ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Stampede: ಕಾಲ್ತುಳಿತ ದುರಂತ, ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿದ ಹೈಕೋರ್ಟ್‌

Bengaluru Stampede: ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಕಾಲ್ತುಳಿತ ದುರಂತ, ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿದ ಹೈಕೋರ್ಟ್‌

ಹರೀಶ್‌ ಕೇರ ಹರೀಶ್‌ ಕೇರ Jun 5, 2025 11:07 AM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಭೀಕರ ಕಾಲ್ತುಳಿತ (Bengaluru Stampede) ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High court) ಸ್ವಯಂ ಪ್ರೇರಿತ ಪಿಐಎಲ್ (PIL) ದಾಖಲಿಸಿಕೊಂಡಿದೆ. ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಕಾರಣವಾಗಿರುವ ತಪ್ಪಿತಸ್ಥ ಅಧಿಕಾರಿಗಳು, ಖಾಸಗಿ ಸಂಸ್ಥೆಯ ಅಧಿಕಾರಿಗಳು-ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕೆಂದು ಆಮ್ ಆದ್ಮಿ ಪಕ್ಷದ ಕರ್ನಾಟಕ ವಿಭಾಗದ ಯುವ ಅಧ್ಯಕ್ಷ ವಕೀಲ ಲೋಹಿತ್ ಹನುಮಪುರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಕೂಡ ಬುಧವಾರ ಬೆಂಗಳೂರಿನ ಕಾಲ್ತುಳಿತದ ಸಾವುಗಳಿಗೆ ಸಂತಾಪ ಸೂಚಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು "ಬೆಂಗಳೂರಿನ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತವನ್ನು ಪ್ರಧಾನಿ ಮೋದಿ "ಸಂಪೂರ್ಣವಾಗಿ ಹೃದಯವಿದ್ರಾವಕ" ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: Bengaluru Stampede: ಆರ್‌ಸಿಬಿ ಪೆರೇಡ್ ಕಾಲ್ತುಳಿತಕ್ಕೆ ಬ್ರಿಟನ್‌ ಮಾಜಿ ಪ್ರಧಾನಿ ರಿಷಿ ಸುನಕ್‌ ಸಂತಾಪ