ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕಲಬುರಗಿ
Car Accident: ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; 2 ವರ್ಷದ ಮಗು ಸೇರಿ ಮೂವರ ದುರ್ಮರಣ

ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

ಪ್ರವಾಸಿಗರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿ ಹಾಗೂ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟದಲ್ಲಿರುವವರ ಮಾಹಿತಿ ತಿಳಿಸುವಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾಡಳಿತ ಮನವಿ ಮಾಡಿದೆ.

Kalaburagi News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ; ಅಪರಾಧಿಗೆ ಗಲ್ಲು ಶಿಕ್ಷೆ

Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಪುಸ್ತಕ ತರಲು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಯಿ ಒತ್ತಿ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಉಸಿರುಗಟ್ಟಿಸಿ ಕೊಂದು ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ. ಈ ಪ್ರಕರಣದಲ್ಲಿ ಅಪರಾಧಿಗೆ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ.

Self Harming: ಲಿವಿಂಗ್‌ ಟುಗೆದರ್‌ ಬೇಡವೆಂದು ಬುದ್ಧಿ ಹೇಳಿದ ಪೋಷಕರು, ರೈಲಿಗೆ ತಲೆಕೊಟ್ಟ ಯುವಕ

ಲಿವಿಂಗ್‌ ಟುಗೆದರ್‌ ಬೇಡವೆಂದ ಪೋಷಕರು, ರೈಲಿಗೆ ತಲೆಕೊಟ್ಟ ಯುವಕ

ಮಹಿಳೆಯ ಜೊತೆ ಲಿವಿಂಗ್‌ ಟುಗೆದರ್‌ನಲ್ಲಿದ್ದ ಯುವಕನಿಗೆ, ಇಂಥ ಸಂಬಂಧ ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದರು. ಇದರಿಂದ ನೊಂದ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ.

CM Siddaramaiah: ಬಿಜೆಪಿಯವರು ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂ

ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂ

CM Siddaramaiah: ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯವರು ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಎಂದು ಹೇಳಿ ಯುವ ಜನತೆಗೆ ಮೋದಿ ವಂಚನೆ: ಸಿಎಂ

ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ನಿರ್ಲಕ್ಷಿಸುತ್ತಿದೆ: ಸಿಎಂ

CM Siddaramaiah: ಕೇಂದ್ರ ಸರ್ಕಾರ ದೇಶದ ಯುವ ಜನತೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ. ಆದರೆ ನಮ್ಮ ಸರ್ಕಾರ ಯುವ ಜನತೆ ಕೈಗೆ ಉದ್ಯೋಗ ನೀಡಿ ಅವರ ಬದುಕು ಕಟ್ಟುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಸಾಮಾಜಿಕ, ಆರ್ಥಿಕ ಸಮೀಕ್ಷೆ; ಯಾವ ಸಮುದಾಯವರಿಗೂ ಅನ್ಯಾಯವಾಗಲು ಬಿಡಲ್ಲ ಎಂದ ಸಿಎಂ

ಜಾತಿ ಗಣತಿ; ಯಾವ ಸಮುದಾಯಯವರಿಗೂ ಅನ್ಯಾಯವಾಗಲು ಬಿಡಲ್ಲ ಎಂದ ಸಿಎಂ

CM Siddaramaiah: ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Stabbing Case: ಅಕ್ಕನನ್ನು ಮನೆಗೆ ಬಾ ಎಂದಿದ್ದಕ್ಕೆ ಬಾವನಿಗೇ ಚಾಕುವಿನಿಂದ ಇರಿದ ಬಾಮೈದ!

ಅಕ್ಕನನ್ನು ಮನೆಗೆ ಬಾ ಎಂದಿದ್ದಕ್ಕೆ ಬಾವನಿಗೇ ಚಾಕುವಿನಿಂದ ಇರಿದ ಬಾಮೈದ!

Stabbing Case: ಗಂಡ ಹೆಂಡತಿಯ ಮಧ್ಯೆ ಜಗಳವಾಗಿ, ಹೆಂಡತಿ ತವರು ಮನೆ ಸೇರಿದ್ದಳು. ಆದರೆ ಪತಿ ತನ್ನ ಅಣ್ಣನ ಮದುವೆ ಹಿನ್ನೆಲೆ ಪತ್ನಿಯನ್ನು ಮನೆಗೆ ಬರುವಂತೆ ಕರೆದಿದ್ದ. ಇದರಿಂದ ಕೋಪಗೊಂಡ ಬಾಮೈದ ಮತ್ತು ಆತನ ಸ್ನೇಹಿತರು ಸೇರಿ, ಬಾವನನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ram Navami 2025: ಕಲಬುರಗಿಯಲ್ಲಿ ಅದ್ಧೂರಿ ರಾಮೋತ್ಸವ; ಮೆರವಣಿಗೆಯಲ್ಲಿ ರಾರಾಜಿಸಿದ ಆರ್‌ಸಿಬಿ ಜೆರ್ಸಿ

ಕಲಬುರಗಿಯಲ್ಲಿ ಅದ್ಧೂರಿ ರಾಮೋತ್ಸವ; ಶ್ರೀರಾಮನ ಮೂರ್ತಿ ಮೆರವಣಿಗೆ

Ram Navami 2025: ರಾಮ ನವಮಿ ಪ್ರಯುತ್ತ ಕಲಬುರಗಿ ನಗರದಲ್ಲಿ ರಾಮ ನವಮಿ ಉತ್ಸವ ಸಮಿತಿಯಿಂದ 15 ಅಡಿ ಶ್ರೀರಾಮ ಪ್ರಭುವಿನ ಮೂರ್ತಿ ಮೆರವಣಿಗೆಗೆ ಹಲವು ಪೂಜ್ಯರು ಚಾಲನೆ ನೀಡಿದ್ದಾರೆ. ಆಳಂದ ಚೆಕ್ ಪೋಸ್ಟ್ ಹತ್ತಿರದ ರಾಮತಿರ್ಥ್ ಮಂದಿರದಿಂದ ಮೆರವಣಿಗೆ ಪ್ರಾರಂಭವಾಯಿತು.

Road Accident: ಕಲಬುರಗಿಯಲ್ಲಿ ಘೋರ ಅಪಘಾತ, ಲಾರಿಗೆ ಮ್ಯಾಕ್ಸಿಕ್ಯಾಬ್‌ ಡಿಕ್ಕಿಯಾಗಿ ಐವರು ಸಾವು

ಕಲಬುರಗಿಯಲ್ಲಿ ಘೋರ ಅಪಘಾತ, ಲಾರಿಗೆ ಮ್ಯಾಕ್ಸಿಕ್ಯಾಬ್‌ ಡಿಕ್ಕಿ, ಐವರು ಸಾವು

ಮ್ಯಾಕ್ಸಿ ಕ್ಯಾಬ್‌ನಲ್ಲಿ 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿ ಕ್ಯಾಬ್ ದಾರಿಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 11 ಮಂದಿ ತೀವ್ರ ಗಾಯಗೊಂಡಿದ್ದಾರೆ.

Mass Murder: ಕೌಟುಂಬಿಕ ಕಲಹದಿಂದ ಸಾಮೂಹಿಕ ಕಗ್ಗೊಲೆ; ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಜೆಸ್ಕಾಂ ಅಧಿಕಾರಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಕೊಂದು ಜೆಸ್ಕಾಂ ಅಧಿಕಾರಿ ಆತ್ಮಹತ್ಯೆ

ಜೆಸ್ಕಾಂ ಅಧಿಕಾರಿ ಸಂತೋಷ್‌ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ.

Ration Rice Smuggling: ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಿಜೆಪಿ ಮುಖಂಡ ಸೇರಿ ಮೂವರ ವಿರುದ್ಧ ಎಫ್‌ಐಆರ್‌

Ration Rice Smuggling: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತಿದ್ದ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

BY Vijayendra: ಡಿ.ಕೆ.ಶಿವಕುಮಾರ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ: ಬಿ.ವೈ. ವಿಜಯೇಂದ್ರ

ಡಿಕೆಶಿ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ: ವಿಜಯೇಂದ್ರ

BY Vijayendra: ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಅವಕಾಶ ಕೊಡುವುದಿಲ್ಲ. ಸಂವಿಧಾನ ಬದಲಿಸುವ ಕುರಿತ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

BJP Karnataka: ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ

ಬಿಜೆಪಿ ಮುಸ್ಲಿಂರ‌ ವಿರೋಧಿ ಅಲ್ಲ. ಆದರೆ, ಮುಸ್ಲಿಂರಿಗೆ ತೃಪ್ತಿ ಮಾಡುವ ಮೂಲಕ ಹಿಂದುಗಳನ್ನು ಅಪಮಾನ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಓಲೈಕೆಯೇ ಆಗಿದೆಯೇ ಹೊರತು ಇದು ಅಭಿವೃದ್ಧಿ ಬಜೆಟ್ ಅಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರೈತ ಆತ್ಮಹತ್ಯೆ: ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ರೈತ ಆತ್ಮಹತ್ಯೆ: ತಹಸೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಸಾಲದ ಬಾಧೆ ತಾಳಲಾರದೇ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಫಜಲಪುರ ತಾಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ರೈತರು ಅಫಜಲಪುರ ತಹಸೀಲ್ದಾರ್ ಕಚೇರಿ ಎದುರು ಮೃತ ರೈತನ ಶವವಿಟ್ಟು ಪ್ರತಿಭಟನೆ ನಡೆಸಿದರು.

Road Accident: ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು

ಸಾವನ್ನಪ್ಪಿರುವ ಇಬ್ಬರು ಯುವಕರು ಕೊಪ್ಪಳ ಜಿಲ್ಲೆಯ ಕನಕಗಿರಿ‌ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.

Children Death: ಆಟವಾಡುವಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ

ಆಟವಾಡುವಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ

ಆಟವಾಡುತ್ತಿದ್ದ ಇಬ್ಬರು ಮಕ್ಕಳು ಇದ್ದಕ್ಕಿದ್ದಂತೆ ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರೂ ಮಕ್ಕಳು ಸಿಕ್ಕಿರಲಿಲ್ಲ. ಕೊನೆಗೆ ಪೊಲೀಸರು ನೀರಿನ ಸಂಪ್ ತೆರೆದು ನೋಡಿದಾಗ ಮಕ್ಕಳು ಒಳಗೆ ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalaburagi News: ಲಾರಿ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಲಾರಿ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವು

Kalaburagi News: ಕೆಂಪು ಮಣ್ಣು ತುಂಬಿಕೊಂಡು ಸಿಮೆಂಟ್ ಕಾರ್ಖಾನೆಯೊಳಗಡೆ ತೆರಳುತ್ತಿದ್ದ ಖಾಸಗಿ ಲಾರಿಯೊಂದು ಐದು ವರ್ಷದ ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

Murder Case: ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಸ್ನೇಹಿತರಿಂದಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್‌ ಬಂದಿರಲಿಲ್ಲ.

Assault Case: ಕಲಬುರಗಿಯಲ್ಲಿ ಹೀನ ಕೃತ್ಯ; ಮಂಗಳಮುಖಿಯನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ

ಮಂಗಳಮುಖಿಯನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ

Assault Case: ಕಲಬುರಗಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಮಂಗಳಮುಖಿಯು ಭೀಕ್ಷಾಟನೆಯ ಹಣದಲ್ಲಿ ಪಾಲು‌ ಕೊಡದಿದಕ್ಕೆ ಆಕೆಯ ಮೇಲೆ ಮುಂಗಳಮುಖಿಯರೇ ಹಲ್ಲೆ ಮಾಡಿದ್ದಾರೆ. ಗಾಯಾಳುವನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ವಿಡಿಯೊ ವೈರಲ್‌ ಆಗಿದೆ.

Jewargi Protest: ಪುರಸಭೆ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಜೇವರ್ಗಿಯಲ್ಲಿ ಪೌರ ಸೇವಾ ನೌಕರರ ಪ್ರತಿಭಟನೆ

ಪುರಸಭೆ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಜೇವರ್ಗಿಯಲ್ಲಿ ಪ್ರತಿಭಟನೆ

Jewargi Protest: ಪುರಸಭೆ ನೈರ್ಮಲ್ಯ ನಿರೀಕ್ಷಕರ ಮೇಲೆ ಡಾ. ಮಹೇಶ್ ರಾಠೋಡ ಹಾಗೂ ಇತರರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಹಾಗೂ ತಹಸಿಲ್ದಾರ್ ಕಚೇರಿ ಮುಂದೆ ಪೌರ ಸೇವಾ ನೌಕರರ ಸೇವಾ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟ; ಏ.26ರಂದು ಪ್ರತಿಜ್ಞಾ ಕ್ರಾಂತಿ ಅಭಿಯಾನಕ್ಕೆ ಚಾಲನೆ

ಏ.26ರಿಂದ ಪ್ರತಿಜ್ಞಾ ಕ್ರಾಂತಿ ಅಭಿಯಾನಕ್ಕೆ ಚಾಲನೆ

Panchamasali 2A reservation: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಹಾಗೂ ಸಮಾಜದದವರ ಮೇಲೆ ಸರಕಾರದಿಂದ ನಡೆದ ಹಲ್ಲೆ (ಲಾಠಿ ಚಾರ್ಜ್) ಖಂಡಿಸಿ 8ನೇ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

DK Shivakumar: ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ: ಆಂಧ್ರ, ತೆಲಂಗಾಣಗಳ ಜತೆ ಚರ್ಚೆ: ಡಿಕೆಶಿ

ತುಂಗಭದ್ರಾ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆಗೆ ಕ್ರಮ: ಡಿಕೆಶಿ

DK Shivakumar: ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Self Harming: ಅಂತರ್ಧರ್ಮೀಯ  ಪ್ರೀತಿ ಮಾಡಿದ ಎಸ್‌ಎಸ್‌ಎಲ್‌ಸಿಯ ಹುಡುಗ-ಹುಡುಗಿ ಆತ್ಮಹತ್ಯೆ

ಅಂತರ್ಧರ್ಮೀಯ ಪ್ರೀತಿ ಮಾಡಿದ ಎಸ್‌ಎಸ್‌ಎಲ್‌ಸಿಯ ಹುಡುಗ-ಹುಡುಗಿ ಆತ್ಮಹತ್ಯೆ

ಇಬ್ಬರೂ 16 ವರ್ಷದವರು ಹಾಗೂ 10ನೇ ತರಗತಿ ವಿದ್ಯಾರ್ಥಿಗಳು. ಹೊಲದಲ್ಲಿರುವ ಮರದಲ್ಲಿ ಇಬ್ಬರ ಶವ ಒಂದೇ ಹಗ್ಗದಿಂದ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಅವರ ಕುಟುಂಬಗಳಿಗೆ ತಮ್ಮ ಪ್ರೀತಿ ವಿಚಾರ ತಿಳಿಸಿರಲಿಲ್ಲ.