ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕೊನೆಗೂ ಫಲಿಸಲಿಲ್ಲ ಪ್ರಾರ್ಥನೆ; ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್​ ಸಾವು

Bengaluru News: ತಂದೆ ಹುಟ್ಟುಹಬ್ಬದಂದೇ ಮಟನ್ ತರಲು ಹೋಗಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ (ಜೂ. 15) ಒಣಗಿದ ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಅಕ್ಷಯ್‌ ಗಂಭೀರವಾಗಿ ಗಾಯಗೊಂಡಿದ್ದ.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್​ ಸಾವು

ಅಕ್ಷಯ್‌.

Profile Ramesh B Jun 19, 2025 3:04 PM

ಬೆಂಗಳೂರು: ತಂದೆ ಹುಟ್ಟುಹಬ್ಬದಂದೇ ಮಟನ್ ತರಲು ಹೋಗಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ (Bengaluru) ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ (ಜೂ. 15) ಒಣಗಿದ ಮರದ ಕೊಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಅಕ್ಷಯ್‌ ಗಂಭೀರವಾಗಿ ಗಾಯಗೊಂಡಿದ್ದ (Rain News). ಬಳಿಕ ಆತನನ್ನು ಅಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಕ್ಷಯ್‌ ಗುರುವಾರ ಮೃತಪಟ್ಟಿದ್ದಾನೆ.

ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಅಕ್ಷಯ್‌ಗೆ ತಲೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತಾದರೂ ಬ್ರೈನ್ ಡೆಡ್ ಆಗಿತ್ತು. ಆದರೆ ಜೂ. 19ರ ಮಧ್ಯಾಹ್ನ 1.15ಕ್ಕೆ ಹೃದಯಾಘಾತದಿಂದ ಅಸುನೀಗಿದ್ದಾನೆ. ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಎಚ್.ಆರ್. ಕೆಲಸ ಮಾಡುತ್ತಿದ್ದ. ಇದೀಗ ಕುಟುಂಬ ಆತನನ್ನು ಕಳೆದು ದುಃಖ ಸಾಗರದಲ್ಲಿ ಮುಳುಗಿದೆ.

ಈ ಸುದ್ದಿಯನ್ನೂ ಓದಿ: Bomb Threat: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ

ಈ ಘಟನೆಗೆ ಬಿಬಿಎಂಪಿಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ನಡೆದ ಬಳಿಕ ಯಾವುದೇ ಬಿಬಿಎಂಪಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿರಲಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಬಿಬಿಎಂಪಿ ಅರಣ್ಯಾಧಿಕಾರಿ ರಂಗನಾಥ್ ಸ್ವಾಮಿ ಜಯನಗರದ ಆಸ್ಪತ್ರೆಗೆ ಭೇಟಿ ನೀಡಿ, ಅಕ್ಷಯ್‌ನ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ ಅವರು, ʼʼಅಕ್ಷಯ್‌ನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ. ಗಾಳಿಯ ಪ್ರಭಾವದಿಂದ ಮರದ ಕೊಂಬೆ ಬಿದ್ದು ಈ ಅವಘಡ ಸಂಭವಿಸಿದೆʼʼ ಎಂದು ತಿಳಿಸಿದ್ದರು.

ಇದೀಗ ಮುಂಜಾಗ್ರತಾ ಕ್ರಮವಾಗಿ ಜಯನಗರದ ಅಪೋಲೋ ಆಸ್ಪತ್ರೆ ಮುಂದೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಮರಗಳ ಸುರಕ್ಷಿತ ನಿರ್ವಹಣೆಯಲ್ಲಿ ಬಿಬಿಎಂಪಿಯ ವೈಫಲ್ಯವೇ ಈ ದುರಂತಕ್ಕೆ ಕಾರಣ ಎನ್ನುವ ದೂರು ಕೂಡ ಕೇಳಿ ಬಂದಿದೆ.