ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾಸನ

ಹಾಸನದಲ್ಲಿ ಘೋರ ಘಟನೆ; ಬಟ್ಟೆ ನೆನೆಸಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನದಲ್ಲಿ ಘೋರ ಘಟನೆ; ಬಕೆಟ್‌ಗೆ ಬಿದ್ದು 8 ತಿಂಗಳ ಮಗು ಸಾವು

ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ಘಟನೆ ನಡೆದಿದೆ. ತಾಯಿ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಹೋದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಯಿಯ ಪುಣ್ಯ ಜನರ ರೂಪದಲ್ಲಿ ಕಂಡೆ; ಚೆನ್ನಮ್ಮ ದರ್ಶನಕ್ಕೆ ಬಂದ ಜನಸಾಗರ ಕಂಡು ಗದ್ಗದಿತರಾದ ಕುಮಾರಸ್ವಾಮಿ

ಚೆನ್ನಮ್ಮ ಸಮಾಧಿ ದರ್ಶನಕ್ಕೆ ಹರಿದುಬಂದ ಜನಸಾಗರ; ಎಚ್‌ಡಿಕೆ ಕೃತಜ್ಞತೆ

HD Kumaraswamy: ನಮ್ಮ ತಾಯಿ ಸಂಪಾದನೆ ಮಾಡಿರುವ ಪುಣ್ಯವನ್ನು ಇಂದು ಜನರ ರೂಪದಲ್ಲಿ ಕಂಡೆ. ಇವತ್ತು ಹರಿದು ಬಂದಿರುವ ಜನಸ್ತೋಮವನ್ನು ಕಂಡು ನನ್ನ ಹೃದಯ ತುಂಬಿ ಬಂದಿದೆ. ಇಲ್ಲಿಗೆ ಬಂದು ಅಮ್ಮನ ಆತ್ಮಕ್ಕೆ ಶಾಂತಿ ಕೋರಿದ ಪ್ರತಿಯೊಬ್ಬರನ್ನು ನಾನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Chennamma Deve Gowda: ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ, ಹಲವು ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿ

ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ

ಹಾಸನ ಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಚೆನ್ನಮ್ಮ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ದೇವೇಗೌಡರ ಕುಟುಂಬ

ಚೆನ್ನಮ್ಮ ಸಮಾಧಿಗೆ ಹಾಲು-ತುಪ್ಪ ಸಮರ್ಪಿಸಿದ ದೇವೇಗೌಡರ ಕುಟುಂಬ

ಜುಲೈ 18ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಚನ್ನಮ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಾವಿಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು. ಇಂದು ಸಮಾಧಿಗೆ ಹಾಲು-ತುಪ್ಪ ಸಮರ್ಪಣೆ ಮಾಡಲಾಗಿದೆ.

Delhi Protest: ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ

ದೆಹಲಿ ಪ್ರತಿಭಟನೆಗಳ ಹಿಂದೆ ಕಾಣದ ಶಕ್ತಿಗಳ ಕೈವಾಡ: ಕುಮಾರಸ್ವಾಮಿ

ದೆಹಲಿಯಲ್ಲಿ ಸಿಜೆಪಿ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣುತ್ತಿದೆ. ಇದ ಕೆಲವರ ಕಣ್ಣು ಕುಕ್ಕಿರುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ.

Viral Video: ಕೆಲಸದ ಸಮಯ ಮುಗಿದ್ರೂ ಮನೆಗೆ ಹೋಗಂಗಿಲ್ಲ; ಸಿಬ್ಬಂದಿಯನ್ನು ಬ್ಯಾಂಕ್‌ನಲ್ಲೇ ಲಾಕ್ ಮಾಡಿದ ಮ್ಯಾನೇಜರ್!

ಸಮಯ ಮುಗಿದ್ರೂ ಮನೆಗೆ ಹೋಗಂಗಿಲ್ಲ; ಬ್ಯಾಂಕ್‌ನಲ್ಲೇ ಸಿಬ್ಬಂದಿ ಲಾಕ್‌!

ಹಾಸನ ಜಿಲ್ಲೆಯ ಅರಕಲಗೂಡುದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರು ಸಿಬ್ಬಂದಿಯನ್ನು ತಡರಾತ್ರಿವರೆಗೆ ಕಚೇರಿಯಲ್ಲೇ ಉಳಿಯುವಂತೆ ಒತ್ತಾಯಿಸಿ, ಮುಖ್ಯ ಗೇಟ್‌ಗೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮ್ಯಾನೇಜರ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Chennamma's Funeral: ಹೊಳೆನರಸೀಪುರದ ಮಾವಿನಕೆರೆಯಲ್ಲಿ ನೆರವೇರಿದ ಚೆನ್ನಮ್ಮ ಅಂತ್ಯಸಂಸ್ಕಾರ; ತಾಯಿ ಕೆನ್ನೆಗೆ ಮುತ್ತಿಟ್ಟು ಕಣ್ಣೀರಿಟ್ಟ ಎಚ್‌ಡಿಕೆ, ರೇವಣ್ಣ

ಹೊಳೆನರಸೀಪುರದ ಮಾವಿನಕೆರೆಯಲ್ಲಿ ಚೆನ್ನಮ್ಮ ನೆರವೇರಿದ ಅಂತ್ಯಸಂಸ್ಕಾರ

ಹೊಳೆನರಸೀಪುರದ ಹರದನಹಳ್ಳಿ ಸಮೀಪದ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಚೆನ್ನಮ್ಮ ಅವರ ಅಂತಿಮ ವಿಧಿವಿಧಾನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿ ರಾಜ್ಯ, ಕೇಂದ್ರದ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹೊಳೆನರಸೀಪುರ ಶಾಲೆಗಳಿಗೆ ರಜೆ

Chennamma's funeral: ಸೋಮವಾರ ಮಧ್ಯಾಹ್ನ ಹೊಳೆನರಸೀಪುರದ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ. ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂದಣೆ, ಟ್ರಾಫಿಕ್‌ ಜಾಮ್‌ ಹೆಚ್ಚಾಗುವ ಸಾಧ್ಯತೆ ಇದೆ.

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಹಾಸನದ SDM ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು

ರೈಲಿನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯರು

Viral News: ಎಸ್‌ಡಿಎಂ ಆಯುರ್ವೇದ ಕಾಲೇಜಿನ ಮಾನಸರೋಗ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿನಿಯರು ಆಂಧ್ರಪ್ರದೇಶದ ವಿಜಯವಾಡ ಬಳಿ ಚಲಿಸುವ ರೈಲಿನಲ್ಲಿ ತುಂಬು ಗರ್ಭಿಣಿಗೆ ತುರ್ತು ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದು ತಾಯಿ ಮತ್ತು ಹೆಣ್ಣು ಮಗು ಆರೋಗ್ಯವಾಗಿದ್ದಾರೆ.

Puneeth Kerehalli: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.

Hassan IIT: ಹಾಸನ ಉದ್ದೇಶಿತ ಐಐಟಿ ಭೂ ಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಹಾಸನ ಐಐಟಿ ಭೂ ಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ

ಹಾಸನ ಜಿಲ್ಲಾ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಭೆ ನಡೆಸಿದರು. 7 ಗ್ರಾಮಗಳ ಭೂಸಂತ್ರಸ್ತರ ಅಹವಾಲು ಆಲಿಸಿದ ಸಿಎಂ ಅವರು, ಕಾನೂನುಬದ್ಧ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

Hemavathi Backwaters Tragedy: ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವಕರ ಸಾವು

ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರ ಸಾವು

Hassan News: ಬೆಂಗಳೂರಿನಿಂದ ಹತ್ತು ಯುವಕರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆಂದು ತೆರಳಿತ್ತು. ದೇವರ ದರ್ಶನ ಮುಗಿಸಿ ಹಿಂತಿರುಗುವ ಮಾರ್ಗಮಧ್ಯೆ ಹಾಸನ ಜಿಲ್ಲೆಯ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ ವೇಳೆ ದುರಂತ ನಡೆದಿದೆ.

Karnataka cabinet: ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ; ಸಂಪುಟ ಸೇರಲು ನಾನಾ ಕಸರತ್ತು

ಹಾವೇರಿ ಜಿಲ್ಲೆಯ ಕೈ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ

Haveri Congress: ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಘೋಷಿಸಿಕೊಂಡಿದ್ದ ಕಾಂಗ್ರೆಸ್ ಶಾಸಕರ ನಡುವೆಯೇ ಈಗ ಸಚಿವ ಸ್ಥಾನಕ್ಕಾಗಿ ಜಟಾಪಟಿ ಶುರುವಾಗಿದೆ. ಈ ಬಾರಿ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಶಾಸಕರು ಹೈ ಕಮಾಂಡ್‌ಗೆ ದುಂಬಾಲು ಬಿದ್ದಿದ್ದಾರೆ.

2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ; ಬಿಡದಿ ಟೌನ್‌ಶಿಪ್‌ಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ

2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಮಾಜಿ ಆಗ್ತಾರೆ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಮಿಸ್ಟರ್ ಡಿ.ಕೆ. ಶಿವಕುಮಾರ್ ಅಧಿಕಾರ ಯಾರಿಗೂ ಶಾಶ್ವತವಲ್ಲ, ಮಾತಾಡೋ ಮುನ್ನ ಎಚ್ಚರಿಕೆಯಿಂದ ಮಾತನಾಡಿ, ದುರಹಂಕಾರ ಬೇಡ ಎಂದು ಡಿ.ಕೆ. ಶಿವಕುಮಾರ್‌ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್‌ ದುರಂತಕ್ಕೀಡಾಗಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕೊಳ್ಳಂಗಿಯ ಜಂಪ ಮಹೋತ್ಸವ

ಕೊಳ್ಳಂಗಿಯ ಜಂಪ ಮಹೋತ್ಸವ

ಧರ್ಮದೇವತೆಯ ಸಾಕ್ಷಿಯಾಗಿ ನಡೆಯುತ್ತಿದ್ದ ಈ ತೀರ್ಪುಗಳಿಗೆ ಎಲ್ಲರೂ ತಲೆಬಾಗು ತ್ತಿದ್ದರು. ಈ ಸಹಬಾಳ್ವೆ ಮತ್ತು ಬುದ್ಧಿವಂತಿಕೆಯ ಫಲವಾಗಿಯೇ ಕೊಳ್ಳಂಗಿಗೆ ಕಟ್ಟೆಮನೆ ಎಂಬ ಗೌರವ ಯುತ ಹೆಸರು ಬಂದಿದೆ. ಇದು ಕೇವಲ ಒಂದು ಜನಾಂಗಕ್ಕೆ ಸೀಮಿತವಾಗದೆ, ಇಡೀ ಪ್ರಾಂತ್ಯದ ಜನರಿಗೆ ಭರವಸೆಯ ತಾಣವಾಗಿತ್ತು.

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಅಮ್ಮನ ಜತೆ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಟೆಕ್ಕಿ ಯುವತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಟೆಕ್ಕಿ ಯುವತಿ ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ. ತಾಯಿಯ ಜತೆ ನಗುತ್ತಾ ಮಾತನಾಡುತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಮಹಿಳೆಯರಿಗೆ ಎಚ್‌.ಡಿ. ಕುಮಾರಸ್ವಾಮಿ ಕಿವಿಮಾತು

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದ ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ನಿಮ್ಮ ತಲೆಯ ಮೇಲೆ ಹೊರೆ ಹೊರೆಸಿ 2,000 ರುಪಾಯಿ ಗ್ಯಾರಂಟಿ ಕೊಡುತ್ತಿದೆ. ದಿನ ಬೆಳಗ್ಗೆ ಬೆಲೆ ಏರಿಕೆ ಮಾಡಿ ತೆರಿಗೆ ಏರಿಸಿದರೆ 2,000 ರುಪಾಯಿ ಏನು ಬಂತು? ನಾನಾದರೆ 5,000 ರುಪಾಯಿ ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ 5,000 ರುಪಾಯಿ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗಂಡನ ಬಿಟ್ಟು ಪ್ರಿಯಕರನ ಜತೆ ಮಹಿಳೆ ಎಸ್ಕೇಪ್‌; ಆಸ್ಪತ್ರೆಗೆ ಹೋಗ್ತೀನಿ ಅಂತ ಹೇಳಿ ಹೋಗಿ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡಳು! Video

ಗಂಡನ ಬಿಟ್ಟು ಪ್ರಿಯಕರನಿಂದ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡ ಮಹಿಳೆ!

ಸಿನಿಮೀಯ ಶೈಲಿಯಲ್ಲಿ ನಡೆದಿರುವ ಮಹಿಳೆ ಮತ್ತು ಪ್ರಿಯಕರನ ಮದುವೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಆರೋಗ್ಯ ಸರಿಯಿಲ್ಲ, ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಗಂಡನಿಗೆ ಹೇಳಿ ಹೋಗಿದ್ದ ಮಹಿಳೆ ಲವರ್‌ ಜತೆ ಎಸ್ಕೇಪ್‌ ಆಗಿದ್ದಾಳೆ. ಕಾರಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಮಹಿಳೆಗೆ ಪ್ರಿಯಕರ ತಾಳಿ ಕಟ್ಟಿ, ಕಾಲುಂಗರ ತೊಡಿಸಿದ್ದಾನೆ.

Hassan News: ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ; ಅಂಗಾಂಗ ದಾನದ ಮೂಲಕ ಐವರ ಬಾಳಿಗೆ ಬೆಳಕಾದ ಹಾಸನ ಯುವತಿ

ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ

ಅರಸೀಕೆರೆ ತಾಲೂಕು ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ಎಂಬಾಕೆಗೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿತ್ತು. ಆಕೆಯ ಅಂಗಾಂಗ ದಾನ ಮಾಡಲು ಪೋಷಕರು ಒಪ್ಪಿದ್ದು, ತನ್ನ ಜೀವನದ ಕೊನೆಯ ಕ್ಷಣದಲ್ಲಿ ಅಂಗಾಂಗ ದಾನದ ಮೂಲಕ ಮಾನವೀಯತೆಯ ಮಹತ್ತರ ಸಂದೇಶ ಸಾರಿದ್ದಾಳೆ.

Hassan news: ದೇವಸ್ಥಾನದಿಂದ ಮರಳುತ್ತಿದ್ದ ದಂಪತಿ ಮೇಲೆ ಶಾಸಕ ಶಿವಲಿಂಗೇಗೌಡರ ಬಂಟನ ಪುತ್ರ ಸಮಿವುಲ್ಲಾನಿಂದ ಮಾರಕ ಹಲ್ಲೆ

ದೇವಸ್ಥಾನದಿಂದ ಮರಳುತ್ತಿದ್ದ ದಂಪತಿ ಮೇಲೆ ಸಮಿವುಲ್ಲಾನಿಂದ ಮಾರಕ ಹಲ್ಲೆ

ಸಣ್ಣ ವಿಚಾರವನ್ನೇ ಮುಂದಿಟ್ಟುಕೊಂಡು ದಂಪತಿ ತೆರಳುತ್ತಿದ್ದ ಬೈಕ್‌ ಅಡ್ಡಗಟ್ಟಿ ಸೂಫಿಯಾನ್‌ ಸಮಿವುಲ್ಲಾ ವ್ಯಕ್ತಿಯನ್ನು ಹಿಡಿದು ಎಳೆದಾಡಿ ಮನಬಂದಂತೆ ಥಳಿಸಿದ್ದಾನೆ. ಇಷ್ಟಕ್ಕೂ ಸುಮ್ಮನಾಗದೇ ಫೋನ್‌ ಮಾಡಿ ತನ್ನ ಪುಂಡರ ಗ್ಯಾಂಗ್‌ ಕರೆಸಿ ಹಲ್ಲೆ ಮಾಡಿಸಿದ್ದಾನೆ. ಪತ್ನಿ ಕೈಮುಗಿದು ಬೇಡಿಕೊಂಡರೂ ಬಿಡದೇ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ,

ವಯಸ್ಸು 40 ದಾಟಿದ್ರೂ ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆ ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿರುವ ಮಗ, ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಸದ್ಯ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ತಾಯಿಯ ಸ್ಥಿತಿ ಗಂಭೀರವಾಗಿದೆ.

HD Devegowda: ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ದೇವೇಗೌಡರ ಮ್ಯೂಸಿಯಂನಲ್ಲಿ ದೇವೇಗೌಡರ ಜೀವನ ಚರಿತ್ರೆಯನ್ನ ಬಿಂಬಿಸುವ ಸಂಪೂರ್ಣ ಮಾಹಿತಿ ಇರಲಿದೆ. ಬರೋಬ್ಬರಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮ್ಯೂಸಿಯಂ ನಿರ್ಮಾಣವಾಗಲಿದೆ. ದೇವೇಗೌಡರ ಪುತ್ರ, ಮಾಜಿ ಸಚಿವ ಹೆಚ್.ಡಿ. ರೇವಣ್ಣ (HD Revanna) ಮ್ಯೂಸಿಯಂಗೆ ಅಗತ್ಯವಾದ ಭೂಮಿಯನ್ನ ಕೊಡುಗೆಯಾಗಿ ನೀಡಿದ್ದಾರೆ.

Hassan Accident: ಹಾಸನದಲ್ಲಿ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು; SSLC ಪರೀಕ್ಷೆ ಬರೆದು ಹೋಗುತ್ತಿದ್ದಾಗ ದುರ್ಘಟನೆ

ಹಾಸನದಲ್ಲಿ ಕಾರು ಡಿಕ್ಕಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

Loading...