ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Dr K Kasturirangan: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್‌ ನಿಧನ

Dr K Kasturirangan: 1994 ರಿಂದ 2003ರವರೆಗೆ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷರಾಗಿದ್ದ ಡಾ.ಕೆ. ಕಸ್ತೂರಿ ರಂಗನ್‌ ಅವರು, 2003ರಿಂದ 2009ರವರೆಗೆ ರಾಜ್ಯಸಭೆ ಸದಸ್ಯರಾಗಿದ್ದರು. ಇನ್ನು ಇವರು ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿಯಾಗಿದ್ದಾರೆ.

Pahalgam terror attack: ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್; ಮಂಗಳೂರಿನಲ್ಲಿ ಕಿಡಿಗೇಡಿ ವಿರುದ್ಧ ಕೇಸ್‌

ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್;‌ ಕೇಸ್‌ ದಾಖಲು

Pahalgam terror attack: 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ಕಿಡಿಗೇಡಿ, ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.

Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

9.82 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್‌ ಮೇಲೆ ಗುರುವಾರ (ಏ.24) ರಂದು ದಾಳಿ ನಡೆಸಿದ್ದರು. ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದ್ದರು.

‌Ricky Rai Shoot out: ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ! ಬಾಯಿ ಬಿಟ್ಟ ಗನ್‌ ಮ್ಯಾನ್

ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್‌ ಮ್ಯಾನ್

ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 25th April 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಕಂಡು ಬಂದಿದ್ದು, 9,005ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆ ಆಗಿ ಪ್ರಸ್ತುತ 9,824 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,050 ರೂ. ಮತ್ತು 100 ಗ್ರಾಂಗೆ 9,00,500 ರೂ. ನೀಡಬೇಕಾಗುತ್ತದೆ.

Mittu Changappa passed Away: ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಇಂದಿರಾ ಗಾಂಧಿ ಆಪ್ತ, ಕಾಂಗ್ರೆಸ್‌ ನಾಯಕ ಮಿಟ್ಟು ಚಂಗಪ್ಪ ಇನ್ನಿಲ್ಲ

ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದ ಮಿಟ್ಟು ಅವರು ಇಂದಿರಾ ಗಾಂಧಿ, ಗುಂಡೂರಾವ್, ಎಸ್.ಎಂ. ಕೖಷ್ಣ, ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಆತ್ಮೀಯರಾಗಿದ್ದರು. 32 ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಗಮನ ಸೆಳೆದಿದ್ದರು.

Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.

Ricky Rai Shoot Out: ರಿಕ್ಕಿ ರೈ ಮೇಲೆ ಗುಂಡು; ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ರಿಕ್ಕಿ ರೈ ಮೇಲೆ ಗುಂಡು; ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ಹಲವು ಕಾರಣಗಳಿಂದಾಗಿ ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ವಿಠಲ್‌ ಮೇಲೆ ಪೊಲೀಸರಿಗೆ ಅನುಮಾನ ಹೆಚ್ಚಿದೆ. ಸದ್ಯ ಆತ ಆಸ್ಪತ್ರೆಯಲ್ಲಿದ್ದಾನೆ. ಗನ್‌ಮ್ಯಾನ್‌ ಸ್ವತಃ ಇದನ್ನು ಮಾಡಿದನೇ ಅಥವಾ ರಿಕ್ಕಿ ರೈಯೇ ಇದನ್ನು ಮಾಡಿಸಿ ಫೈರಿಂಗ್‌ನ ನಾಟಕವಾಡಿದನೇ ಎನ್ನುವ ಅನುಮಾನ ಕೂಡ ಪೊಲೀಸರಿಗೆ ಮೂಡಿದೆ.

Hubballi Encounter: ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ರಿತೇಶ್ ಎನ್‌ಕೌಂಟರ್ ಪ್ರಕರಣ: ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸರಕಾರ

ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್‌ 13ರಂದು ರಿತೇಶ್‌ನನ್ನು ಕೊಲ್ಲಲಾಗಿತ್ತು.

Grater Bangalore: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಈ ಹಿಂದೆ ವಿಧೇಯಕವನ್ನು ರಾಜ್ಯಪಾಲರು ಅಂಕಿತ ಹಾಕದೆ ಮರಳಿ ಕಳಿಸಿ, ಕೆಲವು ಸ್ಪಷ್ಟನೆಗಳನ್ನು ಕೇಳಿದ್ದರು. ರಾಜ್ಯ ಸರ್ಕಾರ ಸ್ಪಷ್ಟನೆಗಳೊಂದಿಗೆ ಮರಳಿ ಕಳಿಸಿತ್ತು. ನಿನ್ನೆ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಗೆಜೆಟ್ ಮೂಲಕ ಪ್ರಕಟಿಸಲಿದೆ.

Road Accident: ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ

ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ

ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Om Prakash Murder Case: ಓಂ ಪ್ರಕಾಶ್‌ ಹತ್ಯೆ ಕೇಸ್‌, ಆರೋಪಿ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ

ಓಂ ಪ್ರಕಾಶ್‌ ಹತ್ಯೆ ಕೇಸ್‌, ಆರೋಪಿ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ

ಪಲ್ಲವಿ ತಾನೇ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಪ್ರಕರಣದ ಗಂಭೀರತೆ ಅರಿತ ನಗರ ಪೊಲೀಸ್‌ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಇದರ ಬೆನ್ನಲ್ಲೇ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಪ್ರಕರಣದ ಕಡತಗಳು ಹಾಗೂ ದಾಖಲೆಗಳನ್ನು ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಿದ್ದರು.

Karnataka Rains: ಹವಾಮಾನ ವರದಿ; ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ° C ಮತ್ತು 23 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಂತ್ರಜ್ಞಾನ ಚಾಲಿತ ಶಿಕ್ಷಣ ನೀಡುವತ್ತ ರಿಯಲ್‌ ಮಿ ಹಾಗೂ ಭೂಮಿ ಸಹಯೋಗ

ತಂತ್ರಜ್ಞಾನ ಚಾಲಿತ ಶಿಕ್ಷಣ ನೀಡುವತ್ತ ರಿಯಲ್‌ ಮಿ ಹಾಗೂ ಭೂಮಿ ಸಹಯೋಗ

2020 ರಿಂದ ಪ್ರಾರಂಭಗೊಂಡ ಈ ಕಾರ್ಯ ಕ್ರಮವು 21 ಶಾಲೆಗಳನ್ನು ತೊಡಗಿಸಿಕೊಂಡಿದ್ದು, 5,352 ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ. ಪ್ರಸ್ತುತ 75 ಶಾಲೆಗಳೊಂದಿಗೆ ಸಂಪರ್ಕಹೊಂದಿದ್ದು, ಈ ಮೂಲಕ 13,017 ಕ್ಕೂ ಹೆಚ್ಚು ವಿದ್ಯಾರ್ಥಿ ಗಳಿಗೆ ನೆರವು ದೊರೆಯಲಿದೆ. ಇದರಿಂದ ಶಿಕ್ಷಣ ಕ್ಷೇತ್ರದಾದ್ಯಂತ ಬದಲಾ ವಣೆಯನ್ನು ತರುವ ಜೊತೆಗೆ, ವಿದ್ಯಾರ್ಥಿಗಳ ಜ್ಞಾನದ ಮಟ್ಟವನ್ನು ಸುಧಾರಿಸಲಾಗುತ್ತದೆ

Bengaluru News: ನಾರಾಯಣ ಸೇವಾ ಸಂಸ್ಥಾನದಿಂದ ಸತತ ಮೂರನೇ ವರ್ಷದ ನಾರಾಯಣ್ ಕೃತಕ ಅಂಗಾಂಗ ಜೋಡಣಾ ಶಿಬಿರ

ಕರ್ನಾಟಕದಲ್ಲಿ 700 ಕ್ಕೂ ಹೆಚ್ಚು ವಿಕಲ ಚೇತನರ ಬದುಕಿನಲ್ಲಿ ಆಶಾಕಿರಣ

ಕಳೆದ 40 ವರ್ಷಗಳಿಂದ ವಿಶೇಷ ಚೇತನರ ಪರವಾಗಿ ಕೆಲಸ ಮಾಡುತ್ತಿದೆ. ಫೆಬ್ರವರಿ 2 ರಂದು ಬೆಂಗಳೂರಿ ನಲ್ಲಿ 1,050 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಅವರಲ್ಲಿ 694 ವ್ಯಕ್ತಿಗಳು ರಸ್ತೆ ಅಥವಾ ಇತರ ಅಪಘಾತಗಳಿಂದಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದರು. ಈ ವ್ಯಕ್ತಿಗಳಿಗೆ ಇದೀಗ ಅಂಗಾಂಗ ಜೋಡಿಸ ಲಾಗುತ್ತಿದೆ

Begane Ramaiah: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

Begane Ramaiah: ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು, ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇವರು 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1978ರಲ್ಲಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಗೆದ್ದಿದ್ದರು.

Fraud case: ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

ಚಿನ್ನ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ಇಡಿ ವಶಕ್ಕೆ

Fraud case: ಐಶ್ವರ್ಯ ಗೌಡ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಮನೆ, ಬೆಂಗಳೂರಿನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಜೀನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ದೂರು; ಆರೋಪ ನಿರಾಕರಿಸಿದ ದಿಲೀಪ್‌ ಕುಮಾರ್

ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಜೀನಿ ಸಂಸ್ಥೆ ಮಾಲೀಕ

Physical abuse: ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್‌ಕುಮಾರ್ ಅವರು, ತಾನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ ಎಂದು ಆರೋಪಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್‌; ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

Karnataka Weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tumkur News: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

Tumkur News: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಮೃತಪಟ್ಟು ಇಡೀ ದೇಶ ಶೋಕಚರಣೆಯಲ್ಲಿರುವಾಗ, ತುಮಕೂರಿನಿಂದ ವರ್ಗಾವಣೆಯಾಗಿರುವ ಸಿಪಿಐ ಗೆ ತೆರೆದ ಜೀಪಿನಲ್ಲಿ ರೋಡ್ ಶೋ ಮಾಡಿ, ಅದ್ಧೂರಿಯಾಗಿ ಬೀಳ್ಕೊಡುಗೆ ಆಚರಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Rahul Gandhi:  ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೇ ಕಾಶ್ಮೀರದಲ್ಲಿ ದಾಳಿ ; ಪೋಸ್ಟ್ ಮಾಡಿದ ಕರ್ನಾಟಕ ಬಿಜೆಪಿ ಐಟಿ ಸೆಲ್​​ ವಿರುದ್ಧ ಕೇಸ್

ರಾಹುಲ್‌ ಗಾಂಧಿಗೂ, ಪಹಲ್ಗಾಮ್‌ ದಾಳಿಗೂ ಲಿಂಕ್‌; ಬಿಜೆಪಿ ಮೇಲೆ ಎಫ್‌ಐಆರ್‌

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

DK Shivakumar: ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ: ಡಿಕೆಶಿ

DK Shivakumar: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.