ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್‌ 26ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್‌ 26ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಡಿಸೆಂಬರ್‌ 26ರಂದು ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Dec 24, 2025 7:17 PM

ಬೆಂಗಳೂರು, ಡಿ. 24: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ. ಚಂದ್ರ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್‌ 26ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಆರ್.ಪಿ.ಸಿ. ಲೇಔಟ್, ರೆಮ್ಕೋ ಲೇಔಟ್, ಕಲ್ಯಾಣ್ ಲೇಔಟ್, ಸುಬ್ಬಣ್ಣ ಗಾರ್ಡನ್, ವಿಡಿಯಾ ಲೇಔಟ್, ಎಂ.ಆರ್.ಸಿ.ಆರ್. ಲೇಔಟ್, ಚಂದ್ರ ಲೇಔಟ್, ಬಾಪೂಜಿ ಲೇಔಟ್, ವಿನಾಯಕ ಲೇಔಟ್, ಮೂಡಲಪಾಳ್ಯ, ಸ್ಕೈಲೈನ್ ಅಪಾರ್ಟ್‌ಮೆಂಟ್‌, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್, ಗಂಗೊಂಡನಹಳ್ಳಿ, ಸುವರ್ಣ ಲೇಔಟ್, ಬಿಡಿಎ 13ನೇ ಮತ್ತು 14ನೇ ಬ್ಲಾಕ್, ಕೆಂಗುಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್, ಕಾವೇರಿ ಲೇಔಟ್, ಎಸ್.ವಿ.ಜಿ.ಗಾರ್ಡನ್, ಸಂಜೀವಿನಿ ನಗರ, ಎನ್.ಜಿ.ಇ.ಎಫ್ ಲೇಔಟ್, ಕಲ್ಯಾಣನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಟ್ಟಿಗೇನಹಳ್ಳಿ‌ ವ್ಯಾಪ್ತಿಯಲ್ಲಿಯೂ ಕರೆಂಟ್‌ ಇರಲ್ಲ

66/11 ಕೆ.ವಿ. ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯ ಹಲವೆಡೆಯೂ ಬೆಳಗ್ಗೆ 11 ಗಂಟೆಯಿಂದ ಅಪರಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಉತ್ತರ ಗೇಟ್ 1,2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್‌, ಪಿಡಿಎಂಎಸ್‌,ಬಾಗಲೂರು ಕ್ರಾಸ್ ವಿನಾಯಕನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಬೆಂಗಳೂರು: ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂನ ಸಹಾಯವಾಣಿ ಸಂಖ್ಯೆ 1912 ಹಾಗೂ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ (BESCOM Helpline) ದೂರು ದಾಖಲಿಸಲು ಬೆಸ್ಕಾಂ (BESCOM) ಮನವಿ ಮಾಡಿದೆ. ರೈತರ ಹೊಲ-ಗದ್ದೆಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳು ವಿಫಲತೆ ಹೊಂದಿದಾಗ ಹಾಗೂ ವಿದ್ಯುತ್‌ ಸಂಬಂಧಿತ ದೂರುಗಳಿದ್ದಲ್ಲಿ ತಕ್ಷಣ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಬೆಸ್ಕಾಂ ತಿಳಿಸಿದೆ.

ಒಂದು ವೇಳೆ 1912 ಸಹಾಯವಾಣಿ ಸಂಖ್ಯೆ ಲಭ್ಯವಾಗದಿದ್ದಲ್ಲಿ ರೈತರು ತಮ್ಮ ಜಿಲ್ಲೆಗೆ ಸಂಬಂಧಿಸಿದ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ದಾಖಲಿಸಬಹುದಾಗಿದೆ. ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್‌ ಆ್ಯಪ್‌ ಸಹಾಯವಾಣಿ ಸಂಖ್ಯೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಗಳ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ.
ಡಿ. 25ರಿಂದ 28ರವರೆಗೆ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿ ಸಂಖ್ಯೆಗಳ ವಿವರ

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.

ಕೋಲಾರ ಜಿಲ್ಲೆ: 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021