ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

''ವೋಟ್ ಚೋರಿ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆ ಆಗುತ್ತಿದ್ದರು'': ದಿನೇಶ್ ಗುಂಡೂರಾವ್

Vote Chori: ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಭಾನುವಾರ (ಅಕ್ಟೋಬರ್‌ 26) ಮತಗಳ್ಳತನ ವೋಟ್ ಚೋರಿ ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಬಿಜೆಪಿ ವಿರುದ್ದ ಹಾರಿ ಹಾಯ್ದರು.

ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

-

Ramesh B Ramesh B Oct 26, 2025 9:53 PM

ಬೆಂಗಳೂರು, ಅ. 26: ಗಾಂಧಿನಗರ ಕ್ಷೇತ್ರದಲ್ಲಿ ಭಾನುವಾರ (ಅಕ್ಟೋಬರ್‌ 26) ಸನ್ ರೈಸ್ ಸರ್ಕಲ್‌ನಲ್ಲಿ ಮತಗಳ್ಳತನ ವೋಟ್ ಚೋರಿ (Vote Chori) ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ʼʼನಕಲಿ ಮತದಾರರ ಲಿಸ್ಟ್ ಅನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಕ್ರಮ ಕೈಗೊಂಡಿಲ್ಲ. ನಕಲಿ ಮತಗಳ ಡಿಲೀಟ್ ಮಾಡುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮೀನ ಮೇಷ ಎಣಿಸುತ್ತಿರುವುದು ಏಕೆ?ʼʼ ಎಂದು ಪ್ರಶ್ನಿಸಿದರು.

ʼʼದೇಶದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧ ಈಗಾಗಲೇ ನಮ್ಮ ನಾಯಕ ರಾಹುಲ್ ಗಾಂಧಿ ಸವಿಸ್ತಾರವಾಗಿ ದಾಖಲೆಯ ಸಮೇತ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆಂತಕಪಡುವ ಸ್ಥಿತಿಯಲ್ಲಿದೆ. ಸಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ವೋಟ್ ಬ್ಯಾಂಕ್ ಮಾಡಿಕೊಂಡಿರುವುದು ಅತ್ಯಂತ ಖಂಡನೀಯʼʼ ಎಂದರು.

Vote Chori 1

ಈ ಸುದ್ದಿಯನ್ನೂ ಓದಿ: Vote theft Case: ಸುಟ್ಟ ಸ್ಥಿತಿಯಲ್ಲಿ ವೋಟರ್ ಲಿಸ್ಟ್‌ ಸೇರಿ ವಿವಿಧ ದಾಖಲೆ ಪತ್ತೆ; 'ವೋಟ್ ಚೋರಿ'ಗೆ ಮತ್ತಷ್ಟು ಪುಷ್ಟಿ?

ʼʼರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವನ್ನು ಜನರು ಪ್ರಶ್ನಿಸಬೇಕಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣಾ ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೆ ಇರುವ ಮತದಾರರನ್ನು ಸೃಷ್ಟಿಸಿ, ಸಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ ʼವೋಟ್ ಚೋರಿʼ ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ. ಚಿಕ್ಕಪೇಟೆಯ ವಾರ್ಡ್‌ನಲ್ಲಿಯೇ ಸಾವಿರಾರು ನಕಲಿ ಮತದಾರರನ್ನು ನಮ್ಮ ಕಾರ್ಯಕರ್ತರು ಗುರುತಿಸಿದ್ದಾರೆʼʼ ಎಂದು ತಿಳಿಸಿದರು.

Vote Chori 2

ʼʼಇಂದು ನಾವು ವೋಟ್ ಚೋರಿ ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಚುನಾವಣಾ ಆಯೋಗಕ್ಕೆ ಕಳುಹಿಸಿ ಕಣ್ಣಿ‌ಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಿದ್ರೆ ಮಾಡುತ್ತಿರುವ ಅಧಿಕಾರಿಗಳನ್ನು ಎಚ್ಚರಿಸಬೇಕಾಗಿದೆ. ಇಡೀ ದೇಶಾದ್ಯಂತ ಈ ಸಹಿ ಸಂಗ್ರಹ ನಡೆಯುತ್ತಿದ್ದು, ನಮ್ಮ ಗಾಂಧಿನಗರ ಕ್ಷೇತ್ರದಿಂದಲ್ಲೂ ಸುಮಾರು 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ ಮಾಡುವ ಗುರಿಯನ್ನು ಹೊಂದಲಾಗಿದೆ. ಎಲ್ಲ ಮತದಾರರು ಇದರಲ್ಲಿ ಪಾಲ್ಗೊಂಡು ಸಹಿಯನ್ನು ಹಾಕುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ದೇಶವನ್ನು ಮತಗಳ್ಳತನದಿಂದ ರಕ್ಷಿಸಬೇಕುʼʼ ಎಂದು ಕರೆ ನೀಡಿದರು. ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ಮತ್ತಿತರರು ಉಪಸ್ಥಿತರಿದ್ದರು.