ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Appu Cup Season 3: ಅಪ್ಪು ಕಪ್‌ ಸೀಸನ್‌ 3; ʼಯುವರತ್ನ ಚಾಂಪಿಯನ್ಸ್‌ʼ ತಂಡದಿಂದ ಭರ್ಜರಿ ಸಿದ್ಧತೆ

Appu Cup Season 3: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪು ಕಪ್‌ ಸೀಸನ್‌ 3ʼ ಪಂದ್ಯಾವಳಿ ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದ್ದು, ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ. ಈ ಕುರಿತ ವಿವರ ಇಲ್ಲಿದೆ.

ಅಪ್ಪುಕಪ್‌ ಸೀಸನ್‌ 3; ಯುವರತ್ನ ಚಾಂಪಿಯನ್ಸ್‌ ತಂಡದಿಂದ ಭರ್ಜರಿ ಸಿದ್ಧತೆ

Profile Siddalinga Swamy Jul 23, 2025 8:44 PM

ಬೆಂಗಳೂರು: ದಿವಂಗತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪು ಕಪ್‌ ಸೀಸನ್‌ 3ʼ (Appu Cup Season 3) ಪಂದ್ಯಾವಳಿ ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್‌ ಹಿಡಿದು ಬ್ಯಾಡ್ಮಿಂಟನ್‌ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್‌ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ.

ಇಂದು ನಗರದ ಕರ್ನಾಟಕ ರಾಜ್ಯ ಬಿಲಿಯರ್ಡ್ಸ್‌ ಅಸೋಸಿಯೇಷನ್‌ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ʼಯುವರತ್ನ ಚಾಂಪಿಯನ್ಸ್‌ʼ ತಂಡದ ಮುಂದಾಳತ್ವವನ್ನು ವಹಿಸಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಈ ಕುರಿತು ಮಾತನಾಡಿ, ಮುಂಬರುವ ಅಪ್ಪು ಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲು ನಮ್ಮ ತಂಡ ಅತ್ಯಂತ ಶ್ರದ್ಧೆಯಿಂದ ಸಿದ್ಧತೆಯನ್ನು ನಡೆಸುತ್ತಿದೆ. ಯುವರತ್ನ ತಂಡವು ಹಿಂದೆಯೂ ಉತ್ತಮ ಪ್ರದರ್ಶನ ನೀಡಿದೆ. ಅದೇ ರೀತಿ ಮುಂಬರುವ ಟೂರ್ನಿಗಾಗಿ ನಾವು ಮಾನಸಿಕ ಮತ್ತು ದೈಹಿಕವಾಗಿ ತರಬೇತಿ ಪಡೆದಿದ್ದು, ಯಶಸ್ಸನ್ನು ಕಾಣಲು ಸಿದ್ಧರಾಗಿದ್ದೇವೆ ಎಂದರು.

ಯುವರತ್ನ ತಂಡದಲ್ಲಿ ಮಹೇಶ್, ಸಿದ್ಧೇಶ್, ಮಂಜು, ಸ್ಪೂರ್ತಿ, ಕಾರ್ತಿಕ್ (ನಿರ್ದೇಶಕ), ರಂಜನ್, ಅರ್ಪಿತಾ ಗೌಡ, ರಿತ್ವಿ ಜಗದೀಶ್, ಹರಿ, ಲಾವಣ್ಯ, ಮತ್ತು ಐಶ್ವರ್ಯ ಸೇರಿದಂತೆ ಇನ್ನೂ ಹಲವಾರು ಕಲಾವಿದರಿದ್ದಾರೆ. ಅವರ ಪಾಲ್ಗೊಳ್ಳುವಿಕೆಯಿಂದ ತಂಡ ಬಲಿಷ್ಟವಾಗಿದೆ ಮತ್ತು ನಮ್ಮ ತಂಡವು ರಾಜ್ಯದಾದ್ಯಂತ ಅಭಿಮಾನಿಗಳನ್ನು ಸೆಳೆಯುವ ನಿರೀಕ್ಷೆಯಿದೆ ಎಂದು ಇಂದ್ರಜಿತ್ ಲಂಕೇಶ್‌ ಅವರು ತಿಳಿಸಿದರು.

ಇಂದಿನ ಅಭ್ಯಾಸ ಪಂದ್ಯಕ್ಕೆ ʼಯುವರತ್ನ ಚಾಂಪಿಯನ್ಸ್‌ʼ ತಂಡವನ್ನು ಹುರಿದುಂಬಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಪಂದ್ಯಾವಳಿಯಲ್ಲಿ ಭಾಗವಹಿಸುವ ಸ್ಪರ್ಧಿಗಳನ್ನು ಭೇಟಿ ಮಾಡಿ ಶುಭ ಹಾರೈಸಿದರು. ಈ ವೇಳೆ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರ ಮಾಧ್ಯಮ ಸಲಹೆಗಾರರಾದ ಲಕ್ಷ್ಮೀ ನಾರಾಯಣ್ ಅವರು ಉಪಸ್ಥಿತರಿದ್ದರು.‌

ಈ ಸುದ್ದಿಯನ್ನೂ ಓದಿ | IBPS Recruitment: ಬ್ಯಾಂಕ್‌ ಉದ್ಯೋಗಾರ್ಥಿಗಳಿಗೆ ಗುಡ್‌ನ್ಯೂಸ್‌; 6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ IBPS

ಯುವರತ್ನ ತಂಡದ ಮಾಲೀಕತ್ವವನ್ನು ಮೀಡಿಯಾ ಕನೆಕ್ಟ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಸಿಇಒ ಡಾ. ದಿವ್ಯಾ ರಂಗೇನಹಳ್ಳಿ ಮತ್ತು ಹರ್ಷ ವಹಿಸಿಕೊಂಡಿದ್ದರು. ಶೀಘ್ರದಲ್ಲಿ ಪಂದ್ಯ ಆರಂಭಗೊಳ್ಳಲಿದ್ದು, ಕ್ರೀಡಾಪಟುಗಳು ಹೆಚ್ಚು ಉತ್ಸಾಹದಿಂದ ಕಾಯುತ್ತಿದ್ದಾರೆ. ʼಅಪ್ಪು ಕಪ್‌ʼ ಟೂರ್ನಿಯು ಸಿನಿ ರಸಿಕರಿಗೆ ಹಬ್ಬವನ್ನುಂಟು ಮಾಡುವುದರಲ್ಲಿ ಎರಡು ಮಾತಿಲ್ಲ ಎಂದು ಅವರು ಹೇಳಿದ್ದಾರೆ.