ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: ಕಾಲ್ತುಳಿತ ಪ್ರಕರಣ; ಸೋಶಿಯಲ್‌ ಮೀಡಿಯಾದಲ್ಲಿ ಬಿ. ದಯಾನಂದ್‌ ಪರ ಅಭಿಯಾನ

B Dayanand: ಬಿ.ದಯಾನಂದ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಸೋಶಿಯಲ್‌ ಮೀಡಿಯಾದಲ್ಲಿ ಐ ಸ್ಟ್ಯಾಂಡ್‌ ವಿಥ್‌ ದಯಾನಂದ್‌ ಎಂಬ ಅಭಿಯಾನ ಶುರುವಾಗಿದೆ. ಸರ್ಕಾರದ ವೈಫಲ್ಯಕ್ಕೆ ಪೊಲೀಸರನ್ನು ಸುಖಾ ಸುಮ್ಮನೆ ಹೊಣೆಯಾಗಿಸಲಾಗುತ್ತಿದೆ ಎಂದು ಅನೇಕರು ಕಿಡಿ ಕಾರಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಬಿ. ದಯಾನಂದ್‌ ಪರ ಅಭಿಯಾನ

Profile Rakshita Karkera Jun 6, 2025 11:43 AM

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ (Stampede Case) ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್‌ ಆಗಿದ್ದ ಬಿ. ದಯಾನಂದ್‌(B Dayanand) ಅವರ ತಲೆದಂಡಕ್ಕೆ ಆಕ್ರೋಶ ವ್ಯಕ್ತವಾಗಿದೆ. ಬಿ.ದಯಾನಂದ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಸೋಶಿಯಲ್‌ ಮೀಡಿಯಾದಲ್ಲಿ ಐ ಸ್ಟ್ಯಾಂಡ್‌ ವಿಥ್‌ ದಯಾನಂದ್‌ ಎಂಬ ಅಭಿಯಾನ ಶುರುವಾಗಿದೆ. ಸರ್ಕಾರದ ವೈಫಲ್ಯಕ್ಕೆ ಪೊಲೀಸರನ್ನು ಸುಖಾ ಸುಮ್ಮನೆ ಹೊಣೆಯಾಗಿಸಲಾಗುತ್ತಿದೆ ಎಂದು ಅನೇಕರು ಕಿಡಿ ಕಾರಿದ್ದಾರೆ. ಮತ್ತೊಂದೆಡೆ ನಿವೃತ ಪೊಲೀಸ್‌ ಅಧಿಕಾರಿಗಳು ಕೂಡ ಸರ್ಕಾರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನು ಕಾಂಗ್ರೆಸ್‌ ಸರ್ಕಾರ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಭದ್ರತೆ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದನ್ನು ಮುಚ್ಚಿಡಲು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಬ್ಬ ಪೊಲೀಸ್‌ ಕಮಿಷನರ್‌ ಒಬ್ಬರನ್ನು ಅಮಾನತುಗೊಳಿಸಿರುವುದು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಈ ಸುದ್ದಿಯನ್ನೂ ಓದಿ: Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ; CIDಗೆ ಕೇಸ್‌ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶ

ಸರ್ಕಾರದ ಕ್ರಮದ ವಿರುದ್ದ ನಿವೃತ್ತ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಆಕ್ರೋಶ ಹೊರಹಾಕಿದ್ದಾರೆ. ರಾತ್ರಿ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ನ್ಯೂಸ್ 18 ಕನ್ನಡ ಜೊತೆ ಮಾತಾಡಿದ ಜ್ಯೋತಿ ಪ್ರಕಾಶ್ ಮಿರ್ಜಿ, ಸರ್ಕಾರದ ಈ ಕ್ರಮ ಸರಿಯಲ್ಲ, ಇದು ಬೇಜವಾಬ್ದಾರಿ ಸರ್ಕಾರ. ಯಾವ ಆಧಾರದ ಮೇಲೆ ಕ್ರಮ ಕೈಗೊಂಡಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.