ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.
Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿ ಹಾಗೂ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟದಲ್ಲಿರುವವರ ಮಾಹಿತಿ ತಿಳಿಸುವಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾಡಳಿತ ಮನವಿ ಮಾಡಿದೆ.
Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಪುಸ್ತಕ ತರಲು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಯಿ ಒತ್ತಿ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಉಸಿರುಗಟ್ಟಿಸಿ ಕೊಂದು ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ. ಈ ಪ್ರಕರಣದಲ್ಲಿ ಅಪರಾಧಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
CM Siddaramaiah: ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Stabbing Case: ಗಂಡ ಹೆಂಡತಿಯ ಮಧ್ಯೆ ಜಗಳವಾಗಿ, ಹೆಂಡತಿ ತವರು ಮನೆ ಸೇರಿದ್ದಳು. ಆದರೆ ಪತಿ ತನ್ನ ಅಣ್ಣನ ಮದುವೆ ಹಿನ್ನೆಲೆ ಪತ್ನಿಯನ್ನು ಮನೆಗೆ ಬರುವಂತೆ ಕರೆದಿದ್ದ. ಇದರಿಂದ ಕೋಪಗೊಂಡ ಬಾಮೈದ ಮತ್ತು ಆತನ ಸ್ನೇಹಿತರು ಸೇರಿ, ಬಾವನನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
BY Vijayendra: ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ಅವಕಾಶ ಕೊಡುವುದಿಲ್ಲ. ಸಂವಿಧಾನ ಬದಲಿಸುವ ಕುರಿತ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬಿಜೆಪಿ ಮುಸ್ಲಿಂರ ವಿರೋಧಿ ಅಲ್ಲ. ಆದರೆ, ಮುಸ್ಲಿಂರಿಗೆ ತೃಪ್ತಿ ಮಾಡುವ ಮೂಲಕ ಹಿಂದುಗಳನ್ನು ಅಪಮಾನ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಬಜೆಟ್ನಲ್ಲಿ ಅಲ್ಪಸಂಖ್ಯಾತರ ಓಲೈಕೆಯೇ ಆಗಿದೆಯೇ ಹೊರತು ಇದು ಅಭಿವೃದ್ಧಿ ಬಜೆಟ್ ಅಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Jewargi Protest: ಪುರಸಭೆ ನೈರ್ಮಲ್ಯ ನಿರೀಕ್ಷಕರ ಮೇಲೆ ಡಾ. ಮಹೇಶ್ ರಾಠೋಡ ಹಾಗೂ ಇತರರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಹಾಗೂ ತಹಸಿಲ್ದಾರ್ ಕಚೇರಿ ಮುಂದೆ ಪೌರ ಸೇವಾ ನೌಕರರ ಸೇವಾ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.
DK Shivakumar: ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.