ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು: ಡಾ. ಎಸ್. ಸಂಗಮೇಶ್

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿ ಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು

-

Profile
Ashok Nayak Jun 24, 2026 2:11 PM

ಬೆಂಗಳೂರು: ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯ ಸರ್ಕಾರ ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷರಾದ ಡಾ.ಎಸ್.ಸಂಗಮೇಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು ಎಂದು ಮನವಿ ಮಾಡಿ ದ್ದಾರೆ.

ಇದನ್ನೂ ಓದಿ: Bangalore News: ಮತ್ತೊಮ್ಮೆ ಎಲ್‌ಪಿಜಿ ಬೆಲೆ ಏರಿಕೆ: ಉಜ್ವಲ ಸಿಲೆಂಡರ್ 4ಕ್ಕೆ ಇಳಿಸಿ ಅಡುಗೆ ಮನೆಗೆ ಕೊಳ್ಳಿ ಇಟ್ಟ ಪ್ರಧಾನಿ ಮೋದಿ: ಡಾ.ಆನಂದ ಕುಮಾರ್

ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವ ಜನಿಕ ಸಂಸ್ಥೆಗಳಲ್ಲಿ ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಂಪೇಗೌಡರ ಜೀವನ, ಸಾಧನೆ, ಇತಿಹಾಸ ಮತ್ತು ಕನ್ನಡ ನಾಡಿಗೆ ನೀಡಿದ ಕೊಡುಗೆ ಗಳ ಕುರಿತು ವಿಶೇಷ ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

Kempegowda 2

ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಯುವಜನರಲ್ಲಿ ಬಿತ್ತರಿಸುವ ಉದ್ದೇಶದಿಂದ ರಾಜ್ಯಾ ದ್ಯಂತ ಜಾಗೃತಿ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು ಹಾಗೂ ಯುವ ಸಮಾವೇಶಗಳನ್ನು ಆಯೋಜಿಸಲು ಸರ್ಕಾರ ಮುಂದಾಗಬೇಕು. ಕೆಂಪೇಗೌಡರ ಆಡಳಿತ ನೀತಿಗಳು, ದೂರದೃಷ್ಟಿ ಮತ್ತು ಅಭಿವೃದ್ಧಿ ಚಿಂತನೆಗಳು ಇಂದಿನ ಆಡಳಿತ ವ್ಯವಸ್ಥೆಗೆ ಮಾದರಿಯಾಗಿವೆ ಎಂದು ಹೇಳಿದ್ದಾರೆ.

ಸರ್ಕಾರವು ಕೆಂಪೇಗೌಡ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಕನ್ನಡ ನಾಡಿನ ಸ್ವಾಭಿಮಾನ, ಸಂಸ್ಕೃತಿ ಹಾಗೂ ಪರಂಪರೆಯ ಸಂಕೇತವಾಗಿ ಆಚರಣೆ ಮಾಡಬೇಕು. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಡಾ. ಎಸ್. ಸಂಗಮೇಶ್ ಎಚ್ಚರಿಕೆ ನೀಡಿದ್ದಾರೆ.