ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ಸಂಸ್ಥಾಪಕರ ಆಸಕ್ತಿದಾಯಕ ವಿವರ

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ವಿವರ

ಕಾರ್ಪೊರೇಟ್ ಜಗತ್ತಿನಲ್ಲಿ ಹಲವಾರು ವರ್ಷಗಳನ್ನು ಕಳೆದ ನಂತರ, ನಾನು ಹೆಚ್ಚು ವೈಯಕ್ತಿಕ ಮತ್ತು ಅರ್ಥಪೂರ್ಣವಾದದ್ದನ್ನು ಮಾಡಲು ಬಯಸುವ ಹಂತವನ್ನು ತಲುಪಿದೆ. ಬೆಳೆದ ನಂತರ, ಆಹಾರವು ಯಾವಾಗಲೂ ನನ್ನ ಜೀವನದಲ್ಲಿ ಕೇಂದ್ರವಾಗಿತ್ತು, ವಿಶೇಷವಾಗಿ ನನ್ನ ಅಜ್ಜಿಯ ಅಡುಗೆಮನೆಯಲ್ಲಿ ಬೇಯಿಸಿದ ಸರಳ, ಆರೋಗ್ಯಕರ ಆಹಾರ. ಆ ಸುವಾಸನೆ, ಮತ್ತು ಎಲ್ಲವನ್ನೂ ತಯಾರಿಸುವ ಕಾಳಜಿ ನನ್ನೊಂದಿಗೆ ಉಳಿದುಕೊಂಡಿತು.

Karnataka Madara Mahasabha: ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ : ಪಟ್ರೇನಹಳ್ಳಿ ಕೃಷ್ಣಪ್ಪ ಹೇಳಿಕೆ

ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ

ಕರ್ನಾಟಕ ಮಾದಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣಪ್ಪ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು

Chikkaballapur News: ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ : ಟಿ.ಜಿ.ಶಿವಶಂಕರೇಗೌಡ

ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಮುಖ್ಯವಾಹಿನಿಗೆ ಬರಲು ಸಾಧ್ಯ

ಹೆಣ್ಣು ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ ವಾಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ, ಸಿಇಟಿ ಸೇರಿದಂತೆ ವಿವಿಧ ಹಂತದ ಕೋರ್ಸುಗಳಲ್ಲಿ ಹೆಣ್ಣುಮಕ್ಕಳೇ ಮೊದಲ ರ‍್ಯಾಂಕ್‌ಗಳನ್ನು ಪಡೆಯು ತ್ತಿರುವುದು ಒಳ್ಳೆಯ ಬೆಳವಣಿಗೆ

Chimul Election: ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ, ಭರಣಿ ವೆಂಕಟೇಶ್ ಅವರ ಖಾಲಿ ಡಬ್ಬಾ ಹೇಳಿಕೆಗೆ ತೀವ್ರ ಖಂಡನೆ: ಕ್ಷಮೆ ಕೋರಲು ಆಗ್ರಹ

ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಚುನಾವಣೆಯಲ್ಲಿ ನನ್ನ ಸೋಲಿಗೆ ನಾನೇ ಕಾರಣ. ಚುನಾವಣಾ ಪೂರ್ವ ತಯಾರಿಗೆ ಸಮಯದ ಅಭಾವ ವಿತ್ತು. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಇದು ನನ್ನ ಮೊದಲ ಅನುಭವ. ಗೋಪಾಲಕರ ಸೇವೆ ಮಾಡುವ ಉದ್ದೇಶದಿಂದ ಸ್ಪರ್ಧಿಸಿ ಆತುರದ ನಿರ್ಧಾರದ ಕಾರಣ ಸೋಲು ಕಂಡೆ. ಇನ್ನೂ ಗೆದ್ದ ಸಂತೋಷದಲ್ಲಿ ಭರಣಿ ವೆಂಕಟೇಶ್ ಅವರು ನನ್ನ ಹಿಂದೆ ಇದ್ದವರು ಖಾಲಿ ಡಬ್ಬಾಗಳು ಎಂದು ಹೇಳಿರುವುದು ಘನತೆಗೆ ತಕ್ಕದಲ್ಲ.ನಾವು ಖಾಲಿ ಡಬ್ಬಾಗಳೆ ಆಗಿರಲಿ.

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹ; ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ

ವಿಧಾನಸೌಧದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರಿಂದ ಅಹೋರಾತ್ರಿ ಧರಣಿ

BJP-JDS Overnight Dharna: ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಧರಣಿ ನಡೆಸಲಾಯಿತು.

Foxconn tax issue: ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು: ಜಿಪಂ ಸಿಇಒ ಸ್ಪಷ್ಟನೆ

ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು

ಫಾಕ್ಸ್‌ಕಾನ್ ಕಂಪನಿಗೆ ತೆರಿಗೆ ಪಾವತಿಸಲು ಸೂಚಿಸಿ ಎಂಟು ಸಲ ನೋಟಿಸ್ ನೀಡಲಾಗಿತ್ತು. ಆದರೆ ಅದು ಯಾವುದಕ್ಕೂ ಉತ್ತರಿಸಿಲ್ಲ. ಈಗ ಆ ಪ್ರದೇಶವನ್ನು ಎಸ್ಐಆರ್ ಎಂದು ಘೋಷಿಸಿರುವುದರಿಂದ ಗ್ರಾಪಂ ಕಡೆಯಿಂದ ನೋಟೀಸ್ ನೀಡುವ ಪ್ರಮೇಯವೇ ಉದ್ಭವಿಸದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿಇಒ ಕೆ.ಎನ್ ಅನುರಾಧ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಉಳವಿಯಲ್ಲಿ ಸಂಭ್ರಮ, ಸಡಗರದಿಂದ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

ಶ್ರೀ ಕ್ಷೇತ್ರ ಉಳವಿಯಲ್ಲಿ ನೆರವೇರಿದ ಚೆನ್ನಬಸವೇಶ್ವರ ಮಹಾ ರಥೋತ್ಸವ

Ulavi Channabasaveshwara Swamy Rathotsava : ಉಳವಿ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಸಂಜಯ ಕಿತ್ತೂರು ಅವರು ಚನ್ನಬಸವೇಶ್ವರ ರಥಕ್ಕೆ ಪೂಜೆ ಸಲ್ಲಿಸಿ ಭಕ್ತಾರೊಂದಿಗೆ ರಥ ಎಳೆಯುವುದರ ಮೂಲಕ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ವಿವಿಧೆಡೆಯಿಂದ ಸಾವಿರಾರು ಭಕ್ತರು ಭಾಗಿಯಾಗಿದ್ದರು.

ಜನವರಿಯಲ್ಲಿ 4,894 ಮೆ. ಟನ್ ಮೈಸೂರು ಸ್ಯಾಂಡಲ್‌ ಸೋಪ್ ಉತ್ಪಾದನೆ; ಸಾರ್ವಕಾಲಿಕ ದಾಖಲೆ

ಜನವರಿಯಲ್ಲಿ 4,894 ಮೆ. ಟನ್ ಮೈಸೂರು ಸ್ಯಾಂಡಲ್‌ ಸೋಪ್ ಉತ್ಪಾದನೆ

MB Patil: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಔರಾದ್‌ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್‌ ಜಿಲ್ಲೆಯ ಔರಾದ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 50 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ಜರುಗಿದೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

VB–G RAM G Act: ವಿಬಿ ಜಿ ರಾಮ್ ಜಿ ಜಾರಿಯಿಂದ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಧ್ವಂಸ: ಸಿಎಂ ಕಿಡಿ

ವಿಬಿ ಜಿ ರಾಮ್ ಜಿ ಜಾರಿಯಿಂದ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಧ್ವಂಸ: ಸಿಎಂ

ವಿಧಾನಸಭಾ ಕಲಾಪದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಕುರಿತಂತೆ ನಡೆದ ಚರ್ಚೆ ವೇಳೆ ಮಂಗಳವಾರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ವಿಬಿಜಿ ರಾಮ್ ಜಿ ಕಾಯ್ದೆಯ ದುಷ್ಪರಿಣಾಮಗಳೆಂದರೆ ನಿರುದ್ಯೋಗದ ಪ್ರಮಾಣ ಹೆಚ್ಚಳವಾಗುತ್ತದೆ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆಯಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಫೆ.14, 15ರಂದು ಕೆಂಗೇರಿಯಲ್ಲಿ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ, ಸಾವಯವ ಸಂತೆ ಸೇರಿ ವಿವಿಧ ಕಾರ್ಯಕ್ರಮ

ಫೆ.14, 15ರಂದು ಒಕ್ಕಲಿಗ ಯುವ ಬ್ರಿಗೇಡ್‌ನಿಂದ ವಿವಿಧ ಕಾರ್ಯಕ್ರಮ

ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಆವರಣದಲ್ಲಿ ಫೆ. 14 ಮತ್ತು 15ರಂದು 2 ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ, ಸಾವಯವ ಸಂತೆ, ವಸ್ತು ಪ್ರದರ್ಶನ, ವಧು ವರರ ಮುಖಾ-ಮುಖಿ ಮತ್ತು ಆರೋಗ್ಯ ಶಿಬಿರ, ರೈತರಿಗೆ ಮಲೆನಾಡು ಗಿಡ್ಡಗಳ ವಿತರಣೆ ಮಾಡಲಾಗುತ್ತದೆ.

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

Age Relaxation: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಸಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ

Government Recruitment: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.

ವಿಬಿ ಜಿ ರಾಮ್‌ ಜಿ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ವಿಬಿ ಜಿ ರಾಮ್‌ ಜಿ ವಿರೋಧಿಸಿ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸಿದ್ದಾರೆ. ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಅನ್ನು ಈ ಹಿಂದಿನಂತೆ ಮರುಸ್ಥಾಪಿಸಬೇಕು ಎಂದು ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಅನೈತಿಕ ಸಂಬಂಧ ವಿಚಾರಕ್ಕೆ ವ್ಯಕ್ತಿಯ ಕೊಲೆ; ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿ 7 ಮಂದಿ ಬಂಧನ

ಸಿದ್ದಾಪುರದಲ್ಲಿ ವ್ಯಕ್ತಿಯ ಕೊಲೆ; ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಬಂಧನ

Siddapura Murder Case: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ ಭಟ್‌ ಗುರೂಜಿ ಜತೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳು. ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದೆ.

Kagodu Thimmappa: ಸಾಗರ ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ.

Murder Case: ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಶವದ ಮೇಲೆ ಕಾಲಿಟ್ಟು ನಿಂತ!

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ.

Murder Case: ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಉಮರ್ ಮತ್ತು ಜುಮೈಲ ಚಿಕ್ಕಪ್ಪ ಶೇಕುಂ ನಡುವೆ ಜಗಳ ಆಗುತ್ತಿದ್ದಾಗ ಜಗಳ ಬಿಡಿಸಲು ಉಮರ್ ಮಗಳು ಜುಮೈಲಾ ಬಂದಿದ್ದಳು. ಈ ವೇಳೆ ‌ಶೇಕುಂಗಾಗಿ ಬೀಸಿದ ಅಪ್ಪನ ಕತ್ತಿ ಏಟು ತಗುಲಿ ಜುಮೈಲ ಸಾವನ್ನಪ್ಪಿದ್ದಾಳೆ. ಆರೋಪಿ ಉಮರ್ ಫಾರೂಕ್‌ನನ್ನು ಮಂಜೇಶ್ವರ ಠಾಣೆ ಪೋಲೀಸರು ಆರೆಸ್ಟ್ ಮಾಡಿದ್ದಾರೆ.

Wildfire: ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಭಾರಿ ಪ್ರಮಾಣದ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

Murder Case: ಬರ್ಬರ ಕೃತ್ಯ, ಸಾಲ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ, ಇಬ್ಬರು ಮಕ್ಕಳು ಅನಾಥ

ಬರ್ಬರ ಕೃತ್ಯ, ಸಾಲ ಮಾಡಿದ್ದು ಆಕ್ಷೇಪಿಸಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ

ರಕ್ತದ ಮಡುವಿನಲ್ಲೇ ಪ್ರಾಣ ಉಳಿಸಿಕೊಳ್ಳಲು ಮಾಸಬ್ಬಿ ಮನೆಯ ಹೊರಗೆ ಓಡಿ ಬಂದಿದ್ದಾಳೆ. ಮನೆಯ ಎದುರಲ್ಲೇ ಬಿದ್ದು ಒದ್ದಾಡುತ್ತಿದ್ದ ಮಾಸಬ್ಬಿಯನ್ನು ಹಿಂಬಾಲಿಸಿದ ಪಾಪಿ, ಮತ್ತೆ ಕತ್ತಿಗೆ ಚಾಕು ಇರಿದು ಸ್ಥಳದಲ್ಲೇ ಕೊಂದಿದ್ದಾನೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

Karnataka Weather: ರಾಜ್ಯದಲ್ಲಿ ಒಣಹವೆ, ಮುಂದುವರಿದ ಚಳಿ, ದೂಳು ಹೆಚ್ಚಳ

ರಾಜ್ಯದಲ್ಲಿ ಒಣಹವೆ, ಮುಂದುವರಿದ ಚಳಿ, ದೂಳು ಹೆಚ್ಚಳ

ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಗಿಡಗಳು ಹೂಬಿಡುವ ಸಮಯ ಹಾಗೂ ದೂಳಿನ ಹೆಚ್ಚಳ ಆಗುತ್ತಿರುವುದರಿಂದ ಪೋಲನ್‌ ಮತ್ತು ಡಸ್ಟ್‌ ಅಲರ್ಜಿ ಇರುವವರು ಎಚ್ಚರದಿಂದ ಇರುವಂತೆ ವೈದ್ಯರು ಸೂಚಿಸಿದ್ದಾರೆ.

Self Harming: ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್‌ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

Hate Speech Bill: ರಾಜ್ಯ ಸರಕಾರ vs ರಾಜ್ಯಪಾಲ: ದ್ವೇಷ ಭಾಷಣ ಬಿಲ್‌ಗೆ ಸಹಿ ಹಾಕದೇ ರಾಷ್ಟ್ರಪತಿಗೆ ಕಳಿಸಿದ ರಾಜ್ಯಪಾಲರು

ದ್ವೇಷ ಭಾಷಣ ಬಿಲ್‌ಗೆ ಸಹಿ ಹಾಕದೇ ರಾಷ್ಟ್ರಪತಿಗೆ ಕಳಿಸಿದ ರಾಜ್ಯಪಾಲರು

ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರುವ ಬಗ್ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಉಲ್ಲೇಖ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗಳಕ್ಕೆ ರವಾನೆ ಮಾಡಿದ್ದಾರೆ. ರಾಷ್ಟ್ರಪತಿಗಳಿಗೆ ಬಿಲ್ ವರ್ಗಾವಣೆ ಮಾಡೋದಕ್ಕೆ ರಾಜ್ಯಪಾಲರು 29 ಕಾರಣಗಳನ್ನ ನೀಡಿದ್ದಾರೆ.

ಬಂಗಾರಕ್ಕಾಗಿ ಹೆಲಿಕಾಪ್ಟರ್ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ದರ ಏರಿಕೆ ನಿರೀಕ್ಷೆ.

ಬಂಗಾರಕ್ಕಾಗಿ ಹೆಲಿಕಾಪ್ಟರ್ ಸರ್ವೆ

ಕರ್ನಾಟಕದಲ್ಲಿ ಒಂದು ಕಾಲಕ್ಕೆ ಕೋಲಾರದ ಚಿನ್ನದ ಗಣಿ ಖ್ಯಾತಿ ಪಡೆದಿತ್ತು. ನಂತರ ಈ ಸಾಲಿಗೆ ಹಟ್ಟಿ ಚಿನ್ನದ ಗಣಿ ಸೇರ್ಪಡೆಯಾಗಿ ನಿನ್ನೆ ಮೊನ್ನೆಯವರೆಗ ಚಿನ್ನವನ್ನು ಇಲ್ಲಿಂದ ಪಡೆಯಲಾಗುತ್ತಿತ್ತು. ಆದರೆ ಸುಮಾರು ಒಂದುವರೆ ದಶಕಗಳ ಹಿಂದಯೇ ಕೋಲಾರದ ಚಿನ್ನದ ಗಣಿ ಮುಚ್ಚಲ್ಪಟ್ಟಿದ್ದು ಪ್ರಸ್ತುತ ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ಕೆ.ಜಿ.ಎಫ್ ಗಣಿಯನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮರು ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲಿ ಯೇ, ಮತ್ತೊಂದು ಚಿನ್ನದ ನಿಕ್ಷೇಪ ಗುಡಿಬಂಡೆಯ  ಸಮೀಪ ಇರುವ ಬಗ್ಗೆ ಸೆರ್ವೆ ಕಾರ್ಯದಲ್ಲಿ ಬೆಳಕಿಗೆ ಬಂದಿದೆ

Loading...