Independence Day: ಸಾರ್ವಜನಿಕರೇ, ನೀವೂ ಈಗ ರಾಜಭವನ ವೀಕ್ಷಿಸಬಹುದು!
Raj Bhavan: ರಾಜ್ಯಪಾಲರು (Governor) ನಿವಾಸವಾಗಿರುವ ರಾಜಭವನವನ್ನು ವರ್ಷಕ್ಕೊಮ್ಮೆ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ತೆರೆಯುವ ಪರಿಪಾಠವಿದ್ದು, ರಾಜಭವನಕ್ಕೆ ಪ್ರವೇಶ ಉಚಿತವಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ ನಿರ್ಮಿಸಲಾಗಿರುವ ಈ ರಾಜಭವನ ಅಪೂರ್ವ ವಾಸ್ತುಶಿಲ್ಪದೊಂದಿಗೆ ಗಮನ ಸೆಳೆಯುತ್ತದೆ.

ರಾಜಭವನ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಜಭವನ (Raj Bhavan) ವೀಕ್ಷಣೆಗೆ ಆ. 16, 17 ಮತ್ತು 18ರಂದು ಸಂಜೆ 6 ರಿಂದ 7.30 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯಪಾಲರು (Governor) ನಿವಾಸವಾಗಿರುವ ರಾಜಭವನವನ್ನು ವರ್ಷಕ್ಕೊಮ್ಮೆ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ತೆರೆಯುವ ಪರಿಪಾಠವಿದ್ದು, ರಾಜಭವನಕ್ಕೆ ಪ್ರವೇಶ ಉಚಿತವಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ ನಿರ್ಮಿಸಲಾಗಿರುವ ಈ ರಾಜಭವನ ಅಪೂರ್ವ ವಾಸ್ತುಶಿಲ್ಪದೊಂದಿಗೆ ಗಮನ ಸೆಳೆಯುತ್ತದೆ.
ನಿಗದಿತ ಸಂಖ್ಯೆಯ ಸಾರ್ವನಿಕರಿಗೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರ ನೀಡಿರುವ ಸ್ಪಷ್ಟವಾಗಿ ಭಾವಚಿತ್ರವಿರುವ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ರಾಜಭವನ ಪ್ರವೇಶದ ಸಂದರ್ಭದಲ್ಲಿ ಭದ್ರತಾ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು.
ಸಾರ್ವಜನಿಕರು ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ಬಳಿಕ ಭದ್ರತೆಯ ಅಧಿಕಾರಿ ಮತ್ತು ಸಿಬ್ಬಂದಿ ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಜಭವನದ ಆವರಣದೊಳಗೆ ಶಾಂತಿ ಕಾಪಾಡುವ ಮೂಲಕ ಸಹಕರಿಸಬೇಕು ಎಂದು ಕೋರಲಾಗಿದೆ. ರಾಜಭವನಕ್ಕೆ ಬರುವ ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ರಾಜಭವನದ ಪ್ರವೇಶದ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾ ಮತ್ತು ಎಲ್ಲಾ ರೀತಿಯ ಎಲೆಕ್ಟ್ರಿಕಲ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚೂಪಾದ ವಸ್ತುಗಳು ಮತ್ತು ಎಲ್ಲ ರೀತಿಯ ಮೆಟಲ್ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತು, ಬೆಂಕಿಪೊಟ್ಟಣ, ಲೈಟರ್, ಎಲ್ಲಾ ರೀತಿಯ ಬ್ಯಾಗ್ ಮತ್ತು ಕೈ ಚೀಲಗಳನ್ನು, ತಂಬಾಕು ಮತ್ತು ಮಧ್ಯಪಾನ ಉತ್ಪನ್ನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜತೆಗೆ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳನ್ನು ರಾಜಭವನದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
- ಪ್ರವೇಶ ಹೇಗೆ?
ಎಲ್ಲರಿಗೂ ಉಚಿತ ಪ್ರವೇಶ. ಪಾಸ್ ಪಡೆದುಕೊಳ್ಳಬೇಕು.
- ಯಾವಾಗ
ಆ.16, 17, 18ರಂದು ಅವಕಾಶ
- ವೀಕ್ಷಣೆಗೆ ಸಮಯ
ಸಂಜೆ 6ರಿಂದ 7.30ರವರೆಗೆ
ಇದನ್ನೂ ಓದಿ: ನೂತನ ರಾಜಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಕೋವಿಂದ್