S L Byrappa: ಇಂದು ಭೈರಪ್ಪ ಪ್ರತಿಷ್ಠಾನ ಉದ್ಘಾಟನೆ
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಧೇಯೋದ್ದೇಶ ಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಸ್.ಎಲ್.ಭೈರಪ್ಪ ಪ್ರತಿಷ್ಠಾನ ಶನಿವಾರ ಲೋಕಾರ್ಪಣೆ ಗೊಳ್ಳಲಿದೆ. ಶನಿವಾರ ಸಂಜೆ 5 ಗಂಟೆಗೆ ಬಸವನಗುಡಿಯಲ್ಲಿರುವ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.


ಬೆಂಗಳೂರು: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಧೇಯ್ಯೋದ್ದೇಶಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಸ್.ಎಲ್.ಭೈರಪ್ಪ ಪ್ರತಿಷ್ಠಾನ ಶನಿವಾರ ಲೋಕಾರ್ಪಣೆಗೊಳ್ಳಲಿದೆ. ಶನಿವಾರ ಸಂಜೆ 5 ಗಂಟೆಗೆ ಬಸವನಗುಡಿಯಲ್ಲಿರುವ ಬಿಎಂ ಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ವಹಿಸಲಿದ್ದು, ಭೈರಪ್ಪ ನವರ ಕೃತಿಗಳಲ್ಲಿ ಮೌಲ್ಯಮೀಮಾಂಸೆ ಕಾರ್ಯಕ್ರಮವನ್ನು ಶತಾವಧಾನಿ ಡಾ.ರಾ.ಗಣೇಶ್ ನಡೆಸಿ ಕೊಡಲಿದ್ದಾರೆ.
ಇದನ್ನೂ ಓದಿ: Vishweshwar Bhat Column: ಕೈ ಸವೆಯುವವರೆಗೂ ನಿರಂತರ ಬರೆಯಲು ಸೈ !
ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಸಹನಾ ವಿಜಯ್ ಕುಮಾರ್, ತೇಜಸ್ವಿನಿ ಅನಂತ್ ಕುಮಾರ್, ಕೃಷ್ಣ ಪ್ರಸಾದ್, ಪ್ರತಿಷ್ಠಾನದ ಅಧ್ಯಕ್ಷ ಅರುಣ ಉಪಸ್ಥಿತರಿರುತ್ತಾರೆ. 94 ವರ್ಷದ ಎಸ್.ಎಲ್.ಭೈರಪ್ಪ ಅವರ ಧೇಯ್ಯೋದ್ದೇಶ ಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಪ್ರತಿಷ್ಠಾನ ಸ್ಥಾಪನೆಯಾಗಿದೆ.
ಆದರೆ ಈ ಪ್ರತಿಷ್ಠಾನದಲ್ಲಿ ಭೈರಪ್ಪ ಅವರು ಯಾವುದೇ ಹುದ್ದೆಯನ್ನು ಪಡೆದಿಲ್ಲ. ಸಾಹಿತ್ಯ ಭಂಡಾರದ ಅರುಣ ಅವರು ಪ್ರತಿಷ್ಠಾನದ ಅಧ್ಯಕ್ಷರಾಗಿದ್ದು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿ ತೇಜಸ್ವಿನಿ ಅನಂತಕುಮಾರ್, ಕಾರ್ಯದರ್ಶಿಯಾಗಿ ಸಹನಾ ವಿಜಯ್ ಕುಮಾರ್, ಖಜಾಂಜಿಯಾಗಿ ಕೃಷ್ಣಪ್ರಸಾದ್ ಹಾಗೂ ವಿಶ್ವೇಶ್ವರ ಭಟ್ ಟ್ರಸ್ಟಿಗಳಾಗಿರುತ್ತಾರೆ.