ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಹಾವೇರಿ

ಜ.31ರಂದು ತಡಸ ಗಾಯತ್ರಿ ಮಾತಾ ದೇಗುಲದ 26ನೇ ವಾರ್ಷಿಕೋತ್ಸವ

ಜ.31ರಂದು ತಡಸ ಗಾಯತ್ರಿ ಮಾತಾ ದೇಗುಲದ 26ನೇ ವಾರ್ಷಿಕೋತ್ಸವ

Shri Gayatri Tapobhoomi's 26th anniversary: ಹಾವೇರಿಯ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಶ್ರೀ ಗಾಯತ್ರೀ ತಪೋಭೂಮಿಯ 26ನೇ ವಾರ್ಷಿಕೋತ್ಸವ ಜ.31ರಂದು ನಡೆಯಲಿದೆ. ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಗಾಯತ್ರಿ ಮಾತಾ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Haveri News: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿ ಮೇಲೆ ಹಲ್ಲೆ, ಅಬಾರ್ಷನ್‌; ಮನೆಯವರ ಕೊಲೆಗೂ ಯತ್ನಿಸಿದ  ಧನದಾಹಿ ಪತಿ

ವರದಕ್ಷಿಣೆ ನೀಡುವಂತೆ ಪತ್ನಿ ಮನೆಗೆ ನುಗ್ಗಿ ಹಲ್ಲೆ

ವರದಕ್ಷಿಣೆ ತರುವಂತೆ ಪತ್ನಿ ಮಾತ್ರವಲ್ಲಆಕೆಯ ಮನೆಯವರ ಮೇಲೂ ಹಲ್ಲೆ ನಡೆಸಿದ ಪತಿ, ಆತನ ಮನೆಯವರು ತಲೆಮರೆಸಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳಾದ ಅಬೂಬಕ್ಕರ್‌ ಬಸೀರಸಾಬ ಪಾಳಾ, ಇಮಾಮಸಾಬ ಮಕಬೂಲಸಾಬ ಪಾಳಾ, ದಸ್ತಗಿರ ಪಾಳಾ, ಬಸೀರ ಸಾಬ ಪಾಳಾ, ತಾಯೇರಾ ಸೌದೆಗಾರ, ಪೈರೋಜಾ ನೂರಿ, ರುಕ್ಸಾನಾ ಸಾಣಿ, ಅನೀಸಾ ಮುನ್ನಸುಬದಾರ ಎಂದು ಗುರುತಿಸಲಾಗಿದೆ.

Haveri Accident: ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಜನಕ್ಕೆ ತೀವ್ರ ಗಾಯ

ಹಾವೇರಿ ಬಳಿ ಬಸ್-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾಗಿ 15 ಮಂದಿಗೆ ಗಾಯ

ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಅಪಘಾತ ನಡೆದಿದೆ. ಹಾವನೂರು ಜಾತ್ರೆಗೆಂದು ಹಳೇರಿತ್ತಿಯಿಂದ ಜನರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್, ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೇಡ್ತಿ-ವರದಾ ನದಿ ಜೋಡಣೆಗಾಗಿ ಪಕ್ಷಾತೀತವಾಗಿ ಹೋರಾಡೋಣ: ಬೊಮ್ಮಾಯಿ ಕರೆ

ಬೇಡ್ತಿ-ವರದಾ ನದಿ ಜೋಡಣೆಗಾಗಿ ಪಕ್ಷಾತೀತವಾಗಿ ಹೋರಾಡೋಣ: ಬೊಮ್ಮಾಯಿ

Bedti-Varada river linking project : ನಿಸರ್ಗವು ಮುಕ್ತವಾಗಿ ಎಲ್ಲವನ್ನು ಕೊಡುತ್ತದೆ. ಅದನ್ನು ಹಂಚಿಕೊಳ್ಳಲು ನಾವು ಪ್ರಯತ್ನ ಮಾಡುತ್ತೇವೆ. ಬೇಡ್ತಿ-ವರದಾ ಧರ್ಮಾ ನದಿ ಜೋಡಣೆ ನಮ್ಮ ರಾಜ್ಯದಲ್ಲಿಯೇ ನದಿ ಜೋಡಣೆ ಮಾಡುವ ಯೋಜನೆ. ಇದು ಅಂತಾರಾಜ್ಯ ನದಿ ಸಮಸ್ಯೆಯಾಗುವುದಿಲ್ಲೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಫೆ.13ಕ್ಕೆ ಹಾವೇರಿಯಲ್ಲಿ ಬೃಹತ್‌ ಸಾಧನಾ ಸಮಾವೇಶ; ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

ಫೆ.13ಕ್ಕೆ ಹಾವೇರಿಯಲ್ಲಿ ಸಾಧನಾ ಸಮಾವೇಶ; 1 ಲಕ್ಷ ಮಂದಿಗೆ ಹಕ್ಕು ಪತ್ರ

Sadhana Samavesha in Haveri: ಹಾವೇರಿಯಲ್ಲಿ ಫೆಬ್ರವರಿ 13ರಂದು ನಡೆಯಲಿರುವ ಬೃಹತ್‌ ಕಾರ್ಯಕ್ರಮದಲ್ಲಿ ಜಿಲ್ಲೆಯ 30 ಸಾವಿರ ಫಲಾನುಭವಿಗಳು ಸೇರಿ ಸುಮಾರು ಒಂದು ಲಕ್ಷ ಜನರಿಗೆ ಕಂದಾಯ ಹಕ್ಕು ಪತ್ರ, ಇ -ಪೌತಿ ಮತ್ತು ಬಕರ್‌ ಹುಕುಂ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

Haveri News: ಮನೆಗೆ ನುಗ್ಗಿ 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು: ಆರೋಪಿ ಬಂಧನ

ಮನೆಗೆ ನುಗ್ಗಿ 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು: ಆರೋಪಿ ಬಂಧನ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಾಪುರ ಗ್ರಾಮದ ಬಸವರಾಜ ಗೂಳ್ಳಪ್ಪ ಪೂಜಾರ ಎಂಬುವವರ ಮನೆಗೆ ನುಗ್ಗಿ 112 ಗ್ರಾಂ ಚಿನ್ನ ಹಾಗೂ 310 ಗ್ರಾಂ ಬೆಳ್ಳಿ ಒಟ್ಟು 13,69,000 ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಆಡೂರ ಪೊಲೀಸ್ ಠಾಣೆಯ ವಿಶೇಷ ತಂಡ ಬಂಧಿಸಿದೆ.

Haveri News: ಜಾತ್ರೆಯಲ್ಲಿ ಪ್ರಾಣಿ-ಪಕ್ಷಿ ಬಲಿ ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಆದೇಶ

ಜಾತ್ರೆಯಲ್ಲಿ ಪ್ರಾಣಿ-ಪಕ್ಷಿ ಬಲಿ ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಆದೇಶ

ಹಾವೇರಿ ತಾಲೂಕಿನ ಹಾವನೂರು ಗ್ರಾಮದ ದ್ಯಾಮವ್ವ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸುವ ಕುರಿತು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ಶ್ರೀ ದಯಾನಂದ ಸ್ವಾಮೀಜಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Haveri News: ಹಾವೇರಿಯಲ್ಲಿ ಗಾಂಜಾ ಮಾರಾಟ; ಮೂವರು ಆರೋಪಿಗಳ ಬಂಧನ

ಹಾವೇರಿಯಲ್ಲಿ ಗಾಂಜಾ ಮಾರಾಟ; ಮೂವರು ಆರೋಪಿಗಳ ಬಂಧನ

Haveri News: ಹಾವೇರಿ- ಗುತ್ತಲ ರಸ್ತೆಯ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹಾವೇರಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿತರಿಂದ 7935 ಗ್ರಾಂ ಅಂದರೆ ಅಂದಾಜು 3,17,400 ಮೌಲ್ಯದ ಗಾಂಜಾ ಜತೆಗೆ 3370 ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Hangal News: ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

Hangal Murder Case: ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಮುಡೂರು ಗ್ರಾಮದಲ್ಲಿ ಗುರುವಾರ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಹಾನಗಲ್‌ ಪೊಲೀಸ್ ಠಾಣೆಯ ವಿಶೇಷ ತಂಡ ಕಾರ್ಯಾಚರಣೆ ಮುಂದುವರಿಸಿದೆ.

Haveri News: ಓಟ ನಿಲ್ಲಿಸಿದ ಕರ್ಜಗಿ ಓಂ-112; ರಾಜ್ಯಮಟ್ಟದಲ್ಲಿ ಖ್ಯಾತಿಯಾಗಿದ್ದ ಹೋರಿ ಅನಾರೋಗ್ಯದಿಂದ ಸಾವು

ಓಟ ನಿಲ್ಲಿಸಿದ ಕರ್ಜಗಿ ಓಂ-112; ಅನಾರೋಗ್ಯದಿಂದ ಹೋರಿ ಸಾವು

ಕರ್ಜಗಿಯಲ್ಲಿ ಹೋರಿ ಹಬ್ಬದ ಪೈಲ್ವಾನ್ ಆಗಿ ಮಿಂಚಿದ್ದ ಹೋರಿ ಕರ್ಜಗಿ ಓಂ ನಂಬರ್ 112, ಕಳೆದ ನಾಲ್ಕು ದಿನಗಳ ಹಿಂದಷ್ಟೇ ಬಂಕಾಪುರದ ಹಬ್ಬ ಮುಗಿಸಿ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದೆ.

ಸಂಕ್ರಾಂತಿ ಸಂಭ್ರಮ: ನದಿ ತೀರದ ದೇವಸ್ಥಾನಗಳಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

ಸಂಕ್ರಾಂತಿ ಪ್ರಯುಕ್ತ ನದಿ ತೀರದ ದೇವಸ್ಥಾನಗಳಲ್ಲಿ ಜಾತ್ರೆ

Haveri News: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಗುರುವಾರ ಹಾವೇರಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವಗಳು ಜರುಗಿದವು. ಜತೆಗೆ ಮಕರ ಸಂಕ್ರಾಂತಿಯನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

Haveri News: ಹಾವೇರಿ ಜಿಲ್ಲೆಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ; ಹಲವು ಕಡೆ ಜಾತ್ರಾ ಮಹೋತ್ಸವ

ಹಾವೇರಿ ಜಿಲ್ಲೆಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ

ಹಾವೇರಿ ಜಿಲ್ಲಾದ್ಯಂತ ಉತ್ತರಾಯಣದ ಆರಂಭ ದಿನವಾದ ಮಕರ ಸಂಕ್ರಾಂತಿ ಹಬ್ಬ ಬುಧವಾರ ಸಡಗರ ಸಂಭ್ರಮ ನಡೆಯುತ್ತಿದೆ. ಹಲವು ಕಡೆ ಬಾರಿ ಜಾತ್ರಾ ಮಹೋತ್ಸವ ಜರುಗುತ್ತಿದ್ದು ಜಿಲ್ಲೆಯ ಜನರ ಸಂತಸ ಇಮ್ಮಡಿಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.

ರಾಜಕಾರಣ ಪಕ್ಕಕ್ಕಿಟ್ಟು, ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕೋಣ: ಡಿ.ಕೆ. ಶಿವಕುಮಾರ್

ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕೋಣ: ಡಿಕೆಶಿ

DK Shivakumar: ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ ಅವರೇ, ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಿಎಂ ಸುದೀರ್ಘ ಅವಧಿಯ ಅಧಿಕಾರದ ಕೊಡುಗೆಯಾಗಿ ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಿ: ಬೊಮ್ಮಾಯಿ

ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಘೋಷಿಸಲಿ: ಬೊಮ್ಮಾಯಿ

Basavaraj Bommai: ಹಾವೇರಿಯ ದೇವಗಿರಿ - ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಹಾವೇರಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

CM Siddaramaiah: ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಹಾವೇರಿ, ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೀರ್ಘಾವಧಿ ಸಿಎಂ ದಾಖಲೆ ಹೊತ್ತಿನಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!

ದೀರ್ಘಾವಧಿ ಸಿಎಂ ದಾಖಲೆ ಹೊತ್ತಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ!

ರಾಜಕಾರಣ ತೃಪ್ತಿಕೊಟ್ಟಿದೆ. ಜನರಿಗಾಗಿ ಕೆಲಸ ಮಾಡುವುದೇ ಖುಷಿ. ಪೂರ್ಣಾವಧಿ ಮುಖ್ಯಮಂತ್ರಿ ಆಗುವ ವಿಶ್ವಾಸವಿದ್ದು, ಎಲ್ಲವೂ ಹೈಕಮಾಂಡ್ ತೀರ್ಮಾನವನ್ನು ಅವಲಂಬಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ನೆನ್ನೆ ಹೇಳಿದ್ದರು. ಇದರ ಬೆನ್ನಲ್ಲೇ ಈಗ ರಾಜಕೀಯ ವಿದಾಯದ ಬಗ್ಗೆ ಅವರು ಮಾತನಾಡಿದ್ದಾರೆ.

ಹಾವೇರಿಯಲ್ಲಿ ಸರಣಿ ಕಳ್ಳತನ; ಇಬ್ಬರು ಆರೋಪಿಗಳ ಬಂಧನ, 4.5 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಹಾವೇರಿಯಲ್ಲಿ ಸರಣಿ ಕಳ್ಳತನ; ಇಬ್ಬರು ಆರೋಪಿಗಳ ಬಂಧನ

Haveri News: ಹಾವೇರಿ ನಗರದ ನಾಗೇಂದ್ರ ಮಟ್ಟಿಯಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸಿರುವ ಹಾವೇರಿ ಶಹರ ಠಾಣೆಯ ಪೊಲೀಸರ ವಿಶೇಷ ತಂಡವು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದೇ ರಾತ್ರಿ 7ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಆರೋಪಿಗಳು ದೋಚಿದ್ದರು.

ಡಿಸೆಂಬರ್ ನಂತರ ಸಾವು-ನೋವು ಇನ್ನೂ ಜಾಸ್ತಿ ಆಗುತ್ತೆ: ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ಡಿಸೆಂಬರ್ ನಂತರ ಸಾವು-ನೋವು ಇನ್ನೂ ಜಾಸ್ತಿ ಆಗುತ್ತೆ: ಕೋಡಿಮಠ ಶ್ರೀ

Kodi Mutt Seer predictions: ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಲೂ ಹೇಳಿದ್ದೆ. ಯುಗಾದಿ ಕಳೆಯಲಿ, ಸಾವು-ನೋವು ಇನ್ನೂ ಹೆಚ್ಚಾಗುತ್ತದೆ. ಚೀನಾದಲ್ಲಿ ಏನಾಯ್ತು? ಪ್ರಧಾನಮಂತ್ರಿಗಳು ಉಳಿದಿದ್ದೇ ಹೆಚ್ಚು, 2026ಕ್ಕೆ ಇನ್ನೂ ಜಾಸ್ತಿ ಆಗುತ್ತೆ ಯುಗಾದಿ ಕಳೆಯಲಿ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Haveri News: ಯುವಕರು ಕಾಯಕದ ಕಡೆ ಮುಖ‌ ಮಾಡಿದರೆ ನಾಯಕರಾಗಲು ಸಾಧ್ಯ: ಡಾ.ಮಹಾಂತಪ್ರಭು ಸ್ವಾಮೀಜಿ

ಯುವಕರು ಕಾಯಕದ ಕಡೆ ಮುಖ‌ ಮಾಡಿದರೆ ನಾಯಕರಾಗಲು ಸಾಧ್ಯ: ಡಾ.ಮಹಾಂತಪ್ರಭು ಶ್ರೀ

Hukkeri Matha: ಹಾವೇರಿಯ ಹುಕ್ಕೇರಿ ಮಠದ ನಮ್ಮೂರ ಜಾತ್ರಾ ಮಹೋತ್ಸವ ಸಮಾರಂಭಕ್ಕೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮದಲ್ಲಿ ಶೇಗುಣಸಿ ವಿರಕ್ತಮಠದ ಡಾ. ಮಾಹಂತಪ್ರಭು ಸ್ವಾಮೀಜಿ ಅವರು ಮಾತನಾಡಿ, ಯುವಕರು ಕಾಯಕದ ಕಡೆ ಮುಖ ಮಾಡಬೇಕು. ಕಾಯಕ ಬೆನ್ನು ಹತ್ತಿದರೆ ನೀವು ನಾಯಕರಾಗುತ್ತೀರಿ ಎಂದು ಸಲಹೆ ನೀಡಿದರು.

Haveri News: ಅಕ್ಷರದೊಂದಿಗೆ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು: ಡಾ. ಮಹಾಂತ ಪ್ರಭು ಸ್ವಾಮೀಜಿ

ಅಕ್ಷರದೊಂದಿಗೆ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು: ಡಾ. ಮಹಾಂತ ಪ್ರಭು ಸ್ವಾಮೀಜಿ

ಹಾವೇರಿ ಜಿಲ್ಲೆಯ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವವು ಗುರುವಾರ ಆರಂಭವಾಗಿದೆ. ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಮಹಾವೇದಿಕೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮಾತನಾಡಿದ ಡಾ. ಮಹಾಂತಪ್ರಭು ಮಹಾಸ್ವಾಮೀಜಿ ಅವರು, ಮಕ್ಕಳಿಗೆ ಅಕ್ಷರದ ಜತೆ ಸಂಸ್ಕಾರ ಕಲಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ: ಬೊಮ್ಮಾಯಿ ಕಿಡಿ

ನೂತನ ಪರೀಕ್ಷಾ ನೀತಿಯಿಂದ ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ: ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ಈಗ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈಗ ಒಟ್ಟು ಮೂವತ್ತು ಅಂಕ ಬಿದ್ದರೆ ಸಾಕು. ಅದರಲ್ಲಿ 16 ಅಂಕ ಆಂತರಿಕ ಅಂಕ ಕೊಡ್ತಾರಂತೆ. ಇದರಿಂದ ಶಿಕ್ಷಣ ಗುಣಮಟ್ಟ ಹಾಳಾಗುತ್ತದೆ.‌ ಇದನ್ನು ತಡೆಗಟ್ಟಿ, ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Food Poison: ಹಾವೇರಿ: ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

Food Poison: ಹಾವೇರಿ: ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್ ಗೆ ಅನ್ನಪೂರ್ಣೇಶ್ವರಿ ಖಾಸಗಿ ಮೆಸ್ ನಿಂದ ಆಹಾರ ಸರಬರಾಜು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು ಕಳಪೆ ಆಹಾರ ಪದಾರ್ಥಗಳು ನೀಡಲಾಗಿತ್ತು ಎಂದು ಮೆಸ್ ಮಾಲೀಕರು ತಪ್ಪನ್ನು ಒಪ್ಪಿಕೊಂಡು ವೈದ್ಯಕೀಯ ವೆಚ್ಚ ನಾವೇ ಬರಿಸುತ್ತೇವೆ. ನಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

Karnataka Weather: ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ; ಮುಂದಿನ ಎರಡು ದಿನ ಹೇಗಿರಲಿದೆ ಹವಾಮಾನ?

ದಾವಣಗೆರೆ ಸೇರಿ ಮೂರು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 14 ಡಿಗ್ರಿ ಸೆ. ಇರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Actor Zaid Khan: ನಟ ದರ್ಶನ್‌ಗೆ ಜನವರಿಯಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ: ನಟ ಝೈದ್‌ ಖಾನ್

ನಟ ದರ್ಶನ್‌ಗೆ ಜನವರಿಯಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ: ನಟ ಝೈದ್‌ ಖಾನ್

ʼಬನಾರಸ್ʼ ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ʼಉಪಾಧ್ಯಕ್ಷʼ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ʼಕಲ್ಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಕಲ್ಟ್ ಚಿತ್ರ ಜನವರಿ 23ರಂದು ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರ ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ.

Loading...