ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi News: ಅಕ್ರಮ ಸಂಬಂಧ ಆರೋಪ; ಅಡವಿಸಿದ್ಧೇಶ್ವರ ಮಠದಿಂದ ಸ್ವಾಮೀಜಿ ಉಚ್ಚಾಟನೆ

Belagavi News: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರದಲ್ಲಿ ಘಟನೆ ನಡೆದಿದೆ. ಮಠದಲ್ಲಿ ಸ್ವಾಮೀಜಿ ಜತೆ ಮಹಿಳೆ ಇದ್ದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಮಠದಿಂದ ಉಚ್ಚಾಟನೆ ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಗ್ರಾಮಸ್ಥರು ನಿರ್ಧಾರ ಕೈಗೊಂಡಿದ್ದಾರೆ.

ಅಕ್ರಮ ಸಂಬಂಧ ಆರೋಪ; ಅಡವಿಸಿದ್ಧೇಶ್ವರ ಮಠದಿಂದ ಸ್ವಾಮೀಜಿ ಉಚ್ಚಾಟನೆ

Profile Prabhakara R Jun 22, 2025 9:48 PM

ಬೆಳಗಾವಿ: ಅಕ್ರಮ ಸಂಬಂಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಠದಿಂದ ಸ್ವಾಮೀಜಿಯನ್ನು ಉಚ್ಚಾಟಿಸಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರದಲ್ಲಿ ನಡೆದಿದೆ. ಗ್ರಾಮದ ಅಡವಿಸಿದ್ಧೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ.

ಜೂ. 21ರಂದು ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನು ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಗ್ರಾಮದ ಪ್ರಮುಖರು ರಾತ್ರಿ ಸಮಯದಲ್ಲಿ ಮಠದಲ್ಲಿ ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ಸಮಯವಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದು. ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ವಾದಿಸಿದ್ದಾರೆ. ಅದಕ್ಕೆ, ಗ್ರಾಮಸ್ಥರು ಒಪ್ಪಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bike Taxi Service: ಬೈಕ್ ಟ್ಯಾಕ್ಸಿ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು; 10 ಮಂದಿ ವಿರುದ್ಧ ಎಫ್‌ಐಆರ್‌

ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಊರಿನ ಹಿರಿಯರು ಮಠದಿಂದ ಹೊರಹಾಕಿದ್ದಾರೆ.