ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಹಾಸನ
Murder Case: ಕಾರು ಸಮೇತ ಕೆರೆಗೆ ತಳ್ಳಿ ಪ್ರೇಯಸಿಯ ಕೊಲೆ, ವಿವಾಹಿತೆಗೆ ಯಮನಾದ ಪ್ರಿಯತಮ

ಕಾರು ಸಮೇತ ಕೆರೆಗೆ ತಳ್ಳಿ ಪ್ರೇಯಸಿಯ ಕೊಲೆ, ವಿವಾಹಿತೆಗೆ ಯಮನಾದ ಪ್ರಿಯತಮ

Hassan: ಬೇಲೂರು ತಾಲೂಕಿನ ಚಂದನಹಳ್ಳಿ ಕೆರೆಗೆ ಶ್ವೇತಾಳನ್ನು ಕಾರಿನ ಸಮೇತ ಆರೋಪಿ ರವಿ ತಳ್ಳಿದ್ದಾನೆ. ಘಟನೆಯ ಬಳಿಕ, ರವಿ ತಾನು ಈಜಿ ದಡ ಸೇರಿದ್ದೇನೆ ಎಂದು ಹೇಳಿಕೊಂಡು, ಗೆಳತಿ ಶ್ವೇತಾ ಕಾರಿನೊಳಗೆ ಸಿಲುಕಿಕೊಂಡಿದ್ದಾಳೆ ಎಂದು ಆಕಸ್ಮಿಕ ಘಟನೆಯಂತೆ ಚಿತ್ರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

Heavy Rain in Hassan: ಹಾಸನದಲ್ಲಿ ಮಳೆ ಆರ್ಭಟ; 15 ಕಡೆ ಭೂಕುಸಿತವಾಗಿ ರೈಲು ಸಂಚಾರ ಸ್ಥಗಿತ

ಹಾಸನದಲ್ಲಿ ಮಳೆ ಆರ್ಭಟ; 15 ಕಡೆ ಭೂಕುಸಿತ, ರೈಲು ಸಂಚಾರ ಸ್ಥಗಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಎಡಕುಮಾರಿ ಬಳಿ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಜಾರಿಬಿದ್ದ ಪರಿಣಾಮ, ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಳಿ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.

Hassan Murder Case: ತಂದೆಯ ಸಾವಿನಿಂದಲೇ ಬಯಲಾಯ್ತು ಮಗನ ಕೊಲೆಯ ರಹಸ್ಯ!  ಕಿರಿಯ ಮಗನೇ ತೋರಿಸಿದ ಅಸ್ಥಿಪಂಜರ

ತಂದೆಯ ಸಾವಿನಿಂದಲೇ ಬಯಲಾಯ್ತು ಮಗನ ಕೊಲೆಯ ರಹಸ್ಯ!

Hassan: ಹಿರಿಯ ಮಗನ ಬಗ್ಗೆ ಯಾರಾದರೂ ವಿಚಾರಿಸಿದರೆ, ಐವತ್ತು ಸಾವಿರ ರೂಪಾಯಿ ಹಣ ಕೊಟ್ಟು ಕಳುಹಿಸಿದ್ದೇನೆ. ಬೆಂಗಳೂರಿನಲ್ಲಿ ಎಲ್ಲೋ ಇದ್ದಾನೆ ಎಂದು ತಂದೆ ಗಂಗಾಧರ್ ಹೇಳುತ್ತಿದ್ದ. ಆದರೆ ಇದೀಗ ಗಂಗಾಧರ್‌ ಸಾವಿನ ನಂತರ ಮಗನ ಕೊಲೆ ರಹಸ್ಯ ಬಯಲಾಗಿದೆ.

Physical Abuse: ಬುದ್ಧಿಮಾಂದ್ಯ ಯುವತಿಯನ್ನೂ ಬಿಡದ ದುರುಳರು, ಅತ್ಯಾಚಾರಗೈದು ವಿಡಿಯೋ ಸಹೋದರನಿಗೆ ಕಳಿಸಿ ವಿಕೃತಿ

ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ, ವಿಡಿಯೋ ಸೋದರನಿಗೆ ಕಳಿಸಿ ವಿಕೃತಿ

ಪಾತಕಿಗಳು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Prajwal Revanna Case: ಪ್ರಜ್ವಲ್‌ ರೇವಣ್ಣ ಶಿಕ್ಷೆಯ ಪ್ರಮಾಣ ಕುರಿತ ವಿಚಾರಣೆ ಪೂರ್ಣ, ಇಂದು ಮಧ್ಯಾಹ್ನ 2.45ಕ್ಕೆ ಆದೇಶ

ಪ್ರಜ್ವಲ್‌ ಶಿಕ್ಷೆ ಪ್ರಮಾಣ ಕುರಿತು ವಿಚಾರಣೆ, ಮಧ್ಯಾಹ್ನ 2.45ಕ್ಕೆ ಆದೇಶ

Physical Abuse: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್‌ ರೇವಣ್ಣನ ಶಿಕ್ಷೆ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ ಮಧ್ಯಾಹ್ನ 2.45ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು.

Prajwal Revanna‌ case: ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪು

ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಪ್ರಕರಣದ ತೀರ್ಪು

Physical Abuse: ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

Prajwal Revanna case: ಅತ್ಯಾಚಾರ ಪ್ರಕರಣದ ತೀರ್ಪು ಆ.1ಕ್ಕೆ ಮುಂದೂಡಿದ ನ್ಯಾಯಾಲಯ

ಅತ್ಯಾಚಾರ ಪ್ರಕರಣದ ತೀರ್ಪು ಆ.1ಕ್ಕೆ ಮುಂದೂಡಿದ ನ್ಯಾಯಾಲಯ

Physical Abuse: ವಿಚಾರಣೆ ಸಂದರ್ಭದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಕೆಲವು ತಾಂತ್ರಿಕ ಸಾಕ್ಷ್ಯಗಳ ಕುರಿತು ಸ್ಪಷ್ಟನೆಯನ್ನು ನ್ಯಾಯಾಧೀಶರು ಬಯಸಿದ್ದಾರೆ. ವಿಚಾರಣೆ ಪ್ರಕ್ರಿಯೆ ಸಂದರ್ಭದಲ್ಲಿ ಪ್ರಜ್ವಲ್‌ ರೇವಣ್ಣ ಪದೇ ಪದೆ ಕಣ್ಣು ಮುಚ್ಚಿ ಏನನ್ನೋ ಪಠಿಸುತ್ತಿದ್ದರು ಎಂದು ಗೊತ್ತಾಗಿದೆ.

Prajwal Revanna Case:  ಅತ್ಯಾಚಾರ ಪ್ರಕರಣದಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಭವಿಷ್ಯ ಬರೆಯಲಿರುವ ಕೋರ್ಟ್

ಅತ್ಯಾಚಾರ ಪ್ರಕರಣ: ಇಂದು ಪ್ರಜ್ವಲ್‌ ರೇವಣ್ಣ ಭವಿಷ್ಯ ಬರೆಯಲಿರುವ ಕೋರ್ಟ್

ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

CM Siddaramaiah: ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ- ಸಿಎಂ ಸಿದ್ದರಾಮಯ್ಯ

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ

CM Siddaramaiah: ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

Prajwal Revanna: ಅತ್ಯಾಚಾರ ಪ್ರಕರಣ; 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಪ್ರಕರಣ; 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಈ ಹಿಂದೆ ಜಾಮೀನಿಗಾಗಿ ಪ್ರಜ್ವಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ವಿಚಾರಣಾಧೀನ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚಿಸಿತ್ತು. ಆದರೆ, ಇದೀಗ ಪ್ರಜ್ವಲ್‌ ಜಾಮೀನು ಅರ್ಜಿಯನ್ನು ಎರಡನೇ ಬಾರಿಯೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ.

Car Accident: ಹಾಸನದಲ್ಲಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಹಾಸನದಲ್ಲಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರ ಸಾವು

Car Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ನಡೆದಿದೆ. ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Food poison: ಚಿಕ್ಕತಿರುಪತಿ ದೇವಸ್ಥಾನ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಭಕ್ತರು ಅಸ್ವಸ್ಥ

ಹಾಸನ ಚಿಕ್ಕತಿರುಪತಿ ಜಾತ್ರೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಭಕ್ತರು ಅಸ್ವಸ್ಥ

Food Poison: ಜಾತ್ರೆಯ ಸಂದರ್ಭದಲ್ಲಿ, ದೇವಾಲಯದ ಹೊರಗೆ ಖಾಸಗಿ ಸಂಸ್ಥೆಯೊಂದರಿಂದ ಮೊಸರು ಮತ್ತು ಬಿಸಿಬೇಳೆಬಾತ್ ರೂಪದಲ್ಲಿ ಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸೇವಿಸಿದ ಕೆಲವೇ ಗಂಟೆಗಳಲ್ಲಿ, ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ಹಲವು ಭಕ್ತರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು.

Drowned: ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

Drowned: ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ.

Double Murder Case: ಹೊಳೆನರಸೀಪುರದಲ್ಲಿ ತಂದೆ, ಅಣ್ಣನನ್ನು ಕೊಚ್ಚಿ ಕೊಲೆ ಮಾಡಿದ ಪಾಪಿ

ಹೊಳೆನರಸೀಪುರದಲ್ಲಿ ತಂದೆ, ಅಣ್ಣನನ್ನು ಕೊಚ್ಚಿ ಕೊಲೆ ಮಾಡಿದ ಪಾಪಿ

Double Murder Case: ತಂದೆ ದೇವೇಗೌಡ ಹಾಗೂ ಅಣ್ಣ ಮಂಜುನಾಥ್ ಎಂಬವರನ್ನು ಮೋಹನ್ ಎಂಬಾತ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದಾನೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

Heart Attack: ಹಾಸನದಲ್ಲಿ ಹೃದಯಾಘಾತಗಳಿಗೆ ಅತಿಯಾದ ಮಾಂಸಾಹಾರ ಕಾರಣ: ಎಚ್‌ಡಿ ರೇವಣ್ಣ

ಹಾಸನದಲ್ಲಿ ಹೃದಯಾಘಾತಗಳಿಗೆ ಅತಿಯಾದ ಮಾಂಸಾಹಾರ ಕಾರಣ: ಎಚ್‌ಡಿ ರೇವಣ್ಣ

Heart Attack: ಜನತೆ ಬೀಗರೂಟದಲ್ಲಿ ಅತಿಯಾಗಿ ರೆಡ್ ಮೀಟ್ ಸೇವನೆ ಮಾಡುತ್ತಿದ್ದಾರೆ. ಅಲ್ಲದೇ ಹಾಸನ ಜಿಲ್ಲೆಯಲ್ಲಿ ಬಾರ್ ಆಂಡ್ ರೆಸ್ಟೋರೆಂಟ್ ಗಳ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆದಿದ್ದಾರೆ. ಬಾರ್‌ನಲ್ಲಿ ಕುಡಿದು ಅನಾಹುತವಾಗುತ್ತಿದೆ ಎಂದು ಕಿಡಿಕಾರಿದರು.

Heart Attack: ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

Heart Attack: ಸುರತ್ಕಲ್ ಕೃಷ್ಣಾಪುರದ ನಿವಾಸಿ ಅಫ್ತಾಬ್ (18) ಎಂಬ ವಿದ್ಯಾರ್ಥಿ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಇನ್ಸ್ಟಿಟ್ಯೂಟ್‌ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

Self Harming: ಮ್ಯಾನೇಜರ್‌ನಿಂದ ಕಿರುಕುಳ, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಆತ್ಮಹತ್ಯೆ ಯತ್ನ

ಮ್ಯಾನೇಜರ್‌ನಿಂದ ಕಿರುಕುಳ, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಆತ್ಮಹತ್ಯೆ ಯತ್ನ

Self Harming: ಡಿಪೋ ಮ್ಯಾನೇಜರ್ ಶಾಜಿಯಾ ಬಾನು ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಕೆಲಸದ ವಿಷಯವಾಗಿ ಹರೀಶ್ ಮತ್ತು ಶಾಜಿಯ ಬಾನು ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Murder Case: ಲವರ್‌ಗಾಗಿ ಆಕೆಯ ಪತಿಯನ್ನು ಕೊಂದು ರಸ್ತೆ ಬದಿ ಮಲಗಿಸಿದ ಶಾಲಾ ವಾಹನ ಚಾಲಕ

ಲವರ್‌ಗಾಗಿ ಆಕೆಯ ಪತಿಯನ್ನು ಕೊಂದು ರಸ್ತೆ ಬದಿ ಮಲಗಿಸಿದ ಶಾಲಾ ವಾಹನ ಚಾಲಕ

Murder Case: ಹೆದ್ದಾರಿ ಪಕ್ಕದಲ್ಲಿ ಮಧು ಶವ ಕಂಡ ಸ್ಥಳೀಯರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳೀಯರು, ಮಧು ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು. ಆದರೆ, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ, ಮಧು ಅಪಘಾತದಿಂದ ಮೃತಪಟ್ಟಿಲ್ಲ, ಕೊಲೆಯಾಗಿದ್ದಾನೆ ಎಂದು ಗೊತ್ತಾಗಿದೆ.

Heart Attack: ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಕ್ರಮ: ಸಚಿವ ಕೆ.ಎನ್‌. ರಾಜಣ್ಣ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಕ್ರಮ: ಸಚಿವ ಕೆ.ಎನ್‌. ರಾಜಣ್ಣ

Hassan News: ಹಾಸನ ಜಿಲ್ಲೆಯಂತೆ ಬೇರೆ ಜಿಲ್ಲೆಗಳಲ್ಲೂ ಹೃದಯಾಘಾತವಾಗುತ್ತಿದೆ. ಸತ್ಯ ತಿಳಿದು ವರದಿ ಮಾಡಿದರೆ ನನ್ನ ಅಭ್ಯಂತರವಿಲ್ಲ. ಆದರೆ ಸುಳ್ಳು ಮಾಹಿತಿ ಹರಡುವುದು ಸರಿಯಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಲ್ಲಿ ಹೃದಯ ತಪಾಸಣೆ ನಡೆಸಲಾಗುತ್ತದೆ ಎಂದು ಸಹಕಾರ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

Heart Attack: ಹಾಸನಕ್ಕೆ ಮತ್ತೊಂದು ಶಾಕ್‌; ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ ಸಂಭವಿಸುತ್ತಿರುವ ಸರಣಿ ಸಾವುಗಳು (Death) ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ ಜಾವ ಹಠಾತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Heart Attack: ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿಯಲ್ಲಿದೆ ಆಘಾತಕರ ಅಂಶ!

ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿ

Heart Attack: ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳು ಅಡಕವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಿಗೆ ಕೊಂಚ ಹೃದಯ ಸಮಸ್ಯೆ ಕಾಡುತ್ತಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಆದರೆ, ಕೊರೋನಾ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ ಎಂದು ವರದಿಯಲ್ಲಿದೆ.

Heart attack: ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ನಿಂದ ಮತ್ತೊರ್ವ ಯುವಕ ಸಾವು; ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ನಿಂದ ಮತ್ತೊರ್ವ ಯುವಕ ಸಾವು

Hassan Heart attack cases: ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿರುವ ಮದನ್‌, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಾಗಿದ್ದರು.

STEMI Program: ರಾಜ್ಯಾದ್ಯಂತ ಸ್ಟೆಮಿ ಯೋಜನೆ ವಿಸ್ತರಣೆ; ಇನ್ನುಮುಂದೆ ತಾಲೂಕು ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ ಚಿಕಿತ್ಸೆ

ಇನ್ನುಮುಂದೆ ತಾಲೂಕು ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ ಚಿಕಿತ್ಸೆ

Heart attack cases: ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೆ ಸ್ಟೆಮಿ ಯೋಜನೆಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಇನ್ನುಮುಂದೆ ತಾಲೂಕು ಆಸ್ಪತ್ರೆಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ನೀಡಲು ವ್ಯವಸ್ಥೆಯಾಗಲಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮಾಹಿತಿ ನೀಡಿದ್ದಾರೆ.

Heart Failure: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ನಾಲ್ವರು ಸಾವು, 40 ದಿನಗಳಲ್ಲಿ 22 ಬಲಿ

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೆ ನಾಲ್ವರು ಸಾವು, 40 ದಿನಗಳಲ್ಲಿ 22 ಬಲಿ

Heart Failure: ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ ಒಟ್ಟು 22 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇತ್ತೀಚಿಗೆ ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರು, ಮಹಿಳೆಯರಲ್ಲಿ ಈ ರೀತಿಯ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಣ್ಣ ವಯಸ್ಸಿನವರು ದೊಡ್ಡ ಸಂಖ್ಯೆಯಲ್ಲಿ ಮೃತಪಡುತ್ತಿರುವುದು ಕಳವಳ ಮೂಡಿಸಿದೆ.

Loading...