ಶರಣಾಗಿದ್ದಾಳೆ.

ನಟ ಯಶ್‌ ತಾಯಿಗೆ ಕೋರ್ಟ್‌ ಬಿಗ್‌ ಶಾಕ್‌; ಭೂ ಒತ್ತುವರಿ ಆರೋಪ, ಕಾಂಪೌಂಡ್  ಧ್ವಂಸ

ನಟ ಯಶ್‌ ತಾಯಿಗೆ ಕೋರ್ಟ್‌ ಬಿಗ್‌ ಶಾಕ್‌; ಭೂ ಒತ್ತುವರಿ ಆರೋಪ

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಯಶ್ ತಾಯಿಯಿಂದ ಅಕ್ರಮವಾಗಿ ಜಾಗ ಒತ್ತುವರಿ‌ ಮಾಡಿರುವ ಆರೋಪ ಕೇಳಿ ಬಂದಿದೆ. ತಮ್ಮ ಮನೆ ಪಕ್ಕದಲ್ಲಿದ್ದ ಸೈಟನ್ನ ಒತ್ತುವರಿ ಮಾಡಿ ಯಶ್ ಅವರ ಅಮ್ಮ ಪುಷ್ಪ ಅವರು ಕಾಂಪೌಡ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Road Accident: ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ವರ್ಷದ ಮೊದಲ ದಿನವೇ ದುರಂತ, ಬೊಲೆರೊ ಪಲ್ಟಿಯಾಗಿ ಮೂವರು ಸಾವು

ಹಸಿ ಅಡಿಕೆ ಸಾಗಿಸುತ್ತಿದ್ದ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ, ರಸ್ತೆಗೆ ವಾಹನ ಪಲ್ಟಿಯಾಗಿದೆ. ‌ಪರಿಣಾಮ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಹಾಸನ ಮೂಲದ ನೌಶದ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

MLA HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣಗೆ ಬಿಗ್‌ ರಿಲೀಫ್‌; ಕೇಸ್‌ ಕೈಬಿಟ್ಟ ಕೋರ್ಟ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣಗೆ ಬಿಗ್‌ ರಿಲೀಫ್‌

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮನೆಕೆಲಸದಾಕೆ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ರೇವಣ್ಣರನ್ನು ಕೋರ್ಟ್‌ ಖುಲಾಸೆಗೊಳಿಸಿದೆ.

POCSO Case: ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಚಾಕೊಲೇಟ್‌ ನೀಡಿ ದೌರ್ಜನ್ಯ ಎಸಗಿದ ವಾಹನ ಚಾಲಕ, 10 ತರಗತಿ ಬಾಲಕಿಗೆ ಹೆರಿಗೆ

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯನ್ನು ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಚಾಕೋಲೆಟ್‌ ನೀಡಿ ಲೈಂಗಿಕ ದೌರ್ಜನ್ಯ; ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

Hassan News: ಬಾಲಕಿಯ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯ‌ ಎಸಗಿದ್ದ. ಹೀಗಾಗಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿಯು ನಿತ್ಯ ಚಾಕೋಲೆಟ್​ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ಯ ಆರೋಪಿಯನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 5000 ಕೋಟಿ ರೂ. ಎಲ್ಲಿ ಹೋಯ್ತು?; ಸಿಎಂಗೆ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಯ 5000 ಕೋಟಿ ರೂ. ಎಲ್ಲಿ ಹೋಯ್ತು?: ಎಚ್‌ಡಿಕೆ ಪ್ರಶ್ನೆ

HD Kumaraswamy: ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಕೊಡಬೇಕಿದ್ದ ಗೃಹಲಕ್ಷ್ಮಿ‌ ಹಣ ಎಲ್ಲಿ ಹೋಗಿದೆ? ಆ ಹಣ ಖಜಾನೆಯಲ್ಲಿ ಇದೆಯಾ? ಇಲ್ಲವಾ? ಎನ್ನುವ ಅಂಶವನ್ನು ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಬೇಕು. ಅವರು ಮತ್ತು ಅವರ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

Road Accident: ರಸ್ತೆ ದಾಟುವಾಗ ಲಾರಿ ಡಿಕ್ಕಿ; ಕರ್ತವ್ಯದಲ್ಲಿದ್ದ KSRTC ಚೆಕಿಂಗ್‌ ಇನ್ಸ್‌ಪೆಕ್ಟರ್‌ ಸಾವು

ಲಾರಿ ಡಿಕ್ಕಿ; ಕರ್ತವ್ಯದಲ್ಲಿದ್ದ KSRTC ಚೆಕಿಂಗ್‌ ಇನ್ಸ್‌ಪೆಕ್ಟರ್‌ ಸಾವು

ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ಗೆ ಕ್ಯಾಂಟರ್‌ ಟ್ರಕ್‌ಗೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನದ ಆಲೂರಿನ ಬಳಿ ನಡೆದಿದೆ. ಮೃತರನ್ನು ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಎಂದು ಗುರುತಿಸಲಾಗಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Loading...