ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Deepavali Festival: ಕತ್ತಲಾದ ದೀಪಾವಳಿ, ಪಟಾಕಿ ಸಿಡಿಸುವಾಗ 190ಕ್ಕೂ ಅಧಿಕ ಮಂದಿಗೆ ಗಾಯ, ಕಣ್ಣೇ ಕಳೆದುಕೊಂಡ 8 ಮಂದಿ

Fire crackers: ಬೆಂಗಳೂರಿನ ವಾಯು ಗುಣಮಟ್ಟ ದೀಪಾವಳಿ ಪಟಾಕಿಯಿಂದಾಗಿ ಮತ್ತಷ್ಟು ಹದಗೆಟ್ಟಿದೆ. BWSSB ಕಾಡುಬೀಸನಹಳ್ಳಿಯಲ್ಲಿ AQI ಅಂದ್ರೆ ಏರ್‌ ಕ್ವಾಲಿಟಿ ಇಂಡೆಕ್ಸ್‌ ಅರ್ಥಾತ್‌ ಗಾಳಿಯ ಗುಣಮಟ್ಟ 140 ಆಗಿದೆ. ಅಂದ್ರೆ ಇಲ್ಲೇ ಹೆಚ್ಚು ಮಾಲಿನ್ಯ ಆಗಿರುವುದು ಕಂಡುಬಂದಿದೆ.

ಪಟಾಕಿ ಸಿಡಿಸುವಾಗ 190ಕ್ಕೂ ಅಧಿಕ ಮಂದಿಗೆ ಗಾಯ, ಕಣ್ಣೇ ಕಳೆದುಕೊಂಡ 8  ಮಂದಿ

-

ಹರೀಶ್‌ ಕೇರ ಹರೀಶ್‌ ಕೇರ Oct 23, 2025 7:11 AM

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ (Deepavali Festival) ಹಬ್ಬ ಮುಕ್ತಾಯವಾಗುತ್ತಿದ್ದಂತೆ ಪಟಾಕಿ ಸಿಡಿತದಿಂದ (fire crackers) ಗಾಯಗೊಂಡ (Injury) ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದೀಗ 190ಕ್ಕೆ ಪಟಾಕಿ ಸಿಡಿತದಿಂದ ಗಾಯಗೊಂಡಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೂ ಎಂಟು ಜನರು ಶಾಶ್ವತವಾಗಿ ತಮ್ಮ ಕಣ್ಣು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಟಾಕಿ ಸಿಡಿದು 190ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಶಾಶ್ವತವಾಗಿ 8 ಜನರು ತಮ್ಮ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ. ನಿಂತು ನೋಡುವವರು, ದಾರಿಹೋಕರ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಶೇಕಡ 60ರಷ್ಟು ಜನರಿಗೆ ಪಟಾಕಿ ಸಿಡಿದು ಕಣ್ಣಿಗೆ ಹಾನಿಯಾಗಿದೆ. ನಾರಾಯಣ ನೇತ್ರಾಲಯಕ್ಕೆ 75 ಜನರನ್ನು ದಾಖಲು ಮಾಡಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ 25ಕ್ಕೂ ಹೆಚ್ಚು ಜನರು ದಾಖಲಾಗಿದ್ದಾರೆ.

ಪಟಾಕಿ ಹೊಡೆಯುವಾಗ ಎಚ್ಚರಿಕೆ ವಹಿಸಿ

ಪಟಾಕಿ ಹಚ್ಚುವಾಗ ರಕ್ಷಣಾತ್ಮಕ ಕನ್ನಡಕಗಳನ್ನು ಬಳಕೆ ಮಾಡಬೇಕು. ಯಾವಾಗಲೂ ಪಟಾಕಿಯಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು. ಅದರಲ್ಲಿಯೂ ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಶಬ್ದ ಮಾಡುವ ಪಟಾಕಿಗಳಿಗಿಂತ ಸುರಕ್ಷಿತ, ಕಡಿಮೆ ತೀವ್ರತೆಯ ಪಟಾಕಿಗಳನ್ನು ಬಳಕೆ ಮಾಡುವುದು ಬಹಳ ಉತ್ತಮ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿಯೇ ಪಟಾಕಿಗಳನ್ನು ತಯಾರಿಸುವುದು ಹೆಚ್ಚಾಗಿದೆ. ಆದರೆ ಇದು ಕೂಡ ಒಳ್ಳೆಯದಲ್ಲ. ಏಕೆಂದರೆ ಅವುಗಳಲ್ಲಿ ಗುಣಮಟ್ಟದ ಕೊರತೆ ಇದ್ದು ಅನಿರೀಕ್ಷಿತ ಸ್ಫೋಟಗಳಿಗೆ ಕಾರಣವಾಗಬಹುದು, ಕಣ್ಣಿನ ಗಾಯಗಳ ಅಪಾಯವನ್ನು ಹೆಚ್ಚಿಸಬಹುದು. ಕಣ್ಣಿನ ಸಮಸ್ಯೆ ಮತ್ತು ಅಲರ್ಜಿ ಇರುವವರು ಪಟಾಕಿಯ ಹೊಗೆಗಳಿಂದ ಆದಷ್ಟು ದೂರವಿರಿ. ಪರಿಸರ ಸ್ನೇಹಿ ಪಟಾಕಿಗಳು ಮತ್ತು ಬೆಳಕಿನ ಪರ್ಯಾಯಗಳನ್ನು ಆರಿಸಿಕೊಳ್ಳಿ, ಅದು ಪರಿಸರ ಮತ್ತು ನಿಮ್ಮ ಆರೋಗ್ಯಕ್ಕೆ ಉಂಟಾಗುವ ಹಾನಿಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Green Cracker: ಹಸಿರು ಪಟಾಕಿ ಎಂದರೇನು? ಇವು ನಿಜವಾಗಿಯೂ ಕಡಿಮೆ ಮಾಲಿನ್ಯಕಾರಕವೇ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ನಿಮ್ಮ ಕಣ್ಣುಗಳಿಗೆ ಗಾಯವಾದಲ್ಲಿ ಕಣ್ಣುಗಳನ್ನು ಉಜ್ಜಬೇಡಿ. ವೈದ್ಯರನ್ನು ಸಂಪರ್ಕಿಸದೆ ಕಣ್ಣಿಗೆ ಯಾವುದೇ ರೀತಿಯ ಔಷಧಗಳನ್ನು ಬಳಸಬೇಡಿ. ಕಣ್ಣಿನಲ್ಲಿ ಸಿಲುಕಿಕೊಂಡಿರುವ ಯಾವುದೇ ಕಣಗಳನ್ನು ತೆಗೆಯಲು ಪ್ರಯತ್ನ ಪಡಬೇಡಿ. ತಕ್ಷಣ ಹತ್ತಿರದ ಆಸ್ಪತ್ರೆಗೆ ಅಥವಾ ಕಣ್ಣಿನ ತಜ್ಞರ ಬಳಿ ಹೋಗಿ.

ದೀಪಾವಳಿ ಹೊತ್ತಲ್ಲೇ ಹೆಚ್ಚಿದ ವಾಯುಮಾಲಿನ್ಯ

ಬೆಂಗಳೂರಿನ ವಾಯು ಗುಣಮಟ್ಟ ದೀಪಾವಳಿ ಪಟಾಕಿಯಿಂದಾಗಿ ಮತ್ತಷ್ಟು ಹದಗೆಟ್ಟಿದೆ. BWSSB ಕಾಡುಬೀಸನಹಳ್ಳಿಯಲ್ಲಿ AQI ಅಂದ್ರೆ ಏರ್‌ ಕ್ವಾಲಿಟಿ ಇಂಡೆಕ್ಸ್‌ ಅರ್ಥಾತ್‌ ಗಾಳಿಯ ಗುಣಮಟ್ಟ 140 ಆಗಿದೆ. ಅಂದ್ರೆ ಇಲ್ಲೇ ಹೆಚ್ಚು ಮಾಲಿನ್ಯ ಆಗಿರುವುದು ಕಂಡುಬಂದಿದೆ. ಮೆಜೆಸ್ಟಿಕ್ ಭಾಗದಲ್ಲಿ ವಾಯು ಗುಣಮಟ್ಟ 116 ಆಗಿದ್ರೆ, BTM ಲೇಔಟ್ 90 ಆಗಿದೆ. ಬಾಪೂಜಿ ನಗರದಲ್ಲಿ 88 ಇದ್ದು, ಜಯನಗರದಲ್ಲಿ 80 AQI ದಾಖಲಾಗಿದೆ. ಇತರೆ ಏರಿಯಾಗಳಿಗೆ ಹೋಲಿಸಿದರೆ ಹೆಬ್ಬಾಳ ಕಡಿಮೆ ವಾಯು ಮಾಲಿನ್ಯ ಆಗಿದ್ದು, ಇಲ್ಲಿ 79 AQI ದಾಖಲಾಗಿದೆ.