ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Madenuru Manu: ಪರಪ್ಪನ ಅಗ್ರಹಾರ ಜೈಲಿನಿಂದ ನಟ ಮಡೆನೂರು ಮನು ರಿಲೀಸ್‌; ಆಡಿಯೋ ಬಗ್ಗೆ ಹೇಳಿದ್ದೇನು?

Actor Madenuru Manu: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ಮಡೆನೂರು ಮನು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ನಟ ಮಡೆನೂರು ಮನು ರಿಲೀಸ್‌

Profile Prabhakara R Jun 7, 2025 3:49 PM

ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ (Physical abuse) ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಕಿರುತೆರೆ ನಟ ಮಡೆನೂರು ಮನು (Madenuru Mnu) ಪರಪ್ಪನ ಅಗ್ರಹಾರ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರು ರಿಲೀಸ್‌ ಆಗಿದ್ದಾರೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಕೇಸ್‌ಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನುವನ್ನು ಅರೆಸ್ಟ್ ಮಾಡಿದ್ದರು. ʼಕುಲದಲ್ಲಿ ಕೀಳ್ಯಾವುದೊʼ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ. ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಅವರು ಬಂಧಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Bengaluru Stampede: ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್‌ಸಿಬಿ!

ಜೈಲಿನಿಂದ ರಿಲೀಸ್‌ ಆದ ಬಳಿಕ ಮಾತನಾಡಿದ ಮಡೆನೂರು ಮನು, ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ವೈರಲ್‌ ಆಗಿರುವ ಆಡಿಯೋ ನನ್ನದಲ್ಲ. ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ. ನಾನು ಮೊದಲು ದೊಡ್ಡವರು (ಶಿವಣ್ಣ) ಅವರನ್ನು ಭೇಟಿ ಮಾಡಿ ಸತ್ಯವನ್ನು ಅವರಿಗೆ ವಿವರಿಸಿ ಕ್ಷಮೆ ಕೇಳುತ್ತೇನೆ. ನನ್ನ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಪಕ್ಕಾ ಪ್ಲ್ಯಾನ್ ಮಾಡಿ ನನ್ನ ಮುಗಿಸಿದ್ರು ಎಂದು ಹೇಳಿದ್ದಾರೆ.

ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಗಿದೆ. ನನ್ನ ವಿರುದ್ಧ ಪ್ರತಿ ಹಂತದಲ್ಲಿಯೂ ಷಡ್ಯಂತ್ರ ನಡೆಯಿತು. ಸಿನಿಮಾ ರಿಲೀಸ್​ಗೂ ಮೊದಲು ಕುಣಿಗಲ್ ಬಳಿ ಮೊಟ್ಟೆ ಹೊಡೆದರು. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು. ಕೊನೆಗೆ ನನ್ನ ಜತೆಯಲ್ಲಿದ್ದವರೇ ಕೇಸ್ ಮಾಡಿಸಿದ್ದಾರೆ. ಅದಕ್ಕೂ ಮೊದಲು ರೇಪ್ ಕೇಸ್‌ನಲ್ಲಿ ತಪ್ಪಿಸಿಕೊಂಡರು. 50 ಸಾವಿರ ಖರ್ಚು ಮಾಡಿ ಆಡಿಯೋ ರೆಡಿ ಮಾಡಿದ್ದು. ನಿನ್ನ ಕಥೆ ಮುಗಿಸುವುದಾಗಿ ಧಮ್ಕಿ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ನಾನು ಸಾಮಾನ್ಯ ಹಳ್ಳಿಹೈದ, ಮೂರು ವರ್ಷ ಹಗಲಿರುಳು ಕಷ್ಟಪಟ್ಟಿದ್ದೆ. ಆದರೆ ಎಲ್ಲವನ್ನೂ ಮುಗಿಸಿದರು. ಆದರೆ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ. ಆದರೆ ನಾನು ಬಡವ, ಆಡಿಯೋ ನನ್ನದಲ್ಲ ಎಂದು ಚಾಲೆಂಜ್‌ ಮಾಡಲು ಆಗಲ್ಲ ಎಂದಿದ್ದಾರೆ.