ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣಪತಿ
Haveri News: ಹಾವೇರಿ ನಗರದ ಹಳೆ ಕೋರ್ಟ್ ಆವರಣದಲ್ಲಿರುವ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್ಪಿ ಕೆ. ಸಮೀವುಲ್ಲಾ, ಠಾಣೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ, ತಾವೇ ಖುದ್ದಾಗಿ ಪೂಜಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದತೆಯ ಸಂದೇಶ ಮೆರೆದಿದ್ದಾರೆ. ಗುರುವಾರ ವಿಶೇಷ ಸತ್ಯನಾರಾಯಣ ಪೂಜೆ ಹಮ್ಮಿಕೊಂಡು ಕುಟುಂಬ ಸಮೇತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.