ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

B Dayananda IPS: ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು ಖಂಡಿಸಿ ಕಾನ್‌ಸ್ಟೇಬಲ್‌ ಪ್ರತಿಭಟನೆ

B Dayananda IPS: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ವಿರೋಧಿ ಹೆಡ್‌ ಕಾನ್‌ಸ್ಟೇಬರ್‌ ಒಬ್ಬರು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು ಖಂಡಿಸಿ ಕಾನ್‌ಸ್ಟೇಬಲ್‌ ಪ್ರತಿಭಟನೆ

Profile Prabhakara R Jun 6, 2025 7:59 PM

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿ (B Dayananda IPS) ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಬೆಂಗಳೂರು ನಗರದ ಕಮಿಷನ‌ರ್ ಬಿ.ದಯಾನಂದ್ ಅವರನ್ನು ಅಮಾನತುಗೊಳಿಸಿರುವ ಸರ್ಕಾರದ ಆದೇಶದ ವಿರುದ್ಧ ಹೆಡ್ ಕಾನ್‌ಸ್ಟೇಬಲ್ ಪ್ರತಿಭಟನೆ ನಡೆಸಿದ್ದಾರೆ. ಮಡಿವಾಳ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ.

ಹೆಡ್ ಕಾನ್‌ಸ್ಟೇಬಲ್ ನರಸಿಂಹರಾಜು ಎಂಬುವವರು ಸರ್ಕಾರದ ಆದೇಶ ಖಂಡಿಸಿ ಕೈಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಿಡಿದು, ಕಪ್ಪು ಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕಾಗಮಿಸಿದ ವಿಧಾನಸೌಧ ಪೊಲೀಸರು, ಹೆಡ್ ಕಾನ್‌ಸ್ಟೇಬಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Stampede: ಮೊದಲೇ ಎಚ್ಚೆತ್ತುಕೊಂಡಿದ್ದರೆ ಬೆಂಗಳೂರು ಕಾಲ್ತುಳಿತ ತಪ್ಪಿಸಬಹುದಿತ್ತು; ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಇರುತಿರಲಿಲ್ಲ ಎಂದ ತಜ್ಞರು

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಡ್ ಕಾನ್‌ಸ್ಟೇಬಲ್​, "ಆರ್​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿರುವ ಸಂಬಂಧ ಆಯುಕ್ತರಾಗಿದ್ದ ದಯಾನಂದ ಅವರನ್ನು ಸರ್ಕಾರವು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆದು ಪೊಲೀಸರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.

ಪೊಲೀಸರು ಒಂದು ರೀತಿ ಬ್ರೋಕರ್​ಗಳಾಗಿದ್ದಾರೆ. ಈ ಕಡೆ ಕಾಂಗ್ರೆಸ್​ನವರು ಒದ್ದರೂ ಒದಿಸಿಕೊಳ್ಳಬೇಕು. ಬಿಜೆಪಿ ಒದ್ದರೂ ಒದಿಸಿಕೊಳ್ಳಬೇಕು. ಜೆಡಿಎಸ್​ನವರು ಗುದ್ದಿದ್ರೂ ಗುದ್ದಿಸಿಕೊಳ್ಳಬೇಕು. ಸಂಜೆಯಾದರೆ ನಮ್ಮವರು ರಾಜಕಾರಣಿಗಳ ಮನೆ ಮುಂದೆ ಹೋಗಿ ಕೈಕಟ್ಟಿ ನಿಲ್ಲುತ್ತಿದ್ದಾರೆ. ದಯಾನಂದ್ ಸಾಹೇಬರು ಒಳ್ಳೆ ಕೆಲಸ ಮಾಡಿದ್ದಾರೆ. ಅವರನ್ನು ಅಮಾನತು ಮಾಡಿದ್ದು ಸರಿಯಿಲ್ಲ. ಹೀಗಾಗಿ ಅಮಾನತು ರದ್ದು ಮಾಡಬೇಕು" ಎಂದು ಒತ್ತಾಯಿಸಿದ್ದಾರೆ.