ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Rachita Ram: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ; ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

Actress Rachita Ram: ‘ಉಪ್ಪಿ ರುಪ್ಪಿ’ ಸಿನಿಮಾಗಾಗಿ ನಟಿ ರಚಿತಾ ರಾಮ್‌ಗೆ ಅಡ್ವಾನ್ಸ್‌ ನೀಡಲಾಗಿತ್ತು. ಈಗ ಹಣ ವಾಪಸ್‌ ಕೊಡದೇ ಸತಾಯಿಸುತ್ತಿದ್ದಾರೆ ಆರೋಪಿಸಿ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ದೂರು ನೀಡಿದ್ದಾರೆ. ರಚಿತಾ ರಾಮ್‌ ಅವರು ಮುಂಗಡವಾಗಿ 13 ಲಕ್ಷ ರೂಪಾಯಿ ಪಡೆದುಕೊಂಡಿದ್ದರು. ಆದರೆ, ಈಗ ನಿರ್ಮಾಪಕರ ಸಂಪರ್ಕಕ್ಕೆ ಸಿಗದೇ ಸತಾಯಿಸುತ್ತಿದ್ದಾರೆ ಎಂಬ ಆರೋಪ ನಟಿ ವಿರುದ್ಧ ಕೇಳಿಬಂದಿದೆ.

ನಟಿ ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು ದಾಖಲು

Profile Prabhakara R Jun 18, 2025 4:36 PM

ಬೆಂಗಳೂರು: ಸಿನಿಮಾ ಪ್ರಚಾರಕ್ಕೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್‌ ಅವರು ಫಿಲ್ಮ್‌ ಚೇಂಬರ್‌ಗೆ ದೂರು ನೀಡಿದ ಬೆನ್ನಲ್ಲೇ ನಟಿ ರಚಿತಾ ರಾಮ್‌ (Actress Rachita Ram) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅಡ್ವಾನ್ಸ್‌ ಹಣ ವಾಪಸ್‌ ಕೊಡದೆ ಸತಾಯಿಸುತ್ತಿದ್ದಾರೆಂದು ನಟಿ ವಿರುದ್ಧ ಆರೋಪ ಕೇಳಿಬಂದಿದೆ. ‘ಉಪ್ಪಿ ರುಪ್ಪಿ’ ಸಿನಿಮಾಗಾಗಿ ನಟಿ ರಚಿತಾ ರಾಮ್‌ಗೆ ಅಡ್ವಾನ್ಸ್‌ ನೀಡಲಾಗಿತ್ತು. ಈಗ ಹಣ ವಾಪಸ್‌ ಕೊಡದೇ ಸತಾಯಿಸುತ್ತಿದ್ದಾರೆ ಆರೋಪಿಸಿ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ದೂರು ನೀಡಿದ್ದಾರೆ.

8 ವರ್ಷಗಳ ಹಿಂದೆ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದಲ್ಲಿ ‘ಉಪ್ಪಿ ರುಪ್ಪಿ’ ಸಿನಿಮಾ ಸಿದ್ಧವಾಗಬೇಕಿತ್ತು. ವಿಜಯಲಕ್ಷ್ಮಿ ಅರಸ್ ನಿರ್ಮಾಣದ ಆ ಸಿನಿಮಾಗೆ ಕೆ. ಮಾದೇಶ್ ನಿರ್ದೇಶನ ಮಾಡುತ್ತಿದ್ದರು. ಆ ಚಿತ್ರದಲ್ಲಿ ನಟಿಸಲು ರಚಿತಾ ರಾಮ್ ಒಪ್ಪಿಕೊಂಡಿದ್ದರು. 23 ಲಕ್ಷ ರೂಪಾಯಿ ಸಂಭಾವನೆಗೆ ಕಮಿಟ್ ಆಗಿದ್ದ ರಚಿತಾ ಅವರು ಮುಂಗಡವಾಗಿ 13 ಲಕ್ಷ ರೂಪಾಯಿ ಪಡೆದುಕೊಂಡಿದ್ದರು.

2017ರಲ್ಲಿ ಬ್ಯಾಂಕಾಕ್​ನಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅಲ್ಲಿಗೆ ಬರುವುದಾಗಿ ರಚಿತಾ ರಾಮ್ ಒಪ್ಪಿಕೊಂಡಿದ್ದರು. ನಟಿಗಾಗಿ ವಿಮಾನದ ಟಿಕೆಟ್ ಬುಕ್ ಮಾಡಲಾಗಿತ್ತು. ಆದರೆ ಈಗ ಬರ್ತೀನಿ ಆಗ ಬರ್ತೀನಿ ಅಂತ 15 ದಿನಗಳ ಕಾಲ ರಚಿತಾ ರಾಮ್ ಆಟ ಆಡಿಸಿದರು. ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ರಚಿತಾಗಾಗಿ ಎರಡು ವಾರಗಳ ಕಾಲ ಪ್ರತಿ ದಿನ ಟಿಕೆಟ್ ಬುಕ್ ಮಾಡಿ ಕಾದಿದ್ದರು. ಕಡೆಗೂ ರಚಿತಾ ರಾಮ್ ಬರಲೇ ಇಲ್ಲ. ಬೇರೆ ಆಯ್ಕೆ ಇಲ್ಲದೇ, ಕೇವಲ ಹೀರೋ ದೃಶ್ಯಗಳ ಚಿತ್ರೀಕರಣವನ್ನು ಮಾಡಿಕೊಂಡು ಚಿತ್ರತಂಡ ವಾಪಸ್ ಆಗಿತ್ತು.

ರಚಿತಾ ಕಾರಣದಿಂದ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ಅವರು ಒಂದೂವರೆ ಕೋಟಿ ರೂಪಾಯಿ ಕಳೆದುಕೊಂಡರು. ಮೈಸೂರಿನಲ್ಲಿ ನಡೆದ ಚಿತ್ರೀಕರಣಕ್ಕೆ ರಚಿತಾ ರಾಮ್ ಒಂದು ದಿನ ಮಾತ್ರ ಬಂದಿದ್ದರು. ಹೀಗಾಗಿ ರಚಿತಾ ಕಾರಣದಿಂದ ‘ಉಪ್ಪಿ ರುಪ್ಪಿ’ ಅರ್ಧಕ್ಕೆ ನಿಂತು ಹೋಯಿತು. ಶೇ.35ರಷ್ಟು ಸಿನಿಮಾ ಮಾತ್ರ ಸಿದ್ಧವಾಯಿತು. ಉಳಿದ ಕೆಲಸವೂ ಆಗಲಿಲ್ಲ, ನಿರ್ಮಾಪಕರಿಗೆ ಹಣವೂ ಸಿಗಲಿಲ್ಲ. ಅಂದಿನಿಂದ ನಿರ್ಮಾಪಕರ ಸಂಪರ್ಕಕ್ಕೆ ಸಿಗದೇ ರಚಿತಾ ರಾಮ್ ಸತಾಯಿಸುತ್ತಿದ್ದಾರೆ. ಕೊನೆಯದಾಗಿ ಫಿಲ್ಮ್ ಚೇಂಬರ್​ಗೆ ನಿರ್ಮಾಪಕಿ ದೂರು ನೀಡಿದ್ದಾರೆ. 2 ತಿಂಗಳ ಹಿಂದೆಯೇ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ರಚಿತಾ ರಾಮ್ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್‌ ದೂರು

ಬೆಂಗಳೂರು: ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಎಂದು ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ. ಚಿತ್ರತಂಡದ ಜತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮಂಗಳವಾರ ತೆರಳಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಸಲ್ಲಿಸಿದ್ದಾರೆ. ರಚಿತಾ ರಾಮ್‌ ಅವರಿಂದ ಆಗಿರುವ ತೊಂದರೆ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು, ನಟಿ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.

ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಸ್ವಲ್ಪವೂ ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್‌ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದರೂ ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Bollywood Movie: ಓಟಿಟಿಯಲ್ಲಿ ಲಭ್ಯವಿದ್ದರೂ ಕುಟುಂಬ ಸಮೇತ ವೀಕ್ಷಿಸಲು ಸೂಕ್ತವಲ್ಲದ ಬಾಲಿವುಡ್ ಸಿನಿಮಾಗಳಿವು