BGS Medical College: ನೆಲಮಂಗಲದಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
BGS Medical College: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ನಗರೂರಿನಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗಣ್ಯರು ಶುಕ್ರವಾರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಡಾ. ಶ್ರೀ ನಿರ್ಮಲಾನಾಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಆರ್.ಅಶೋಕ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.


ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ನಗರೂರಿನಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನ್ನು (BGS Medical College) ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗಣ್ಯರು ಶುಕ್ರವಾರ ನೆರವೇರಿಸಿದರು. ಈ ವೇಳೆ ಆದಿಚುಂಚನಗಿರಿಯ ಡಾ. ಶ್ರೀ ನಿರ್ಮಲಾನಾಂದನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಆರ್.ಅಶೋಕ್ ಸೇರಿ ಹಲವು ಗಣ್ಯರು ಸೇರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು, ಮಾತನಾಡಿ, ಭಾರತದಲ್ಲಿ ಸಂಸ್ಕೃತಿಯು ಅತ್ಯಂತ ವಿಸ್ತಾರವಾದುದು. ಸಮಾಜದ ಎಲ್ಲಾ ವರ್ಗದ ಜನತೆಗೆ ಆದಿಚುಂಚನಗಿರಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದೆ. ಈ ಸಂಸ್ಥೆಯಿಂದ ಬಡ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುತ್ತಿರುವುದು ಶ್ಲಾಘನೀಯ. 1800 ವರ್ಷಗಳ ಇತಿಹಾಸವಿರುವ ಮಠವನ್ನು ಶ್ರೀ ನಿರ್ಮಲಾನಂದ ಶ್ರೀಗಳು ಸೇವೆ ಮೂಲಕ ಬಹು ಎತ್ತರಕ್ಕೆ ಬೆಳೆಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದೀಜಿ ಅವರು 60 ಕೋಟಿಗೂ ಅಧಿಕ ಭಾರತದ ನಾಗರಿಕರಿಗೆ ವೈದ್ಯಕೀಯ ಸೇವೆ ನೀಡಲು ಯೋಜನೆ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೇತೃತ್ವದ ಕೇಂದ್ರ ಸರ್ಕಾರವು 'ಸಮಗ್ರ' ವಿಧಾನವನ್ನು ಅನುಸರಿಸುತ್ತಿದೆ. 'ಬಡತನ ಎದುರಿಸುವ ದೊಡ್ಡ ಸಮಸ್ಯೆ ಎಂದರೆ ಅನಾರೋಗ್ಯ ಮತ್ತು ಚಿಕಿತ್ಸೆಯ ವೆಚ್ಚವಾಗಿದೆ. ಸರ್ಕಾರವು ಬಡವರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ನಮ್ಮ ನಾಯಕರಾದ ಪ್ರಧಾನಿ ಮೋದಿ ಹಲವಾರು ವರ್ಷಗಳ ಹಿಂದೆಯೇ ಗುಜರಾತ್ನಲ್ಲಿ ಹೇಳಿದ್ದರು. ಅವರು ಪ್ರಧಾನಿಯಾದ ಮೇಲೆ 60 ಕೋಟಿ ಬಡವರಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆಯನ್ನು ಒದಗಿಸುವ ಮೂಲಕ ಆ ಮಾತಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಮೋದಿ ಸರ್ಕಾರವು ಫಿಟ್ ಇಂಡಿಯಾ ಆಂದೋಲನ, ಯೋಗ ದಿನ, ಮಿಷನ್ ಇಂದ್ರದನುಷ್ ಮತ್ತು ಪೋಷಣ ಅಭಿಯಾನ, ಆಯುಷ್ಮಾನ್ ಭಾರತ್ ಮತ್ತು ಭಾರತೀಯ ಜನೌಷಧಿ ಪರಿಯೋಜನ ಸೇರಿದಂತೆ ಸುಮಾರು 12 ಕೋಟಿ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವಂತಹ ಕಾರ್ಯಕ್ರಮಗಳೊಂದಿಗೆ ಆರೋಗ್ಯದ ಸಮಸ್ಯೆಯನ್ನು ಸಮಗ್ರ ದೃಷ್ಟಿಕೋನದಿಂದ ಪರಿಹರಿಸಿದೆ.
ದೇಶದಲ್ಲಿ ವೈದ್ಯರ ಸಂಖ್ಯೆಯನ್ನು ಹೆಚ್ಚಿಸಲು ಪ್ರಮುಖ ಪ್ರಯತ್ನಗಳನ್ನು ಕೈಗೊಳ್ಳಲಾಗಿದೆ ಎಂದು ಶಾ ಹೇಳಿದರು. 2014 ರಲ್ಲಿ, ದೇಶದಲ್ಲಿ 7 AIIMS ಗಳಿದ್ದವು. ಇಂದು 23 AIIMS ಗಳಿವೆ ಮತ್ತು ವೈದ್ಯಕೀಯ ಕಾಲೇಜುಗಳ ಸಂಖ್ಯೆ 387 ರಿಂದ 780 ಕ್ಕೆ ಏರಿದೆ. ಆಗ (2014) 51,000 ಎಂಬಿಬಿಎಸ್ ಸೀಟುಗಳು ಇದ್ದವು, ಇಂದು ಅದು 1,18,000 ಮತ್ತು ಸ್ನಾತಕೋತ್ತರ ಸೀಟುಗಳ ಸಂಖ್ಯೆ 31,000 ರಿಂದ 74,000 ಕ್ಕೆ ಏರಿಕೆಯಾಗಿದೆ. ಹಾಗಾಗಿ, ದೇಶದಲ್ಲಿ ಪ್ರತಿ ವರ್ಷ 1,18,000 ಎಂಬಿಬಿಎಸ್ ವೈದ್ಯರು ಮತ್ತು 74,000 ಡಬಲ್ ಪದವೀಧರ ವೈದ್ಯರು ಹೊರಬರುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕಟ್ಟಡ ಕಟ್ಟುವ ಕಾರ್ಯವಲ್ಲಾ, ಜನರ ಮನಸ್ಸುನ್ನು ಕಟ್ಟುವ ಕೆಲಸವಿದು. ಗ್ರಾಮೀಣ ಭಾಗದ ಜನರಲ್ಲಿ ವೈದ್ಯಕೀಯ ಸೇವೆ ನೀಡುವ ಸಲುವಾಗಿ ಈ ಬಿಜಿಎಸ್ ಮೆಡಿಕಲ್ ಕಾಲೇಜು ಪ್ರಾರಂಭವಾಗಿದೆ. ಭಾರತದ ಸಂಸ್ಕೃತಿ, ಶಕ್ತಿಯನ್ನು ಅಮಿತ್ ಶಾ ಅವರು ಹೊಂದಿದ್ದಾರೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | e-khata: ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ; ಜುಲೈ 1ರಿಂದ ಮನೆ ಬಾಗಿಲಿಗೆ ಇ-ಖಾತಾ ಅಭಿಯಾನ
ಕಾರ್ಯಕ್ರಮದಲ್ಲಿ ಪರಮಾನಂದ ಸರಸ್ವತಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಸಂಸದ ಡಾ.ಕೆ.ಸುಧಾಕರ್, ಸಚಿವ ಶರಣು ಪ್ರಕಾಶ್ ಪಾಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ಎನ್.ಶ್ರೀನಿವಾಸ್, ಮೆಡಿಕಲ್ ಕಾಲೇಜಿನ ಸಿಬ್ಬಂದಿ, ಬಿ.ಜಿ.ಎಸ್. ಸಮೂಹ ಸಂಸ್ಥೆಗಳ ಸಿಬ್ಬಂದಿ ಭಾಗವಹಿಸಿದ್ದರು.