ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕಲಬುರಗಿ

Kalaburagi Murder: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

Kalaburagi News: ಕಲಬುರಗಿ ನಗರದ ಮಿಲ್ಲತ್ ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಹಳೇ ವೈಷಮ್ಯದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ಪರಿಶೀಲಿಸಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Corruption case: ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಲಂಚ ಕೇಳಿದ ಲ್ಯಾಬ್ ಟೆಕ್ನಿಷಿಯನ್; ವಿಡಿಯೋ ವೈರಲ್‌

ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಲಂಚ ಕೇಳಿದ ಲ್ಯಾಬ್ ಟೆಕ್ನಿಷಿಯನ್

Kalaburagi News: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟೆಯಲ್ಲಿ ನಡೆದಿದೆ. ಬಡ ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಿಬ್ಬಂದಿ‌ ಲಂಚ ಕೇಳಿದ್ದಾನೆ. ಪ್ರತಿ ಗರ್ಭಿಣಿ ತಪಾಸಣೆಗೆ 100 ರೂ. ನೀಡಬೇಕು ಎಂದು ಆಶಾ ಕಾರ್ಯಕರ್ತೆಯರ ಬಳಿ ಬೇಡಿಕೆ ಇಟ್ಟಿದ್ದು, ಹಣ ಕೊಡದಿದ್ದರೇ ಕೆಲಸ ಮಾಡಲ್ಲ ಎಂದು ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ತಿಳಿಸಿದ್ದಾನೆ.

Road Accident: ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ; ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ; ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಸಿಮೆಂಟ್ ತುಂಬಿದ್ದ ಟ್ಯಾಂಕ‌ರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Kalburgi News: ಮಗಳನ್ನೇ ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ; ಮರ್ಯಾದಾ ಹತ್ಯೆಗೆ ಯುವತಿ ಬಲಿ

ಮರ್ಯಾದಾ ಹತ್ಯೆಗೆ ಯುವತಿ ಬಲಿ

ಅನ್ಯಜಾತಿಯ ಯುವಕನನ್ನ ಪ್ರೀತಿಸುತ್ತಿದ್ದ ಕಾರಣಕ್ಕೆ ತಂದೆಯೇ ಮಗಳ ಕತ್ತು ಹಿಸುಕಿ ಜೀವ ತೆಗೆದ ಘಟನೆ ಕಲಬುರ್ಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಕವಿತಾ ಕೊಳ್ಳೂರ್ ಮೃತ ಯುವತಿ. ಕವಿತಾ ಅದೇ ಗ್ರಾಮದ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು.

Kalaburagi News: ಹೈದರಾಬಾದ್‌ನಲ್ಲಿ ಕಲಬುರಗಿ ಮೂಲದ ಐವರ ಸಾವು ಪ್ರಕರಣ; ಸ್ವಗ್ರಾಮ ತಲುಪಿದ ಮೃತದೇಹಗಳು

ಹೈದರಾಬಾದ್‌ನಲ್ಲಿ ಐವರ ನಿಗೂಢ ಸಾವು; ಸ್ವಗ್ರಾಮ ತಲುಪಿದ ಮೃತದೇಹಗಳು

Five members found dead: ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದವರು. ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೈದರಾಬಾದ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ.

Mass death: ಹೈದರಾಬಾದ್‌ನಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರ ನಿಗೂಢ ಸಾವು

ಹೈದರಾಬಾದ್‌ನಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರ ನಿಗೂಢ ಸಾವು

Kalaburagi: ಕಲಬುರಗಿಯ ಲಕ್ಷ್ಮಯ್ಯ ಅವರ ಈ ಕುಟುಂಬವು ಕೆಲವು ಸಮಯದಿಂದ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು, ಕೂಲಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಮಸ್ಯೆಗಳಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡರೇ? ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸ್ ತನಿಖೆ ಮುಂದುವರೆದಿದೆ.

Kalagi Town Panchayat Election: 'ಕೈ' ಪಾಲಾದ ಕಾಳಗಿ ಪಟ್ಟಣ ಪಂಚಾಯಿತಿ; ಡಾ.ಅವಿನಾಶ್ ಜಾಧವ್‌ಗೆ ಮುಖಭಂಗ

'ಕೈ' ಪಾಲಾದ ಕಾಳಗಿ ಪಟ್ಟಣ ಪಂಚಾಯಿತಿ; ಡಾ.ಅವಿನಾಶ್ ಜಾಧವ್‌ಗೆ ಮುಖಭಂಗ

Kalagi Town Panchayat Election: ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ನಗೆ ಬೀರಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು. ಈ ಗೆಲುವು ಸ್ಥಳೀಯ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಮತ್ತೊಮ್ಮೆ ಬಲ ತುಂಬಿದೆ.

Bomb threat: ಕಲಬುರಗಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ; ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ

ಕಲಬುರಗಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ

Kalaburagi News: ಬೆಂಗಳೂರಿನ 112ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ಹೇಳಿದ್ದಾನೆ. ಈ ಬಗ್ಗೆ ಬೆಂಗಳೂರಿನ ಪೊಲೀಸ್ ಅಧಿಕಾರಿಗಳು ಕಲಬುರಗಿ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ವೇಳೆ ಹುಸಿ ಬಾಂಬ್ ಬೆದರಿಕೆ ಎನ್ನುವುದು ಬೆಳಕಿಗೆ ಬಂದಿದೆ.

Dr. Sharanabasappa Appa: ಕಲಬುರಗಿಯಲ್ಲಿ ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ

ವೀರಶೈವ ಸಂಪ್ರದಾಯದಂತೆ ನೆರವೇರಿದ ಡಾ. ಶರಣಬಸಪ್ಪ ಅಪ್ಪ ಅಂತ್ಯಕ್ರಿಯೆ

Dr. Sharanabasappa Appa: ಅಂತ್ಯ ಸಂಸ್ಕಾರಕ್ಕೂ ಮುನ್ನ ಶರಣಬಸಪ್ಪ ಅಪ್ಪ ಅವರಿಗೆ ಸರ್ಕಾರದಿಂದ ಗೌರವ ಸಲ್ಲಿಸಲಾಯಿತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಶಿವಾನುಭವ ಮಂಟಪದ ಮುಂದೆ ಪೊಲೀಸರಿಂದ ಗೌರವ ಸಲ್ಲಿಕೆಯಾಯಿತು. ವಿವಿಧ ಗಣ್ಯರು ಸೇರಿ ಸಾವಿರಾರು ಭಕ್ತರರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

Dr Sharanabasappa Appa: ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ; ಅಂತ್ಯಕ್ರಿಯೆ ಯಾವಾಗ?

ಶಿಕ್ಷಣ ಕ್ರಾಂತಿಯ ಹರಿಕಾರನ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ

ಕಲಬುರಗಿಯ ಮಹಾದಾಸೋಹಿ ಡಾ. ಶರಣಬಸಪ್ಪ ಅಪ್ಪ (Sharanabasappa Appa) ಲಿಂಗೈಕ್ಯರಾಗಿದ್ದಾರೆ. ಪೂಜ್ಯ ಡಾ. ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನದ ದಾಸೋಹ ಮಹಾಮನೇಯ 8ನೇ ಪಿಠಾಧಿಪತಿ ಆಗಿದ್ದರು. ಅಂತಿಮ ವಿಧಿವಿಧಾನದ ಬಳಿಕ 9ನೇ ಪೀಠಾಧಿಪತಿಗೆ ಅಧಿಕಾರ ಹಸ್ತಾಂತರವಾಗಲಿದೆ.

Dr. Sharanabasappa Appa:  ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ; ಸಿಎಂ ಸೇರಿ ಗಣ್ಯರಿಂದ ಶ್ರದ್ಧಾಂಜಲಿ

ಕಲಬುರಗಿಯ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿದೆ ಇಹಲೋಕ ತ್ಯಜಿಸಿದ್ದಾರೆ.

Sharanabasappa Appa: ಶೈಕ್ಷಣಿಕ ಕ್ರಾಂತಿಯ ಹರಿಕಾರ ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಡಾ. ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

Kalaburagi News: ಕಲಬುರಗಿಯ ಶರಣ ಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಗುರುವಾರ (ಆಗಸ್ಟ್‌ 14) ಲಿಂಗೈಕ್ಯರಾದರು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Raksha Bandhan: ತಂಗಿಯ ಆಸೆ; 41 ಕಿ.ಮೀ ನಡೆದುಕೊಂಡೇ ಹೋಗಿ ರಾಖಿ ಕಟ್ಟಿಸಿಕೊಂಡ ಅಣ್ಣ!

ತಂಗಿಯ ಆಸೆ; 41 ಕಿ.ಮೀ ನಡೆದುಕೊಂಡೇ ಹೋಗಿ ರಾಖಿ ಕಟ್ಟಿಸಿಕೊಂಡ ಅಣ್ಣ!

Kalaburagi News: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಿಂದ ಆಲಮೇಲದಲ್ಲಿರುವ ತಂಗಿ ಮನೆಗೆ ಸಹೋದರ ನಡೆದುಕೊಂಡು ಹೋಗಿ ರಾಖಿ ಕಟ್ಟಿಸಿಕೊಂಡಿದ್ದಾನೆ. ನಡೆದುಕೊಂಡು ಬಂದು ರಾಖಿ ಕಟ್ಟಿಸಿಕೊಳ್ಳಬೇಕು ಎಂದು ಭಾಗೀಶ್ ತಂಗಿ ಆಸೆ ಪಟ್ಟಿದ್ದರಿಂದ ಯುವಕ ತಂಗಿಯ ಆಸೆ ಪೂರೈಸಿದ್ದಾನೆ.

Kalaburagi News: ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್; ಮೇಯರ್ ಆಗಿ ವರ್ಷಾ ಜಾನೆ, ಉಪಮೇಯರ್ ಆಗಿ ತೃಪ್ತಿ ಅಲ್ಲದ್ ಆಯ್ಕೆ

ಕಲಬುರಗಿ ಪಾಲಿಕೆ ಮತ್ತೊಮ್ಮೆ ಗದ್ದುಗೆಗೇರಿದ ಕಾಂಗ್ರೆಸ್

Kalaburagi News: ಕಲಬುರಗಿ ಮಹಾನಗರ ಪಾಲಿಕೆ 23ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಗದ್ದುಗೆಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ವರ್ಷಾ ಜಾನೇ ಮೇಯರ್ ಆಗಿ, ತೃಪ್ತಿ ಅಲ್ಲದ್ (ಲಾಖೆ) ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Kalaburagi News: ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರು ಸಾವು

ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರು ಸಾವು

Alcohol Addiction: ಕುಡಿತದ ಚಟ ಬಿಡಿಸುತ್ತೇನೆ ಎಂದು ಸಾಯಪ್ಪ ಮುತ್ಯಾ ಎಂಬಾತ ಮದ್ಯ ವ್ಯಸನಿಗಳ ಮೂಗಿನಲ್ಲಿ ನಾಟಿ ಔಷಧಿ ಹಾಕಿದ್ದರು. ಸಾಯಪ್ಪ ಮುತ್ಯಾ ನೀಡಿದ ಔಷಧಿಯಿಂದ ಲಕ್ಷ್ಮೀ ಹಾಗೂ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

Love Jihad: ಮುಸ್ಲಿಂ ಹುಡುಗನ ಜೊತೆ ಜೈನ ಹುಡುಗಿ ನಾಪತ್ತೆ, ʼಲವ್‌ ಜಿಹಾದ್‌ʼ ಎಂದು ದೂರು

ಮುಸ್ಲಿಂ ಹುಡುಗನ ಜೊತೆ ಜೈನ ಹುಡುಗಿ ನಾಪತ್ತೆ, ʼಲವ್‌ ಜಿಹಾದ್‌ʼ ದೂರು

Kalaburagi News: ಮುಸ್ಲಿಂ ಯುವಕ ಮಶಾಕ್ ಎಂಬಾತನ ವಿರುದ್ಧ ಲವ್ ಜಿಹಾದ್‌ ಆರೋಪ ಕೇಳಿ ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೊಬ್ಬುರ ಗ್ರಾಮದ ಯುವತಿಯನ್ನು ಅದೇ ಗ್ರಾಮದ ಡ್ರೈವರ್ ಮಶಾಕ್ ಎಂಬಾತ ಪ್ರೀತಿ- ಪ್ರೇಮದ ಹೆಸರಲ್ಲಿ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

KSRTC Strike: ಸಾರಿಗೆ ಮುಷ್ಕರ: ಕಲಬುರಗಿಯಲ್ಲಿ ಜನರಿಗೆ ತಟ್ಟಿದ ಬಿಸಿ; ವಿದ್ಯಾರ್ಥಿಗಳು, ನೌಕರರ ಪರದಾಟ

ಸಾರಿಗೆ ಮುಷ್ಕರ: ಕಲಬುರಗಿಯಲ್ಲಿ ಜನರಿಗೆ ತಟ್ಟಿದ ಬಿಸಿ; ಪ್ರಯಾಣಿಕರ ಪರದಾಟ

Kalaburagi: ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳಗಿನ ಜಾವದಿಂದಲೇ ಎಂದಿನಂತೆ ಪ್ರಯಾಣಿಕರು ಆಗಮಿಸಿದರು. ಆದರೆ, ನಮ್ಮ ಬೇಡಿಕೆ ಈಡೇರುವವರೆಗೂ ನಾವು ಬಸ್ ಹತ್ತುವುದಿಲ್ಲ ಎಂದು ನೌಕರರು ಪಟ್ಟು ಹಿಡಿದರು. ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮನವೊಲಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

Self Harming: ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ

ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ

Kalaburagi News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Physical Abuse: ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ; ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

Kalaburagi News: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪರಿಚಯಸ್ಥ ಸಿಬ್ಬಂದಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Kalaburgi News: ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ; ಕುಟುಂಸ್ಥರ ಆಕ್ರೋಶ

ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ

ರಾಜ್ಯದಲ್ಲಿ ಈ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿತ್ತು. ಇದೀಗ ಕಲಬುರ್ಗಿಯಲ್ಲಿ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

Kalaburagi News: ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

ಶ್ರೀ ಡಾ. ಶರಣಬಸಪ್ಪ ಅಪ್ಪ ಆರೋಗ್ಯ ಸ್ಥಿರ, ವದಂತಿಗೆ ಕಿವಿಗೊಡದಂತೆ ಮನವಿ

Kalaburagi News: ಉಸಿರಾಟದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಡಾ. ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Viral News: ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

Kalaburagi: ಈಕೆ ಪರೀಕ್ಷೆ ಬರೆಯುವುದಕ್ಕಾಗಿ, ಉಕ್ಕಿ ಹರಿಯುತ್ತಿದ್ದ ನದಿಯನ್ನೇ ಪ್ರಾಣದ ಹಂಗು ತೊರೆದು ದಾಟಿ ಹೋಗಿದ್ದಾಳೆ. ಆಕೆಗೆ ಆಕೆಯ ತಂದೆ ನೆರವಾಗಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್‌ (Viral news) ಆಗಿವೆ.

Kalaburagi News: ಸೋಶಿಯಲ್‌ ಮೀಡಿಯಾದಲ್ಲಿ ಫೋಟೊ ವೈರಲ್‌; ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಯುವಕನ ಕಿರುಕುಳ; ಡ್ಯಾಂ ಹಿನ್ನೀರಿಗೆ ಜಿಗಿದು ಯುವತಿ ಆತ್ಮಹತ್ಯೆ!

Kalaburagi News: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಘಟನೆ ನಡೆದಿದೆ. ಯುವತಿ ಜತೆಗಿರುವ ಫೋಟೊಗಳನ್ನು ಯುವಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ. ಇದರಿಂದ ಯುವತಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Kalaburagi News: ಸಿಬ್ಬಂದಿಯಿಂದ ಶಾಲೆಯಲ್ಲೇ ಮಸಾಜ್‌ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ; ಅಮಾನತಿಗೆ ಆಗ್ರಹ

ಸಿಬ್ಬಂದಿಯಿಂದ ಮಸಾಜ್‌ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ!

Kalaburagi News: ಕಲಬುರಗಿಯ ಯಡ್ರಾಮಿ ಪಟ್ಟಣದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಸ್ವೀಪರ್ ಆಗಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಯ ಕೈಯಲ್ಲಿ ಪ್ರತಿನಿತ್ಯ ಮಸಾಜ್ ಮಾಡಿಸಿಕೊಂಡು ಕಾಲಹರಣ ಮಾಡುತ್ತಿರುವ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

Loading...