ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕಲಬುರಗಿ
Murder Case: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Murder Case: ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಫಿರೋಜಾಬಾದ ಬಳಿ ಜರುಗಿದೆ. ನಿಜಾಮುದ್ದೀನ್ ಬಾವರಚಿ ಅಲಿಯಾಸ್ ನಜ್ಜು (45) ಮೃತ ವ್ಯಕ್ತಿಯಾಗಿದ್ದು, ಹಳೆ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

N. Ravikumar: ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಎಲ್‌ಸಿ ಎನ್.ರವಿಕುಮಾರ್ ವಿಚಾರಣೆಗೆ ಹಾಜರು

ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎನ್.ರವಿಕುಮಾರ್ ವಿಚಾರಣೆಗೆ ಹಾಜರು

N. Ravikumar: ಹೈಕೋರ್ಟ್ ಸೂಚನೆ ಮೇರೆಗೆ ಎನ್.ರವಿಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ದಕ್ಷಿಣ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿರಬಹುದು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆ ಬಿಜೆಪಿ ಎಂಎಲ್‌ಸಿ ವಿರುದ್ಧ ಕೇಸ್‌ ದಾಖಲಾಗಿತ್ತು.

Heart Failure: ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಯಾವ ಹೃದಯದ ಸಮಸ್ಯೆಯೂ ಕಾಣಿಸಿಕೊಳ್ಳದ ಯುವಕ ಯುವತಿಯರಲ್ಲಿ ಇದ್ದಕ್ಕಿದ್ದಂತೆ ಹೃದಯ ವೈಫಲ್ಯದಿಂದ (Heart Failure) ಸಾವನ್ನು ಅಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿದೆ. ಇದಕ್ಕೆ ಕಲಬುರಗಿಯಲ್ಲಿ ಮೆರವಣಿಗೆ ವೇಳೆ ಯುವಕನ ಸಾವು ಸಹ ಸೇರಿಕೊಂಡಿದೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

Kalaburagi DC: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್

ಕಲಬುರಗಿ ಜಿಲ್ಲಾಧಿಕಾರಿ ವಿರುಧ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ವಿರುದ್ಧ ಪಾಕಿಸ್ತಾನಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸದ್ಯ ರವಿಕುಮಾರ್ ಹೇಳಿಕೆ ಸಂಚಲನ ಸೃಷ್ಟಿಸಿದೆ.

Fire Accident: ಆಳಂದದಲ್ಲಿ ಪುಸ್ತಕ ಗೋದಾಮಿಗೆ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ಪಠ್ಯ ಪುಸ್ತಕಗಳು ಸುಟ್ಟು ಭಸ್ಮ

ಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿಪುಸ್ತಕ ಗೋದಾಮಿಗೆ ಬೆಂಕಿ

Fire Accident: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಅಗ್ನಿ ಅವಘಡ ನಡೆದಿದೆ. ಒಂದು ಕೋಣೆಯಲ್ಲಿನ ಸುಮಾರು 2 ಲಕ್ಷಕ್ಕೂ ಅಧಿಕ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಒಟ್ಟು 1 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್‌; ಗೋಡೆ ಒಡೆದು 9 ಮಂದಿ ರಕ್ಷಣೆ

Gims Hospital: ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಲಿಫ್ಟ್​​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಎಚ್ಚೆತ್ತುಕೊಂಡು ಎಲ್ಲರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೆವೆ ಎಂದು‌ ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್ ತಿಳಿಸಿದ್ದಾರೆ.

Operation Sindoor: 7 ದಿನದ ಮಗು, ಬಾಣಂತಿ ಹೆಂಡತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

7 ದಿನದ ಮಗು, ಬಾಣಂತಿ ಪತ್ನಿ ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

Operation Sindoor: ವಾರದ ಹಿಂದಷ್ಟೇ ಕಲಬುರಗಿ ಮೂಲದ ಯೋಧರೊಬ್ಬರ ಪತ್ನಿಗೆ ಗಂಡು ಮಗು ಜನನವಾಗಿತ್ತು. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿತ್ತು. ಆದರೆ, ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ತುರ್ತು ಸೇವೆಗೆ ಆಗಮಿಸುವಂತೆ ಭಾರತೀಯ ಸೇನೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳುತ್ತಿದ್ದಾರೆ.

Shivaraj Tangadagi: ಭಾರತೀಯ ಸೈನಿಕರ ಶಕ್ತಿ ಎದುರು ಪಾಕ್ ಲೆಕ್ಕಕ್ಕಿಲ್ಲ: ಶಿವರಾಜ್ ತಂಗಡಗಿ

ಭಾರತೀಯ ಸೈನಿಕರ ಶಕ್ತಿ ಎದುರು ಪಾಕ್ ಲೆಕ್ಕಕ್ಕಿಲ್ಲ: ಶಿವರಾಜ್ ತಂಗಡಗಿ

Shivaraj Tangadagi: ಭಾರತೀಯ ಸೈನಿಕರ ಶಕ್ತಿಯ ಎದುರಿಗೆ ಪಾಕಿಸ್ತಾನ ಲೆಕ್ಕಕ್ಕಿಲ್ಲ. ಭಾರತ ಗಟ್ಟಿಯಾಗಿ ನಾಲ್ಕು ದಿನ ಯುದ್ಧ ಮಾಡಿದರೆ ಪಾಕಿಸ್ತಾನ ವಿಶ್ವದ ಭೂಪಟದಲ್ಲೇ ಇರಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kalaburagi News: ಭಾರತಾಂಬೆಯ ಸೇವೆಗೆ ಮರಳಿದ ಕನ್ಯಾಕುಮಾರ

ಭಾರತಾಂಬೆಯ ಸೇವೆಗೆ ಮರಳಿದ ಕನ್ಯಾಕುಮಾರ

ದೇಶದಲ್ಲಿ ಸದ್ಯ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶಗಳು ಗೋಚರವಾಗುತ್ತಿರುವ ನಿಟ್ಟಿನಲ್ಲಿ ರಜೆಯ ಮೇಲೆ ತೆರಳಿದ ಸೈನಿಕರ ಅವಶ್ಯಕತೆ ಭಾರತಾಂಬೆಗೆ ಇದ್ದು, ಅವರನ್ನು ಮರಳಿ ಕರೆಸಿ ಕೊಳ್ಳುವ ಪ್ರಕ್ರಿಯೆ ನಡೆದಿದ್ದು, ಇತ್ತ ಕಲಬುರಗಿಯ ಯೋಧ ಸಹ ತಾಯಿ ಭಾರತೀಯ ಸೇವೆಗಾಗಿ ರಜೆ ಮೊಟಕುಗೊಳಿಸಿ ಸೇನೆಗೆ ತೆರಳಿದ್ದಾನೆ

Janivara Row: ನೀಟ್‌ ಪರೀಕ್ಷೆಯಲ್ಲಿ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ ಬಂಧನ

ನೀಟ್‌ ಪರೀಕ್ಷೆಯಲ್ಲಿ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ ಬಂಧನ

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ (Janivara Row) ಸಿಬ್ಬಂದಿ ವಿರುದ್ಧ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಶರಣಗೌಡ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ

Janivara Row: ನೀಟ್‌ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಇಬ್ಬರು ಸಿಬ್ಬಂದಿ ಮೇಲೆ ಎಫ್‌ಐಆರ್

ನೀಟ್‌ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಇಬ್ಬರು ಸಿಬ್ಬಂದಿ ಮೇಲೆ ಎಫ್‌ಐಆರ್

ನಿನ್ನೆ ನಡೆದ ನೀಟ್ ಪರೀಕ್ಷೆಯ ವೇಳೆಯಲ್ಲಿ ಕಲಬುರ್ಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಶ್ರೀಪಾದ್‌ ಎಂಬವರ ಜನಿವಾರವನ್ನು (‌Janivara Row) ತೆಗೆಸಿದ್ದರು. ಇದನ್ನು ವಿದ್ಯಾರ್ಥಿ ಪ್ರತಿಭಟಿಸಿದಾಗ, "ನೀಟ್‌ ಪರೀಕ್ಷೆ ಬೇಕಿದ್ದರೆ ಜನಿವಾರ ತೆಗೆದು ಬಾ" ಎಂದಿದ್ದರು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಲಾಗಿದೆ.

NEET Exam: ಸಿಇಟಿ ಬಳಿಕ ನೀಟ್‌ ಪರೀಕ್ಷೆ ವೇಳೆಯೂ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು; ಕಲಬುರಗಿಯಲ್ಲಿ ಎಡವಟ್ಟು

ನೀಟ್‌ ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

Sacred Thread: ಭಾನುವಾರ (ಮೇ 4) ನಡೆದ ನೀಟ್ ಪರೀಕ್ಷೆಯ ವೇಳೆ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಘಟನೆ ನಡೆದಿದೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಕಾರಣವಾಗಿದೆ.

Kalaburagi News: ಕಾಶಿ ಮಾದರಿಯಲ್ಲಿ ದೇವಲ ಗಾಣಗಾಪೂರ ಅಭಿವೃದ್ಧಿ: 200 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲ್ಯಾನ್ ಸಿದ್ಧ: ಬಿ.ಫೌಜಿಯಾ ತರನ್ನುಮ್

200 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲ್ಯಾನ್ ಸಿದ್ಧ: ಬಿ.ಫೌಜಿಯಾ ತರನ್ನುಮ್

ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಇತ್ತೀಚೆಗೆ ಮಾಧ್ಯಮದಲ್ಲಿ ಸುದ್ದಿಗಳು ಬಿತ್ತರವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು, ಪಟ್ಟಣದಲ್ಲಿ ನಾಲ್ಕು ಲೇನ್ ರಸ್ತೆ, ಸಂಗಮ ಮತ್ತು ಅಷ್ಠ ತೀರ್ಥ ಸ್ಥಳಗಳ ಅಭಿವೃದ್ಧಿ, ಒಳಚರಂಡಿ, ಎಸ್.ಟಿ.ಪಿ ಘಟಕ ಸ್ಥಾಪನೆ, ನಾಗರಿಕ ಸೌಲಭ್ಯಗಳು ಸೇರಿದಂತೆ ಒಟ್ಟಾರೆ ದೇವಸ್ಥಾನ ಮತ್ತು ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಮತ್ತು ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದೆ

Double Murder Case: ಪರ ಪುರುಷನ ಜೊತೆ ಚಕ್ಕಂದ, ಇಬ್ಬರನ್ನೂ ಪತಿ ಕೊಚ್ಚಿ ಕೊಂದ

ಪರ ಪುರುಷನ ಜೊತೆ ಚಕ್ಕಂದ, ಇಬ್ಬರನ್ನೂ ಪತಿ ಕೊಚ್ಚಿ ಕೊಂದ

ಕೃಷಿ ಕೂಲಿ ಕೆಲಸ ಮಾಡುತ್ತಿದ್ದ ಶ್ರೀಮಂತ ದಿನದಲ್ಲಿ ಬಹುತೇಕ ಸಮಯ ಬೇರೆಯವರ ಜಮೀನಿನಲ್ಲಿ ಕಳೆಯುತ್ತಿದ್ದ. ಇತ್ತ ಪತ್ನಿ ಸೃಷ್ಟಿ ಗ್ರಾಮದ ಲೈಬ್ರರಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಖಾಜಪ್ಪ ಎಂಬಾತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದು ಬರ್ಬರ ಕೊಲೆಯಲ್ಲಿ ಅಂತ್ಯ ಕಂಡಿದೆ.

ಕಲಬುರಗಿಯಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಡಾ. ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಬಸವಣ್ಣನವರ ಪ್ರತಿಮೆಗೆ ಮಾಡಿದ ಡಾ. ಶರಣಪ್ರಕಾಶ್ ಪಾಟೀಲ್

ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿನ ಶ್ರೀ ಬಸವಣ್ಣನವರ ಪ್ರತಿಮೆಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

Pakistan citizens: ಕಲಬುರಗಿಯಲ್ಲಿದ್ದಾರೆ 9 ಪಾಕ್ ಪ್ರಜೆಗಳು; ಸ್ವದೇಶಕ್ಕೆ ಮರಳಲು ಸೂಚನೆ

ಕಲಬುರಗಿಯಲ್ಲಿದ್ದಾರೆ 9 ಪಾಕ್ ಪ್ರಜೆಗಳು; ಸ್ವದೇಶಕ್ಕೆ ಮರಳಲು ಸೂಚನೆ

Pakistan citizens: ಕಲಬುರಗಿಯಲ್ಲಿ ಒಟ್ಟು 9 ಪಾಕಿಸ್ತಾನಿ ಪ್ರಜೆಗಳು ಇದ್ದು, ಇವರಲ್ಲಿ ಇಬ್ಬರು ಲಾಂಗ್ ಟರ್ಮ್ ವೀಸಾ ಹೊಂದಿದವರಾಗಿದ್ದಾರೆ. 7 ಜನ ವಿಸಿಟರ್ಸ್ ವೀಸಾ ಹೊಂದಿದ್ದು, ಇವರಲ್ಲಿ ಒಬ್ಬ ಮಹಿಳೆ ಅನುಮತಿ ಪಡೆದು ಅಮೆರಿಕಗೆ ತೆರಳಿದ್ದಾರೆ ಎಂದು

police Firing: ದರೋಡೆಕೋರರ ಕಾಲಿಗೆ ಪೊಲೀಸ್‌ ಗುಂಡು, ಬಂಧನ

ದರೋಡೆಕೋರರ ಕಾಲಿಗೆ ಪೊಲೀಸ್‌ ಗುಂಡು, ಬಂಧನ

ಏಪ್ರಿಲ್‌ 8ರಂದು ಬೆಳಗಿನ ಜಾವ ಗ್ಯಾಸ್ ಕಟ್ಟರ್ ಬಳಸಿ ಭದ್ರತೆ ಇಲ್ಲದ ಎಸ್‌ಬಿಐ ಎಟಿಎಂ ಅನ್ನು ಮುರಿದ ಖದೀಮರು 18 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಅಂತಾರಾಜ್ಯ ದರೋಡೆಕೋರರಾದ ಇವರು ಇನ್ನೂ ಹಲವು ಕಳವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದಾರೆ.

Pahalgam Terror Attack: ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ; ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ವಶಕ್ಕೆ

ಕಲಬುರಗಿಯಲ್ಲಿ ರಸ್ತೆ ಮೇಲೆ ಪಾಕಿಸ್ತಾನದ ಧ್ವಜ ಅಂಟಿಸಿ ಆಕ್ರೋಶ

Pahalgam Terror Attack: ಕಲಬುರಗಿಯಲ್ಲಿ ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಗಿದೆ ಎಂದು ಬಜರಂಗ ದಳದ ಕಾರ್ಯಕರ್ತರನ್ನು ಬ್ರಹ್ಮಪುರ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

Car Accident: ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; 2 ವರ್ಷದ ಮಗು ಸೇರಿ ಮೂವರ ದುರ್ಮರಣ

ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

ಪ್ರವಾಸಿಗರ ನೆರವಿಗಾಗಿ ಕಲಬುರಗಿ, ಯಾದಗಿರಿ ಜಿಲ್ಲಾಡಳಿತದಿಂದ ಸಹಾಯವಾಣಿ

Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿ ಹಾಗೂ ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟದಲ್ಲಿರುವವರ ಮಾಹಿತಿ ತಿಳಿಸುವಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾಡಳಿತ ಮನವಿ ಮಾಡಿದೆ.

Kalaburagi News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು ಶಿಕ್ಷೆ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ; ಅಪರಾಧಿಗೆ ಗಲ್ಲು ಶಿಕ್ಷೆ

Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಪುಸ್ತಕ ತರಲು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಯಿ ಒತ್ತಿ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಉಸಿರುಗಟ್ಟಿಸಿ ಕೊಂದು ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ. ಈ ಪ್ರಕರಣದಲ್ಲಿ ಅಪರಾಧಿಗೆ ಕೋರ್ಟ್‌ ಶಿಕ್ಷೆ ಪ್ರಕಟಿಸಿದೆ.

Self Harming: ಲಿವಿಂಗ್‌ ಟುಗೆದರ್‌ ಬೇಡವೆಂದು ಬುದ್ಧಿ ಹೇಳಿದ ಪೋಷಕರು, ರೈಲಿಗೆ ತಲೆಕೊಟ್ಟ ಯುವಕ

ಲಿವಿಂಗ್‌ ಟುಗೆದರ್‌ ಬೇಡವೆಂದ ಪೋಷಕರು, ರೈಲಿಗೆ ತಲೆಕೊಟ್ಟ ಯುವಕ

ಮಹಿಳೆಯ ಜೊತೆ ಲಿವಿಂಗ್‌ ಟುಗೆದರ್‌ನಲ್ಲಿದ್ದ ಯುವಕನಿಗೆ, ಇಂಥ ಸಂಬಂಧ ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದರು. ಇದರಿಂದ ನೊಂದ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಹಿಳೆಗೂ ಗಾಯಗಳಾಗಿವೆ.

CM Siddaramaiah: ಬಿಜೆಪಿಯವರು ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂ

ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿ ಕಾಣುತ್ತದೆ: ಸಿಎಂ

CM Siddaramaiah: ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯವರು ಕಲಬುರಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರ ಕಾಣಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.