ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ವಿದ್ಯಾರ್ಥಿ ಸಮೂಹ ದುಶ್ಚಟಗಳಿಂದ ದೂರವಿದ್ದರೆ ಕಾಲೇಜು ಶಿಕ್ಷಣ ಭವಿಷ್ಯ ನೀಡಲಿದೆ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ದುಶ್ಚಟಗಳಿಂದ ದೂರವಿದ್ದರೆ ಕಾಲೇಜು ಶಿಕ್ಷಣ ಭವಿಷ್ಯ ನೀಡಲಿದೆ

ಒಂದು ವರ್ಷದ ಹಿಂದೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ಅವರು ನನ್ನನ್ನು ಭೇಟಿಯಾಗಿ ಕಾಲೇಜಿಗೆ ಅಗತ್ಯವಾಗಿ ಬೇಕಾಗಿರುವ ಕೊಠಡಿಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಅದರಂತೆ ವಿವೇಕ ಯೋಜನೆಯಡಿ ಐದು ಶಾಲಾ ಕೊಠಡಿಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಬರಲಾಯಿತು.

ಅಮಾವಾಸ್ಯೆಯ ಅಂಗವಾಗಿ ಓಂ ಶಕ್ತಿ ದೇವಾಲಯದಲ್ಲಿ ಚಂಡಿಕಾಯಾಗ ಸಮರ್ಪಣೆ

ಓಂ ಶಕ್ತಿ ದೇವಾಲಯದಲ್ಲಿ ಚಂಡಿಕಾಯಾಗ ಸಮರ್ಪಣೆ

ಮಹಾ ಮಂಗಳಾರತಿ ನಂತರ ಓಂಶಕ್ತಿ ದೇವತೆಯ ಉತ್ಸವ ಮೂರ್ತಿಯನ್ನು ಹೂವುಗಳಿಂದ ಅಲಂಕೃತ ವಾದ ರಥದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರುವಣಿಗೆಯಲ್ಲಿ ನೂರಾರು ಮಂದಿ ಮಹಿಳೆಯರು ಅಂಬಲಿ ಕಲಶೋತ್ಸವದಲ್ಲಿ ಪಾಲ್ಗೊಂಡಿ ದ್ದರು. ದೇವಾಲಯದ ಆವರಣದಲ್ಲಿ ನಿರ್ಮಿಸಿದ್ದ ಅಗ್ನಿಕುಂಡವನ್ನು  ಭಕ್ತಗಣ ತುಳಿದು ಭಕ್ತಿಯನ್ನು ಸಮರ್ಪಿಸಿತು.

Chikkaballapur News: ಸಿಇಒ ಡಾ.ನವೀನ್ ಭಟ್.ವೈ ರಿಂದ ಜೆಜೆಎಂ ಕಾಮಗಾರಿ ವೀಕ್ಷಣೆ

ಸಿಇಒ ಡಾ.ನವೀನ್ ಭಟ್.ವೈ ಅವರಿಂದ ಜೆಜೆಎಂ ಕಾಮಗಾರಿ ವೀಕ್ಷಣೆ

ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿ ಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿ ಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು

Chikkaballapur News: ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ : ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ಯುವಜನರ ಭವಿಷ್ಯಕ್ಕಾಗಿ ಯುವನಿಧಿ ಯೋಜನೆ ಜಾರಿ

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್ ರಮೇಶ್ ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ ನವೀನ್ ಭಟ್ ರವರು ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿ ಯುವಜನರ ಭವಿಷ್ಯಕ್ಕಾಗಿ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯನ್ನು ಜಿಲ್ಲೆಯ ಅರ್ಹ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಆರೋಪಿಗಳಿಂದ 41 ಗ್ರಾಂ.ಬಂಗಾರದ ಒಡವೆಗಳು ಹಾಗೂ ನಗದು ಹಣ ಅಮಾನತ್ತು

ಮೂವರು ಕಳ್ಳರನ್ನು ಅರೆಸ್ಟ್ ಮಾಡಿದ ನಗರ ಠಾಣೆಯ ಪೊಲೀಸರು

ಕಳ್ಳತನ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರಿಂದ ನಗದು ಹಣ ಹಾಗೂ ಒಡವೆಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಗನ್ ಬಿನ್ ಸಂದ್ಯಾರಾಜನ್, ತಮಿಳುನಾಡು,ಸಾಧಿಕ್ ಪಾಷ,ಶಾಂತಿ ನಗರ ಹಾಗೂ ಟಿಪ್ಪು ಬೇಗ್ ಅಗ್ರಹಾರ ಎಂದು ಗುರುತಿಸಲಾಗಿದೆ.

SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್; ಅಧಿಸೂಚನೆ ಪ್ರಕಟ

ಎಸ್‌ಎಸ್ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

Passing Marks in SSLC-2nd PUC Exam: ರಾಜ್ಯದಲ್ಲಿ ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಾದರಿಯಲ್ಲೇ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ. 33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ.

ಬೆಂಗಳೂರಿಗರೇ ಜುಲೈ 26ರಂದು ಕೃಷ್ಣ ಸಂಗೀತ ಸಂಜೆಯನ್ನು ಅನುಭವಿಸಲು ಸಿದ್ಧರಾಗಿ ..!

ಜು.26ರಂದು ಕೃಷ್ಣ ಸಂಗೀತ ಸಂಜೆಯನ್ನು ಅನುಭವಿಸಲು ಸಿದ್ಧರಾಗಿ ..!

ಏಕಂ ಸತ್ ಫೌಂಡೇಶನ್‌ ಜೊತೆಗೂಡಿ ಎ ಡಿ ವೆಂಚರ್ಸ್ ಪ್ರೊಡಕ್ಷನ್‌ನಲ್ಲಿ, ಕೆಸ್ಟೋನ್‌ ಉತ್ಸವ ಕಾರ್ಯ ಕ್ರಮವನ್ನು ಆಯೋಜಿಸಿದೆ. ಈ ಸಂಗೀತ ಸಂಜೆ ಕೃಷ್ಣನ ಜೀವನ ಹಾಗೂ ತತ್ವಗಳನ್ನು ಪ್ರಸ್ತುತ ಪಡಿಸಲಿದೆ. ಉತ್ತಮ ಸಂಗೀತ, ಕಥಾ ವಿಸ್ತಾರ, ತತ್ವಗಳ ಪಾಠದ ಮೂಲಕ ಭಗವಾನ್ ಕೃಷ್ಣನನ್ನ ಕಲಾವಿದನಾಗಿ, ಯೋಧನಾಗಿ , ಚಿಂತಕನಾಗಿ ಹಾಗೂ ಉತ್ತಮ ಮಾರ್ಗದರ್ಶಕನನ್ನಾಗಿ ಈ ಕಾರ್ಯಕ್ರಮ ಕೃಷ್ಣನ ಜೀವನವನ್ನ ತೆರೆದಿಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ವಿಶೇಷ ಸುಗಂಧದ ಅನುಭವ ನೀಡಲು “ಸಿಗ್ನೇಚರ್ ಫ್ರೇಗ್ರನ್ಸ್” ಪರಿಚಯ

ಪ್ರಯಾಣಿಕರಿಗೆ ವಿಶೇಷ ಸುಗಂಧ “ಸಿಗ್ನೇಚರ್ ಫ್ರೇಗ್ರನ್ಸ್” ಪರಿಚಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಚೆಕ್-ಇನ್, ಆಗಮನ ಪ್ರದೇಶ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸುಗಂಧದ ಅನುಭವವನ್ನು ಪ್ರಯಾಣಿಕರು ಅನುಭವಿಸ ಬಹುದಾಗಿದೆ. ಜೊತೆಗೆ, ವಿಮಾನ ನಿಲ್ದಾಣವನ್ನು ನಿರ್ಗಮಿಸಿದ ಬಳಿಕವೂ ಈ ಅನುಭವ ಪ್ರಯಾ ಣಿಕರ ಮನದಲ್ಲಿ ಹಾಗೆಯೇ ಉಳಿಯಲಿದೆ.

Electoral Fraud: ರಾಜ್ಯದಲ್ಲಿ ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಬೆಂಬಲ

ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೆಂಬಲ!

CM Siddaramaiah: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Biklu Shiva murder case: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

Biklu Shiva murder case: ಬೆಂಗಳೂರಿನ ಹಲಸೂರು ಕೆರೆ ಬಳಿ ಜುಲೈ 15ರ ರಾತ್ರಿ ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಎ5 ಆರೋಪಿಯಾದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ.

Kundapra Kannada Habba 2025: ಬೆಂಗಳೂರಿನಲ್ಲಿ ಜುಲೈ 26, 27ರಂದು ʼಕುಂದಾಪ್ರ ಕನ್ನಡ ಹಬ್ಬʼ:  ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ

ಬೆಂಗಳೂರಲ್ಲಿ ಜುಲೈ 26, 27ರಂದು ʼಕುಂದಾಪ್ರ ಕನ್ನಡ ಹಬ್ಬʼ

Kundapra Kannada Habba 2025: ಕುಂದಾಪ್ರ ಕನ್ನಡ ಪ್ರತಿಷ್ಠಾನವು ಆಯೋಜಿಸಿರುವ ʼಕುಂದಾಪ್ರ ಕನ್ನಡ ಹಬ್ಬʼ ಜುಲೈ 26 ಮತ್ತು 27ರಂದು ಬೆಂಗಳೂರಿನ ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ ಬಳಿ ಇರುವ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

Bengaluru Power Cut: ಜು.26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜು.26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ IISC ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.26ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Cabinet Meeting: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 49 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ನಿರ್ಧಾರ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 49 ಕೈದಿಗಳ ಬಿಡುಗಡೆಗೆ ಸರ್ಕಾರ ನಿರ್ಧಾರ

life imprisonment: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆದಿದ್ದು, ಬಹುಮಹಡಿ ಕಟ್ಟಡಗಳಿಗೆ ಫೈರ್‌ ಸೆಸ್‌ (Fire Cess) ವಿಧಿಸುವುದು, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿಧೇಯಕವಾಗಿ ಪರಿವರ್ತಿಸುವುದು ಸೇರಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

Cabinet Meeting: ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥವು ಶಿಕ್ಷಾರ್ಹ: ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ತೀರ್ಮಾನ

ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥವು ಶಿಕ್ಷಾರ್ಹ; ಕಾಯ್ದೆ ತಿದ್ದುಪಡಿ

Child Marriage: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇನ್ನುಮುಂದೆ ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥ ಮಾಡಿಕೊಂಡರೂ ಶಿಕ್ಷೆಯಾಗಲಿದೆ. ಇದಕ್ಕೆ ಸಂಬಂಧಿಸಿ ಕಾನೂನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

Cabinet Meeting: ಬಹುಮಹಡಿ ಕಟ್ಟಡಗಳಿಗೆ ಆಸ್ತಿ ತೆರಿಗೆಯೊಂದಿಗೆ ಶೇ.1 ಫೈರ್‌ ಸೆಸ್‌; ಸಚಿವ ಸಂಪುಟ ಅನುಮೋದನೆ

ಫೈರ್‌ ಸೆಸ್‌, ಆಂಬ್ಯುಲೆನ್ಸ್ ನಿರ್ವಹಣೆ ವಿಧೇಯಕಕ್ಕೆ ಸಂಪುಟ ಒಪ್ಪಿಗೆ

Cabinet Meeting: ಫೈರ್‌ ಸೆಸ್‌ ವಿಧಿಸುವುದು, ಗಿಗ್ ಕಾರ್ಮಿಕರ ಸುಗ್ರೀವಾಜ್ಞೆ ವಿಧೇಯಕವಾಗಿ ಪರಿವರ್ತಿಸುವುದು, ಆಂಬ್ಯುಲೆನ್ಸ್ ನಿರ್ವಹಣೆಗೆ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಸೇರಿ ಪ್ರಮುಖ ನಿರ್ಣಯಗಳನ್ನು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ.

Mahadayi Project: ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಕೆಶಿ ಕಿಡಿ

DK Shivakumar: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Fathers Day Movie: ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಔಟ್‌

ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಔಟ್‌

Fathers Day Movie: ರಾಜಾರಾಮ್ ರಾಜೇಂದ್ರನ್ ನಿರ್ದೇಶನದ, ಹರ್ಷಿಲ್ ಕೌಶಿಕ್ ಹಾಗೂ ಅಜಿತ್ ಹಂಡೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ತಂದೆ - ಮಗನ ಬಾಂಧವ್ಯದ ʼಫಾದರ್ಸ್ ಡೇʼ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Eshwar Khandre: ಅರಣ್ಯಗಳಲ್ಲಿ ಹೊರ ರಾಜ್ಯದವರ ಜಾನುವಾರು ಮೇಯಿಸಲು ಮಾತ್ರ ನಿಷೇಧ: ಈಶ್ವರ ಖಂಡ್ರೆ ಸ್ಪಷ್ಟನೆ

ನೆರೆ ರಾಜ್ಯದವರಿಗೆ ಮಾತ್ರ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಕಡಿವಾಣ

Eshwar Khandre: ಅರಣ್ಯ ಹಕ್ಕು ಕಾಯ್ದೆ-2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

MP Fund: ಶಿಕ್ಷಣಕ್ಕೆ ಡಿಜಿಟಲ್ ಸ್ಪರ್ಶ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ 100 ಶಾಲೆಗಳ ಸ್ಮಾರ್ಟ್ ಕ್ಲಾಸ್ ಯೋಜನೆಗೆ 1.46 ಕೋಟಿ ರೂ. ಅನುದಾನ

ಡಾ. ಹೆಗ್ಗಡೆಯವರಿಂದ 100 ಶಾಲೆಗಳಿಗೆ 1.46 ಕೋಟಿ ರೂ. ಅನುದಾನ

ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷ ರೂ.ಯಂತೆ ಒಟ್ಟು 1.46 ಕೋಟಿ ರೂ. ಮೊತ್ತದ ಅನುದಾನವನ್ನು ಮಂಜೂರು ಮಾಡಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಚಿವ ಸಂಪುಟ ನಿರ್ಧಾರ

karnataka cabinet meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Nandan Bhat: ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಸಾವು

ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಸಾವು

Nandan Bhat: ಕಳೆದ ವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಆದರೆ, ಇವರ ಆತ್ಮಹತ್ಯೆಗೆ ಕಾರಣವೇನು ಅನ್ನೋದು ಇನ್ನೂ ತಿಳಿದುಬಂದಿಲ್ಲ.

Rameshwaram Cafe: ಪ್ರಸಿದ್ಧ ರಾಮೇಶ್ವರಂ ಕೆಫೆ ಪೊಂಗಲ್‌ನಲ್ಲಿ ಸತ್ತ ಜಿರಳೆ ಪತ್ತೆ: ಗ್ರಾಹಕರಿಂದ ಆಕ್ರೋಶ

ರಾಮೇಶ್ವರಂ ಕೆಫೆಯ ಪೊಂಗಲ್‌ನಲ್ಲಿ ಹುಳು ಪತ್ತೆ..!

Kempegowda International Airport: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆಯ ಆಹಾರದ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಗ್ರಾಹಕರೊಬ್ಬರು ಖರೀದಿಸಿದ ಪೊಂಗಲ್ ತಿಂಡಿಯಲ್ಲಿ ಜಿರಳೆ ಪತ್ತೆಯಾದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತಾದ ಸುದ್ದಿ ವೈರಲ್ ಆಗಿದ್ದು, ವಿಮಾನ ನಿಲ್ದಾಣದ ಆಹಾರದ ಭದ್ರತೆಗೆ ಗಂಭೀರ ಎಚ್ಚರಿಕೆ ನೀಡಿದೆ.

Actor Darshan: ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ಗೆ 10 ದಿನ ರಿಲೀಫ್‌, ತೀರ್ಪು ಕಾಯ್ದಿರಿಸಿದ ನ್ಯಾಯಪೀಠ

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ಗೆ 10 ದಿನ ರಿಲೀಫ್‌, ತೀರ್ಪು ಮುಂದೂಡಿಕೆ

Supreme Court: ದರ್ಶನ್‌ & ಗ್ಯಾಂಗ್‌ನಿಂದ ನಡೆದಿದ್ದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಹಾಗೂ ಮತ್ತಿತರರ ಪರ ವಾದ ಮಂಡನೆ ಮುಕ್ತಾಯವಾಗಿದೆ. ವಾದ, ಪ್ರತಿವಾದ ಆಲಿಸಿ ಸುಪ್ರೀಂ ಕೋರ್ಟ್‌ ಆದೇಶ ಕಾಯ್ದಿರಿಸಿದೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್​ಗೆ 10 ದಿನಗಳ ಕಾಲ ತಾತ್ಕಾಲಿಕ ರಿಲೀಫ್ ದೊರೆತಿದೆ.

Viral News: ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

ಉಕ್ಕಿ ಹರಿಯುವ ನದಿ ದಾಟಿ ಹೋಗಿ ಪರೀಕ್ಷೆ ಬರೆದ ಯುವತಿ, ವಿಡಿಯೋ ವೈರಲ್

Kalaburagi: ಈಕೆ ಪರೀಕ್ಷೆ ಬರೆಯುವುದಕ್ಕಾಗಿ, ಉಕ್ಕಿ ಹರಿಯುತ್ತಿದ್ದ ನದಿಯನ್ನೇ ಪ್ರಾಣದ ಹಂಗು ತೊರೆದು ದಾಟಿ ಹೋಗಿದ್ದಾಳೆ. ಆಕೆಗೆ ಆಕೆಯ ತಂದೆ ನೆರವಾಗಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ವೈರಲ್‌ (Viral news) ಆಗಿವೆ.

Loading...