ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kadalekai Parishe: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನ ಫಿಕ್ಸ್‌, ಈ ಬಾರಿ 5 ದಿನಗಳಿಗೆ ವಿಸ್ತರಣೆ

ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ದಿನಾಂಕ:17.11.2025 ರಂದು ಸೋಮವಾರ ಬೆಳಗ್ಗೆ 10.00 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳು ಭಾಗವಹಿಸಲಿದ್ದಾರೆ.

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನ ಫಿಕ್ಸ್‌, ಈ ಬಾರಿ 5 ದಿನಗಳಿಗೆ ವಿಸ್ತರಣೆ

-

ಹರೀಶ್‌ ಕೇರ ಹರೀಶ್‌ ಕೇರ Oct 24, 2025 8:02 AM

ಬೆಂಗಳೂರು: ನಗರದ ಐತಿಹಾಸಿಕ ಬಸವನಗುಡಿಯ (Basavanagudi) ಬಸವಣ್ಣ ದೇವಾಲಯದಲ್ಲಿ (Bull Temple) ಐತಿಹಾಸಿಕ ಪ್ರಸಿದ್ಧ ಕಡಲೆಕಾಯಿ ಪರಿಷೆಗೆ (kadalekai Parishe) ಮುಹೂರ್ತ ಫಿಕ್ಸ್ ಆಗಿದೆ. ಪ್ರತಿ ವರ್ಷ 2 ದಿನಗಳ ಕಾಲ ನಡೆಸಲಾಗುತ್ತಿದ್ದಂತ ಪರಿಷೆಯನ್ನು ಈ ಬಾರಿ 5 ದಿನಗಳಿಗೆ ವಿಸ್ತರಣೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ನಿನ್ನೆ ಈ ಸಂಬಂಧ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಕಡಲೆ‌ಕಾಯಿ ಪರಿಷೆ – 2025ರ ಪೂರ್ವಭಾವಿ ಸಿದ್ದತಾ ಸಮಾಲೋಚನೆಗಳು ನಡೆದವು.

ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ವಿಜೃಂಭಣೆಯಿಂದ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು. ಪ್ರಸಕ್ತ ವರ್ಷ ದಿನಾಂಕ:17.11.2025 ರಿಂದ ಪ್ರಾರಂಭವಾಗುವ ಐತಿಹಾಸಿಕ ಪ್ರಸಿದ್ಧ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ, ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ‌‌ ತೀರ್ಮಾನಿಸಲಾಯಿತು.

- ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದಲ್ಲಿ ಬಸವನಗುಡಿಯ ಶ್ರೀ ಬಸವಣ್ಣ ದೇವಾಲಯದಲ್ಲಿ ದಿನಾಂಕ:17.11.2025 ರಂದು ಸೋಮವಾರ ಬೆಳಗ್ಗೆ 10.00 ಗಂಟೆಗೆ ಕಡಲೆಕಾಯಿ ಪರಿಷೆ ಉದ್ಘಾಟನೆಯ ಸಮಾರಂಭಕ್ಕೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳಿಗೆ ಆಹ್ವಾನ.

- ಉದ್ಘಾಟನೆಯನ್ನು 21 ಬಸವಣ್ಣಗಳನ್ನು ದೇವಸ್ಥಾನಕ್ಕೆ ಆಹ್ವಾನಿಸಿ‌ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವುದು.

- ವಿಜೃಂಭಣೆಯ ದೀಪಾಲಂಕಾರ ವ್ಯವಸ್ಥೆ ಮತ್ತು ಈ ವರ್ಷ 05 ದಿನಗಳಿಗೆ ಹಾಗೂ ಬುಲ್ ಟೆಂಪಲ್ ರಸ್ತೆ, ಗಾಂಧಿ ಬಜಾರ್ ಮತ್ತು ಎನ್. ಆರ್ ರಸ್ತೆಗಳಿಗೂ ಸೇರಿ ದೀಪಾಲಂಕಾರ ವಿಸ್ತರಿಸಲು ತೀರ್ಮಾನ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಸೂಪರ್‌ ಫಾಸ್ಟ್‌ ವಿಶೇಷ ರೈಲು

- ಎನ್ ಜಿ ಓ ಗಳ ಸಹಕಾರದೊಂದಿಗೆ, ಪ್ಲಾಸ್ಟಿಕ್ ಕವರ್‌ಗಳನ್ನು ಬಳಸದಂತೆ ಬಟ್ಟೆ ಬ್ಯಾಗ್‌ಗಳನ್ನು ಬಳಸಲು ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲು ʼಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂದು ಘೋಷಣೆ ಹಾಗೂ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಕ್ರಮ.

- ಸುಂಕ ವಸೂಲಾತಿ ರದ್ದು ಈ‌ ವರ್ಷವೂ ಮುಂದುವರಿಕೆ :

ಬುಲ್ ಟೆಂಪಲ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಪ್ರತಿ ವರ್ಷ ಟೆಂಡರ್ ಮಾಡಲಾಗುತ್ತಿದ್ದು, ಟೆಂಡರ್ ದಾರರು ಅಂಗಡಿಯವರಿಂದ ಬಲವಂತವಾಗಿ ಹೆಚ್ಚು ಸುಂಕವನ್ನು ವಸೂಲಿ ಮಾಡುತ್ತಿರುವುದಾಗಿ ಕಳೆದ ವರ್ಷ ದೂರುಗಳು ಬಂದ ಹಿನ್ನೆಲೆಯಲ್ಲಿ ಸುಂಕ ವಸೂಲಾತಿ ಟೆಂಡರ್ ಅನ್ನು ಕೈಬಿಡಲು ಹಾಗೂ ವ್ಯಾಪಾರಸ್ಥರಿಂದ ಸುಂಕವನ್ನು ಕಳೆದ ವರ್ಷದಂತೆ ಈ ವರ್ಷವೂ ವಸೂಲಿ ಮಾಡದಂತೆ ತೀರ್ಮಾನ.

- ಕಡಲೆಕಾಯಿ ಪರಿಷೆ ದಿನಗಳಂದು ಆರೋಗ್ಯ ಸ್ವಚ್ಛತೆ ನೈರ್ಮಲ್ಯಕ್ಕೆ‌ ಒತ್ತು ಮತ್ತು ನೂಕು ನುಗ್ಗಲು ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಗತ್ಯ ವ್ಯವಸ್ಥೆ

- ನಿರಂತರ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ವ್ಯವಸ್ಥೆ

- ಬೀದಿ ದೀಪಗಳ ಅಳವಡಿಕೆ ಮತ್ತು ದುರಸ್ಥಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಸಿ.ಸಿ.ಟಿ.ವಿಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಕೆ,‌ ಅಗ್ನಿ ಶಾಮಕ ವಾಹನ ನಿಯೋಜನೆ. ತುರ್ತು ಚಿಕಿತ್ಸೆ ವಾಹನದ ವ್ಯವಸ್ಥೆ, ಮಾರ್ಷಲ್ ಗಳ ನಿಯೋಜನೆ.

ಈ ಸಭೆಯಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕೆ.ಎಂ .ನಾಗರಾಜ್, ದ್ವಾರಕಾನಾಥ್, ಬಿಬಿಎಂಪಿ ಅಡಿಷನಲ್ ಕಮೀಷನರ್ ದಿಗ್ವಿಜಯ ಬೋಡ್ಸೆ, ಪಾರ್ವತಿ, ಅಧ್ಯಕ್ಷರು , ದೊಡ್ಡ ಗಣಪತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಸ್ವಯಂ ಸೇವಾ ಸಂಸ್ಥೆಯವರು ಹಾಗೂ‌ ಮುಜರಾಯಿ ಇಲಾಖೆಯ ಅಧಿಕಾರಿಗಳು ಇತರರ ಉಪಸ್ಥಿತರಿದ್ದರು.