ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾಸನ

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಅಮ್ಮನ ಜತೆ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಟೆಕ್ಕಿ ಯುವತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಟೆಕ್ಕಿ ಯುವತಿ ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ. ತಾಯಿಯ ಜತೆ ನಗುತ್ತಾ ಮಾತನಾಡುತ್ತಿದಾಗ ಏಕಾಏಕಿ ಕುಸಿದು ಬಿದ್ದಿದ್ದ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಮಹಿಳೆಯರಿಗೆ ಎಚ್‌.ಡಿ. ಕುಮಾರಸ್ವಾಮಿ ಕಿವಿಮಾತು

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದ ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ನಿಮ್ಮ ತಲೆಯ ಮೇಲೆ ಹೊರೆ ಹೊರೆಸಿ 2,000 ರುಪಾಯಿ ಗ್ಯಾರಂಟಿ ಕೊಡುತ್ತಿದೆ. ದಿನ ಬೆಳಗ್ಗೆ ಬೆಲೆ ಏರಿಕೆ ಮಾಡಿ ತೆರಿಗೆ ಏರಿಸಿದರೆ 2,000 ರುಪಾಯಿ ಏನು ಬಂತು? ನಾನಾದರೆ 5,000 ರುಪಾಯಿ ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ 5,000 ರುಪಾಯಿ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗಂಡನ ಬಿಟ್ಟು ಪ್ರಿಯಕರನ ಜತೆ ಮಹಿಳೆ ಎಸ್ಕೇಪ್‌; ಆಸ್ಪತ್ರೆಗೆ ಹೋಗ್ತೀನಿ ಅಂತ ಹೇಳಿ ಹೋಗಿ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡಳು! Video

ಗಂಡನ ಬಿಟ್ಟು ಪ್ರಿಯಕರನಿಂದ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡ ಮಹಿಳೆ!

ಸಿನಿಮೀಯ ಶೈಲಿಯಲ್ಲಿ ನಡೆದಿರುವ ಮಹಿಳೆ ಮತ್ತು ಪ್ರಿಯಕರನ ಮದುವೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಆರೋಗ್ಯ ಸರಿಯಿಲ್ಲ, ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಗಂಡನಿಗೆ ಹೇಳಿ ಹೋಗಿದ್ದ ಮಹಿಳೆ ಲವರ್‌ ಜತೆ ಎಸ್ಕೇಪ್‌ ಆಗಿದ್ದಾಳೆ. ಕಾರಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಮಹಿಳೆಗೆ ಪ್ರಿಯಕರ ತಾಳಿ ಕಟ್ಟಿ, ಕಾಲುಂಗರ ತೊಡಿಸಿದ್ದಾನೆ.

Hassan News: ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ; ಅಂಗಾಂಗ ದಾನದ ಮೂಲಕ ಐವರ ಬಾಳಿಗೆ ಬೆಳಕಾದ ಹಾಸನ ಯುವತಿ

ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಮೋನಿಕಾ

ಅರಸೀಕೆರೆ ತಾಲೂಕು ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ಎಂಬಾಕೆಗೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿತ್ತು. ಆಕೆಯ ಅಂಗಾಂಗ ದಾನ ಮಾಡಲು ಪೋಷಕರು ಒಪ್ಪಿದ್ದು, ತನ್ನ ಜೀವನದ ಕೊನೆಯ ಕ್ಷಣದಲ್ಲಿ ಅಂಗಾಂಗ ದಾನದ ಮೂಲಕ ಮಾನವೀಯತೆಯ ಮಹತ್ತರ ಸಂದೇಶ ಸಾರಿದ್ದಾಳೆ.

Hassan news: ದೇವಸ್ಥಾನದಿಂದ ಮರಳುತ್ತಿದ್ದ ದಂಪತಿ ಮೇಲೆ ಶಾಸಕ ಶಿವಲಿಂಗೇಗೌಡರ ಬಂಟನ ಪುತ್ರ ಸಮಿವುಲ್ಲಾನಿಂದ ಮಾರಕ ಹಲ್ಲೆ

ದೇವಸ್ಥಾನದಿಂದ ಮರಳುತ್ತಿದ್ದ ದಂಪತಿ ಮೇಲೆ ಸಮಿವುಲ್ಲಾನಿಂದ ಮಾರಕ ಹಲ್ಲೆ

ಸಣ್ಣ ವಿಚಾರವನ್ನೇ ಮುಂದಿಟ್ಟುಕೊಂಡು ದಂಪತಿ ತೆರಳುತ್ತಿದ್ದ ಬೈಕ್‌ ಅಡ್ಡಗಟ್ಟಿ ಸೂಫಿಯಾನ್‌ ಸಮಿವುಲ್ಲಾ ವ್ಯಕ್ತಿಯನ್ನು ಹಿಡಿದು ಎಳೆದಾಡಿ ಮನಬಂದಂತೆ ಥಳಿಸಿದ್ದಾನೆ. ಇಷ್ಟಕ್ಕೂ ಸುಮ್ಮನಾಗದೇ ಫೋನ್‌ ಮಾಡಿ ತನ್ನ ಪುಂಡರ ಗ್ಯಾಂಗ್‌ ಕರೆಸಿ ಹಲ್ಲೆ ಮಾಡಿಸಿದ್ದಾನೆ. ಪತ್ನಿ ಕೈಮುಗಿದು ಬೇಡಿಕೊಂಡರೂ ಬಿಡದೇ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ,

ವಯಸ್ಸು 40 ದಾಟಿದ್ರೂ ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆ ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿರುವ ಮಗ, ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಸದ್ಯ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ತಾಯಿಯ ಸ್ಥಿತಿ ಗಂಭೀರವಾಗಿದೆ.

HD Devegowda: ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ದೇವೇಗೌಡರ ಮ್ಯೂಸಿಯಂನಲ್ಲಿ ದೇವೇಗೌಡರ ಜೀವನ ಚರಿತ್ರೆಯನ್ನ ಬಿಂಬಿಸುವ ಸಂಪೂರ್ಣ ಮಾಹಿತಿ ಇರಲಿದೆ. ಬರೋಬ್ಬರಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮ್ಯೂಸಿಯಂ ನಿರ್ಮಾಣವಾಗಲಿದೆ. ದೇವೇಗೌಡರ ಪುತ್ರ, ಮಾಜಿ ಸಚಿವ ಹೆಚ್.ಡಿ. ರೇವಣ್ಣ (HD Revanna) ಮ್ಯೂಸಿಯಂಗೆ ಅಗತ್ಯವಾದ ಭೂಮಿಯನ್ನ ಕೊಡುಗೆಯಾಗಿ ನೀಡಿದ್ದಾರೆ.

Hassan Accident: ಹಾಸನದಲ್ಲಿ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು; SSLC ಪರೀಕ್ಷೆ ಬರೆದು ಹೋಗುತ್ತಿದ್ದಾಗ ದುರ್ಘಟನೆ

ಹಾಸನದಲ್ಲಿ ಕಾರು ಡಿಕ್ಕಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದರಿಂದ ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಸಕಲೇಶಪುರದಲ್ಲಿ ಧಾರ್ಮಿಕ ಶಿಷ್ಟಾಚಾರ ಉಲ್ಲಂಘನೆ: ಶೂ ಧರಿಸಿ ಪ್ರಿವೆಡ್ಡಿಂಗ್ ಫೋಟೊಶೂಟ್ ನಡೆಸುತ್ತಿದ್ದ ಛಾಯಾಗ್ರಾಹಕರ ಮೇಲೆ  ಹಲ್ಲೆ

ಪ್ರಿವೆಡ್ಡಿಂಗ್ ಫೋಟೊಶೂಟ್: ಛಾಯಾಗ್ರಾಹಕರ ಮೇಲೆ ಹಲ್ಲೆ

ಪ್ರಿವೆಡ್ಡಿಂಗ್ ಫೊಟೋಶೂಟ್ ವಿವಾದಕ್ಕೆ ತಿರುಗಿ ಹಿಂಸಾಚಾರಕ್ಕೆ ಕಾರಣವಾದ ಘಟನೆ ಸಕಲೇಶಪುರ ತಾಲೂಕಿನ ದಟ್ಟವಾದ ಐತಿಹಾಸಿಕ ಬೆಟ್ಟದ ಮೇಲಿರುವ ಭೈರವೇಶ್ವರ ದೇವಾಲಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸ್ಥಳೀಯರು ವೃತ್ತಿಪರ ಛಾಯಾಗ್ರಾಹಕರ ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Murder Case: ಚಿಲ್ಲರೆ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ ಕೊಂದು ಸುಟ್ಟುಹಾಕಿದ ಐವರ ಸೆರೆ

ಚಿಲ್ಲರೆ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನ ಕೊಂದು ಸುಟ್ಟ ಐವರ ಸೆರೆ

ಅರಸೀಕೆರೆ ತಾಲ್ಲೂಕಿನ ಕಾಡಯ್ಯನಕೊಪ್ಪಲು ಗ್ರಾಮದ ವರುಣ್(22) ನನ್ನ ಆತನ ಸ್ನೇಹಿತ ಶಶಾಂಕ್ ಹಾಗೂ ಇತರೆ 7 ಜನರು ಸೇರಿ ಮಾರ್ಚ್ 10ರಂದು ಅಪಹರಿಸಿದ್ದಾರೆ. 7 ಸಾವಿರ ರೂ ಸಾಲದ ಹಣ ಕೊಟ್ಟಿಲ್ಲ ಎಂದು ಕರೆದೊಯ್ದು ಕಿರಣ್ ಎಂಬಾತನ ತೋಟದ ಮನೆಯಲ್ಲಿಟ್ಟು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಮಾರ್ಚ್ 12ರವರೆಗೆ ಎರಡು ದಿನ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಇನ್ನಿಲ್ಲ

Former PM HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (88) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

Prajwal revanna Case: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ; ಮಾಜಿ ಸಂಸದನಿಗೆ ಆಪ್ತರಿಂದಲೇ ಖೆಡ್ಡಾ!

ಪ್ರಜ್ವಲ್‌ ರೇವಣ್ಣ ವಿಡಿಯೊ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿತ್ತು. ಅಶ್ಲೀಲ ವಿಡಿಯೊಗಳನ್ನು ಹಂಚಲು ಆರೋಪಿಗಳು ಹಾಸನದಲ್ಲೇ ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದ ವಿಚಾರ ತನಿಖೆಯ ವೇಳೆ ಬಹಿರಂಗವಾಗಿದೆ.

Murder Case: ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದು ತಿಳಿಹೇಳಿದವನ ಮೇಲೆ ಕಾರು ಓಡಿಸಿ ಹತ್ಯೆ

KA-01-ಎಂಎಫ್-2883 ನಂಬರ್‌ನ ಕಾರು ಓಡಿಸುತ್ತಿದ್ದ ವ್ಯಕ್ತಿಯೇ ಕೊಲೆಗಾರ. ಆತ ಅತಿ ವೇಗವಾಗಿ ಬಂದಿದ್ದಾನೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

9.34 ರುಪಾಯಿ ಬಾಕಿ ಕೇಳಿದ ಬ್ಯಾಂಕ್‌ಗೆ ಪಾಠ ಕಲಿಸಿದ ರೈತ: 10 ರುಪಾಯಿ ಕಟ್ಟಿ 66 ಪೈಸೆ ವಾಪಸ್ ನೀಡುವಂತೆ ಪಟ್ಟು

66 ಪೈಸೆಗಾಗಿ ಕೆನರಾ ಬ್ಯಾಂಕ್‌ನಲ್ಲಿ ಪಟ್ಟು ಹಿಡಿದ ರೈತ

Viral News: ಹಾಸನದಲ್ಲಿ ರೈತ ಮತ್ತು ಬ್ಯಾಂಕ್‌ ನಡುವೆ ವಿಚಿತ್ರ ವಿವಾದ ಉಂಟಾದ ಘಟನೆಯೊಂದು ನಡೆದಿದೆ.‌ 9 ರುಪಾಯಿ 34 ಪೈಸೆ ಸಾಲ ಕಟ್ಟುವಂತೆ ಕೆನರಾ ಬ್ಯಾಂಕ್‌ನಿಂದ ರೈತರೊಬ್ಬರಿಗೆ ಕರೆ ಬಂದಿತ್ತು.‌ ಈ ಹಿನ್ನೆಲೆಯಲ್ಲಿ 10 ರುಪಾಯಿ ಸಾಲ ಕಟ್ಟಿದ ರೈತ ಉಳಿದ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರ ವೈರಲ್‌ ಆಗುತ್ತಿದ್ಧಂತೆ ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ.

ಹಾಸನದಲ್ಲಿ ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌; ಸಾಲದ ಹೆಸರಲ್ಲಿ ವಂಚನೆ!

ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌

Hassan Bank Fraud Case: ಬ್ಯಾಂಕ್​​ನಲ್ಲಿ ಎಫ್‌ಡಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಲೇಡಿ ಬ್ಯಾಂಕ್​ ಮ್ಯಾನೇಜರ್ ಒಡ್ಡಿದ್ದಳು. ಅವರ ಮಾತು ನಂಬಿ ಬ್ಯಾಂಕ್‌ನಲ್ಲಿ ಜನ ಹಣ ಇಟ್ಟಿದ್ದಾರೆ. ಆದರೆ, ಎಫ್​ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್​​ ನೀಡಿಲ್ಲ ಎನ್ನಲಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌ ಆಗಿದ್ದಾಳೆ.

road accident: ಹೆಲ್ಮೆಟ್‌ ಧರಿಸದೆ ಬುಲೆಟ್‌ ಚಾಲನೆ; ಹಂಪ್‌ನಲ್ಲಿ ಬೈಕ್‌ ಎಗರಿ ಯುವತಿ ಸಾವು, ಇನ್ನೊಬ್ಬಾಕೆ ಗಂಭೀರ

ಹಂಪ್‌ನಲ್ಲಿ ಬೈಕ್‌ ಎಗರಿ ಬಿದ್ದು ಯುವತಿ ಸಾವು, ಇನ್ನೊಬ್ಬಾಕೆ ಗಂಭೀರ

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರೂ ರಸ್ತೆಗೆ ಚಿಮ್ಮಿ ಬಿದ್ದಿದ್ದಾರೆ. ಹೆಲ್ಮೆಟ್‌ ಧರಿಸದ ಪರಿಣಾಮ ತಲೆಗೆ ಏಟು ಬಿದ್ದು ಪ್ರಿಯಾ ಮೃತಪಟ್ಟಿದ್ದಾಳೆ. ಸ್ವಾತಿ ಸ್ಥಿತಿ ಗಂಭೀರವಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.

ಎಟಿಎಂಗಳಿಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಎಟಿಎಂಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಇಬ್ಬರ ವಿರುದ್ಧ ಕೇಸ್‌

Hassan News: ಹಾಸನದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ಹಾಕದೇ 3,40,28,200 ರೂ. ದುರುಪಯೋಗ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆ ಕೇಸ್‌ ಸುಖಾಂತ್ಯ; ಪ್ರಿಯಕರನನ್ನು ಬಿಟ್ಟು ಗಂಡನ ಮನೆಗೆ ಹೋಗಲು ಒಪ್ಪಿದ ಪ್ರಿಯಾಂಕ

ಪ್ರಿಯಕರನನ್ನು ಬಿಟ್ಟು ಗಂಡನ ಜತೆ ಹೋಗಲು ಒಪ್ಪಿದ ಪ್ರಿಯಾಂಕ

ನಾಪತ್ತೆ ನಾಟಕವಾಡಿ ಪ್ರಿಯಕರ ಡೇವಿಡ್‌ ಜತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಪ್ರಿಯಾಂಕ ಕೊನೆಗೂ ಗಂಡನ ಮನೆ ಸೇರಲು ಒಪ್ಪಿದ್ದಾಳೆ. ಹಾಸನದ ಸಾಂತ್ವನ ಕೇಂದ್ರದಿಂದ ತವರು ಮನೆಗೆ ಹೋಗಿ, ಅಲ್ಲಿಂದ ಗಂಡ ರುದ್ರೇಶ್‌ ಮನೆಗೆ ಹೋಗಲು ಒಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Road Accident: ಚನ್ನರಾಯಪಟ್ಟಣದಲ್ಲಿ ಸ್ಕೂಟಿ- ಬೈಕ್‌ ಡಿಕ್ಕಿ, ಇಬ್ಬರು ಸವಾರರ ಸಾವು

ಚನ್ನರಾಯಪಟ್ಟಣದಲ್ಲಿ ಸ್ಕೂಟಿ- ಬೈಕ್‌ ಡಿಕ್ಕಿ, ಇಬ್ಬರು ಸವಾರರ ಸಾವು

ಮತ್ತಿಘಟ್ಟ ಗ್ರಾಮದ ರಮೇಶ್ ಹಾಗೂ ಕಿರಣ್ (22) ಸ್ಕೂಟಿಯಲ್ಲಿ ಬರುತ್ತಿದ್ದು ಅವರ ಎದುರಿನಿಂದ ಎಂ.ಹೊನ್ನೇನಹಳ್ಳಿ ಗ್ರಾಮದ ಪುರುಷೋತ್ತಮ್ ಬೈಕ್‌ನಲ್ಲಿ (Bike) ಬಂದು ಡಿಕ್ಕಿ ಹೊಡೆದಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Woman Missing case: ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಕ್ಕಾಗಿ ಕೊಲೆ ಶಂಕೆ

ರಾಷ್ಟ್ರೀಯ ಹೆದ್ದಾರಿ 373ರ ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ರೂ. ಮೌಲ್ಯದ ಒಡವೆ ಆಕೆಯ ಮೈಮೇಲೆ ಮೇಲೆ ಇತ್ತು. ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಹಾಸನ ಮೆಗಾ ಡೇರಿ ವಿಸ್ತರಣೆಗೆ 150 ಕೋಟಿ ಸಾಲ ನೀಡಲು ಕೇಂದ್ರ ಸಮ್ಮತಿ; ಎಚ್‌ಡಿಕೆ ಮನವಿಗೆ ಸ್ಪಂದಿಸಿದ ಹೈನುಗಾರಿಕೆ ಸಚಿವ

ಹಾಸನ ಮೆಗಾ ಡೇರಿ ವಿಸ್ತರಣೆಗೆ 150 ಕೋಟಿ ಸಾಲ ನೀಡಲು ಕೇಂದ್ರ ಸಮ್ಮತಿ

HD Kumaraswamy: ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ (NDDB) ಮೂಲಕ 150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ತಮ್ಮ ಮನವಿಗೆ ಸ್ಪಂದಿಸಿದ ಹೈನುಗಾರಿಕೆ ಸಚಿವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.

Murder case: ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಶಬರಿಮಲೆಗೆ ಹೋಗಿ ಬಂದು ಮೊದಲ ಪತ್ನಿಯ ಕೊಲೆಗೈದ ಪಾತಕಿ!

ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ಮೊದಲ ಹೆಂಡತಿ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ.

ಶಬರಿಮಲೆಗೆ ಹೋಗಿ ಬಂದು ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿ; 2ನೇ ಮದುವೆ ಪ್ರಶ್ನಿಸಿದ್ದಕ್ಕೆ ಕೃತ್ಯ!

ಹಾಸನದಲ್ಲಿ ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿರಾಯ!

ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ಮದುವೆ ವಿಚಾರವಾಗಿ ಗಂಡ ಮತ್ತು ಹೆಂಡತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಪತ್ನಿಯ ಕಪಾಳಕ್ಕೆ ಗಂಡ ಹೊಡೆದಿದ್ದ‌. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Loading...