ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಮಚಂದ್ರಾಪುರ ಮಠ‌ ಮತ್ತು ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ: ರಾಘವೇಶ್ವರ ಶ್ರೀ

Raghaveshwara Bharathi Swamiji: ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿ ಮಾತನಾಡಿದ್ದಾರೆ.

ರಾಮಚಂದ್ರಾಪುರ ಮಠ‌- ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ

-

Prabhakara R Prabhakara R Oct 12, 2025 8:56 PM

ಬೆಂಗಳೂರು: ರಾಮಚಂದ್ರಾಪುರ ಮಠ‌ ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ. ಈ ಬಾಂಧವ್ಯಕ್ಕೆ ಅವಳೇ ಸೇತುವೆ. ಎರಡೆಂದು ಕಂಡರೂ ಈ ಪೀಠಗಳು ಒಂದೇ ಎನ್ನುವ ಭಾವವೇರ್ಪಟ್ಟಿದೆ" ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು (Sri Raghaveshwara Bharathi Swami) ನುಡಿದರು. ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು.

ಗಿರಿನಗರದ ಮಠಕ್ಕೆ ಆಗಮಿಸಿದ ಶಕಟಪುರದ ಶ್ರೀಗಳಿಗೆ ಶ್ರೀರಾಮಚಂದ್ರಾಪುರ ಮಠದ ವತಿಯಿಂದ ವೇದಘೋಷ, ಶಂಖನಾದ, ವಾದ್ಯ, ಪೂರ್ಣಕುಂಭಗಳ ಅದ್ಧೂರಿ ಸ್ವಾಗತ ನೀಡಲಾಯಿತು. ಶ್ರೀಮಠದ ವತಿಯಿಂದ ವಿವಿಧ ಸುವಸ್ತುಗಳನ್ನು ಸಮರ್ಪಿಸಲಾಯಿತು. ಶಕಟಪುರದ ಶ್ರೀಪರಿವಾರದವರನ್ನು ಗೌರವಿಸಲಾಯಿತು.

Raghaveshwara Bharathi Swamiji (2)

ಇದೇ ವೇಳೆ ಶಕಟಪುರದ ಶ್ರೀಗಳು ಆಶೀರ್ವಚನ ನೀಡಿ, "ನಮಗೂ ರಾಮಚಂದ್ರ ಆರಾಧ್ಯ ದೇವರೇ. ರಾಮಚಂದ್ರಾಪುರ ಮಠದ ಪ್ರಧಾನ ಆರಾಧ್ಯ ದೇವರೂ ರಾಮನೇ. ನಮ್ಮ ಗುರುಗಳ ಹೆಸರೂ ಇದೇ ಆಗಿದ್ದು, ಈ ಮಠದ ಜತೆಗಿನ ಸಂಬಂಧ ಆತ್ಮೀಯವಾಗಿ ಬೆಳೆದಿದೆ. ರಾಮಚಂದ್ರಾಪುರ ಮಠಕ್ಕೂ ಶ್ರೀವಿದ್ಯಾಪೀಠಕ್ಕೂ ಇರುವ ಈ ಆತ್ಮೀಯ ಸಂಬಂಧ ಇದೇ ರೀತಿ ಮುಂದುವರಿಯಬೇಕು" ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಹವ್ಯಕ ಮಹಾಮಂಡಲದಿಂದ ಆಯೋಜಿತವಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಉನ್ನತ ವಿದ್ಯಾಭ್ಯಾಸ, ಸಂಗೀತ , ಭರತನಾಟ್ಯ ಮುಂತಾದವುಗಳಿಲ್ಲಿ ವಿಶಿಷ್ಟ ಸಾಧನೆ ಮಾಡಿದ 230 ವಿದ್ಯಾರ್ಥಿಗಳನ್ನು ಶ್ರೀಗಳು ಆಶೀರ್ವಾದಿಸಿದರು.

ಈ ಸುದ್ದಿಯನ್ನೂ ಓದಿ | ಆತ್ಮವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಇಲ್ಲ: ರಾಘವೇಶ್ವರ ಭಾರತೀ ಶ್ರೀ

ಶ್ರೀಮಠದ ವಿತ್ತಾಧ್ಯಕ್ಷ ಗಣೇಶ ಜೆ. ಎಲ್., ಶಾಸನತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಶ್ರೀರಾಮಾಶ್ರಮ ಅಧ್ಯಕ್ಷ ರಮೇಶ ಹೆಗಡೆ ಕೋರಮಂಗಲ, ಶ್ರೀರಾಮಾಶ್ರಮ ಕಾರ್ಯದರ್ಶಿ ವಾದಿರಾಜ ಸಾಮಗ, ಹವ್ಯಕ ಮಹಾಮಂಡಲದ ಬೆಂಗಳೂರು ಪ್ರಾಂತ್ಯ ಉಪಾಧ್ಯಕ್ಷ ಜಿ.ಜಿ.ಹೆಗಡೆ ತಲೆಕೇರಿ, ದಕ್ಷಿಣ ಮಂಡಲ ಅಧ್ಯಕ್ಷ ಎನ್. ಜಿ. ಭಾಗ್ವತ್, ಉತ್ತರ ಮಂಡಲ ಅಧ್ಯಕ್ಷ ಎಲ್. ಆರ್. ಹೆಗಡೆ, ಲೋಕಸಂಪರ್ಕ ಖಂಡದ ಶ್ರೀಸಂಯೋಜಕ ರಾಮಚಂದ್ರ ಭಟ್ ಕೆಕ್ಕಾರು, ಸುಪ್ರಸಾರ ಖಂಡದ ಶ್ರೀಸಂಯೋಜಕಿ ಅಕ್ಷತಾ ಭಟ್ ಮುಂತಾದ ಪದಾಧಿಕಾರಿಗಳು ಹಾಗೂ ಶಕಟಪುರಮಠದ ಪದಾಧಿಕಾರಿಗಳು, ಶ್ರೀಪರಿವಾರದವರು ಉಪಸ್ಥಿತರಿದ್ದರು.