ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾಸನ

Hassan News: ಸ್ನೇಹಿತರ ಜತೆ ಟ್ರಿಪ್ ಹೋಗಿದ್ದ ಯುವತಿ ಹಾಸನದ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಟ್ರಿಪ್ ಹೋಗಿದ್ದ ಯುವತಿ ಹಾಸನದ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಾಗಸಂದ್ರದ ನಿವಾಸಿತಾದ ಯುವತಿ ಸ್ನೇಹಿತರ ಜತೆ ಟ್ರಿಪ್‌ಗೆಂದು ಹಾಸನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನನಗೆ ಹುಡುಗಿ ಹುಡುಕಿಕೊಡಿ ಎಂದು ಯುವಕ ಮನವಿ; ಲವ್‌ ಮಾಡಿ ಮದುವೆಯಾಗು ಎಂದು ಸಲಹೆ ಕೊಟ್ಟ ಅರಕಲಗೂಡು ಶಾಸಕ!

ಹುಡುಗಿ ಹುಡುಕಿಕೊಡಿ ಎಂದು ಶಾಸಕನ ಬಳಿ ಯುವಕ ಮನವಿ!

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣದಲ್ಲಿ ನಡೆದ ಪ್ರಜಾ ಸೇವೆ ಅಭಿಯಾನ ಸಭೆಯಲ್ಲಿ ಶಾಸಕ ಎ.ಮಂಜು ಅವರ ಮುಂದೆ ಬೇಡಿಕೆ ಇಟ್ಟಿದ್ದಾನೆ. ಪದವೀಧರನಾದರೂ ಹುಡುಗಿ ಸಿಗುತ್ತಿಲ್ಲ. ರೈತನ ಮಗ ಎನ್ನುವ ಕಾರಣಕ್ಕೆ ಯಾರೂ ಮದುವೆಯಾಗಲು ಒಪ್ಪುತ್ತಿಲ್ಲ. ಅಪ್ಪ ಅಮ್ಮ ಇಲ್ಲದ ನನಗೆ ಹುಡುಗಿ ಹುಡುಕಿಕೊಡಿ ಎಂದು ಮೊರೆಯಿಟ್ಟಿದ್ದಾನೆ.

Kodi Mutt Swamiji: ದಕ್ಷಿಣ ಭಾರತದವೂ ನೇಪಾಳದಂತೆ ಆಗಲಿದೆ: ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ!

ದಕ್ಷಿಣ ಭಾರತದವೂ ನೇಪಾಳದಂತೆ ಆಗಲಿದೆ: ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ!

ಹಾಸನದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು, ಈ ವರ್ಷದಲ್ಲಿ ನಡೆಯಬಹುದಾದ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದಾರೆ. ಬರುವ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಭೀಕರ ಪ್ರಕೃತಿ ವಿಕೋಪಗಳು ಸಂಭವಿಸುವ ಲಕ್ಷಣಗಳಿವೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಬದಲಾಗಬೇಕಿರುವುದು ಮಕ್ಕಳಲ್ಲ, ಪೋಷಕರು, ಶಿಕ್ಷಕರು: ಸದ್ಗುರು ಶ್ರೀ ಮಧುಸೂದನ ಸಾಯಿ

ಬದಲಾಗಬೇಕಿರುವುದು ಮಕ್ಕಳಲ್ಲ, ಪೋಷಕರು, ಶಿಕ್ಷಕರು:ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ಮಕ್ಕಳನ್ನು ಬೆಳೆಸಲು ಪೋಷಕರು ಹೆಚ್ಚು ಗಮನಕೊಡುತ್ತಿಲ್ಲ ಎನ್ನುವುದು ವಿಷಾದಕರ ಸತ್ಯ. ಶಿಕ್ಷಕರೂ ಅಷ್ಟೇ, ಕೇವಲ ತರಗತಿಯ ಪಾಠದಿಂದ ಕಲಿಕೆ ಸಾಧ್ಯವಿಲ್ಲ ಎನ್ನುವುದನ್ನು ಅರಿತುಕೊಳ್ಳಬೇಕು. ನನ್ನ ಪ್ರಕಾರ ಬದಲಾಗಬೇಕಿರುವುದು ಮಕ್ಕಳಲ್ಲ; ಪೋಷಕರು ಮತ್ತು ಶಿಕ್ಷಕರು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅಭಿಪ್ರಾಯಪಟ್ಟಿದ್ದಾರೆ.

ಶಿಗ್ಗಾವಿಯ ಆಂಜನೇಯ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ; ಮುಸ್ಲಿಂ ಯುವಕ ಅರೆಸ್ಟ್‌

ಶಿಗ್ಗಾವಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ ಮುಸ್ಲಿಂ ಯುವಕ!

ಆರೋಪಿಯು ಮದ್ಯದ ಅಮಲಿನಲ್ಲಿ ಆಂಜನೇಯ ದೇವಸ್ಥಾನದೊಳಗೆ ತೆರಳಿ ಮಲಗಿದ್ದಲ್ಲದೆ, ದೇವರ ಮೂರ್ತಿಯ ಎದುರು ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Hassan News: ಪ್ರೀತಿಸಿ ಮದುವೆಯಾಗಿದ್ದಕ್ಕೆ ಅತ್ತೆ ಮನೆಯವರಿಂದ ಕಿರುಕುಳ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನದಲ್ಲಿ ಘೋರ ಘಟನೆ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನ ಜಿಲ್ಲೆಯ ಆಲೂರಿನ ಹೌಸಿಂಗ್ ಬೋರ್ಡ್‌ನಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಅತ್ತೆ ಮನೆಯವರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಮಗನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತೆ ಮತ್ತು ಮಗಳ ಕಿರುಕುಳದಿಂದ ತನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ.

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಎರಡೂವರೆ ಕಿಲೋ ಮೀಟರ್‌ ಕ್ಯೂ ನಿಂತು ಮುಗಿಬಿದ್ದು ಖರೀದಿಸಿದ ಜೆನ್‌ ಝೀಗಳು; ಒಂದೇ ದಿನ 35 ಲಕ್ಷ ರುಪಾಯಿ ವಹಿವಾಟು!

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ದಾಖಲೆಯ ವಹಿವಾಟು

HD Kumaraswamy: ಎಚ್ಎಂಟಿ ಕೈಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಎಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ನಮ್ಮ ದೇಶದವರಲ್ಲ, ಅವರಲ್ಲಿ ಹರಿಯುತ್ತಿರುವುದು ಇಟಲಿ ರಕ್ತ ಎಂದ ಎಚ್‌.ಡಿ. ಕುಮಾರಸ್ವಾಮಿ

ʼʼಸೋನಿಯಾ ಗಾಂಧಿ ನಮ್ಮ ದೇಶದವರಲ್ಲʼʼ: ಎಚ್‌.ಡಿ. ಕುಮಾರಸ್ವಾಮಿ

HD Kumaraswamy: ಸೋನಿಯಾ ಗಾಂಧಿ ಅವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸೋನಿಯಾ ಗಾಂಧಿ ಅವರೇನು ನಮ್ಮ ದೇಶದವರಾ? ಅವರು ಮದುವೆಯಾಗಿ ನಮ್ಮ ದೇಶಕ್ಕೆ ಬಂದರು ಅಷ್ಟೇ. ಅವರಲ್ಲಿ ಹರಿಯುತ್ತಿರುವುದು ಇಟಲಿಯ ರಕ್ತ ಅಲ್ಲವೇ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಸಂಚು ನಡೆಯುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ: ಎಚ್‌ಡಿಕೆ

HD Kumaraswamy: ನನಗೆ ಒಂದು ಮಾಹಿತಿ ಇದೆ, ನೈಸ್ ಯೋಜನೆಯನ್ನು ಆ ಕಂಪನಿಯಿಂದ ಯಾರೋ ಈಗ ಟೇಕ್ ಓವರ್ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿಯನ್ನು ಕೇಳುತ್ತೇನೆ, ಇದರಲ್ಲಿ ಯಾರ ಪಾಲಿದೆ? ಯಾರು ಅದನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ? ಇವೆಲ್ಲವನ್ನೂ ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹಾಸನದಲ್ಲಿ ಘೋರ ಘಟನೆ; ಬಟ್ಟೆ ನೆನೆಸಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನದಲ್ಲಿ ಘೋರ ಘಟನೆ; ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ಘಟನೆ ನಡೆದಿದೆ. ತಾಯಿ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಹೋದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಯಿಯ ಪುಣ್ಯ ಜನರ ರೂಪದಲ್ಲಿ ಕಂಡೆ; ಚೆನ್ನಮ್ಮ ದರ್ಶನಕ್ಕೆ ಬಂದ ಜನಸಾಗರ ಕಂಡು ಗದ್ಗದಿತರಾದ ಕುಮಾರಸ್ವಾಮಿ

ಚೆನ್ನಮ್ಮ ಸಮಾಧಿ ದರ್ಶನಕ್ಕೆ ಹರಿದುಬಂದ ಜನಸಾಗರ; ಎಚ್‌ಡಿಕೆ ಕೃತಜ್ಞತೆ

HD Kumaraswamy: ನಮ್ಮ ತಾಯಿ ಸಂಪಾದನೆ ಮಾಡಿರುವ ಪುಣ್ಯವನ್ನು ಇಂದು ಜನರ ರೂಪದಲ್ಲಿ ಕಂಡೆ. ಇವತ್ತು ಹರಿದು ಬಂದಿರುವ ಜನಸ್ತೋಮವನ್ನು ಕಂಡು ನನ್ನ ಹೃದಯ ತುಂಬಿ ಬಂದಿದೆ. ಇಲ್ಲಿಗೆ ಬಂದು ಅಮ್ಮನ ಆತ್ಮಕ್ಕೆ ಶಾಂತಿ ಕೋರಿದ ಪ್ರತಿಯೊಬ್ಬರನ್ನು ನಾನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Chennamma Deve Gowda: ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ, ಹಲವು ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿ

ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ

ಹಾಸನ ಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಚೆನ್ನಮ್ಮ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ದೇವೇಗೌಡರ ಕುಟುಂಬ

ಚೆನ್ನಮ್ಮ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ದೇವೇಗೌಡರ ಕುಟುಂಬ

ಜುಲೈ 18ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಚನ್ನಮ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು. ಇಂದು ಸಮಾಧಿಗೆ ಹಾಲು-ತುಪ್ಪ ಸಮರ್ಪಣೆ ಮಾಡಲಾಗಿದೆ.

Delhi Protest: ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ

ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ: ಕುಮಾರಸ್ವಾಮಿ

ದೆಹಲಿಯಲ್ಲಿ ಸಿಜೆಪಿ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣುತ್ತಿದೆ. ಇದ ಕೆಲವರ ಕಣ್ಣು ಕುಕ್ಕಿರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ.

Viral Video: ಕೆಲಸದ ಸಮಯ ಮುಗಿದ್ರೂ ಮನೆಗೆ ಹೋಗಂಗಿಲ್ಲ; ಸಿಬ್ಬಂದಿಯನ್ನು ಬ್ಯಾಂಕ್‌ನಲ್ಲೇ ಲಾಕ್ ಮಾಡಿದ ಮ್ಯಾನೇಜರ್!

ಸಮಯ ಮುಗಿದ್ರೂ ಮನೆಗೆ ಹೋಗಂಗಿಲ್ಲ; ಬ್ಯಾಂಕ್‌ನಲ್ಲೇ ಸಿಬ್ಬಂದಿ ಲಾಕ್‌!

ಹಾಸನ ಜಿಲ್ಲೆಯ ಅರಕಲಗೂಡುದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರು ಸಿಬ್ಬಂದಿಯನ್ನು ತಡರಾತ್ರಿವರೆಗೆ ಕಚೇರಿಯಲ್ಲೇ ಉಳಿಯುವಂತೆ ಒತ್ತಾಯಿಸಿ, ಮುಖ್ಯ ಗೇಟ್‌ಗೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮ್ಯಾನೇಜರ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Chennamma's Funeral: ಹೊಳೆನರಸೀಪುರದ ಮಾವಿನಕೆರೆಯಲ್ಲಿ ನೆರವೇರಿದ ಚೆನ್ನಮ್ಮ ಅಂತ್ಯಸಂಸ್ಕಾರ; ತಾಯಿ ಕೆನ್ನೆಗೆ ಮುತ್ತಿಟ್ಟು ಕಣ್ಣೀರಿಟ್ಟ ಎಚ್‌ಡಿಕೆ, ರೇವಣ್ಣ

ಹೊಳೆನರಸೀಪುರದ ಮಾವಿನಕೆರೆಯಲ್ಲಿ ಚೆನ್ನಮ್ಮ ನೆರವೇರಿದ ಅಂತ್ಯಸಂಸ್ಕಾರ

ಹೊಳೆನರಸೀಪುರದ ಹರದನಹಳ್ಳಿ ಸಮೀಪದ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಚೆನ್ನಮ್ಮ ಅವರ ಅಂತಿಮ ವಿಧಿವಿಧಾನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿ ರಾಜ್ಯ, ಕೇಂದ್ರದ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹೊಳೆನರಸೀಪುರ ಶಾಲೆಗಳಿಗೆ ರಜೆ

Chennamma's funeral: ಸೋಮವಾರ ಮಧ್ಯಾಹ್ನ ಹೊಳೆನರಸೀಪುರದ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ. ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂದಣೆ, ಟ್ರಾಫಿಕ್‌ ಜಾಮ್‌ ಹೆಚ್ಚಾಗುವ ಸಾಧ್ಯತೆ ಇದೆ.

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಹಾಸನದ SDM ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು

ರೈಲಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು

Viral News: ಎಸ್‌ಡಿಎಂ ಆಯುರ್ವೇದ ಕಾಲೇಜಿನ ಮಾನಸರೋಗ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿನಿಯರು ಆಂಧ್ರಪ್ರದೇಶದ ವಿಜಯವಾಡ ಬಳಿ ಚಲಿಸುವ ರೈಲಿನಲ್ಲಿ ತುಂಬು ಗರ್ಭಿಣಿಗೆ ತುರ್ತು ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದು ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ.

Puneeth Kerehalli: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.

Hassan IIT: ಹಾಸನ ಉದ್ದೇಶಿತ ಐಐಟಿ ಭೂ ಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಹಾಸನ ಐಐಟಿ ಭೂ ಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ

ಹಾಸನ ಜಿಲ್ಲಾ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಭೆ ನಡೆಸಿದರು. 7 ಗ್ರಾಮಗಳ ಭೂಸಂತ್ರಸ್ತರ ಅಹವಾಲು ಆಲಿಸಿದ ಸಿಎಂ ಅವರು, ಕಾನೂನುಬದ್ಧ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Hemavathi Backwaters Tragedy: ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವಕರ ಸಾವು

ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರ ಸಾವು

Hassan News: ಬೆಂಗಳೂರಿನಿಂದ ಹತ್ತು ಯುವಕರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ತೆರಳಿತ್ತು. ದೇವರ ದರ್ಶನ ಮುಗಿಸಿ ಹಿಂತಿರುಗುವ ಮಾರ್ಗಮಧ್ಯೆ ಹಾಸನ ಜಿಲ್ಲೆಯ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ ವೇಳೆ ದುರಂತ ನಡೆದಿದೆ.

Karnataka cabinet: ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ; ಸಂಪುಟ ಸೇರಲು ನಾನಾ ಕಸರತ್ತು

ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ

Haveri Congress: ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಘೋಷಿಸಿಕೊಂಡಿದ್ದ ಕಾಂಗ್ರೆಸ್ ಶಾಸಕರ ನಡುವೆಯೇ ಈಗ ಸಚಿವ ಸ್ಥಾನಕ್ಕಾಗಿ ಜಟಾಪಟಿ ಶುರುವಾಗಿದೆ. ಈ ಬಾರಿ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಶಾಸಕರು ಹೈ ಕಮಾಂಡ್‌ಗೆ ದುಂಬಾಲು ಬಿದ್ದಿದ್ದಾರೆ.

2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ; ಬಿಡದಿ ಟೌನ್‌ಶಿಪ್‌ಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ

2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಮಿಸ್ಟರ್ ಡಿ.ಕೆ. ಶಿವಕುಮಾರ್ ಅಧಿಕಾರ ಯಾರಿಗೂ ಶಾಶ್ವತವಲ್ಲ, ಮಾತಾಡೋ ಮುನ್ನ ಎಚ್ಚರಿಕೆಯಿಂದ ಮಾತನಾಡಿ, ದುರಹಂಕಾರ ಬೇಡ ಎಂದು ಡಿ.ಕೆ. ಶಿವಕುಮಾರ್‌ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್‌ ದುರಂತಕ್ಕೀಡಾಗಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Loading...