ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Laxmi Hebbalkar: ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಾಡಿನ ಮೂಲೆ ಮೂಲೆಗಳಿಂದ ಮಠಾಧೀಶರು ಆಸ್ಪತ್ರೆಗೆ ಬಂದು ಆಶೀರ್ವದಿಸಿದರು. ಇದನ್ನು ನಾನೆಂದು ಮರೆಯುವುದಿಲ್ಲ. ನಾನೇನು ಅಂಥಹ ಸಾಧನೆ ಮಾಡಿದವಳಲ್ಲ, ಸಂಘರ್ಷದ ಹಾದಿಯಲ್ಲಿ ಬೆಳೆದು ಬಂದವಳು ನಾನು, ನನಗೆ ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಹೆಬ್ಬಾಳ್ಕರ್‌

Profile Siddalinga Swamy Apr 15, 2025 8:51 PM

ನೆಲಮಂಗಲ: ಧರ್ಮಾಧಾರಿತ ರಾಜಕಾರಣದಲ್ಲಿ ಬೆಳೆದು ಬಂದಿದ್ದು, ನಾಡಿನ ಮಠಾಧೀಶರ ಚಿಂತನೆಗಳನ್ನು, ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗಾ ಕ್ಷೇತ್ರದ ಶ್ರೀ ಸದ್ಧರ್ಮ ಸಿಂಹಾಸನ ಸಂಸ್ಥಾನ ಹೊನ್ನಮ್ಮದೇವಿ ಗವಿಮಠದಲ್ಲಿ ಮಂಗಳವಾರ ನಡೆದ ಹೊನ್ನಮ್ಮದೇವಿ ದೇವಾಲಯದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ, ಮಠ ಮಾನ್ಯಗಳ ಚಿಂತನೆಗಳಿಗೆ ಒಳಗಾಗಿದ್ದೇನೆ ಎಂದರು.

ಸರ್ಕಾರಕ್ಕೆ ದಿಕ್ಸೂಚಿ ಕೊಟ್ಟಿದ್ದು, ನಾಡಿನ ಮಠ ಮಾನ್ಯಗಳು, ಸರ್ಕಾರಕ್ಕೆ ಅಕ್ಷರ ದಾಸೋಹ, ಅನ್ನದಾಸೋಹ ಪರಿಕಲ್ಪನೆ ನೀಡಿದ್ದು ನಾಡಿನ ಮಠಗಳು. ಈ ಕಾರ್ಯಗಳಿಂದ ಸರ್ಕಾರ ಪ್ರೇರಣೆಗೊಂಡು‌ ತ್ರಿವಿಧ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ ಎಂದು ಸಚಿವರು ಹೇಳಿದರು.

ನಮಗೆ ಜಾತಿ ಧರ್ಮ ಗೊತ್ತಿಲ್ಲ. ನಮಗೆ ಗೊತ್ತಿರುವುದು ಎರಡೇ ಜಾತಿ, ಒಂದು ಹೆಣ್ಣು ಮತ್ತೊಂದು ಗಂಡು ಜಾತಿ. 12ನೇ ಶತಮಾನದಲ್ಲೆ ಬಸವಣ್ಣನವರು ಮಹಿಳಾ‌ ಸ್ವಾತಂತ್ರ್ಯದ ಬಗ್ಗೆ ಪ್ರತಿಪಾದಿಸಿದ್ದರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಾಡಿನ ಮೂಲೆ ಮೂಲೆಗಳಿಂದ ಮಠಾಧೀಶರು ಆಸ್ಪತ್ರೆಗೆ ಬಂದು ಆಶೀರ್ವದಿಸಿದರು. ಇದನ್ನು ನಾನೆಂದು ಮರೆಯುವುದಿಲ್ಲ. ನಾನೇನು ಅಂಥಹ ಸಾಧನೆ ಮಾಡಿದವಳಲ್ಲ, ಸಂಘರ್ಷದ ಹಾದಿಯಲ್ಲಿ ಬೆಳೆದು ಬಂದವಳು ನಾನು, ನನಗೆ ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯುವಂತಿಲ್ಲ ಎಂದು ಸಚಿವರು ಸ್ಮರಿಸಿದರು.

7 ಕೋಟಿ ಜನಸಂಖ್ಯೆಯ ಕರ್ನಾಟಕದ ಸರ್ಕಾರದಲ್ಲಿ ಏಕೈಕ ಮಹಿಳಾ ಸಚಿವೆಯಾಗಿರುವೆ. 35 ಲಕ್ಷ ಮಕ್ಕಳು, ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರು, ವಿಕಲಚೇತನರು, ಹಿರಿಯ ನಾಗರಿಕರು ನನ್ನ ಇಲಾಖೆ ವ್ಯಾಪ್ತಿಯಲ್ಲಿದ್ದಾರೆ‌. ಅವರ ಮೊಗದಲ್ಲಿ ನಗು ತರುವ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಅದರಲ್ಲೂ 1.23 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಈ ಸುದ್ದಿಯನ್ನೂ ಓದಿ | Stock Market: ಹೂಡಿಕೆದಾರರಿಗೆ ಶುಭ ಮಂಗಳವಾರ; ಸೆನ್ಸೆಕ್ಸ್‌ 1,500 ಪಾಯಿಂಟ್‌ ಹೆಚ್ಚಳ: ಗೂಳಿ ನೆಗೆತಕ್ಕೆ ಕಾರಣವೇನು?

ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರು ಸಮಾರಂಭದ ದಿವ್ಯ ಸಾನಿಧ್ಯ‌ ವಹಿಸಿದ್ದರು. ಹೊನ್ನಮ್ಮ ದೇವಿ ಗವಿಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮೀಜಿ ಸಮಾರಂಭದ ನೇತೃತ್ವ ವಹಿಸಿದ್ದರು. ನೆಲಮಂಗಲ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸಯ್ಯ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು.