ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Assault Case: ರಾಜೀನಾಮೆಗೆ ಒತ್ತಾಯಿಸಿ ಅರೆಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ

Assault Case: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಗ್ರಾಪಂ ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.

ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಹಲ್ಲೆ

Profile Prabhakara R Jul 21, 2025 4:17 PM

ದೊಡ್ಡಬಳ್ಳಾಪುರ: ರಾಜೀನಾಮೆ ನೀಡುವಂತೆ ಒತ್ತಾಯಿಸಿ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಗ್ರಾಪಂ ಸದಸ್ಯರು ಹಲ್ಲೆ (Assault Case) ಮಾಡಿರುವ ಆರೋಪ ಕೇಳಿಬಂದಿದೆ. ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ರಂಗಸ್ವಾಮಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಅರೆ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಹಾಗೂ ಪ್ರಭಾವಿ ಮುಖಂಡ ಶೈಲೇಂದ್ರ, ಅಧ್ಯಕ್ಷ ರಂಗಸ್ವಾಮಿಗೆ ರಾಜೀನಾಮೆ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕು ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ರಂಗಸ್ವಾಮಿ ರಾಜೀನಾಮೆ ನೀಡಲು ಒಪ್ಪದಿದ್ದಾಗ ತಳ್ಳಾಟ ನೂಕಾಟ ನಡೆದು, ಅಧ್ಯಕ್ಷನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಈ ಸುದ್ದಿಯನ್ನೂ ಓದಿ | Murder Case: ಲಿವ್‌ ಇನ್‌ ದುರಂತ; ಪೊಲೀಸ್‌ ಅಧಿಕಾರಿಯಾಗಿದ್ದ ಪ್ರೇಯಸಿಯನ್ನು ಕೊಂದ ಯೋಧ

ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು

ಬೆಂಗಳೂರು : ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru- Chennai highway) ಭೀಕರ ಸರಣಿ ಅಪಘಾತ (Road Accident) ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯೊಂದರ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್‌ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಿಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮರ ಬಿದ್ದು ಮಹಿಳೆ ಮೃತ್ಯು

ಕಾರವಾರ: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮರ ಬಿದ್ದು, ಕಾರಿನಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪಿಕಳೆ ರಸ್ತೆಯಲ್ಲಿ ನಡೆದಿದೆ.

ಮೃತ ಮಹಿಳೆ ಮಲ್ಲಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಮಮ್ತೆಕರ (55) ಎಂದು ಗುರುತಿಸಲಾಗಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಕೆಯ ಅತ್ತೆ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಕುಳಿತುಕೊಂಡಿದ್ದರು. ಈ ವೇಳೆಗ ಬುಡ ಸಮೇತ ಬೃಹತ್ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ.

ಇದನ್ನೂ ಓದಿ: SIRA (Tumkur) News: ಎಲ್ಲಾ ಚೆಕ್ ಡ್ಯಾಮ್ ಹಾಗೂ ಕೆರೆಗಳು ತುಂಬುವ ವಿಶ್ವಾಸವಿದೆದೆ.

ಘಟನೆಯಿಂದಾಗಿ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಸಿಲುಕಿದರು. ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಕಾರವಾರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ಮರವನ್ನು ತೆರವುಗೊಳಿಸಿ ಗಾಯ ಗೊಂಡಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ, ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನು ದೃಢಪಡಿಸಿದರು. ಕಾರವಾರದಲ್ಲಿ ಪದೆ ಪದೆ ಮರ ಉರುಳಿ ಬೀಳುವ ಘಟನೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ನಿಲ್ಲುವುದು, ವಾಹನ ನಿಲ್ಲಿಸುವುದಕ್ಕೆ ಭಯ ಪಡುವಂತಾಗಿದೆ.